AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ ಬಿ.

ಜಗದೀಶ ಬಿ.

ಜಿಲ್ಲಾ ವರದಿಗಾರ - TV9 Kannada

Jagadisha.basavaraju@tv9.com

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Follow On:
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!

ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!

ಜಿಲ್ಲೆಯ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದಲ್ಲಿ ರೈತ ಕರೇಗೌಡ ಎಂಬುವವರು ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ ‘ಲಕ್ಷ್ಮಿ’ ಎಂಬ ಗರ್ಭಿಣಿ ಹಸುವಿಗೆ ಅತ್ಯಂತ ಸಂಭ್ರಮದಿಂದ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಗ್ರಾಮದ ಮಹಿಳೆಯರು ಸಾಂಪ್ರದಾಯಿಕವಾಗಿ ಹಸುವಿಗೆ ಅರಿಶಿನ-ಕುಂಕುಮ ಹಚ್ಚಿ, ಆರತಿ ಬೆಳಗಿ, ಮಡಿಲು ತುಂಬಿ ಹಾರೈಸಿದರು. ಈ ಅಪರೂಪದ ಹಾಗೂ ವಿಶೇಷ ಕಾರ್ಯಕ್ರಮದ ನೆಪದಲ್ಲಿ ಇಡೀ ಊರಿನ ನೂರಾರು ಜನರಿಗೆ ಘಮಘಮಿಸುವ ಹೋಳಿಗೆ ಊಟದ ಸತ್ಕಾರ ಏರ್ಪಡಿಸಲಾಗಿತ್ತು. ರೈತನ ಈ ಗೋಪ್ರೇಮಕ್ಕೆ ತೋಟಸಾಗರ ಗ್ರಾಮಸ್ಥರು ಸಾಕ್ಷಿಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಅಪ್ಪ ಡ್ರಗ್ಸ್ ಜಾಗೃತಿ ಹರಿಕಾರ, ಮಗ ಗಾಂಜಾ ದಂಧೆಯ ಕಿಂಗ್‌ಪಿನ್! ಕ್ಯೂಆರ್ ಕೋಡ್‌ನಿಂದ ಬಯಲಾಯ್ತು ಪೊಲೀಸ್ ಪುತ್ರನ ಕರಾಳ ಕಥೆ

ಅಪ್ಪ ಡ್ರಗ್ಸ್ ಜಾಗೃತಿ ಹರಿಕಾರ, ಮಗ ಗಾಂಜಾ ದಂಧೆಯ ಕಿಂಗ್‌ಪಿನ್! ಕ್ಯೂಆರ್ ಕೋಡ್‌ನಿಂದ ಬಯಲಾಯ್ತು ಪೊಲೀಸ್ ಪುತ್ರನ ಕರಾಳ ಕಥೆ

ತುಮಕೂರಿನಲ್ಲಿ ಮಾದಕ ವಸ್ತು ತಡೆಗೆ ಪೊಲೀಸರು ಜಾರಿಗೆ ತಂದಿದ್ದ ಕ್ಯೂಆರ್ ಕೋಡ್‌ನ ರಹಸ್ಯ ಮಾಹಿತಿಯಿಂದ ಬೃಹತ್ ಗಾಂಜಾ ಜಾಲ ಬಯಲಾಗಿದೆ. ಪೊಲೀಸ್ ಸಿಬ್ಬಂದಿಯ ಪುತ್ರ ದಿಶಾಂತ್ ಸೇರಿದಂತೆ ಒಟ್ಟು 9 ಮಂದಿ ಆರೋಪಿಗಳನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದು, ಫಾರ್ಚ್ಯೂನರ್ ಕಾರು ಹಾಗೂ ದುಬಾರಿ ಹೈಡ್ರೋ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ?

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ?

Tumakur News: ತುಮಕೂರಿನ ಪ್ರತಿಷ್ಠಿತ ಜ್ಯುವೆಲರಿ ಶಾಪ್‌ನಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣ ರಾತ್ರೋರಾತ್ರಿ ನಾಪತ್ತೆಯಾಗಿದೆ. ಆದರೆ, ಕಳ್ಳರಂತೂ ಅಂಗಡಿಗೆ ಎಂಟ್ರಿ ಕೊಟ್ಟಿಲ್ಲ! ಮತ್ತೆ ಆಭರಣ ಕಾಣೆಯಾಗಿದ್ದು ಹೇಗೆ? ಕಳ್ಳತನದ ರಹಸ್ಯ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಬಯಲಾಗಿದ್ದು, ಆಭರಣಗಳನ್ನು ಎಗರಿಸಿದ್ದು ಜನರಲ್ಲ ಎಂಬುದು ಗೊತ್ತಾಗಿದೆ. ಮತ್ಯಾರು? ತಿಳಿಯಲು ಮುಂದೆ ಓದಿ.

