ಜಗದೀಶ್ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ರಾಜ್ಯದ ಜನತೆಗೆ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿಸಿಎಂ ಡಾ ಜಿ ಪರಮೇಶ್ವರ್ ದೊಡ್ಡ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮವಾಗುತ್ತದೆ. ಮತದಾರರ ಪಟ್ಟಿ ಅಂತಿಮವಾದ ನಂತರ ಚುನಾವಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು
- Jagadisha B
- Updated on: Sep 15, 2026
- 10:32 pm
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್ಎಫ್ಒ ಲೋಕಾಯುಕ್ತ ಬಲೆಗೆ: ಹೊರಗುತ್ತಿಗೆ ನೌಕರನೂ ಅರೆಸ್ಟ್
ತುಮಕೂರಿನ ಗುಬ್ಬಿ ವಲಯದಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿ ಸತೀಶ್ ಚಂದ್ರ ಮತ್ತು ಹೊರಗುತ್ತಿಗೆ ನೌಕರ ಶೌಕತ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆಯುವಾಗ ಬಂಧಿಸಿದ್ದಾರೆ. ಗುತ್ತಿಗೆದಾರ ಶಿವರಾಜ್ ಅವರಿಂದ ಕಾಮಗಾರಿ ಅನುಮತಿಗಾಗಿ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದ ಆರ್ಎಫ್ಒ ವಿರುದ್ಧ ಗುತ್ತಿಗೆದಾರ ದೂರು ನೀಡಿದ್ದರು.
- Jagadisha B
- Updated on: Sep 14, 2026
- 9:56 pm
ದೇವಣ್ಣ ದಳಂ ಹೆಸರಿನಲ್ಲಿ ಬೆದರಿಕೆ ಪತ್ರ: ಪಾವಗಡದಲ್ಲಿ ನಕಲಿ ನಕ್ಸಲ್ ವೆಂಕಟೇಶ್ಗಾಗಿ ಪೊಲೀಸರ ಶೋಧ
ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ ಮಾತ್ರ ನಿಲ್ಲುತ್ತಿಲ್ಲ. ಇತ್ತೀಚೆಗೆ ದೇವಣ್ಣ ದಳಂ ಹೆಸರಿನಲ್ಲಿ ಬೆದರಿಕೆ ಪತ್ರ ಹಾಗೂ ಕಚ್ಚಾ ಬಾಂಬ್ ಸ್ಫೋಟಿಸಿದ್ದ ನಕಲಿ ನಕ್ಸಲ್ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ನಾಪತ್ತೆಯಾಗಿರುವ ನಕಲಿ ನಕ್ಸಲ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
- Jagadisha B
- Updated on: Sep 13, 2026
- 6:13 pm
ಬಯಲು ಸೀಮೆಯ ಜನರ ದಶಕಗಳ ಕನಸು ನನಸು: ಅಕ್ಟೋಬರ್ ಅಂತ್ಯಕ್ಕೆ ‘ಎತ್ತಿನಹೊಳೆ’ ಟ್ರಯಲ್ ರನ್ಗೆ ಮುಹೂರ್ತ
ಬಯಲು ಸೀಮೆಯ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ಅಂತಿಮ ಹಂತ ತಲುಪಿದೆ. ಅಕ್ಟೋಬರ್ನಲ್ಲಿ ಪರೀಕ್ಷಾರ್ಥವಾಗಿ ನೀರು ಹರಿಸಲು ಸಿದ್ಧತೆ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಈ ಬೃಹತ್ ಯೋಜನೆ 11 ವರ್ಷಗಳ ಶ್ರಮದ ಫಲ. ಲಕ್ಷಾಂತರ ಜನರ ನೀರಿನ ದಾಹ ತಣಿಸಲು ಇದು ಮಹತ್ವದ ಮೈಲಿಗಲ್ಲು.
