ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎಲೆಕ್ಷನ್ ವೇಳೆ ಹೈಡ್ರಾಮಾ: ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?
ತುಮಕೂರು ಕುಣಿಗಲ್ನ ಸಂತೆಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಚುನಾವಣಾಧಿಕಾರಿಯೇ ಕಾಂಗ್ರೆಸ್ ಪರವಾಗಿ ಕಳ್ಳ ಮತದಾನ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿದೆ. ಜೇಬಿನಲ್ಲಿ ಮತಪತ್ರಗಳನ್ನು ತಂದು ಅಧಿಕಾರಿಯೇ ಮತಪೆಟ್ಟಿಗೆಗೆ ಹಾಕುತ್ತಿದ್ದಾಗ ಜೆಡಿಎಸ್ ಏಜೆಂಟ್ ತಡೆದಿದ್ದಾರೆ. ಪರಿಶೀಲನೆ ವೇಳೆ ಕಿಸೆಯಲ್ಲಿ 25 ಮತಪತ್ರಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಈ ಸಂಬಂಧ ಚುನಾವಣಾಧಿಕಾರಿ ವಿರುದ್ಧ ದೂರು ದಾಖಲಾಗಿದೆ. ಪರಿಣಾಮವಾಗಿ, ಚುನಾವಣೆಯನ್ನು ರದ್ದುಗೊಳಿಸಲಾಗಿದೆ.
- Jagadisha B
- Updated on: Mar 15, 2026
- 10:43 pm
ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಬಳಿ ಎತ್ತಿನಹೊಳೆ ಬಫರ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. 1.2 ಟಿಎಂಸಿ ನೀರು ಸಂಗ್ರಹದ ಈ ಯೋಜನೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಗ್ರಾಮಗಳು ಮತ್ತು ಭೂಮಿ ಮುಳುಗಡೆಯಾಗುವ ಭೀತಿಯಲ್ಲಿರುವ ರೈತರು, ಈ ನಿರ್ಧಾರದ ವಿರುದ್ಧ ಕಾನೂನು ಹೋರಾಟಕ್ಕೂ ಸಿದ್ಧರಾಗಿದ್ದಾರೆ. ಇದು ಸರ್ಕಾರ ಮತ್ತು ಸ್ಥಳೀಯರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
- Jagadisha B
- Updated on: Mar 15, 2026
- 6:38 pm
ಚಿನ್ನದಾಸೆಗೆ ವೃದ್ಧೆಯನ್ನೇ ಹತ್ಯೆಗೈದು ಕಥೆ ಕಟ್ಟಿದ್ದ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅರೆಸ್ಟ್
ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಚಿನ್ನಕ್ಕಾಗಿ ವೃದ್ಧೆಯ ಭೀಕರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದಲೇ ಕೊಲೆ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದ್ದು, ಸದ್ಯ ಅಮೃತೂರು ಪೊಲೀಸರು 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Jagadisha B
- Updated on: Mar 14, 2026
- 7:03 pm
ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ69 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬಾಲಕಿಯರ ವಸತಿ ನಿಲಯ 8 ವರ್ಷಗಳಿಂದ ಖಾಲಿಯಾಗಿದೆ. ಗ್ರಾಮಸ್ಥರ ಮೂಢ ನಂಬಿಕೆಯಿಂದ ಹೆಣ್ಣುಮಕ್ಕಳು ಹಾಸ್ಟೆಲ್ಗೆ ಸೇರುತ್ತಿಲ್ಲ ಎಂಬುದು ಒಂದು ವಾದ. ಆದರೆ, ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಈ ನಿರ್ಲಕ್ಷ್ಯದಿಂದ ಗ್ರಾಮೀಣ ಬಾಲಕಿಯರ ಶಿಕ್ಷಣಕ್ಕೆ ಅಡ್ಡಿಯಾಗಿದ್ದು, ಜನರ ನಂಬಿಕೆಯನ್ನೇ ನೆಪವಾಗಿಸಿಕೊಂಡ ಸರ್ಕಾರ ಕಟ್ಟಡದ ಅಭಿವೃದ್ಧಿ ಮಾಡದೇ ಕುಳಿತಿದೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.