ಮಳೆ ಅಭಾವಕ್ಕೆ ತುಮಕೂರು ಮಂದಿ ಕಂಗಾಲು: ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ಮಳೆ ಅಭಾವಕ್ಕೆ ತುಮಕೂರು ಮಂದಿ ಕಂಗಾಲು: ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ತುಮಕೂರು ಜಿಲ್ಲೆಯಲ್ಲಿ ಮಳೆ ಇಲ್ಲದೆ ಭಾರಿ ಬರಗಾಲ ಆವರಿಸಿದೆ. ಒಟ್ಟು 2,047 ಕೆರೆಗಳ ಪೈಕಿ 300ಕ್ಕೂ ಹೆಚ್ಚು ದೊಡ್ಡ ಕೆರೆಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಉಳಿದ ಕೆರೆಗಳಲ್ಲೂ ನೀರು ಡೆಡ್ ಸ್ಟೋರೇಜ್ ಮಟ್ಟ ತಲುಪಿದ್ದು, ಜನ, ಜಾನುವಾರು ಮತ್ತು ವನ್ಯಜೀವಿಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ರೈತರು ಭಾರಿ ಸಂಕಷ್ಟದಲ್ಲಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

‘ಪ್ರಾಣ ಕೊಟ್ಟೇವು, ಆದರೆ ಜಮೀನು ಬಿಡಲ್ಲ’: ಹೆಚ್​​ಎಎಲ್​​ಗಾಗಿ 600 ಎಕರೆ ಭೂಸ್ವಾಧೀನಕ್ಕೆ ರೈತರ ವಿರೋಧ

‘ಪ್ರಾಣ ಕೊಟ್ಟೇವು, ಆದರೆ ಜಮೀನು ಬಿಡಲ್ಲ’: ಹೆಚ್​​ಎಎಲ್​​ಗಾಗಿ 600 ಎಕರೆ ಭೂಸ್ವಾಧೀನಕ್ಕೆ ರೈತರ ವಿರೋಧ

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹೆಚ್‌ಎಎಲ್ ವಿಸ್ತರಣೆಗಾಗಿ 600 ಎಕರೆ ಫಲವತ್ತಾದ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾವನೆಗೆ ಐದು ಗ್ರಾಮಗಳ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ, ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಐದು ಗ್ರಾಮಗಳ ರೈತರು ಭೂಸ್ವಾಧೀನಕ್ಕೆ ತೀವ್ರ ವಿರೋಧ ಕೇಳಿಬಂದಿದ್ದು, ಫಲವತ್ತಾದ ಜಮೀನಿನ ಬದಲು ಸಾಮಾಜಿಕ ಅರಣ್ಯ, ಗೋಮಾಳ ಹಾಗೂ ಹುಲ್ಲುಬಂದಿ ಭೂಮಿಯನ್ನು ಬಳಸಿಕೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.

ಸೋಮಣ್ಣ ಹೇಳಿಕೆಗೆ ದನಿಗೂಡಿಸಿದ ಡಿಸಿಎಂ ಪರಮೇಶ್ವರ್​​: ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ಸೋಮಣ್ಣ ಹೇಳಿಕೆಗೆ ದನಿಗೂಡಿಸಿದ ಡಿಸಿಎಂ ಪರಮೇಶ್ವರ್​​: ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಏರ್‌ಪೋರ್ಟ್ ಸ್ಥಾಪನೆಗೆ 25 ವರ್ಷಗಳಿಂದಲೂ ಧ್ವನಿ ಎತ್ತುತ್ತಿದ್ದು, ಇದು 20 ಜಿಲ್ಲೆಗಳ ಹೆಬ್ಬಾಗಿಲಾಗಿರುವುದರಿಂದ ಅನುಕೂಲವಾಗಲಿದೆ. ಬಿಡದಿ ಸೇರಿದಂತೆ ಬೇರೆ ಬೇರೆ ಜಾಗಗಳನ್ನು ಗುರುತಿಸಿದ್ದರೂ, ತುಮಕೂರಿಗೆ ಅವಕಾಶ ಸಿಕ್ಕರೆ ಅದು ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದವರು ತಿಳಿಸಿದ್ದಾರೆ.

