AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಹನಿಯಡ್ಕ

ಕಿರಣ್​ ಹನಿಯಡ್ಕ

ರಾಜಕೀಯ ವರದಿಗಾರ - TV9 Kannada

kiran.monappa@tv9.com

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Follow On:
ಬನಶಂಕರಿ ಸ್ಕೈವಾಕ್ ಯೋಜನೆ ಜಾರಿಗೆ ಮನವಿ: ಸಚಿವ ಕೃಷ್ಣಬೈರೇಗೌಡಗೆ ಸಂಸದ ತೇಜಸ್ವಿ ಸೂರ್ಯ ಪತ್ರ

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿಗೆ ಮನವಿ: ಸಚಿವ ಕೃಷ್ಣಬೈರೇಗೌಡಗೆ ಸಂಸದ ತೇಜಸ್ವಿ ಸೂರ್ಯ ಪತ್ರ

Tejasvi Surya wrote a letter to Krishna Byre Gowda: ಬನಶಂಕರಿ ಸ್ಕೈವಾಕ್ ಯೋಜನೆಯನ್ನು ತಕ್ಷಣ ಜಾರಿಗೆ ತರುವಂತೆ ಸಂಸದ ತೇಜಸ್ವಿ ಸೂರ್ಯ ಸಚಿವ ಕೃಷ್ಣಬೈರೇಗೌಡರಿಗೆ ಪತ್ರ ಬರೆದಿದ್ದಾರೆ. ಪಾದಚಾರಿ ಸುರಕ್ಷತೆಗೆ ಸ್ಕೈವಾಕ್ ಅತ್ಯಗತ್ಯವಾಗಿದ್ದು, ಫ್ಲೈಓವರ್‌ಗಾಗಿ ಇದನ್ನು ಬಲಿ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ಸಂಸದ ಸುಧಾಕರ್, ಶಾಸಕ ವಿಶ್ವನಾಥ್ ಸಂಧಾನ: ಇಬ್ಬರಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಸಂಸದ ಸುಧಾಕರ್, ಶಾಸಕ ವಿಶ್ವನಾಥ್ ಸಂಧಾನ: ಇಬ್ಬರಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಕರ್ನಾಟಕ ಬಿಜೆಪಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮಧ್ಯ ಪ್ರವೇಶಿಸಿದ್ದು, ನಾಯಕರ ನಡುವಿನ ಒಳಜಗಳಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕರ ನಡವಳಿಕೆ ಬದಲಿಸಿಕೊಳ್ಳಲು ಖಡಕ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಹಿರಿಯ ನಾಯಕರು ಸೇರಿಕೊಂಡು ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಹಾಗು ಯಲಹಂಕ ಶಾಸಕ ಎಸ್​​​ಆರ್ ವಿಶ್ವನಾಥ್ ನಡುವೆ ಸಂಧಾನ ಮಾಡಿದ್ದಾರೆ. ಈ ವೇಳೆ ಇಬ್ಬರಿಗೂ ಕೆಲ ಖಡಕ್ ಸೂಚನೆಗಳನ್ನು ಸಹ ನೀಡಿದ್ದಾರೆ.

ಶಾಸಕ ಸುರೇಶ್​​ ಕುಮಾರ್​​ ಕಚೇರಿಗೆ ಮುತ್ತಿಗೆ ಯತ್ನ: ಕಾಂಗ್ರೆಸಿಗರ ನಡೆ ಪ್ರಶ್ನಿಸಿ ಬಿಜೆಪಿ ಪೋಸ್ಟ್​​

ಶಾಸಕ ಸುರೇಶ್​​ ಕುಮಾರ್​​ ಕಚೇರಿಗೆ ಮುತ್ತಿಗೆ ಯತ್ನ: ಕಾಂಗ್ರೆಸಿಗರ ನಡೆ ಪ್ರಶ್ನಿಸಿ ಬಿಜೆಪಿ ಪೋಸ್ಟ್​​

ಭ್ರಷ್ಟಾಚಾರ ಆರೋಪ ಮಾಡಿ ಲೋಕಾಯುಕ್ತ ದೂರು ಬೆನ್ನಲ್ಲೇ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನ ನಡೆಸಿದ್ದಾರೆ. ಈ ವೇಳೆ ಬಿಜೆಪಿಗರಿಂದಲೂ ಪ್ರತಿರೋಧ ವ್ಯಕ್ತವಾಗಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ. ಮತ್ತೊಂದೆಡೆ ಕೈ ಕಾರ್ಯಕರ್ತರ ಈ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಎಕ್ಸ್‌ ಪೋಸ್ಟ್ ಮಾಡಿ ಕಿಡಿ ಕಾರಿದೆ.

ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ಖರ್ಗೆಗೆ ವಿಜಯೇಂದ್ರ ತಿರುಗೇಟು!

ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ಖರ್ಗೆಗೆ ವಿಜಯೇಂದ್ರ ತಿರುಗೇಟು!

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಅಕ್ರಮ ನಡೆಸುತ್ತಿದೆ ಎಂದು ಆರೋಪಿಸಿ ಬಿ.ವೈ.ವಿಜಯೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಬಿಎಲ್‍ಓಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಪರವಾಗಿ ಫಾರಂ ಹಂಚುತ್ತಿರುವುದು, ಮಸೀದಿ, ಚೌಲ್ಟ್ರಿ, ಶಾಸಕರ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಆಯುಕ್ತರ ಗಮನಕ್ಕೆ ತಂದಿದ್ದಾರೆ. ವ್ಯವಸ್ಥೆ ಬುಡಮೇಲು ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ "ಕತ್ತೆಗಳ" ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

SIRನಲ್ಲಿ ನಿಯಮ ಉಲ್ಲಂಘನೆ: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು

SIRನಲ್ಲಿ ನಿಯಮ ಉಲ್ಲಂಘನೆ: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು

ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ​ ಪ್ರಕ್ರಿಯೆಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲೂ ಎಸ್​​ಐಆರ್​​​​ನಲ್ಲಿ ಅಕ್ರಮ: ವಿಡಿಯೋ ಸಾಕ್ಷಿ ಕೊಟ್ಟ ಜೋಶಿ

ಹುಬ್ಬಳ್ಳಿ-ಧಾರವಾಡದಲ್ಲೂ ಎಸ್​​ಐಆರ್​​​​ನಲ್ಲಿ ಅಕ್ರಮ: ವಿಡಿಯೋ ಸಾಕ್ಷಿ ಕೊಟ್ಟ ಜೋಶಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಮನಗರ ಬೆನ್ನಲ್ಲೇ, ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬೃಹತ್ ಅಕ್ರಮ ಸಾರ್ವಜನಿಕವಾಗಿ ಬಯಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಿಡಿಯೋ ಹಂಚಿಕೊಂಡಿದ್ದು, ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಎಸ್​ಐಆರ್​​ ತನಿಖೆಗೆ ಆಗ್ರಹ: ಕೇಂದ್ರ ಚುನಾವಣಾ ಆಯೋಗಕ್ಕೆ ಎರಡು ಬಾರಿ ಶೋಭಾ ಕರಂದ್ಲಾಜೆ ಪತ್ರ

ರಾಜ್ಯದಲ್ಲಿ ನಡೆಯುತ್ತಿರುವ ಎಸ್​ಐಆರ್​​ ತನಿಖೆಗೆ ಆಗ್ರಹ: ಕೇಂದ್ರ ಚುನಾವಣಾ ಆಯೋಗಕ್ಕೆ ಎರಡು ಬಾರಿ ಶೋಭಾ ಕರಂದ್ಲಾಜೆ ಪತ್ರ

Shobha Karndlaje: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಸ್‌ಐಆರ್ ಪ್ರಕ್ರಿಯೆ ನಿಯಮ ಪ್ರಕಾರ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ತುರ್ತು ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಎರಡು ಬಾರಿ ಪತ್ರ ಬರೆದಿದ್ದಾರೆ. ಇದು ಅನಗತ್ಯ ಕೆಲಸದ ಪುನರಾವರ್ತನೆ, ಸಾರ್ವಜನಿಕ ಹಣದ ವ್ಯರ್ಥ ವೆಚ್ಚ, ಆಡಳಿತಾತ್ಮಕ ಗೊಂದಲ ಹಾಗೂ ಮತದಾರರ ಪಟ್ಟಿಯ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ ಎಂದವರು ತಿಳಿಸಿದ್ದಾರೆ.

ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

Voter List Verification: ಬಿಎಲ್‌ಒಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಗಳೂರಿನ ಜಯನಗರದ ಮಸೀದಿ ಒಳಗೆ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ ಎಂದವರು ದೂರಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಕಿಡಿ ಕಾರಿದ್ದರು.