- Jagadisha B
- Updated on: Mar 13, 2026
- 2:02 pm
ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ
ತುಮಕೂರಿನ ತಿಪಟೂರು ಗ್ರಾಮಾಂತರದಲ್ಲಿ ನಡೆದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಯಲಾಗಿದೆ. ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತ್ನಿ ಫರ್ಜಾನ ತನ್ನ ಪ್ರಿಯಕರ ಧನರಾಜ್ ಮತ್ತು ಇಬ್ಬರ ಸಹಾಯದಿಂದ ಪತಿಯನ್ನು ಕೊಲೆ ಮಾಡಿಸಿದ್ದಾಳೆ. ಮಾರ್ಚ್ 4ರಂದು ನಡೆದ ಈ ಕೃತ್ಯದ ತನಿಖೆ ನಡೆಸಿದ ಪೊಲೀಸರು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ, ಕೊಲೆಯ ಹಿಂದಿನ ಪ್ರೇಮ ಪ್ರಕರಣವನ್ನು ಭೇದಿಸಿದ್ದಾರೆ.
- Jagadisha B
- Updated on: Mar 12, 2026
- 9:38 am
ತುಮಕೂರನ್ನೇ ಬೆಚ್ಚಿ ಬೀಳಿಸಿದ್ದ ಮುಬಾರಕ್ ಕೊಲೆ ಕೇಸಿಗೆ ಸ್ಪೋಟಕ ಟ್ವಿಸ್ಟ್: ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದ
ಇಬ್ಬರ ಹೆಸರು ಮುಬಾರಕ್. ಒಬ್ಬ ನಜರಾಬಾದ್ ಮುಬಾರಕ್ ಇನ್ನೋರ್ವ ಮರಳೂರು ದಿಣ್ಣೆಯ ಮುಬಾರಕ್. ಇವರಿಬ್ಬರು ಗೆಳೆಯರು. ಆದ್ರೆ, ಗೆಳೆಯನಿಗೆ ವಾಮಾಚಾರ ಮಾಡಿ ನಜರಾಬಾದ್ ಮುಬಾರಕ್ ದುರಂತ ಅಂತ್ಯವಾಗಿದ್ದಾನೆ. ಅಷ್ಟಕ್ಕೂ ಮುಬಾರಕ್ ವರ್ಸಸ್ ಮುಬಾರಕ್ ನಡುವೆ ಆಗಿದ್ದೇನು? ಹಂತಕನ ಬಗ್ಗೆ SP ಹೇಳಿದ್ದೇನು? ಎನ್ನುವ ವಿವರ ಈ ಕೆಳಗಿನಂತಿದೆ.
- Jagadisha B
- Updated on: Mar 11, 2026
- 7:24 pm
ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ
ತುಮಕೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ. ಏನು ಅರಿಯದ ಎರಡು ವರ್ಷದ ಮಗುವಿನೊಂದಿಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಇನ್ನಿಳಿದ ಎರಡು ಮಕ್ಕಳು ಸಾವಿನ ಮನೆಗೆಯಿಂದ ಪಾರಾಗಿವೆ. ತಾಯಿ ಮಗು ಕುಣಿಕೆಯಲ್ಲಿ ನೇತಾಡುವ ದೃಶ್ಯ ನೋಡಿದರೆ ಕರುಳು ಹಿಂಡುವಂತಿದೆ. ಅಷ್ಟಕ್ಕೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ? ಇನ್ನಿರಡು ಮಕ್ಕಳು ಸಾವಿನ ದವಡೆಯಿಂದ ಪಾರಾಗಿದ್ಹೇಗೆ? ಎನ್ನುವ ಡಿಟೇಲ್ಸ್ ಇಲ್ಲಿದೆ.
- Jagadisha B
- Updated on: Mar 10, 2026
- 10:25 pm
ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್ ಶಾಕ್ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ತುಮಕೂರಿನ ತಿಪಟೂರು ತಾಲೂಕಿನಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸುವಾಗ ಲೈನ್ ಮ್ಯಾನ್ ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದಾರೆ. 9 ತಿಂಗಳ ತುಂಬು ಗರ್ಭಿಣಿಯಾದ ಪತ್ನಿ ಘಟನೆಯಿಂದ ಶಾಕ್ಗೆ ಒಳಗಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆದಿದೆ.
- Jagadisha B
- Updated on: Mar 8, 2026
- 1:49 pm
ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!
ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯು ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿತು. ಒತ್ತಡದ ಕರ್ತವ್ಯಗಳಿಂದ ವಿರಾಮ ಪಡೆದ ಮಹಿಳಾ ಪೊಲೀಸ್ ಸಿಬ್ಬಂದಿ, ತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ರಂಗೋಲಿಗಳ ಮೂಲಕ ಮಹಿಳೆಯರ ಪಾತ್ರ, ಸವಾಲುಗಳು ಹಾಗೂ ಸಮಾನತೆಯ ಬಗ್ಗೆ ಸಾಮಾಜಿಕ ಸಂದೇಶಗಳನ್ನು ನೀಡಿದರು. ಇದು ಮಹಿಳಾ ಪೊಲೀಸರ ಸೃಜನಶೀಲತೆ ಮತ್ತು ಸಮುದಾಯ ಪ್ರಜ್ಞೆಯನ್ನು ಪ್ರತಿಬಿಂಬಿಸಿತು.
- Jagadisha B
- Updated on: Mar 8, 2026
- 11:39 am
3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ
ತುಮಕೂರಿನಲ್ಲಿ ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಮತ್ತೊಂದು ಮದುವೆಯಾದವಳ ಕಹಾನಿಯೇ ರಣರೋಚಕವಾಗಿದೆ. ಪೊಲೀಸರ ತನಿಖೆಯಲ್ಲಿ ಒಂದೊಂದೇ ಸ್ಟೋರಿ ಬಯಲಾಗುತ್ತಿದೆ. ಒಬ್ಬೊಬ್ಬರಿಗೆ ಎರಡೆರಡು ಮದ್ವೆ ಕಥೆ ಕೇಳಿ ಪೊಲೀಸರಿಗೂ ಸಹ ತಲೆಕೆಟ್ಟೋಗಿದೆ. ಹೆಂಡತಿಯ ಮೂರನೇ ಮದುವೆಯ ಆಸೆಗೆ ಎರಡನೇ ಗಂಡ ಬಲಿಯಾಗಿದ್ರೆ, 2ನೇ ಮದ್ವೆ ಮಾಡಿಕೊಂಡು ಹನಿಮೂನ್ ಮೂಡ್ನಲ್ಲಿದ್ದ ಮಹಿಳೆ ಜೈಲುಪಾಲಾಗಿದ್ದಾಳೆ.
- Jagadisha B
- Updated on: Mar 7, 2026
- 3:07 pm
ಹಣದಾಸೆಗೆ ಗೆಳೆಯನ ಕೊಲೆ: ಸ್ನೇಹಿತನ ದುಡ್ಡಲ್ಲೇ 2ನೇ ಪತ್ನಿಗೆ ಟಿವಿ ಗಿಫ್ಟ್ ನೀಡಿದ್ದ ಆಸಾಮಿ ಅರೆಸ್ಟ್
ಮೂರು ಲಕ್ಷ ರೂ ಹಣದಾಸೆಗೆ ಓರ್ವ ಸ್ನೇಹಿತ ಏಳು ವರ್ಷದ ಗೆಳೆತನಕ್ಕೆ ಕೊಳ್ಳಿ ಇಟ್ಟ ಘಟನೆಯೊಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಚಿನ್ನ ಖರೀದಿಸುವ ನೆಪದಲ್ಲಿ ಕಾಡಿಗೆ ಕರೆತಂದು ಕೊಲೆಗೈಯಲಾಗಿದೆ. ಕೊಲೆ ಬಳಿಕ ಗೆಳೆಯನ ಹಣದಿಂದಲೇ ಎರಡನೇ ಪತ್ನಿಗೆ ಹೊಸ ಟಿವಿ ಖರೀದಿಸಿ ಗಿಫ್ಟ್ ನೀಡಿದ್ದ ಆಸಾಮಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
- Jagadisha B
- Updated on: Mar 6, 2026
- 4:10 pm
ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು
ತುಮಕೂರು ತಾಲ್ಲೂಕಿನ ಹೆಬ್ಬೂರಿನ ದಾಸರಹಳ್ಳಿಯಲ್ಲಿ ನಡೆದಿದ್ದ ಪರಮೇಶ್ ಕೊಲೆ ಪ್ರಕರಣಕ್ಕೆ ಕೊನೆಗೂ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಹಾಗೂ ಆಕೆಯ ಪ್ರಿಯಕರ ಕೊಲೆಗೈದಿರುವುದು ಸ್ಫೋಟಕ ಸಂಗತಿ ಪೊಲೀಸ್ ವಿಚಾರಣೆಯಲ್ಲಿ ಬಯಲಾಗಿದೆ. ಆ ಮೂಲಕ ಒಂದು ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
- Jagadisha B
- Updated on: Mar 5, 2026
- 6:42 pm