- Jagadisha B
- Updated on: Sep 12, 2026
- 6:15 pm
ಡಿಕೆ ಶಿವಕುಮಾರ್ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಇಂದಿಗೆ 100 ದಿನಗಳು ಪೂರೈಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ನಂಬಿದ ನೊಣವಿನಕೆರೆ ಮಠದ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಕೈಯಲ್ಲಿ ಬೆಂಕಿ ಇಟ್ಟುಕೊಂಡು ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ನುಂಗಲೂ ಆಗದ, ಉಗುಳಲೂ ಆಗದ ಸ್ಥಿತಿಯಲ್ಲಿ ಸಮಾಜ ಸಿಲುಕಿದೆ. ಎಲ್ಲರ ಭಾವನೆ ಗೌರವಿಸುವವರಿಗೆ ಶ್ರೀಮಠದ ಪೂರ್ಣ ಆಶೀರ್ವಾದ ಇರುತ್ತದೆ. ಸಮನ್ವಯತೆಯಿಂದ ಸಮಾಜ ಮುನ್ನಡೆಸುವ ನಾಯಕನಿಗೆ ಬೆಂಬಲ.
- Jagadisha B
- Updated on: Sep 10, 2026
- 5:48 pm
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ: ಜನರಿಗೆ ಧಮ್ಕಿ ಹಾಕಿದ ವಿಡಿಯೋ ವೈರಲ್
ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಅವರು ಜನರ ಸಮಸ್ಯೆಗೆ ಕಿವಿಗೊಡದೆ ದರ್ಪ ತೋರಿರುವ ಆರೋಪ ಕೇಳಿಬಂದಿದೆ. ಸಂತೆ ಮೈದಾನ ಒತ್ತುವರಿ ಬಗ್ಗೆ ಮಾಹಿತಿ ನೀಡಲು ಬಂದ ವ್ಯಕ್ತಿಯೊಬ್ಬರಿಗೆ ಅರ್ಜಿ ಕೊಟ್ಟು ಹೋಗುವಂತೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದ್ದು, ಸಿಎಂ ಡಿಕೆಶಿ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಶಾಸಕರ ಈ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
- Jagadisha B
- Updated on: Sep 7, 2026
- 12:09 pm
ಮಗನ ಮದುವೆ ಸಂಭ್ರಮದಲ್ಲಿದ್ದ ಚಿನ್ನದ ವ್ಯಾಪಾರಿಗೆ ಬಿಗ್ ಶಾಕ್
ತುಮಕೂರಿನ ಚಿಕ್ಕಪೇಟೆಯಲ್ಲಿ ಚಿನ್ನದ ವ್ಯಾಪಾರಿ ಲಕ್ಷ್ಮಣ್ ಗಣಪತ್ ಪವಾರ್ ಅವರ ಮನೆಯಲ್ಲಿ 2.25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಕಳ್ಳತನವಾಗಿದೆ. ಮಗನ ಮದುವೆಗಾಗಿ ಕುಟುಂಬ ಮಹಾರಾಷ್ಟ್ರಕ್ಕೆ ತೆರಳಿದ್ದಾಗ ಈ ಕೃತ್ಯ ನಡೆದಿದೆ. ಸುಮಾರು 785 ಗ್ರಾಂ ಚಿನ್ನ ಮತ್ತು 1.4 ಕೋಟಿ ರೂ. ಮೌಲ್ಯದ ಬೆಳ್ಳಿ ದೋಚಲಾಗಿದ್ದು, ಪರಿಚಿತರೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
- Jagadisha B
- Updated on: Sep 3, 2026
- 12:13 pm
ಕೇರಳದವರು ಬಟ್ಟೆ ಬಿಚ್ಚಿ ಕುಣೀತಿದ್ದಾರೆ, ತಲೆಕೆಡಿಸಿಕೊಳ್ಳಲ್ಲ: ಮಂಗಳೂರು ರೈಲ್ವೆ ವಿಭಾಗ ಸಂಬಂಧ ಸೋಮಣ್ಣ ಖಡಕ್ ತಿರುಗೇಟು
ಮಂಗಳೂರು ರೈಲ್ವೆ ಘಟಕವನ್ನು ಮೈಸೂರು ವಲಯಕ್ಕೆ ಸೇರಿಸಿದ ವಿಚಾರ ಕೇರಳದಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಖಡಕ್ ತಿರುಗೇಟು ನೀಡಿದ್ದಾರೆ. ಯಾವುದೇ ತಪ್ಪು ಮಾಡಿಲ್ಲ, ನಮ್ಮ ನಿರ್ಧಾರ ತಾಂತ್ರಿಕ ಪರಿಶೀಲನೆಯ ಆಧಾರದಲ್ಲಿದೆ. ಕೇರಳದವರು ಬಟ್ಟೆಬಿಚ್ಚಿಕೊಂಡು ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ, ಏನೂ ಮಾಡಲಾಗದು ಎಂದು ಸೋಮಣ್ಣ ತಿರುಗೇಟು ನೀಡಿದ್ದಾರೆ.
