AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadisha B

Jagadisha B

Author - TV9 Kannada

Jagadisha.basavaraju@tv9.com
ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವವನ್ನು ಸಿದ್ಧಗಂಗಾ ಮಠದಲ್ಲಿ ಇಂದು ವಿಶಿಷ್ಟವಾಗಿ ಆಚರಿಸಲಾಗಿದೆ. ನಡೆದಾಡುವ ದೇವರು, ತ್ರಿವಿಧ ದಾಸೋಹ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ 119 ಮಕ್ಕಳಿಗೆ 119 ಮಕ್ಕಳಿಗೆ ಸಂಪ್ರದಾಯಬದ್ಧವಾಗಿ ನಾಮಕರಣ ಮಾಡಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸರ್ವಧರ್ಮದವರು ಭಾಗಿಯಾಗಿದ್ದು ವಿಶೇಷವಾಗಿತ್ತು.

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ಶಿರಾ ರಾಷ್ಟ್ರೀಯ ಹೆದ್ದಾರಿ 48ರಲ್ಲಿ KSRTC ಮತ್ತು ಖಾಸಗಿ ಸ್ಲೀಪರ್ ಬಸ್ ನಡುವೆ ಭೀಕರ ಅಪಘಾತವಾಗಿದೆ. ಈ ದುರ್ಘಟನೆಯಲ್ಲಿ ಹಾವೇರಿ ಮತ್ತು ಗದಗ ಮೂಲದ ಇಬ್ಬರು ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದು, 35 ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಲೇನ್ ಬದಲಾವಣೆ ಮತ್ತು KSRTC ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಓರ್ವ ಸಾವು, ಮೂವರು ಗಂಭೀರ

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಓರ್ವ ಸಾವು, ಮೂವರು ಗಂಭೀರ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು, ಇಂದು (ಮೇ 01) ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಶ್ರೀಗಳ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತರೊಬ್ಬರು ದುರಂತ ಸಾವು ಕಂಡಿದ್ದಾರೆ.

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದ ತ್ರಿವಿಧ ದಾಸೋಹ, ಶಿಕ್ಷಣ ಮತ್ತು ರಾಷ್ಟ್ರ ವಿಕಾಸಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದ ಅವರು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಕೊಂಡಾಡಿದ್ದಾರೆ. ವಿವಿಧ ಇಲಾಖೆಗಳ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಮಂತ್ರಿಗಳು ಸೇರಿ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿಯ ಪ್ರಯುಕ್ತ ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಮಠಕ್ಕೆ ಹೂವಿನ ಅಲಂಕಾರ ಮಾಡಲಾಗಿದೆ. ಭಕ್ತಾದಿಗಳು ಬೆಳಗಿನ ಜಾವದಿಂದಲೇ ಗದ್ದುಗೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಎಸ್ಎಸ್ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ.

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ಕರ್ನಾಟಕ ಸರ್ಕಾರ KPS ಮ್ಯಾಗ್ನೆಟ್ ಶಾಲೆಗಳ ನೀತಿಯನ್ನು ಜಾರಿಗೊಳಿಸಲು ಹೊರಟಿದೆ. ಇದು ಸಣ್ಣ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಆಧುನಿಕ ಸೌಲಭ್ಯಗಳಿರುವ ದೊಡ್ಡ ಶಾಲೆಗಳನ್ನು ನಿರ್ಮಿಸುವ ಯೋಜನೆಯಾಗಿದೆ. ಆದರೆ, ತುಮಕೂರು ಜಿಲ್ಲೆಯಲ್ಲಿ ಈ ನೀತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು, ಪೋಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಹಳ್ಳಿ ಶಾಲೆಗಳು ಮುಚ್ಚಿ ಹೋಗುವ ಭೀತಿಯಿಂದ ಬೀದಿಗಿಳಿದು ಪ್ರತಿಭಟಿಸಿದ್ದಾರೆ.

