ಜಗದೀಶ್ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.
ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಫ್ಯಾನ್ಸ್ ಸಂಭ್ರಮ
ಬೆಂಗಳೂರು ಮಾತ್ರವಲ್ಲದೇ ಎಲ್ಲ ಜಿಲ್ಲೆಗಳಲ್ಲಿ ಜನರು ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ತುಮಕೂರಿನ ಚಿತ್ರಮಂದಿರಗಳಲ್ಲಿ ಸಹ ಅಭಿಮಾನಿಗಳು ಸಂಭ್ರಮಿಸಿದರು. ಗಾಯತ್ರಿ, ಮಾರುತಿ ಚಿತ್ರಮಂದಿರಗಳಲ್ಲಿ ಮುಂಜಾನೆ ಶೋ ಆರಂಭ ಆಯಿತು. ಅಭಿಮಾನಿಗಳ ಸಂಭ್ರಮ ಯಾವ ರೀತಿ ಇತ್ತು ಎಂಬುದರ ವಿವರ ಈ ವಿಡಿಯೋದಲ್ಲಿದೆ ನೋಡಿ..
- Jagadisha B
- Updated on: Aug 26, 2026
- 5:29 pm
ಉರುಳಿಗೆ ಬಿದ್ದು ಪ್ರಾಣ ಬಿಟ್ಟ ಚಿರತೆ ಸುಟ್ಟ ದುರುಳರು: ತನಿಖೆ ವೇಳೆ ಸ್ಫೋಟಕ ವಿಚಾರಗಳು ಬಯಲು
ತುಮಕೂರಿನ ಗೌರಗೊಂಡನಹಳ್ಳಿಯಲ್ಲಿ ಉರುಳಿಗೆ ಬಿದ್ದು ಮೃತಪಟ್ಟ ಚಿರತೆಯನ್ನು ಸುಟ್ಟುಹಾಕಿದ ಮೂವರನ್ನು ಅರಣ್ಯ ಇಲಾಖೆ ಬಂಧಿಸಿದ್ದು, ಸ್ಥಳದಲ್ಲಿ ಕರಡಿ ಹಲ್ಲು ಹಾಗೂ ಬೇಟೆ ಸಾಮಗ್ರಿಗಳು ಪತ್ತೆಯಾಗಿರುವುದು ವನ್ಯಜೀವಿ ಬೇಟೆ ಜಾಲದ ಶಂಕೆ ಮೂಡಿಸಿದೆ. ಜೊತೆಗೆ ಚಿರತೆ ಸುಟ್ಟ ವ್ಯಾಪ್ತಿಯಲ್ಲಿ ಐದಾರು ಉರುಳುಗಳನ್ನು ಭದ್ರ ಟೈಗರ್ ರಿಸರ್ವ್ನ ಡಾಗ್ ಸ್ಕ್ವಾಡ್ ಪತ್ತೆ ಮಾಡಿದೆ. ಸಾಲದ್ದಕ್ಕೆ ತೋಟದೊಳಗೊಂದು ಗರಿಗಳಿಂದ ನಿರ್ಮಿಸಿದ ಮನೆಯೂ ಕಂಡುಬಂದಿದ್ದು, ಅದರಲ್ಲಿ ಬೇಟೆಗೆ ಸಂಬಂಧಿತ ವಸ್ತುಗಳು ಸಿಕ್ಕಿರೋದು ಅನುಮಾನ ಹೆಚ್ಚಿಸಿದೆ.
- Jagadisha B
- Updated on: Aug 23, 2026
- 8:38 am
ಉದ್ಘಾಟನೆಯಾಗಿ 10 ತಿಂಗಳಾದರೂ ಆರಂಭವಾಗದ ತುಮಕೂರು ಕ್ಯಾನ್ಸರ್ ಆಸ್ಪತ್ರೆ: ಬಡ ರೋಗಿಗಳಿಗೆ ತಪ್ಪದ ಬೆಂಗಳೂರು ಅಲೆದಾಟ!
110 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಯಾಗಿ 10 ತಿಂಗಳು ಕಳೆದರೂ ತುಮಕೂರಿನ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಇಂದಿಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಜರ್ಮನಿಯಿಂದ ಯಂತ್ರೋಪಕರಣಗಳು ಬರದಿರುವುದು ಮತ್ತು ಆಸ್ಪತ್ರೆ ಕೊಠಡಿಗಳು ಹಾಳಾಗುತ್ತಿರುವ ಕುರಿತಾದ ಎಕ್ಸ್ಕ್ಲೂಸಿವ್ ವರದಿ ಇಲ್ಲಿದೆ. ರೋಗಿಗಳು ಚಿಕಿತ್ಸೆಗೆ ಅಲೆಯುವಂತಾಗಿದೆ.
