NTAಗೆ ಮೇಜರ್ ಸರ್ಜರಿ: 600 ತಜ್ಞರ ವಜಾ, ನಾಲ್ಕು ಹಂತದಲ್ಲಿ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆಗೆ ಜೋಶಿ ಆದೇಶ
NTA reforms: ಎನ್ಟಿಎ ಪರೀಕ್ಷೆಯಲ್ಲಿ ಆಮೂಲಾಗ್ರವಾಗಿ ಬದಲಾವಣೆಗೆ ಮುಂದಾಗಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಸಂಸ್ಥೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ. ಪರೀಕ್ಷಾ ತಂಡದ ಪುನರ್ ರಚನೆ, 600 ತಜ್ಞರನ್ನು ವಜಾ, ಹೊಸ ಅಧಿಕಾರಿಗಳ ನೇಮಕ ಮತ್ತು ನಾಲ್ಕು ಹಂತದ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆ ಸೂಚನೆ ನೀಡಿದ್ದಾರೆ.
- Kiran Haniyadka
- Updated on: Aug 18, 2026
- 10:32 pm
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಜೈಲುಗಳಲ್ಲಿ ಮೊಬೈಲ್ ಬಳಕೆ ಮತ್ತು ವಿಐಪಿ ಸೌಲಭ್ಯಗಳ ಆರೋಪಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಿದರು. ಮಾಹಿತಿ ಬಂದ ತಕ್ಷಣವೇ ದಾಳಿ ನಡೆಸಿ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ಕೈದಿಗೆ ಜೈಲು ಕೈಪಿಡಿ ನಿಯಮಗಳನ್ನು ಮೀರಿ ವಿಶೇಷ ಸೌಲಭ್ಯ ನೀಡಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
- Kiran Haniyadka
- Updated on: Aug 18, 2026
- 6:51 pm
ಸಚಿವ ನಾಗೇಂದ್ರ ರಾಜೀನಾಮೆ ಜಟಾಪಟಿ: ಉಭಯ ಸದನಗಳಲ್ಲಿ ಆಡಳಿತ-ವಿಪಕ್ಷದ ನಡುವೆ ತೀವ್ರ ವಾಕ್ಸಮರ
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ಪಟ್ಟು ಹಿಡಿದ ಪರಿಣಾಮ ಉಭಯ ಸದನಗಳ ಕಲಾಪ ತೀವ್ರ ಗದ್ದಲ, ವಾಕಸ್ಮರಕ್ಕೆ ಸಾಕ್ಷಿಯಾಯಿತು. ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಕಪ್ಪು ಶಾಲು ತಿರುಗಿಸಿ ಆಕ್ರೋಶ ಹೊರಹಾಕಿದ್ದರೆ, ವಿಧಾನ ಪರಿಷತ್ನಲ್ಲಿಯೂ ಭಾರಿ ಹೈಡ್ರಾಮಾ ನಡೆಯಿತು. ಹೀಗಾಗಿ ಗಲಾಟೆಯ ನಡುವೆಯೇ ಸ್ಪೀಕರ್ ಮತ್ತು ಸಭಾಪತಿಗಳು ಕಲಾಪ ನಡೆಸಬೇಕಾಯಿತು.
- Kiran Haniyadka
- Updated on: Aug 18, 2026
- 6:16 pm
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಪಾದಯಾತ್ರೆ ಬಹುತೇಕ ಕ್ಯಾನ್ಸಲ್?
BJP Padayatra: ನಾಗೇಂದ್ರ ರಾಜೀನಾಮೆ ಕೊಡ್ಬೇಕು, ಸಂಪುಟದಿಂದ ಸಚಿವರನ್ನ ವಜಾ ಮಾಡಬೇಕು ಅಂತ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಕೇಸರಿ ಪಡೆ ಪ್ರತಿಭಟನೆ ನಡೆಸಿದೆ. ಇನ್ನು ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರ ಉದ್ದೇಶಿಸಿ ಪಾದಯಾತ್ರೆ ಬಹುತೇಕ ಕ್ಯಾನ್ಸಲ್ ಎನ್ನಲಾಗುತ್ತಿದೆ.
