ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದೂ ಅಭ್ಯರ್ಥಿಗಳು ಭಾರಿ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಶಾಸಕರ ಪಕ್ಷ ನಿಷ್ಠೆ ಹಾಗೂ ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳ ಸಕಾರಾತ್ಮಕ ಪರಿಣಾಮವೇ ಈ ಗೆಲುವಿಗೆ ಕಾರಣ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ನ ನಕಾರಾತ್ಮಕ ರಾಜನೀತಿಯ ವಿರುದ್ಧ ಮತದಾರರು ಕಾಂಗ್ರೆಸ್ ಪರ ನಿಂತಿದ್ದಾರೆ.
- Kiran Haniyadka
- Updated on: Jun 18, 2026
- 9:42 pm
ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕರಾದರು. ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರ ಕೊಡುಗೆಯನ್ನು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹಾಗೂ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು.
- Kiran Haniyadka
- Updated on: Jun 18, 2026
- 9:08 pm
ಪರಿಷತ್ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ
ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ವಿಪಕ್ಷ ಬಿಜೆಪಿಯ ಇಬ್ಬರೂ ಅಭ್ಯರ್ಥಿಗಳು ಜಯಗಳಿಸಿದ್ದು, ಕೊನೆಯ ಕ್ಷಣದಲ್ಲಿ ರಾಜ್ಯ ನಾಯಕರು ನಡೆಸಿದ ಚಾಣಾಕ್ಷ ಕಾರ್ಯತಂತ್ರದಿಂದಾಗಿ ಪಕ್ಷಕ್ಕೆ ಉಂಟಾಗಬಹುದಾಗಿದ್ದ ದೊಡ್ಡ ಮುಖಭಂಗ ತಪ್ಪಿದೆ. ಇನ್ನು ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, . ಯಾವ ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆಂದು ಗೊತ್ತಾಗುತ್ತೆ. ಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ಳುತ್ತಾರೆ ಎಂದಿದ್ದಾರೆ.
- Kiran Haniyadka
- Updated on: Jun 18, 2026
- 8:21 pm
ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ನಿರೀಕ್ಷಿತ ಮತಗಳ ಕುರಿತು ಸ್ಪಷ್ಟನೆ ನೀಡಿದ ಅವರು, ತಮಗೆ 29 ಮತಗಳು ಬಂದಿದ್ದು, ಒಂದು ಮತ ಅಮಾನ್ಯವಾಗಿದೆ, ಆದರೆ ಬೇಕಾಗಿದ್ದು 28 ಮತ ಮಾತ್ರ ಎಂದರು. ಲಿಂಗರಾಜ್ ಪಾಟೀಲ್ ಅವರಿಗೆ ಕಡಿಮೆ ಮತ ಬಂದಿರುವ ಕುರಿತು ಪಕ್ಷ ಗಮನಿಸಲಿದೆ ಎಂದು ತಿಳಿಸಿದರು.
- Kiran Haniyadka
- Updated on: Jun 18, 2026
- 8:03 pm
ಯತ್ನಾಳ್ಗೆ ಕಾಂಗ್ರೆಸ್ನಿಂದ ಆಫರ್: ಸ್ಫೋಟಕ ಹೇಳಿಕೆ ಕೊಟ್ಟ ಬಿಜೆಪಿ ಉಚ್ಛಾಟಿತ ಶಾಸಕ
ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಎಂಎಲ್ಸಿ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ಎಂ.ಬಿ. ಪಾಟೀಲ್ ನೀಡಿದ ಕಾಂಗ್ರೆಸ್ ಟಿಕೆಟ್ ಮತ್ತು ಅಭಿವೃದ್ಧಿ ನಿಧಿಯ ಆಮಿಷಗಳನ್ನು ನಿರಾಕರಿಸಿ, ಡಿ.ಎಸ್. ಶಂಕರ್ ಮೂರ್ತಿ ಪರವಾಗಿ ಮತ ಹಾಕಿದ ಘಟನೆಯನ್ನು ಸ್ಮರಿಸಿದ್ದಾರೆ. ಬಿಜೆಪಿಯ ಚಿಹ್ನೆಯಿಂದ ಗೆದ್ದಿದ್ದೇನೆ, ಅದಕ್ಕೆ ನನ್ನ ನಿಷ್ಠೆ ಎಂದಿದ್ದಾರೆ.
- Kiran Haniyadka
- Updated on: Jun 18, 2026
- 4:01 pm
‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್ಗೆ ಶಾಸಕ ಯತ್ನಾಳ್ ಭರವಸೆ
ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿಯ ಮತದಾನದ ಕಾರ್ಯತಂತ್ರ, ಜೆಡಿಎಸ್ಗೆ ಹೆಚ್ಚುವರಿ ಮತಗಳ ವರ್ಗಾವಣೆ ಕುರಿತು ಆರ್. ಅಶೋಕ್ ವಿವರಿಸಿದ್ದಾರೆ. ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮನ್ನು ಸಂಪರ್ಕಿಸಿ ಬಿಜೆಪಿಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಬಗ್ಗೆ ಪ್ರತಿಕ್ರಿಯಿಸಲು ಅಶೋಕ್ ನಿರಾಕರಿಸಿದ್ದಾರೆ.