- Jagadisha B
- Updated on: Aug 22, 2026
- 3:00 pm
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು: ಬಸ್ಗೆ ಅಡ್ಡಮಲಗಿ ABVP ತೀವ್ರ ಪ್ರತಿಭಟನೆ
ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್ ಸೇವೆಗಳ ಕೊರತೆ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಬಸ್ಗಳು ಸಿಗದೆ ಶಾಲಾ-ಕಾಲೇಜುಗಳಿಗೆ ತಲುಪಲು ಪರದಾಡುತ್ತಿದ್ದು, ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಬಸ್ಗಳನ್ನು ಓಡಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- Jagadisha B
- Updated on: Aug 18, 2026
- 6:17 pm
ತುಮಕೂರು ಜಿಲ್ಲಾಸ್ಪತ್ರೆಗೆ ಹೈಟೆಕ್ ರೂಪ: 131 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭ
ತುಮಕೂರು ಜಿಲ್ಲಾ ಆಸ್ಪತ್ರೆಗೆ ಹೊಸ ಜೀವ ಬಂದಿದೆ. 75 ವರ್ಷಗಳ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ₹131 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೊಸ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಗಣಿ ನಿಧಿ ನೆರವಿನಿಂದ 18 ತಿಂಗಳಲ್ಲಿ ಪೂರ್ಣಗೊಳ್ಳಲಿರುವ ಈ ಯೋಜನೆಯಲ್ಲಿ ಸುಸಜ್ಜಿತ ಶೌಚಾಲಯ ಮತ್ತು ಒಳಚರಂಡಿಗೆ ಆದ್ಯತೆ ನೀಡಲಾಗಿದೆ. ಇದು ಜಿಲ್ಲೆಯ ಜನರ ಆರೋಗ್ಯ ಸೇವೆಗೆ ಆಶಾಕಿರಣವಾಗಲಿದೆ.
- Jagadisha B
- Updated on: Aug 17, 2026
- 5:46 pm
ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
ತುಮಕೂರಿನ ದಶಕಗಳ ಕನಸಾದ ಮೆಟ್ರೋ ಯೋಜನೆ ನನಸಾಗುವ ಹೊಸ್ತಿಲಲ್ಲಿದ್ದು, ಡಿಪಿಆರ್ ಪೂರ್ಣಗೊಂಡ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಬಳಕೆಯ ಅನುಮತಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಗೆ ದೇಶ-ವಿದೇಶಿ ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿಸಿದ್ದು, ನೆಲಮಂಗಲ, ದಾಬಸ್ಪೇಟೆ ಮಾರ್ಗದಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ.
- Jagadisha B
- Updated on: Aug 16, 2026
- 10:38 am
ಗೇಲೆ ಮಾಡಿದ್ದಕ್ಕೆ ಕೊಲೆ: ರೀಲ್ಸ್ ನೋಡಿಕೊಂಡು ಗೆಳೆಯನಿಗೆ ಕೀಟಲೆ ಮಾಡಿದವನ ಹೆಣ ಬಿತ್ತು!
ಅವರಿಬ್ಬರ ಸ್ನೇಹ ಮೂರು ವರ್ಷದಿಂದಿತ್ತು. ಜೊತೆಗಾರರ ಮೂಲಕ ಪರಿಚಯವಾದ ಯುವಕರು ಕಾಲ ಕ್ರಮೇಣ ಹತ್ತಿರವಾಗಿದ್ದರು.. ಒಟ್ಟಿಗೆ ಓಡಾಡಿಕೊಂಡಿದ್ರು. ಒಟ್ಟಿಗೆ ಹರಟೆ ಹೊಡೆಯುತಿದ್ದರು. ಆದರೇ ಅದೊಂದು ರಾತ್ರಿ ರೀಲ್ಸ್ ನೊಡುವಾಗ ಗೆಳೆಯ ಮಾಡಿದ ಕೀಟಲೆ ಯುವಕನಿಗೆ ಸಿಟ್ಟು ತರಿಸಿತ್ತು. ಬುದ್ದಿ ಮಾತು ಹೇಳಿದರೂ ಕೇಳದ ಗೆಳೆಯನಿಗೆ ಗೇಲಿ ಮಾಡಿದ ಒಂದೇ ಕಾರಣಕ್ಕೆ ಚಾಕು ಹಾಕಿ ಕೊಲೆಗೈದ ಯುವಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.
