AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadisha B

Jagadisha B

Author - TV9 Kannada

Jagadisha.basavaraju@tv9.com

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Follow On:
ಆಂಧ್ರದಲ್ಲಿ ನಾಲ್ವರು ಕೋವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ

ಆಂಧ್ರದಲ್ಲಿ ನಾಲ್ವರು ಕೋವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ

COVID prevention Karnataka: ನೆರೆಯ ಆಂಧ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವುದು ಕರ್ನಾಟಕದ ಗಡಿ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ರಾಜ್ಯಕ್ಕೆ ವೈರಸ್ ಹರಡದಂತೆ ತಡೆಯಲು ಎಂಟು ಗಡಿ ಮಾರ್ಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು

ಆಂಧ್ರಪ್ರದೇಶದಲ್ಲಿ ಇಬ್ಬರು ಕೋವಿಡ್​ನಿಂದ ಮೃತಪಟ್ಟು, ಒಂಬತ್ತು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಿಂದ ಪಾವಗಡಕ್ಕೆ ಆಗಮಿಸುವ ವಾಹನಗಳ ಪ್ರಯಾಣಿಕರಿಗೆ ಜ್ವರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ರಾಜವಂತಿಗೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತುಮಕೂರು: ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ

ತುಮಕೂರು: ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸರ್ಕಾರಿ ಆಸ್ಪತ್ರೆಯ ಸಾವಿರಾರು ಮಧುಮೇಹ ಮಾತ್ರೆಗಳು ಸ್ಮಶಾನದಲ್ಲಿ ಪತ್ತೆಯಾಗಿವೆ. 2026ರವರೆಗೆ ಬಳಸಬಹುದಾದ ಈ ಮಾತ್ರೆಗಳು ಬಡ ರೋಗಿಗಳಿಗೆ ಉಚಿತವಾಗಿ ಸಿಗಬೇಕಿದ್ದವು. ಮಾತ್ರೆ ಎಸೆದಿದ್ದರಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ, ಅಲ್ಲದೆ ಕೆರೆಗೆ ವಿಷ ಬೆರೆಯುವ ಭೀತಿಯೂ ಎದುರಾಗಿದೆ. ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ರೈಲು ಸಂಪರ್ಕದ ಕನಸು 2027ರ ಡಿಸೆಂಬರ್‌ ವೇಳೆಗೆ ನನಸಾಗಲಿದೆ. ತುಮಕೂರು-ಕಲ್ಯಾಣದುರ್ಗ ಮತ್ತು ದಾವಣಗೆರೆ-ತುಮಕೂರು ನೂತನ ರೈಲು ಮಾರ್ಗಗಳು ಪ್ರಗತಿಯಲ್ಲಿದ್ದು, ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಈ ಯೋಜನೆಗಳು ಆರ್ಥಿಕ ಪ್ರಗತಿ, ವ್ಯಾಪಾರ-ವಹಿವಾಟು ಹಾಗೂ ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸಲಿವೆ.

ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!

ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಸಿಗರೇಟ್ ಖರೀದಿಸಲು ನೀಡಿದ ಒಂದೇ ಒಂದು 500 ರೂಪಾಯಿ ನಕಲಿ ನೋಟಿನ ಸುಳಿವು ಹಿಡಿದ ಪೊಲೀಸರು, ರಾಜ್ಯವ್ಯಾಪಿ ಹರಡಿದ್ದ ಕಳ್ಳನೋಟು ದಂಧೆಯನ್ನು ಭೇದಿಸಿದ್ದಾರೆ. ಬೆಂಗಳೂರಿನಲ್ಲಿ ಮುದ್ರಣ ಮಾಡಿ, ಮೈಸೂರು ಹಾಗೂ ಇತರೆಡೆ ಮಾರಾಟ ಮತ್ತು ಚಲಾವಣೆ ಮಾಡುತ್ತಿದ್ದ ಆರು ಮಂದಿ ಖತರ್ನಾಕ್ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಡಿಸಿಎಂ ಸಂಧಾನ ಯಶಸ್ವಿ: ತುಮಕೂರು SIR BLO ಸಾವಿಗೆ ಎಷ್ಟು ಪರಿಹಾರ, ಪರಮೇಶ್ವರ್ ಹೇಳಿದ್ದೇನು?

ಡಿಸಿಎಂ ಸಂಧಾನ ಯಶಸ್ವಿ: ತುಮಕೂರು SIR BLO ಸಾವಿಗೆ ಎಷ್ಟು ಪರಿಹಾರ, ಪರಮೇಶ್ವರ್ ಹೇಳಿದ್ದೇನು?

ತುಮಕೂರಿನ ಗ್ರಾಮ ಲೆಕ್ಕಾಧಿಕಾರಿ ಭುವನಾ ಸಾವು ಕಂದಾಯ ಇಲಾಖೆಯ ನೂರಾರು ಸಿಬ್ಬಂದಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಡಿಸಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಸ್​​​ಗೆ ಡಿಸಿ ಪತ್ರ ಕೂಡ ಬರೆದಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್​​ ಅವರ ಮನವಿ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು

ಗ್ರಾಮ ಆಡಳಿತ ಅಧಿಕಾರಿ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು

ತುಮಕೂರು ವಿಎಒ ಭುವನಾ ಅವರ ಆಕಸ್ಮಿಕ ಸಾವು ಸರ್ಕಾರಿ ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಮೇಲಧಿಕಾರಿಗಳ ಕಾರ್ಯದ ಒತ್ತಡ ಮತ್ತು ಕಿರುಕುಳದಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಭುವನಾ ಅವರ ಕುಟುಂಬಕ್ಕೆ ಇದು ಬರಸಿಡಿಲು ಬಡಿದಂತಾಗಿದೆ. ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಅಧಿಕಾರಿ ಸಾವು: ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ!

