ಗುತ್ತಿಗೆಯಲ್ಲಿ ಮುಸ್ಲಿಂಗೆ ಮೀಸಲು ಮಸೂದೆ ಅಂಗೀಕಾರ: ಸರ್ಕಾರದ ವಿರುದ್ಧ ತೊಡೆತಟ್ಟಿದ ಬಿಜೆಪಿ
ವಿರೋಧದ ಮಧ್ಯೆಯೇ ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಬಳಿಕ ಈ ವಿಚಾರವಾಗಿ ಬಿಜೆಪಿ ನಿಯೋಗ ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದೆ. ಕೇಂದ್ರ ಸಚಿವೆ ಶೋಭಾ ಕೂಡ ರಾಜ್ಯಪಾಲರಿಗೆ ಪತ್ರ ಬರೆದು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
- Kiran Haniyadka
- Updated on: Mar 21, 2025
- 8:06 pm
ಕೆಟ್ಟು ಹೋದ ಸಾರಿಗೆ ಬಸ್ ವೈಪರ್: ಮಳೆಯಲ್ಲಿ ಬಸ್ ಚಲಾಯಿಸಲು ಪರದಾಡಿದ ಚಾಲಕ
ಹಾಸನ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಹಾಸನ, ಚನ್ನರಾಯಪಟ್ಟಣ, ಆಲೂರು, ಸಕಲೇಶಪುರ ಭಾಗಗಳಲ್ಲಿ ಮಳೆಯಾಗಿದ್ದು, ಬೇಸಿಗೆ ಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಇನ್ನು ಈ ವರ್ಷದ ಮೊದಲ ಮಳೆಗೆ ಜನರು ಸಹ ಫುಲ್ ಖುಷ್ ಆಗಿದ್ದಾರೆ. ಮತ್ತೊಂದೆಡೆ ಮಳೆ ನಡುವೆ ಸಾರಿಗೆ ಬಸ್ನಲ್ಲಿ ವೈಪರ್ ಇಲ್ಲದೆ ಚಾಲಕ ಪರದಾಡಿರುವ ಘಟನೆ ನಡೆದಿದೆ.
- Kiran Haniyadka
- Updated on: Mar 12, 2025
- 10:19 pm
ಮಹಾರಾಷ್ಟ್ರದಲ್ಲಿ RSS ಕಾರ್ಯಕರ್ತರನ್ನು ಪಿಎಗಳಾಗಿ ಮಾಡಿಲ್ವಾ? ಬಿಜೆಪಿಗೆ ಸಿಎಂ ತಿರುಗೇಟು
ಕರ್ನಾಟಕ ವಿಧಾನಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರದ್ದತಿಗೆ ವಿರೋಧ ಪಕ್ಷಗಳಿಂದ ಪ್ರತಿಭಟನೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಶಾಸಕರ ಹಕ್ಕುಗಳನ್ನು ಕಿತ್ತುಕೊಂಡಿಲ್ಲ. ಸಮಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಪಕ್ಷಗಳ ಆರೋಪಗಳಿಗೆ ಸಿಎಂ ಖಂಡಿಸಿದ್ದು ಮತ್ತು ಹಣದ ದುರ್ಬಳಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
- Kiran Haniyadka
- Updated on: Mar 12, 2025
- 3:48 pm
ಕೊಪ್ಪಳ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ರೆಸಾರ್ಟ್-ಹೋಮ್ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಸುತ್ತೋಲೆ
ಐತಿಹಾಸಿಕ ಹಂಪಿ ಹೆಸರಿನಲ್ಲಿ ಸಣಾಪುರ, ಆನೆಗೊಂದಿ ಭಾಗದಲ್ಲಿ ನಾಯಿಕೊಡೆಯಂತೆ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ಗಳು ತಲೆ ಎತ್ತಿದ್ದು, ಇದೀಗ ಇಸ್ರೇಲ್ ಮಹಿಳೆ, ರೆಸಾರ್ಟ್ ಮಾಲಕಿ ಮೇಲೆ ಗ್ಯಾಂಗ್ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ರೆಸಾರ್ಟ್, ಹೋಮ್ಸ್ಟೇಗಳಲ್ಲಿ ಭದ್ರತೆ & ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.