- Kiran Haniyadka
- Updated on: Aug 18, 2026
- 5:50 pm
ಗ್ಯಾರಂಟಿ ಯೋಜನೆಗಳಲ್ಲಿ ಗೋಲ್ಮಾಲ್ ನಡೆದಿರುವ ಶಂಕೆ: ಯಾವುದು ನಿಜ? ಯಾವುದು ಸುಳ್ಳು?
ಕರ್ನಾಟಕದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್ಮಾಲ್ ನಡೆದಿರುವ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಶಂಕೆ ವ್ಯಕ್ತಪಡಿಸಿದ್ದಾರೆ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಫಲಾನುಭವಿಗಳು ಹಾಗೂ ವೆಚ್ಚದ ಕುರಿತು ಮುಖ್ಯಮಂತ್ರಿಗಳ ಹೇಳಿಕೆಗಳು, ಅಧಿಕೃತ ಪೋಸ್ಟ್ಗಳು ಮತ್ತು ಸಮಿತಿಯ ಅಂಕಿ-ಅಂಶಗಳಲ್ಲಿ ಭಾರಿ ವ್ಯತ್ಯಾಸವಿದೆ. ಈ ಗೊಂದಲ ನಿವಾರಿಸಲು ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದ್ದಾರೆ.
- Kiran Haniyadka
- Updated on: Aug 15, 2026
- 9:31 pm
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಹಾಗೂ ಬಿಜೆಪಿ ಅಭ್ಯರ್ಥಿ P.H. ಪೂಜಾರ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಚುನಾವಣೆ ನಡೆಯಲಿದ್ದು, ಗೆಲ್ಲಲು ಅಗತ್ಯವಿರುವ ಸಂಖ್ಯಾಬಲದ ಕೊರತೆ ಇದ್ದರೂ ಚುನಾವಣೆಯ ಗಂಭೀರತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ವಿಪಕ್ಷ ಮುಂದಾಗಿರುವ ಮಾಹಿತಿ ಇದೆ.
- Kiran Haniyadka
- Updated on: Aug 13, 2026
- 2:59 pm
ಹೆಬ್ಬಾಳ್ ಟನಲ್ ಮೆಟ್ರೋ ಲೈನ್, ಸಬ್ ಅರ್ಬನ್ ರೈಲು ಸಂಘರ್ಷಿಸುವ ಸಾಧ್ಯತೆ: ಡಿಕೆಶಿಗೆ ತೇಜಸ್ವಿ ಸೂರ್ಯ ಪತ್ರ
Hebbal Short Tunnel Project: ಬೆಂಗಳೂರಿನ ಹೆಬ್ಬಾಳ ಶಾರ್ಟ್ ಟನಲ್ ಯೋಜನೆ ಕುರಿತು ಸಂಸದ ತೇಜಸ್ವಿ ಸೂರ್ಯ ಸಿಎಂ ಡಿ.ಕೆ. ಶಿವಕುಮಾರ್ಗೆ ಪತ್ರ ಬರೆದಿದ್ದಾರೆ. 1140 ಕೋಟಿ ರೂ ವೆಚ್ಚದ ಈ ಯೋಜನೆಗೆ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಬಿಎಂಎಲ್ಟಿಎ ಅನುಮೋದನೆ ಇಲ್ಲ. ಹೆಬ್ಬಾಳ ಕೆರೆ ಜಮೀನು, ಮೆಟ್ರೋ ಯೋಜನೆಗಳೊಂದಿಗೆ ಸಂಘರ್ಷದ ಆತಂಕ ವ್ಯಕ್ತಪಡಿಸಿದ್ದು, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದ್ದಾರೆ.