- Kiran Haniyadka
- Updated on: Jun 18, 2026
- 12:49 pm
ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್
ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ಬಾರಿ ಟಿಕೆಟ್ ವಂಚಿತರಾಗಿದ್ದ ಅವರು, ಪಕ್ಷದ ತೀರ್ಮಾನದಿಂದ ಈ ಬಾರಿ ಗೆಲ್ಲುವುದಾಗಿ ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಬಲದ ಬಗ್ಗೆಯೂ ಮಾತನಾಡಿದ ಲಿಂಗರಾಜ್ ಪಾಟೀಲ್, ಕಾಂಗ್ರೆಸ್ನಲ್ಲಿ ಗೊಂದಲವಿದೆ, ಬಿಜೆಪಿಯಲ್ಲಿ ಆತಂಕವಿಲ್ಲ ಎಂದಿದ್ದಾರೆ.
- Kiran Haniyadka
- Updated on: Jun 18, 2026
- 10:50 am
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ
ಧರ್ಮಸ್ಥಳ ಬುರುಡೆ ಕೇಸ್ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಎಸ್ಐಟಿ ತನಿಖೆ ಮಾಡುತ್ತಿತ್ತು. ಆದರೆ ತನಿಖೆಯನ್ನ ಅನುಮಾನಿಸಿ ಚಿನ್ನಯ್ಯ ಹೈಕೋರ್ಟ್ ಮೆಟ್ಟಿಲೇರಿ, ರಿಟ್ ಅರ್ಜಿ ಸಲ್ಲಿಸಿದ್ದ. ಆ ಮೂಲಕ ಪ್ರಕರಣ ಮತ್ತೊಂದು ಹಂತಕ್ಕೆ ತಲುಪಿತ್ತು. ಬಳಿಕ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿತ್ತು. ಇದೀಗ ಪ್ರಕಣರ ಮತ್ತೊಂದು ಹಂತಕ್ಕೆ ಹೋಗಿದ್ದು, ಚಕ್ರವರ್ತಿ ಸೂಲಿಬೆಲೆ, ವಸಂತ್ ಗಿಳಿಯಾರ್ ಸುದ್ದಿಗೋಷ್ಠಿ ಮಾಡಿ, SIT ಮಧ್ಯಂತರ ವರದಿ ಬಹಿರಂಗ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
- Kiran Haniyadka
- Updated on: Jun 17, 2026
- 5:19 pm
RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ
ಆರ್ಎಸ್ಎಸ್ ನೋಂದಣಿ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದು, ಕಾಂಗ್ರೆಸ್ ಕೇವಲ ಹಿಂದೂ ಸಂಘಟನೆಗಳನ್ನೇ ಗುರಿಯಾಗಿಸುತ್ತಿದೆ ಎಂದವರು ಆರೋಪಿಸಿದ್ದಾರೆ. ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಬಗ್ಗೆ ನಿಮ್ಮ ಕಾಳಜಿ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ ಅದೇ ಮಾನದಂಡವನ್ನು ಧಾರ್ಮಿಕ, ಸಾಮಾಜಿಕ, ರಾಜಕೀಯ, ಸೈದ್ಧಾಂತಿಕ ಹಿನ್ನೆಲೆಯ ಎಲ್ಲ ಸಂಘಟನೆಗಳಿಗೂ ಅನ್ವಯಿಸಬೇಕು ಎಂದವರು ತಿಳಿಸಿದ್ದಾರೆ.
- Kiran Haniyadka
- Updated on: Jun 16, 2026
- 11:32 am
ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮುಂಗಾರು ಹಂಗಾಮಿಗೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಸಿದೆ. ಆದರೆ ರಾಜ್ಯ ಸರ್ಕಾರದ ವಿತರಣಾ ವೈಫಲ್ಯದಿಂದ ರೈತರು ಪರದಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ರಾಜ್ಯದ ಹಲವೆಡೆ ರಸಗೊಬ್ಬರಕ್ಕಾಗಿ ರೈತರ ಪರದಾಟ ವಿಚಾರ ಸಂಬಂಧ ಸ್ಪಷ್ಟನೆ ನೀಡಿರುವ ಅವರು, 2026ರ ಜನವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲೇ, ರಾಜ್ಯವು ಅಂದಾಜು ಅಗತ್ಯತೆಗಿಂತ ಹೆಚ್ಚುವರಿಯಾಗಿ ಪೂರೈಕೆಯಾಗಿದೆ ಎಂದಿದ್ದಾರೆ.
- Kiran Haniyadka
- Updated on: Jun 14, 2026
- 6:55 am
ಶಿಸ್ತಿನ ಸಿಪಾಯಿಗಳಿಗೆ ಒಲಿದ ಅದೃಷ್ಟ: ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯಗೆ ಪರಿಷತ್ ಟಿಕೆಟ್ ನೀಡಲು ಕಾರಣಗಳೇನು?
ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಹುಬ್ಬಳ್ಳಿಯ ಹಿರಿಯ ಪಂಚಮಸಾಲಿ ಮುಖಂಡ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಒಬಿಸಿ ನಾಯಕ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ನ ಒಬಿಸಿ ತಂತ್ರಕ್ಕೆ ಪ್ರತಿತಂತ್ರ ಹೂಡಲು ಹಾಗೂ ಪ್ರಮುಖ ಸಮುದಾಯಗಳನ್ನು ಮುನ್ನೆಲೆಗೆ ತರಲು ಬಿಜೆಪಿ ನಡೆಸಿರುವ ಈ ಮಹತ್ವದ ಲೆಕ್ಕಾಚಾರದ ಸಂಪೂರ್ಣ ವಿವರ ಇಲ್ಲಿದೆ.
- Kiran Haniyadka
- Updated on: Jun 8, 2026
- 2:24 pm
ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ (50) ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಮಾಜಿ ಸಿಎಂ ದಿ. ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- Kiran Haniyadka
- Updated on: Jun 8, 2026
- 7:36 am