- Kiran Haniyadka
- Updated on: Mar 11, 2025
- 5:23 pm
ಗೋಲ್ಡ್ ಸ್ಮಗ್ಲಿಂಗ್ ಹಿಂದಿರೋ ಸಚಿವರು ಯಾರು? ಸದನದಲ್ಲೂ ಸದ್ದು ಮಾಡಿದ ರನ್ಯಾ ರಾವ್ ಕೇಸ್
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕ ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡಿದೆ. ಬಿಜೆಪಿ ಶಾಸಕರು ಪ್ರಭಾವಿ ಸಚಿವರ ಹೆಸರು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ. ಗೃಹ ಸಚಿವರು ಈ ಬಗ್ಗೆ ಮಾಹಿತಿ ಇಲ್ಲ ಎಂದಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದನದಲ್ಲಿ ಕಲಾಪದ ವೇಳೆ ತುಸು ಹೊತ್ತು ಕೋಲಾಹಲವೇ ನಡೆದಿದೆ.
- Kiran Haniyadka
- Updated on: Mar 10, 2025
- 3:07 pm
ವಕ್ಫ್ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಶಾಮೀಲು: ದಾಖಲೆ ಇದೆ ಎಂದ ಲೆಹರ್ ಸಿಂಗ್
ಕರ್ನಾಟಕದ ವಕ್ಫ್ ಹಗರಣದಲ್ಲಿ ಹಾಲಿ ಮತ್ತು ಮಾಜಿ ಸಚಿವರು ಶಾಮೀಲಾಗಿರುವ ಬಗ್ಗೆ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಆರೋಪ ಮಾಡಿದ್ದಾರೆ. 40,000 ಪುಟಗಳ ದಾಖಲೆಗಳನ್ನು ಅವರು ಉಲ್ಲೇಖಿಸಿದ್ದು, ಇದು ನ್ಯಾಯಮೂರ್ತಿ ಆನಂದ್ ಸಮಿತಿ ವರದಿಯ ಭಾಗವಾಗಿದೆ. ಸರ್ಕಾರ ಈ ದಾಖಲೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ಆರೋಪಿಸಿದ್ದು, ಕೇಂದ್ರಕ್ಕೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
- Kiran Haniyadka
- Updated on: Mar 8, 2025
- 2:16 pm
ವಿರೋಧದ ಮಧ್ಯೆಯೂ ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕ ಅಂಗೀಕಾರ
ವಿಧಾನಸಭೆಯಲ್ಲಿ ಬೆಂಗಳೂರು ಅರಮನೆಯ ಭೂ ಬಳಕೆ ಮತ್ತು ನಿಯಂತ್ರಣ ಕುರಿತ ವಿಧೇಯಕ ಅಂಗೀಕಾರವಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಅರಮನೆ ಭೂಮಿಯನ್ನು ಬಳಸುವುದಕ್ಕೆ ಅವಕಾಶ ಮಾಡಿಕೊಡುವ ಈ ವಿಧೇಯಕ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಟಿಡಿಆರ್ ವರ್ಗಾವಣೆ ವಿಚಾರವೂ ಚರ್ಚೆಗೆ ಬಂದಿದೆ. ವಿಪಕ್ಷದ ಆರೋಪಗಳ ನಡುವೆಯೂ ವಿಧೇಯಕ ಅಂಗೀಕಾರವಾಗಿದೆ.