- Kiran Haniyadka
- Updated on: Aug 12, 2026
- 5:04 pm
ಅನುದಾನ ದುರುಪಯೋಗ, ಲೈಂಗಿಕ ದೌರ್ಜನ್ಯ ಆರೋಪ: ಮೈಸೂರು ವಿವಿ ಕುಲಸಚಿವರ ಹುದ್ದೆಗೆ ಪ್ರೊ ಬಿಕೆ ಕೆಂಪೇಗೌಡ ನೇಮಕಕ್ಕೆ ವಿರೋಧ
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಹುದ್ದೆಗೆ ಪ್ರೊ ಬಿಕೆ ಕೆಂಪೇಗೌಡರ ನೇಮಕ ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರೊ. ಕೆಂಪೇಗೌಡರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅನುದಾನ ದುರುಪಯೋಗ ಆರೋಪಗಳಿದ್ದು, ತನಿಖೆಗೆ ಆಗ್ರಹಿಸಲಾಗಿದೆ. ನಿಯಮಬಾಹಿರ ನೇಮಕಾತಿಯನ್ನು ರದ್ದುಪಡಿಸಿ, ಅರ್ಹ ಹಿರಿಯ ಪ್ರಾಧ್ಯಾಪಕರನ್ನು ನೇಮಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
- Kiran Haniyadka
- Updated on: Aug 12, 2026
- 4:09 pm
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ
ಬಿಡದಿ ಟೌನ್ಶಿಪ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಕ್ಷದ ಕಾರ್ಯಕರ್ತರಿಗೆ ಪಾದಯಾತ್ರೆಯಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಸಮನ್ವಯ ಸಮಿತಿಯನ್ನೂ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
- Kiran Haniyadka
- Updated on: Aug 8, 2026
- 1:43 pm
Minister Vijayanand Kashappanavar Oath: ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವ ವಿಜಯಾನಂದ ಕಾಶಪ್ಪನವರ ಪದಗ್ರಹಣ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂಗವಾಗಿ ವಿಜಯಾನಂದ ಕಾಶಪ್ಪನವರ ನೂತನ ಸಚಿವರಾಗಿ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಅವರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಕೂಡಲಸಂಗಮದೇವನ ಹೆಸರಿನಲ್ಲಿ ಪ್ರಮಾಣ ಮಾಡಿ, ಸಂವಿಧಾನಕ್ಕೆ ನಿಷ್ಠೆ, ದೇಶದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು.
- Kiran Haniyadka
- Updated on: Aug 3, 2026
- 7:31 pm
ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
Ministers Oath-Taking Ceremony: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗೈರು ಹಾಜರಾಗಿದ್ದಾರೆ. ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ 19 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಎಂಎಲ್ಎಸಿ ಗಾಯಿತ್ರಿ ಶಾಂತೇಗೌಡ ಅವರು ಮಾತ್ರ ಹೈಕಮಾಂಡ್ ಲಿಸ್ಟ್ನಲ್ಲಿ ಹೆಸರಿದ್ದರೂ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
- Kiran Haniyadka
- Updated on: Aug 3, 2026
- 7:14 pm
ಸಿಎಂ ಡಿಕೆ ಶಿವಕುಮಾರ್ ಕ್ಯಾಬಿನೆಟ್ನ ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ
ಇಂದು ಸಂಜೆ 5 ಗಂಟೆಗೆ ಲೋಕಭವನದ ಗಾಜಿನ ಮನೆಯಲ್ಲಿ 20 ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲರು, ಸಿಎಂ, ಡಿಸಿಎಂ ಸೇರಿದಂತೆ ನಿಯೋಜಿತ ಸಚಿವರು, ಕುಟುಂಬಸ್ಥರು ಮತ್ತು ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಬಾವುಟಗಳಿಂದ ಅಲಂಕೃತಗೊಂಡಿರುವ ಲೋಕಭವನದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಗಳೊಂದಿಗೆ ಸಿದ್ಧತೆ ಪೂರ್ಣಗೊಂಡಿದೆ.
- Kiran Haniyadka
- Updated on: Aug 3, 2026
- 4:33 pm