AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadisha B

Jagadisha B

Author - TV9 Kannada

Jagadisha.basavaraju@tv9.com

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Follow On:
ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​

ಡಿಕೆ ಶಿವಕುಮಾರ್​​ ತಾವು ನಂಬುವ ಆರಾಧ್ಯ ಸನ್ನಿಧಿ ಅಜ್ಜಯ್ಯನ ಮಠಕ್ಕೆ ಇಂದು ಭೇಟಿ ನೀಡಿದರು. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಸಿಎಂ ಆದ ಬಳಿಕ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆದರು. ಈ ವೇಳೆ ಕೆಲಕಾಲ ಮಠದ ಆವರಣದಲ್ಲಿ ಓಡಾಡಿದರು.

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್!

ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್!

ಪಾಕಿಸ್ತಾನದ ಶಂಕಿತ ಉಗ್ರ ರಾಣಾ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದು, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ತುಮಕೂರು ಮತ್ತು ದಾವಣಗೆರೆಯ ಇಬ್ಬರು ಯುವಕರನ್ನು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಕರ್ನಾಟಕದಲ್ಲಿ ಉಗ್ರರ ಸ್ಲೀಪರ್ ಸೆಲ್​ಗಳು ಬೇರೂರುತ್ತಿರುವುದು ಮತ್ತೆ ದೃಢವಾಗಿದೆ.

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ

ಪಾಕ್​​ನ ಅದೊಬ್ಬನ ವ್ಯವಸ್ಥಿತ ಸಂಚಿಗೆ ಭಾರತೀಯ ಅದರಲ್ಲೂ ಕರ್ನಾಟಕದ ಯುವಕರು ಟಾರ್ಗೆಟ್ ಆಗಿದ್ದಾರಾ ಎನ್ನುವ ಅನುಮಾನಗಳು ಸದ್ಯ ಶುರುವಾಗಿವೆ. ಏಕೆಂದರೆ ಗುಪ್ತಚರ ದಳದ ಮಾಹಿತಿ ಆಧರಿಸಿ ತುಮಕೂರು ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಇಬ್ಬರು ಯುವಕರು ಸಿಕ್ಕಿಬಿದ್ದಿದ್ದೇಗೆ, ಪಾಕ್​ನ ಆ ವ್ಯಕ್ತಿಗೆ ಹಾಗೂ ಇವರಿಗೆ ಸಂಪರ್ಕವಾಗಿದ್ದು ಹೇಗೆ ಎಂಬ ಸ್ಫೋಟಕ ಮಾಹಿತಿ ಇಲ್ಲಿದೆ.

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

ದೇಶದ ಭದ್ರತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಸಂದೇಶ ರವಾನಿಸುತ್ತಿದ್ದ ತುಮಕೂರಿನ ಶ್ರೀರಾಮನಗರದ ಅಲ್ಲಾಬಕ್ಷು ಎಂಬಾ ಯುವಕನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿದೇಶಿ ಉಗ್ರ ಸಂಘಟನೆ, ಉಗ್ರನೊಂದಿಗೆ ಎಕ್ಸ್ ಖಾತೆ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ.

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು

ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಭಾರಿ ಎಡವಟ್ಟು ಸಂಭವಿಸಿದೆ. ಚಿನ್ನದ ಪದಕ ನಿರೀಕ್ಷಿಸಿದ್ದ ರ್ಯಾಂಕ್ ವಿದ್ಯಾರ್ಥಿಗಳಿಗೆ ಕೇವಲ ಪ್ರಮಾಣಪತ್ರ ಮತ್ತು ನಗದು ಚೆಕ್ ನೀಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪದವಿ ಪ್ರಮಾಣಪತ್ರ ವಿತರಣೆಯಲ್ಲೂ ಗೊಂದಲವಿದ್ದು, ಕುಲಪತಿಗಳು ಶೀಘ್ರದಲ್ಲೇ ಪದಕ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ನಡೆಯಲಿದೆ. ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾಹಿತಿ ನೀಡಿದ್ದಾರೆ. ರಾಜಕಾರಣಿಗಳನ್ನು ಹೊರತು ಪಡಿಸಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ನೊಣವಿನಕೆರೆ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ ಮಾತುಗಳನ್ನಾಡಿದ್ದು, ಶ್ರೀಮಠದ ಆಶೀರ್ವಾದ ಡಿಕೆ ಶಿವಕುಮಾರ ಅವರಿಗೆ ಇರುತ್ತದೆ. ರಾಜಾ‌ ಪ್ರತ್ಯಾಕ್ಷ ದೇವತಾ. ರಾಜ್ಯವನ್ನು ಆಳುವಂತಾ ದೊರೆ ನಾಯಕ. ರೈತರ ಪರ ,ಬಡವರ ಪರ ಇರುವ ನಾಯಕನಾಗಿ ಹೊರಹೊಮ್ಮುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್

ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್

ತುಮಕೂರು ಜಿಲ್ಲೆಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಆರೋಪ ಹೊಸ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕ ಮತ್ತು ಪುತ್ರನ ವಿರುದ್ಧ ಜೆಡಿಎಸ್ ಮುಖಂಡ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಚಲನವಲನದ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ ಮತ್ತು ಹನಿಟ್ರ್ಯಾಪ್ ಮೂಲಕ ತನ್ನನ್ನು ಕೆಣಕಲು ಯತ್ನಿಸಲಾಗುತ್ತಿದೆ ಎಂದಿದ್ದಾರೆ. ಈ ವಿಚಾರ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿ: ರಾಜ್ಯ ಮಾಹಿತಿ ಆಯೋಗದ ಸೂಚನೆ ಬೆನ್ನಲ್ಲೇ FIR

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿ: ರಾಜ್ಯ ಮಾಹಿತಿ ಆಯೋಗದ ಸೂಚನೆ ಬೆನ್ನಲ್ಲೇ FIR

ತುಮಕೂರು ತಹಶೀಲ್ದಾರ್ ಕಚೇರಿಯಲ್ಲಿ ಇನಾಂ ಜಮೀನಿನ ಪ್ರಮುಖ ಕಡತ ನಾಪತ್ತೆಯಾಗಿದ್ದು, ರಾಜ್ಯ ಮಾಹಿತಿ ಆಯೋಗದ ಖಡಕ್ ನಿರ್ದೇಶನದ ಬೆನ್ನಲ್ಲೇ ತಹಶೀಲ್ದಾರ್ ರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರು, ದಾಖಲೆಗೆ ಸಂಬಂಧಿತ ಜಾಗ ತನಗೆ ದಕ್ಕಬಾರದು ಎಂದೇ ಕಡತ ನಾಪತ್ತೆ ಆಗಿದೆ ಎಂದು ಸೃಷ್ಟಿಸಿದ್ದಾರೆ. ಇದರ ಹಿಂದೆ ಹಲವರ ಕೈವಾಡವಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು?

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು?

ತುಮಕೂರನ್ನು ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಳಿಸುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಪ್ರಸ್ತಾಪ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಪರಿಕಲ್ಪನೆ ನೀಡಲಾಗಿದ್ದರೂ, ಜಿಲ್ಲೆಯ ಅಸ್ತಿತ್ವ ಮತ್ತು ಗುರುತಿಗೆ ಧಕ್ಕೆ ಬರಬಹುದು ಎಂಬ ಆತಂಕ ಸಾರ್ವಜನಿಕರಲ್ಲಿದೆ. ಈ ವಿಚಾರವನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸಿದ್ದು, ತುಮಕೂರನ್ನು ತುಮಕೂರಿನಂತೆಯೇ ಅಭಿವೃದ್ಧಿಪಡಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ತುಮಕೂರಿನ ಸಾಧನಾ ಸಮಾವೇಶದಲ್ಲಿ ರಾಜ್ಯ ಸರ್ಕಾರ ಗಿನ್ನಿಸ್​ ವಿಶ್ವ ದಾಖಲೆಯನ್ನು ಆಚರಿಸಿತು. ಕಂದಾಯ ಗ್ರಾಮಗಳ 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಮೂಲಕ ತುಮಕೂರು ಜಿಲ್ಲೆ ಈ ಸಾಧನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಿನ್ನಿಸ್‌ ಪ್ರಮಾಣಪತ್ರವನ್ನು ಹಸ್ತಾಂತರಿಸಲಾಯಿತು. ಈ ಯೋಜನೆಯಲ್ಲಿ ಶ್ರಮಿಸಿದ ಅಧಿಕಾರಿಗಳಿಗೆ ಪ್ರಶಂಸಪತ್ರ ನೀಡಿ ಗೌರವಿಸಲಾಯಿತು.