ತುಮಕೂರಿನ ಹುಲಿಯೂರುದುರ್ಗದಲ್ಲಿ ಭಾರಿ ದುರಂತ: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ

ತುಮಕೂರಿನ ಹುಲಿಯೂರುದುರ್ಗದಲ್ಲಿ ಭಾರಿ ದುರಂತ: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ

ತುಮಕೂರಿನ ಹುಲಿಯೂರುದುರ್ಗದಲ್ಲಿ ಕ್ವಾರಿ ಗುಂಡಿಗೆ ಲಾರಿ ಉರುಳಿ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ದೇವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಟಿಪ್ಪರ್ ಮತ್ತು ಟಿಟಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೂಗು ಮತ್ತೆ ಮುನ್ನಲೆಗೆ

ತುಮಕೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೂಗು ಮತ್ತೆ ಮುನ್ನಲೆಗೆ

Tumakuru International Airport: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ವಸಂತ ನರಸಾಪುರದಲ್ಲಿ ಏರ್‌ಪೋರ್ಟ್‌ಗಾಗಿ ಸರ್ಕಾರಕ್ಕೆ ಮನವಿ ಮಾಡಿವೆ.

ಆಂಧ್ರದಲ್ಲಿ ನಾಲ್ವರು ಕೋವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ

ಆಂಧ್ರದಲ್ಲಿ ನಾಲ್ವರು ಕೋವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ

COVID prevention Karnataka: ನೆರೆಯ ಆಂಧ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವುದು ಕರ್ನಾಟಕದ ಗಡಿ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ರಾಜ್ಯಕ್ಕೆ ವೈರಸ್ ಹರಡದಂತೆ ತಡೆಯಲು ಎಂಟು ಗಡಿ ಮಾರ್ಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು

ಆಂಧ್ರಪ್ರದೇಶದಲ್ಲಿ ಇಬ್ಬರು ಕೋವಿಡ್​ನಿಂದ ಮೃತಪಟ್ಟು, ಒಂಬತ್ತು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಿಂದ ಪಾವಗಡಕ್ಕೆ ಆಗಮಿಸುವ ವಾಹನಗಳ ಪ್ರಯಾಣಿಕರಿಗೆ ಜ್ವರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ರಾಜವಂತಿಗೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತುಮಕೂರು: ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ

ತುಮಕೂರು: ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸರ್ಕಾರಿ ಆಸ್ಪತ್ರೆಯ ಸಾವಿರಾರು ಮಧುಮೇಹ ಮಾತ್ರೆಗಳು ಸ್ಮಶಾನದಲ್ಲಿ ಪತ್ತೆಯಾಗಿವೆ. 2026ರವರೆಗೆ ಬಳಸಬಹುದಾದ ಈ ಮಾತ್ರೆಗಳು ಬಡ ರೋಗಿಗಳಿಗೆ ಉಚಿತವಾಗಿ ಸಿಗಬೇಕಿದ್ದವು. ಮಾತ್ರೆ ಎಸೆದಿದ್ದರಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ, ಅಲ್ಲದೆ ಕೆರೆಗೆ ವಿಷ ಬೆರೆಯುವ ಭೀತಿಯೂ ಎದುರಾಗಿದೆ. ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ರೈಲು ಸಂಪರ್ಕದ ಕನಸು 2027ರ ಡಿಸೆಂಬರ್‌ ವೇಳೆಗೆ ನನಸಾಗಲಿದೆ. ತುಮಕೂರು-ಕಲ್ಯಾಣದುರ್ಗ ಮತ್ತು ದಾವಣಗೆರೆ-ತುಮಕೂರು ನೂತನ ರೈಲು ಮಾರ್ಗಗಳು ಪ್ರಗತಿಯಲ್ಲಿದ್ದು, ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಈ ಯೋಜನೆಗಳು ಆರ್ಥಿಕ ಪ್ರಗತಿ, ವ್ಯಾಪಾರ-ವಹಿವಾಟು ಹಾಗೂ ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸಲಿವೆ.

ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