- Jagadisha B
- Updated on: Aug 15, 2026
- 9:02 pm
ಹೇಮಾವತಿ ಕೆನಾಲ್ ವಿವಾದ: ಡಿಸಿಎಂ ಪರಮೇಶ್ವರ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
Hemavathi Linking Canal Row: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಣ್ಣನಪಾಳ್ಯದಲ್ಲಿ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೇರಿದೆ. ಬರ ವೀಕ್ಷಣೆಗೆ ಬಂದ ಡಿಸಿಎಂ ಪರಮೇಶ್ವರ್ ಅವರ ಕಾರಿಗೆ ರೈತರು ಅಡ್ಡಲಾಗಿ ಬಿದ್ದು ಪ್ರತಿಭಟಿಸಿದ್ದಾರೆ. ನಮಗೆ ನ್ಯಾಯ ಬೇಕು, ಯೋಜನೆ ಆರಂಭಿಸಬೇಕು ಎಂದು ರೈತರು ಒತ್ತಾಯಿಸಿರುವ ಪ್ರಸಂಗ ನಡೆದಿದೆ.
- Jagadisha B
- Updated on: Aug 12, 2026
- 10:47 am
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಕ್ಲಾಸ್!
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಯಡವನಹಳ್ಳಿಗೆ ಬರ ವೀಕ್ಷಣೆಗಾಗಿ ಭೇಟಿ ನೀಡಿದ್ದು, ಗ್ರಾಮದಲ್ಲಿ ಅಳವಡಿಸಲಾಗಿದ್ದ ಕಳಪೆ ಗುಣಮಟ್ಟದ ನೀರಿನ ನಲ್ಲಿಗಳನ್ನು ಕಂಡು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕಾಟಾಚಾರಕ್ಕೆ ಮಾಡ್ತೀರಾ?" ಎಂದು ಪ್ರಶ್ನಿಸಿದ ಪರಮೇಶ್ವರ್, ಕಳಪೆ ಕಾಮಗಾರಿಯ ಹಿಂದೆ ಕಮಿಷನ್ ದಂಧೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
- Jagadisha B
- Updated on: Aug 11, 2026
- 1:47 pm
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ
ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು...ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್ಎಸ್ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು. ಪಟ್ಟಿ ಬದಲಿಸಿದ್ದನ್ನು ಹಿಂದೆಂದೂ ನೋಡಿಲ್ಲ, ಕೇಳಿಯೂ ಇಲ್ಲ ಎಂದಿದ್ದಾರೆ.
- Jagadisha B
- Updated on: Aug 9, 2026
- 5:21 pm
ಹಾಸ್ಟೆಲ್ ಶೌಚಾಲಯದಲ್ಲೇ ಕುಸಿದುಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರಂಗಸಮುದ್ರದ ಕಸ್ತೂರಿಬಾ ಗಾಂಧಿ ಹಾಸ್ಟೆಲ್ನಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಂಕಾ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ರಕ್ತದೊತ್ತಡ ಕಡಿಮೆಯಾಗಿ ಮಾರ್ಗಮಧ್ಯೆ ಮೃತಪಟ್ಟ ಬಾಲಕಿಯ ಸಾವಿಗೆ ಹಾಸ್ಟೆಲ್ನ ಮೂಲಭೂತ ಸೌಕರ್ಯಗಳ ಕೊರತೆಯೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
- Jagadisha B
- Updated on: Aug 9, 2026
- 9:59 am
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಜಿಲ್ಲೆಯ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದಲ್ಲಿ ರೈತ ಕರೇಗೌಡ ಎಂಬುವವರು ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ ‘ಲಕ್ಷ್ಮಿ’ ಎಂಬ ಗರ್ಭಿಣಿ ಹಸುವಿಗೆ ಅತ್ಯಂತ ಸಂಭ್ರಮದಿಂದ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಗ್ರಾಮದ ಮಹಿಳೆಯರು ಸಾಂಪ್ರದಾಯಿಕವಾಗಿ ಹಸುವಿಗೆ ಅರಿಶಿನ-ಕುಂಕುಮ ಹಚ್ಚಿ, ಆರತಿ ಬೆಳಗಿ, ಮಡಿಲು ತುಂಬಿ ಹಾರೈಸಿದರು. ಈ ಅಪರೂಪದ ಹಾಗೂ ವಿಶೇಷ ಕಾರ್ಯಕ್ರಮದ ನೆಪದಲ್ಲಿ ಇಡೀ ಊರಿನ ನೂರಾರು ಜನರಿಗೆ ಘಮಘಮಿಸುವ ಹೋಳಿಗೆ ಊಟದ ಸತ್ಕಾರ ಏರ್ಪಡಿಸಲಾಗಿತ್ತು. ರೈತನ ಈ ಗೋಪ್ರೇಮಕ್ಕೆ ತೋಟಸಾಗರ ಗ್ರಾಮಸ್ಥರು ಸಾಕ್ಷಿಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
- Jagadisha B
- Updated on: Jul 31, 2026
- 3:08 pm