ನನ್ನ ವಿರುದ್ಧದ ಲೋಕಾಯುಕ್ತ ದೂರು ಶುದ್ಧ ಹಾಸ್ಯಾಸ್ಪದ, ರಾಜಕೀಯ ಪಿತೂರಿ: ಬಿಜೆಪಿ ಶಾಸಕ ಸುರೇಶ್ ಕುಮಾರ್

ನನ್ನ ವಿರುದ್ಧದ ಲೋಕಾಯುಕ್ತ ದೂರು ಶುದ್ಧ ಹಾಸ್ಯಾಸ್ಪದ, ರಾಜಕೀಯ ಪಿತೂರಿ: ಬಿಜೆಪಿ ಶಾಸಕ ಸುರೇಶ್ ಕುಮಾರ್

ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿರುವ ಭ್ರಷ್ಟಾಚಾರದ ದೂರು ಸಂಪೂರ್ಣ ಸುಳ್ಳು ಮತ್ತು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತರಿಂದ ನೋಟಿಸ್ ಬರುವ ಮುನ್ನವೇ, ಇನ್ನೆರಡು ದಿನಗಳಲ್ಲಿ ತಾವು ದೂರಿನ ಪ್ರತಿ ಅಂಶಕ್ಕೂ ಸುದೀರ್ಘ ಲಿಖಿತ ಉತ್ತರ ಸಲ್ಲಿಸುವುದಾಗಿ ಅವರು ಪ್ರಕಟಿಸಿದ್ದಾರೆ.

ಬಿಜೆಪಿಯಲ್ಲಿ ಮುಂದುವರಿದ ಮುಖಂಡರ ಉಚ್ಚಾಟನೆ, ವಾರದಲ್ಲಿ 2ನೇ ವಿಕೆಟ್ ಪತನ!

ಬಿಜೆಪಿಯಲ್ಲಿ ಮುಂದುವರಿದ ಮುಖಂಡರ ಉಚ್ಚಾಟನೆ, ವಾರದಲ್ಲಿ 2ನೇ ವಿಕೆಟ್ ಪತನ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕರ್ನಾಟಕಕ್ಕೆ ಭೇಟಿ ಕೊಟ್ಟು ಹೋದ ಬಳಿಕ ಪಕ್ಷದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಪಕ್ಷದಲ್ಲಿ ಮುಖಂಡರ ಉಚ್ಚಾಟನೆ ಮುಮದುವರೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ನಾನು ಪಕ್ಷದ ಶಿಸ್ತಿನ ಸಿಪಾಯಿ ಅಂದಿದ್ಯಾಕೆ ಸೋಮಣ್ಣ?

ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ನಾನು ಪಕ್ಷದ ಶಿಸ್ತಿನ ಸಿಪಾಯಿ ಅಂದಿದ್ಯಾಕೆ ಸೋಮಣ್ಣ?

ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗೂ ನಿನ್ನೆ ಮೊನ್ನೇಯದ್ದಲ್ಲ. ಆರಂಭದಲ್ಲಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದೆ. ಆದ್ರೆ, ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ಬರುತ್ತಿಲ್ಲ. ಆದರೂ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಗಳಾಗಲಿವ ಎನ್ನುವ ಸುದ್ದಿ ಮತ್ತೆ ಮುನ್ನಲೆಗೆ ಬಂದಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಅವರ ಹೆಸರು ಹೇಳಿ ಬರುತ್ತಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ಕೇಳಿದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್​ ಸಂದೇಶಕ್ಕೆ ಬದ್ಧ ಎಂದಿದ್ದಾರೆ.

ಜಿಬಿಎ ಹಗರಣಗಳ ತನಿಖೆಗೆ ಆರ್. ಅಶೋಕ್ ಆಗ್ರಹ: ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕನ ತೀವ್ರ ವಾಗ್ದಾಳಿ!

ಜಿಬಿಎ ಹಗರಣಗಳ ತನಿಖೆಗೆ ಆರ್. ಅಶೋಕ್ ಆಗ್ರಹ: ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕನ ತೀವ್ರ ವಾಗ್ದಾಳಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಸಸಿ ನೆಡಲು 3,108  ರೂ. ವೆಚ್ಚ ಹಾಗೂ ಶ್ವಾನ ಸಂತಾನಹರಣಕ್ಕೆ 42.50 ರೂ. ಕೋಟಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವ ಕೃಷ್ಣಭೈರೇಗೌಡ ಅವರು ಸಭೆಗಳಲ್ಲಿ ಕೇವಲ ಸಣ್ಣ ಅಧಿಕಾರಿಗಳನ್ನು ಬೈದು ರೀಲ್ಸ್ ಮಾಡುವುದನ್ನು ಬಿಟ್ಟು, ಈ ಮಹಾಲೂಟಿಯ ಹಿಂದಿರುವ ಅಸಲಿ ತಿಮಿಂಗಲಗಳನ್ನು ಪತ್ತೆಹಚ್ಚಿ ಜನರ ತೆರಿಗೆ ಹಣ ವಸೂಲಿ ಮಾಡಬೇಕೆಂದು ಆಗ್ರಹಿಸಿದ್ದಾರೆ.