- Kiran Haniyadka
- Updated on: Mar 6, 2025
- 8:25 pm
ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಈವರೆಗೆ ನಿರ್ಧಾರವಾಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಅರವಿಂದ ಲಿಂಬಾವಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
- Kiran Haniyadka
- Updated on: Mar 6, 2025
- 10:21 am
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ: ಸರ್ಕಾರದಿಂದ ಬಂದಿದೆ ಹೊಸ ನಿಯಮ
ಕರ್ನಾಟಕ ಸರ್ಕಾರವು ಕ್ರೀಡಾಂಗಣಗಳ ದೀರ್ಘಾವಧಿ ಬಾಡಿಗೆ ಅಥವಾ ಪರಭಾರೆಯನ್ನು ನಿಷೇಧಿಸಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸುತ್ತೋಲೆಯ ಪ್ರಕಾರ, 50 ಲಕ್ಷ ರೂ.ಗಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ವಾರ್ಷಿಕ 100 ಲಕ್ಷ ರೂ.ಗಿಂತ ಹೆಚ್ಚಿನ ಖರ್ಚಿಗೆ ಸರ್ಕಾರದ ಅನುಮತಿ ಕಡ್ಡಾಯ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
- Kiran Haniyadka
- Updated on: Mar 5, 2025
- 11:53 am
‘ನಾನು ಹೈದರಾಬಾದ್ನವಳು’ ಎಂದ ರಶ್ಮಿಕಾ ಮಂದಣ್ಣಗೆ ಕರವೇ ನಾರಾಯಣ ಗೌಡ ಕ್ಲಾಸ್
‘ನಾನು ಹೈದರಾಬಾದ್ನವಳು’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಟ್ರೋಲ್ ಮಾಡಲಾಗಿತ್ತು. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟಿ.ಎ. ನಾರಾಯಣ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ವಿರುದ್ಧ ಅವರು ಕಿಡಿಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Kiran Haniyadka
- Updated on: Mar 2, 2025
- 5:33 pm
ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ ಬಸವರಾಜ ಹೊರಟ್ಟಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾರ್ಚ್ 3 ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ನಲ್ಲಿ ಮಾದಕ ವ್ಯಸನ, ಹದಿಹರೆಯದ ಸಮಸ್ಯೆಗಳ ಚರ್ಚೆಗೆ ಒತ್ತು ನೀಡಲಾಗುವುದು ಎಂದಿದ್ದಾರೆ. ಬೆಂಗಳೂರು ಅಭಿವೃದ್ಧಿ ಕುರಿತು ವಿಚಾರ ಸಂಕೀರ್ಣದ ಯೋಜನೆಯನ್ನೂ ಅವರು ತಿಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ. ರವಿ ನಡುವಿನ ಘಟನೆ ಈಗಾಗಲೇ ಪರಿಹಾರವಾಗಿದೆ ಎಂದೂ ಹೇಳಿದ್ದಾರೆ.
- Kiran Haniyadka
- Updated on: Mar 1, 2025
- 2:29 pm
ನೀವು ಪತ್ರ ಬರೆದರೆ 3 ದಿನಗಳಲ್ಲಿ ಮೆಟ್ರೋ ಟಿಕೆಟ್ ದರ ಇಳಿಕೆ: ಸಿಎಂಗೆ ಬಿಜೆಪಿ ಸಂಸದರ ಭರವಸೆ
ಬೆಂಗಳೂರಿನ ನಮ್ಮ ಮೆಟ್ರೋ ರೈಲು ಪ್ರಯಾಣದ ದರ ಏರಿಕೆಯಿಂದಾಗಿ ಜನರಲ್ಲಿ ಆಕ್ರೋಶ ಉಂಟಾಗಿದೆ. ಬಿಜೆಪಿ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದರ ಇಳಿಕೆಗೆ ಒತ್ತಾಯಿಸಿದೆ. ಸಿಎಂ ಸಿದ್ದರಾಮಯ್ಯ ದರ ನಿಗದಿ ಸಮಿತಿಗೆ ಮತ್ತೊಂದು ಪತ್ರ ಬರೆಯುವ ಭರವಸೆ ನೀಡಿದ್ದಾರೆ. ಪ್ರತಿ ಕ್ಷೇತ್ರಕ್ಕೆ 150 ಕೋಟಿ ರೂ. ಅನುದಾನ ನೀಡುವಂತೆ ಬಿಜೆಪಿ ನಿಯೋಗ ಇದೇ ವೇಳೆ ಮನವಿ ಮಾಡಿದೆ.
- Kiran Haniyadka
- Updated on: Feb 28, 2025
- 1:53 pm