ಬೈ ಎಲೆಕ್ಷನ್: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್.ಡಿ. ಕುಮಾರಸ್ವಾಮಿ?
ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ನಡೆಯುವ ಪ್ರಚಾರ ಕಾರ್ಯಗಳ ಕುರಿತು ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಡೆದ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಪ್ರಚಾರಕ್ಕಾಗಿ ಸಮಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
- Kiran Haniyadka
- Updated on: Mar 27, 2026
- 5:55 pm
ಕರ್ನಾಟಕ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ (ಲಿಂಗಾಯತ) ಹಾಗೂ ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ದಾಸಕರಿಯಪ್ಪ (ವಾಲ್ಮೀಕಿ/ಎಸ್.ಟಿ) ಅವರನ್ನು ಕಣಕ್ಕಿಳಿಸಿದೆ. ಸಾಮಾಜಿಕ ಸಮತೋಲನ ಮತ್ತು ಮತದಾರರ ಮನವೊಲಿಸುವ ತಂತ್ರ ಇದರ ಹಿಂದಿದೆ. ಕಾಂಗ್ರೆಸ್ಗೆ ಇನ್ನೂ ಅಭ್ಯರ್ಥಿ ಆಯ್ಕೆ ತಲೆನೋವಾಗಿದೆ.
- Kiran Haniyadka
- Updated on: Mar 19, 2026
- 10:31 am
ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ
ಬೆಂಗಳೂರು ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿದೆ. ಬೆಂಗಳೂರು ಕಬ್ಜಕ್ಕೆ ತಂತ್ರ-ಪ್ರತಿತಂತ್ರಗಳು ಶುರುವಾಗಿವೆ. ಈ ಮಧ್ಯೆ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ರಾಜ್ಯ ಚುನಾವಣಾ ಆಯೋಗ ಮಾರ್ಚ್ 30ರವರೆಗೆ ವಿಸ್ತರಿಸಿದೆ.
- Kiran Haniyadka
- Updated on: Mar 18, 2026
- 8:20 pm
ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆಯೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನ ಮುಂದುವರಿದಿದೆ. ಆದ್ರೆ, ಎರಡು ಬಣಗಳ ನಡುವಿನ ಕಿತ್ತಾಟ ಹಿನ್ನೆಲೆಯಲ್ಲಿ ಮೂರನೇ ವ್ಯಕ್ತಿಗೆ ಟಿಕೆಟ್ ನೀಡುವ ಬಗ್ಗೆ ಗಂಭೀರ ಚರ್ಚೆಗಳು ನಡೆದಿವೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ದೆಹಲಿಗೂ ತೆರಳಿದ್ದು, ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
- Kiran Haniyadka
- Updated on: Mar 16, 2026
- 8:52 pm
ಸರ್ಕಾರದ ಧೋರಣೆಗೆ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್
ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮುಂದೂಡಿ, ಪೀಠದಿಂದ ನಿರ್ಗಮಿಸಿದ ಪ್ರಸಂಗ ನಡೆದಿದೆ. ಸರ್ಕಾರದ ಧೋರಣೆ ವಿರುದ್ಧ ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಉತ್ತರ ನೀಡದಿರುವುದಕ್ಕೆ ಸ್ಪಷ್ಟ ಕಾರಣ ನೀಡುವವರೆಗೆ ಸದನ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದಾರೆ. ಮತ್ತೊಂದೆಡೆ ವಿಪಕ್ಷ ನಾಯಕರಿಂದಲೂ ಸರ್ಕಾರದ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Kiran Haniyadka
- Updated on: Mar 16, 2026
- 1:05 pm
ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್ ಮನೆಯೊಂದು ಎರಡು ಬಾಗಿಲು
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ದಿನಾಂಕ ಘೋಷಣೆಗೂ ಮೊದಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆದ್ರೆ, ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ತಿಕ್ಕಾಟಗಳು ಜೋರಾಗಿವೆ. ಒಂದೆಡೆ ಆಡಳಿತರೂಢ ಕಾಂಗ್ರೆಸ್ ಮನೆಯೊಂದು ಎರಡು ಬಾಗಿಲಾಗಿದ್ದರೆ, ವಿಪಕ್ಷ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ.
- Kiran Haniyadka
- Updated on: Mar 13, 2026
- 9:01 pm
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
- Kiran Haniyadka
- Updated on: Mar 11, 2026
- 10:15 pm
ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!
ಬೆಂಗಳೂರಿನಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ಆತಂಕದಲ್ಲಿದೆ. ಹಲವು ಹೋಟೆಲ್ಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದಿದ್ದಾರೆ. LPG ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- Kiran Haniyadka
- Updated on: Mar 10, 2026
- 12:19 pm
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ನೀಡದಿದ್ದರಿಂದ ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು.
- Kiran Haniyadka
- Updated on: Mar 6, 2026
- 3:56 pm
ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ ಆರ್ಎಸ್ಎಸ್ಗೆ ಫಂಡ್ ಹೋಗಿದೆ ಎಂಬ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಬಿಜೆಪಿ ತೀಕ್ಷ್ಣ ತಿರುಗೇಟು ನೀಡಿದೆ. ಕಾಂಗ್ರೆಸ್ ಸರ್ಕಾರವೇ ಪಕ್ಷದ ಕಚೇರಿಗಳಿಗಾಗಿ ಪಂಚಾಯಿತಿ ಮಟ್ಟದಲ್ಲಿಯೂ ಭೂಕಬಳಿಕೆ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಜತೆಗೆ, ಪೂರಕ ದಾಖಲೆಗಳನ್ನೂ ಬಿಡುಗಡೆ ಮಾಡಿದೆ.
- Kiran Haniyadka
- Updated on: Feb 17, 2026
- 1:48 pm
ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು?
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಜಿಎಸ್ಟಿ ವಂಚನೆ ಮತ್ತು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪದಡಿ ತೀರ್ಪು ನೀಡಲಾಗಿದೆ. ದೂರುದಾರ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ನ್ಯಾಯಾಲಯದ ತೀರ್ಪಿನಿಂದ ತಮಗೆ ನ್ಯಾಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
- Kiran Haniyadka
- Updated on: Feb 16, 2026
- 6:21 pm
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ
ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ಅಹೋರಾತ್ರಿ ಧರಣಿ ಕೈಬಿಡುವಂತೆ ಸ್ಪೀಕರ್ ಯು.ಟಿ.ಖಾದರ್ ಮನವಿ ಹೊರತಾಗಿಯೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಮೈತ್ರಿ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
- Kiran Haniyadka
- Updated on: Feb 4, 2026
- 6:48 am