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಅಧಿಕಾರಿ ಸಾವು: ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ!

ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರ ಅಹೋರಾತ್ರಿ ಧರಣಿ ತೀವ್ರಗೊಂಡಿದೆ. ಮೇಲಧಿಕಾರಿಗಳ ಕಿರುಕುಳ ಮತ್ತು SIR ಕರ್ತವ್ಯದ ಒತ್ತಡದಿಂದಾಗಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತ ಅಧಿಕಾರಿ (VAO) ಭುವನಾ ಸಾವಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೌಕರರು ಪಟ್ಟು ಹಿಡಿದಿದ್ದಾರೆ. ಜಿಲ್ಲಾಧಿಕಾರಿಗಳು ನಡೆಸಿದ ತಡರಾತ್ರಿಯ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರತಿಭಟನೆ ಮುಂದುವರಿದಿದೆ.

SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು; ಸಿಬ್ಬಂದಿಯಿಂದ ಪ್ರತಿಭಟನೆ

SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು; ಸಿಬ್ಬಂದಿಯಿಂದ ಪ್ರತಿಭಟನೆ

SIR ಕರ್ತವ್ಯಕ್ಕೆ ತೆರಳುವಾಗ ಬೈಕ್​​​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ವಿಎಒ ಭುವನಾ ಕೊನೆಗೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇತ್ತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನೂರಾರು ಕಂದಾಯ ಇಲಾಖೆ ಸಿಬ್ಬಂದಿ ನ್ಯಾಯಕ್ಕಾಗಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇನ್ನು ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯ ಅಮಾನತ್ತಿಗೆ ಒತ್ತಾಯಿಸಿದ್ದಾರೆ.

ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ

ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ

ರಾಜ್ಯದಲ್ಲಿ ಕಳೆದ 5 ದಿನಗಳಿಂದ SIR ಪ್ರಕ್ರಿಯೆ ನಡೆಯುತ್ತಿದೆ. ಸಾಲು ಸಾಲು ಲೋಪ ಆರೋಪಗಳ ಮಧ್ಯೆ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಇಬ್ಬರು ವಿಎಒ ಸಿಬ್ಬಂದಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಹೇಮಾವತಿ ಲಿಂಕಿಂಗ್ ಕೆನಾಲ್ ಕದನ: ‘ನಾಲ್ಕು ಗೋಡೆಗಳ ಮಧ್ಯೆ ವಿರೋಧಿಸಿದ್ದೇನೆ’ ಎಂದ ಗುಬ್ಬಿ ಶಾಸಕ, ರಾಮಲಿಂಗಾರೆಡ್ಡಿ ಹೇಳಿದ್ದೇನು?

ಹೇಮಾವತಿ ಲಿಂಕಿಂಗ್ ಕೆನಾಲ್ ಕದನ: ‘ನಾಲ್ಕು ಗೋಡೆಗಳ ಮಧ್ಯೆ ವಿರೋಧಿಸಿದ್ದೇನೆ’ ಎಂದ ಗುಬ್ಬಿ ಶಾಸಕ, ರಾಮಲಿಂಗಾರೆಡ್ಡಿ ಹೇಳಿದ್ದೇನು?

ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ವಿವಾದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಕನಸಿನ ಯೋಜನೆ ಎನ್ನಲಾದ ಈ ಕಾಮಗಾರಿಗೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಹಿತಕ್ಕಾಗಿ ಪಕ್ಷದೊಳಗೂ ವಿರೋಧ ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ. ಆದರೆ, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಯನ್ನು ಜಾರಿಗೊಳಿಸಲು ಬದ್ಧರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದು, ಪಕ್ಷದೊಳಗಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಕೇಸ್: ಉತ್ತರ ಕನ್ನಡದಲ್ಲಿ ನಾಡಬಾಂಬ್​ ಮಾರಾಟ ಜಾಲ ಪತ್ತೆ

ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಕೇಸ್: ಉತ್ತರ ಕನ್ನಡದಲ್ಲಿ ನಾಡಬಾಂಬ್​ ಮಾರಾಟ ಜಾಲ ಪತ್ತೆ

ಪ್ರೇಮ ವೈಫಲ್ಯದಿಂದ ಕಾರಿನಲ್ಲೇ ಸ್ಫೋಟಿಸಿಕೊಂಡು ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಾಗೇಂದ್ರಗೆ ನಾಡಬಾಂಬ್ ಸಿಕ್ಕಿದ್ದೆಗೆ ಎಂದು​ ತನಿಖೆ ನಡೆಸಿದ ತುಮಕೂರು ಪೊಲೀಸರಿಗೇ ಶಾಕ್​ ಆಗಿದೆ. ಏಕೆಂದರೆ ತನಿಖೆ ವೇಳೆ ಉತ್ತರ ಕನ್ನಡದಲ್ಲಿ ಅಕ್ರಮವಾಗಿ ನಾಡಬಾಂಬ್ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ ಆಗಿದೆ.

ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