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ಕೌಟುಂಬಿಕ ಕಲಹಕ್ಕೆ ತುಮಕೂರಿನಲ್ಲಿನಿಶ್ಚಿತಾರ್ಥವಾಗಿದ್ದ ಯುವಕ ಬಲಿಯಾಗಿದ್ದಾನೆ. ಅತ್ತಿಗೆ ಜೊತೆ ಅಕ್ರಮ ಸಂಬಂಧದ ಆರೋಪಕ್ಕೆ ಸಹೋದರ ನಡುವಿನ ಜಗಳ ಓರ್ವನ ಸಾವಲ್ಲಿ ಅಂತ್ಯವಾಗಿದೆ. ಪ್ರಕರಣ ಮುಚ್ಚಿಹಾಕಲು ಆರೋಪಿ ಪುತ್ರನಿಗೆ ತಂದೆಯೂ ಸಹಕಾರ ನೀಡಿದ್ದು, ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ತಾನು ಮದುವೆಯಾಗಬೇಕಿದ್ದ ಯುವಕ, ಆತನ ಅತ್ತಿಗೆ ಜೊತೆ ಸಂಬಂಧ ಹೊಂದಿರೋದಾಗಿ ಯುವತಿ ಆರೋಪಿಸಿದ್ದೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣ ಎನ್ನಲಾಗಿದೆ.

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ಸಿಲಿಂಡರ್ ಅಭಾವದ ಕುರಿತು ಪ್ರತಿಕ್ರಿಯಿಸಿದ ಸಿದ್ದಲಿಂಗ ಮಹಾಸ್ವಾಮೀಜಿ, ಸಂಪನ್ಮೂಲಗಳ ಮಿತ ಬಳಕೆ ಮತ್ತು ಪರ್ಯಾಯಗಳ ಅವಶ್ಯಕತೆಯನ್ನು ಒತ್ತಿ ಹೇಳಿದರು. ಮಠದಲ್ಲಿ ಸೌದೆ, ಉಬ್ಬುಲ ಮತ್ತು ಅಡಿಕೆ ಸಿಪ್ಪೆಯನ್ನು ಇಂಧನವಾಗಿ ಬಳಸುವ ಪದ್ಧತಿ ಬಗ್ಗೆ ತಿಳಿಸಿದರು. ಸಂಪನ್ಮೂಲಗಳನ್ನು ಸಮರ್ಥವಾಗಿ ನಿರ್ವಹಿಸುವ ಸಂದೇಶ ನೀಡಿದರು.

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ಏಪ್ರಿಲ್​​ 1ರಂದು ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನ. ಈ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಎಸ್ಎಸ್ಎಲ್​​ಸಿ ಪರೀಕ್ಷೆ ಇರುವುದರಿಂದ ಈ ಬಾರಿ ಕಾರ್ಯಕ್ರಮಗಳಲ್ಲಿ ಬದಲಾವಣೆ ಮಾಡಲಾಗಿದೆ.

ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ತುಮಕೂರಿನಲ್ಲಿ ಅರಣ್ಯ ಇಲಾಖೆ ನೇಮಕಾತಿ ಹೆಸರಿನಲ್ಲಿ ನಕಲಿ ತರಬೇತಿ ಕೇಂದ್ರ ಪತ್ತೆಯಾಗಿದೆ. ಖದೀಮರ ತಂಡವು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ನಕಲಿ ಲೆಟರ್‌ಹೆಡ್ ಮತ್ತು ಲೋಗೋ ಬಳಸಿ ಯುವಕರನ್ನು ವಂಚಿಸಿದೆ. 15 ಯುವಕರಿಗೆ ನಕಲಿ ನೇಮಕಾತಿ ಆದೇಶ ಪತ್ರಗಳನ್ನೂ ನೀಡಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಪೊಲೀಸರಿಗೆ ದೂರು ನೀಡಿದೆ.