AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadisha B

Jagadisha B

Author - TV9 Kannada

Jagadisha.basavaraju@tv9.com

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Follow On:
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ’: ನಮ್ಮ ನಡತೆಯೇ ಸಮುದಾಯದ ರಕ್ಷಣೆ ಎಂದ ಕೆ.ಎನ್. ರಾಜಣ್ಣ

‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ’: ನಮ್ಮ ನಡತೆಯೇ ಸಮುದಾಯದ ರಕ್ಷಣೆ ಎಂದ ಕೆ.ಎನ್. ರಾಜಣ್ಣ

ಕೆ.ಎನ್. ರಾಜಣ್ಣ ಅವರು ತಮ್ಮ ರಾಜಕೀಯ ಪಯಣದ ಬಗ್ಗೆ ಮಾತನಾಡಿದ್ದಾರೆ. ಮೀಸಲಾತಿಯನ್ನು ಅವಲಂಬಿಸಿದ್ದರೆ ಶಾಸಕನಾಗಲು ಸಾಧ್ಯವಿರಲಿಲ್ಲ ಎಂದಿರುವ ಅವರು, ಸಮುದಾಯದ ಘನತೆಯನ್ನು ಕಾಪಾಡಿಕೊಂಡು, ಎಲ್ಲಾ ಸಮುದಾಯಗಳ ವಿಶ್ವಾಸ ಗಳಿಸುವುದರಿಂದ ಮಾತ್ರ ರಾಜಕೀಯ ಯಶಸ್ಸು ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ. ಸಮುದಾಯದ ಬಗ್ಗೆ ಜನರಲ್ಲಿ ಸಹಾನುಭೂತಿ ಮೂಡಿಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಹೊಸ ಬೈಕ್​​ ಖರೀದಿಸಿದ ಮರುದಿನವೇ ಭೀಕರ ಅಪಘಾತ: ದಾರುಣ ಅಂತ್ಯ ಕಂಡ ಯುವಕ

ಹೊಸ ಬೈಕ್​​ ಖರೀದಿಸಿದ ಮರುದಿನವೇ ಭೀಕರ ಅಪಘಾತ: ದಾರುಣ ಅಂತ್ಯ ಕಂಡ ಯುವಕ

Road Accidents: ಹೊಸ ಬೈಕ್ ಖರೀದಿಸಿದ ಮರುದಿನವೇ ಟಿಪ್ಪರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ. ಗೆಳೆಯನ ಜೊತೆಗೆ ಸ್ವಗ್ರಾಮಕ್ಕೆ ತೆರಳುವ ವೇಳೆ ಜವರಾಯನ ಅಟ್ಟಹಾಸಕ್ಕೆ 19 ವರ್ಷದ ಯುವಕ ಬಲಿಯಾಗಿದ್ದಾನೆ. ಮತ್ತೊಂದು ಘಟನೆಯಲ್ಲಿ, ಧಾರವಾಡದ ಬೇಲೂರು ಬಳಿ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

ಹಳ್ಳ ಹಿಡಿಯಿತಾ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ತುಮಕೂರು ನಗರದಲ್ಲಿ ಇಂದಿರಾ ಕ್ಯಾಂಟೀನ್​​ಗಳ ಬಾಗಿಲು ಬಂದ್​​!

ಹಳ್ಳ ಹಿಡಿಯಿತಾ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ತುಮಕೂರು ನಗರದಲ್ಲಿ ಇಂದಿರಾ ಕ್ಯಾಂಟೀನ್​​ಗಳ ಬಾಗಿಲು ಬಂದ್​​!

Tumakuru News: ತುಮಕೂರು ನಗರದಲ್ಲಿ ಕಳೆದ ಎಂಟು ದಿನಗಳಿಂದ ಇಂದಿರಾ ಕ್ಯಾಂಟೀನ್‌ಗಳು ಸಂಪೂರ್ಣ ಬಂದ್ ಆಗಿದ್ದು, ಕೈಗೆಟುಕುವ ದರದಲ್ಲಿ ಊಟ ಸವಿಯುತ್ತಿದ್ದ ನೂರಾರು ಬಡವರು ಹಾಗೂ ಶ್ರಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಡಳಿತದಿಂದ ಬಿಲ್ ಬಾಕಿ ಇರೋದೇ ಕ್ಯಾಂಟೀನ್​​ಗಳು ಕ್ಲೋಸ್​​ ಆಗಲು ಕಾರಣ ಎನ್ನಲಾಗ್ತಿದೆಯಾದರೂ, ಅಧಿಕಾರಿಗಳು ಮಾತ್ರ ಗುತ್ತಿಗೆದಾರರು ಕೆಲವು ರೂಲ್ಸ್ ಬ್ರೇಕ್ ಮಾಡಿರುವ ಆರೋಪ ಮಾಡಿದ್ದಾರೆ.

ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್​: ಬಂದ ಹಣದಲ್ಲಿ ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ

ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್​: ಬಂದ ಹಣದಲ್ಲಿ ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ

ಮನೆಗಳ್ಳತನವನ್ನೇ ಕಾಯಕ ಮಾಡಿಕೊಂಡು, ಬಂದ ಹಣದಲ್ಲಿ ಗೋವಾದ ಕ್ಯಾಸಿನೋಗಳಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬೆಂಗಳೂರು ಮೂಲದ ಕಳ್ಳ ದಂಪತಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದಿದ್ದಾರೆ. ಸದ್ಯ ಕುಣಿಗಲ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರ ವಿಚಾರಣೆ ನಡೆಸಿದ್ದಾರೆ.

ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು

ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು

ಪಾಕಿಸ್ತಾನದ ಉಗ್ರನೊಬ್ಬ ಭಾರತದಲ್ಲಿ ಧುರಂಧರ್ ಸಿನಿಮಾ ಶೈಲಿಯ ಭಯೋತ್ಪಾದನಾ ಸಂಚು ರೂಪಿಸಿದ್ದ. ತುಮಕೂರಿನ ಇಬ್ಬರು ಯುವಕರನ್ನು ಬಳಸಿಕೊಂಡು ಭೂಗತ ದೊರೆ ಸೃಷ್ಟಿಸಿ ದಾಳಿಗೆ ಯತ್ನಿಸಿದ್ದ. ಗುಪ್ತಚರ ಮಾಹಿತಿ ಆಧರಿಸಿ ಪೊಲೀಸರು ಈ ಮಸಲತ್ತನ್ನು ಬಯಲು ಮಾಡಿ ಅಲ್ಲಾಭಕ್ಷ್ ಮತ್ತು ಜಮೀರ್ ಎಂಬುವವರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಪಾಕ್ ಹ್ಯಾಂಡ್ಲರ್‌ನ ಸಂಚು ವಿಫಲವಾಗಿದೆ.

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ

ತುಮಕೂರಿನಲ್ಲಿ ನಿವೃತ್ತ ಯೋಧರೊಬ್ಬರು ತಮ್ಮ ಹುಟ್ಟುಹಬ್ಬದ ದಿನವೇ ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿ ಬಿದ್ದಿದ್ದಾರೆ. 'ಗಿಫ್ಟ್' ಕಳುಹಿಸುವ ನೆಪದಲ್ಲಿ ಅಪರಿಚಿತರು ಕರೆ ಮಾಡಿ, ಕೊರಿಯರ್ ಮತ್ತು ಕಸ್ಟಮ್ಸ್ ಶುಲ್ಕದ ಹೆಸರಿನಲ್ಲಿ ಹಂತ ಹಂತವಾಗಿ 2.82 ಲಕ್ಷ ರೂಪಾಯಿ ವಂಚಿಸಿದ್ದಾರೆ. ಸೈಬರ್ ವಂಚಕರ ಬಲೆಯಲ್ಲಿ ಸಿಲುಕಿ ಹಣ ಕಳೆದುಕೊಂಡ ಯೋಧರು ಈಗ ತುಮಕೂರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ

ದಿನನಿತ್ಯ ಬೆಂಗಳೂರು ಮತ್ತು ತುಮಕೂರು ನಡುವೆ ರೈಲಿನಲ್ಲಿ ಸಂಚರಿಸುವ ಸಾವಿರಾರು ಉದ್ಯೋಗಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಮಾರ್ಗದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಸುಮಾರು 6,000 ಕೋಟಿ ರೂಪಾಯಿ ವೆಚ್ಚದಲ್ಲಿ ಚತುಷ್ಪಥ ರೈಲು ಮಾರ್ಗ ನಿರ್ಮಿಸಲು ಬೃಹತ್ ಯೋಜನೆಯನ್ನು ಸಿದ್ಧಪಡಿಸಲಾಗಿದೆ.

ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್

ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್

ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾದಿಯನ್ನು ಬಿಚ್ಚಿಟ್ಟರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮತ್ತು ನಾನು ಜೋಡೆತ್ತುಗಳು. ನಾವು ಒರಿಜಿನಲ್​ ಕಾಂಗ್ರೆಸ್ಸಿಗರು, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬಳಿಕ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ನಾಗೇನಹಳ್ಳಿ ಬಳಿ ರಸ್ತೆಬದಿ ಅಂಗಡಿಯಲ್ಲಿ ಟೀ ಸೇವಿಸಿದರು. ವಿಶೇಷ ಅಂದ್ರೆ, ತಾವು ಕುಡಿದ ಒಂದು ಟೀಗೆ ಬರೋಬ್ಬರಿಗೆ 2000 ಹಣ ನೀಡಿದ್ದಾರೆ. ಇದರಿಂದ ಅಂಗಡಿ ಮಾಲೀಕ ಫುಲ್ ಖುಷ್ ಆಗಿದ್ದಾನೆ.

ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ

ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ

ಹಾವೇರಿ ಬೆನ್ನಲ್ಲೇ ತುಮಕೂರಿನ ಜಯನಗರದಲ್ಲೂ ‘ಎಸ್‌ಎಲ್‌ವಿ ಮಹಿಳಾ ಮಾರ್ಟ್’ ಗೃಹ ಉದ್ಯೋಗದ ನೆಪದಲ್ಲಿ ನೂರಾರು ಮಹಿಳೆಯರಿಗೆ 5 ಲಕ್ಷದಿಂದ ಕೋಟಿ ರೂ.ವರೆಗೂ ವಂಚಿಸಿದೆ. ಮನೆಯ ಪತ್ರ ಅಡವಿಟ್ಟು ಹಣ ಹೂಡಿದ್ದ ಮಹಿಳೆಯರು ಈಗ ಬೀದಿಗೆ ಬಿದ್ದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು

ತುಮಕೂರು ಜಿಲ್ಲೆಯ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಮರುಜೀವ ನೀಡಲು ಮುಂದಾಗಿದ್ದು, ಜಿಲ್ಲೆಯ ಶಾಸಕರು ಹಾಗೂ ರೈತರ ನಡುವೆ ಮತ್ತೆ ಪರ-ವಿರೋಧದ ಹೋರಾಟದ ಕಿಡಿ ಹೊತ್ತಿಕೊಂಡಿದೆ. ಈ ಯೋಜನೆ ಆರಂಭದಿಂದಲೇ ವಿವಾದಕ್ಕೆ ಕಾರಣವಾಗಿತ್ತು. ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಮತ್ತೆ ಕಾಮಗಾರಿ ಆರಂಭಿಸಲು ಮುಂದಾಗಿರುವುದರಿಂದ, ಜಿಲ್ಲೆಯಲ್ಲಿ ಹೇಮಾವತಿ ಹೋರಾಟದ ಕಾವು ಮತ್ತೊಮ್ಮೆ ಜೋರಾಗುವ ಲಕ್ಷಣ ಗೋಚರಿಸಿದೆ.

‘2013ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್

‘2013ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. 2013ರಲ್ಲಿ ತಾವು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ. 2018ರ ಮೈತ್ರಿ ಸರ್ಕಾರ ಹಾಗೂ ಪ್ರಸ್ತುತ 2026ರ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ಅವಕಾಶ ಸಿಗದೆ ವಂಚಿತರಾದ ಕುರಿತು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಪಾಕಿಸ್ತಾನದ ಶಂಕಿತ ಉಗ್ರನೊಂದಿಗೆ ಇನ್‌ಸ್ಟಾಗ್ರಾಮ್ ಮೂಲಕ ನಂಟು ಹೊಂದಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು 50 ರಿಂದ 60 ಯುವಕರನ್ನು ಸಿದ್ಧಪಡಿಸುವಂತೆ ಪಾಕ್ ಮೂಲದ ರಾಣಾ ಎಂಬಾತ ನೀಡಿದ್ದ ಧರ್ಮದ ಹೆಸರಿನ ಪ್ರಚೋದನೆ ಹಾಗೂ ಆರೋಪಿಗಳ ನಡುವೆ ನಡೆದ ಚಾಟಿಂಗ್‌ನ ಸಂಪೂರ್ಣ ಮಾಹಿತಿ ವಿಚಾರಣೆ ವೇಳೆ ಹೊರಬಿದ್ದಿದೆ.

ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