- Jagadisha B
- Updated on: Aug 31, 2026
- 11:45 am
KPSC ವಿವಾದ: ಕೆಲ ಸೀಕ್ರೆಟ್ ಬಿಚ್ಚಿಟ್ಟು ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ತಿರುಗೇಟು
KPSC ಅಕ್ರಮ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ಮಾಡಿದ್ದಾರೆ. ಓಎಂಆರ್ ಶೀಟ್ ತಿದ್ದಿ ಅಕ್ರಮ ನೇಮಕಾತಿಗಳು ಸಾಬೀತಾಗಿವೆ. ಸಿಬಿಐ ತನಿಖೆ ಆಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೊದಲು, ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲೆಸೆದಿದ್ದಾರೆ.
- Jagadisha B
- Updated on: Aug 30, 2026
- 11:03 pm
Tumakuru Accident: ಗೋಡೆಕೆರೆ ಗೇಟ್ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ವೋಕ್ಸ್ವ್ಯಾಗನ್ ಮತ್ತು ಕಿಯಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಜಾಗರೂಕ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೃತರ ಕುಟುಂಬಗಳಿಗೆ ತೀವ್ರ ಆಘಾತ ಉಂಟಾಗಿದೆ.
- Jagadisha B
- Updated on: Aug 30, 2026
- 10:42 am
ಚಿಕ್ಕನಾಯಕನಹಳ್ಳಿ ಬಳಿ ಭೀಕರ ಸರಣಿ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿಗೆ ಮಗು ಸೇರಿ ನಾಲ್ವರು ಬಲಿ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೋಕ್ಸ್ವ್ಯಾಗನ್ ಮತ್ತು ಕಿಯಾ ಸೋನೆಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓವರ್ಟೇಕ್ ಪ್ರಯತ್ನವೇ ದುರಂತಕ್ಕೆ ಕಾರಣವಾಗಿದೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Jagadisha B
- Updated on: Aug 28, 2026
- 10:01 pm
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಮುಂದಿನ ವರ್ಷ ಜೂನ್ಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಆದೇಶ
ಕೇಂದ್ರ ಸಚಿವ ವಿ. ಸೋಮಣ್ಣ ಅವರು ತುಮಕೂರು ರೈಲ್ವೆ ನಿಲ್ದಾಣದ 'ಅಮೃತ ಭಾರತ್' ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ರೂ. 90 ಕೋಟಿ ವೆಚ್ಚದಲ್ಲಿ ನಿಲ್ದಾಣ ಅತ್ಯಾಧುನಿಕವಾಗಿ ಮಾರ್ಪಾಡಾಗಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಲಾಗುವುದು. 2027ರೊಳಗೆ ಕಾಮಗಾರಿ ಪೂರ್ಣಗೊಳಿಸಿ, ನವೀಕೃತ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲು ಯೋಜಿಸಲಾಗಿದೆ. ಹೆಚ್ಚುವರಿ ರೈಲು ಮಾರ್ಗಗಳು ಮತ್ತು ಅಂಡರ್ಪಾಸ್ಗಳ ನಿರ್ಮಾಣವೂ ಪ್ರಗತಿಯಲ್ಲಿದೆ.
- Jagadisha B
- Updated on: Aug 28, 2026
- 5:30 pm