ಬಳ್ಳಾರಿ: ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಅನುಮತಿ ನಿರಾಕರಣೆ
ಬಿಜೆಪಿಯ 'ಬಳ್ಳಾರಿ ಚಲೋ' ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನಿರಾಕರಿಸಿದೆ. ಸೆಪ್ಟೆಂಬರ್ 10ರಂದು ಬಳ್ಳಾರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಸಲು ಬಿಜೆಪಿ ಮನವಿ ಮಾಡಿತ್ತು. ನಿಯಮಾವಳಿಗಳ ಪ್ರಕಾರ ಶಾಲಾ ಮೈದಾನಗಳನ್ನು ರಾಜಕೀಯ ಸಮಾರಂಭಗಳಿಗೆ ಬಳಸುವಂತಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಈ ಪಾದಯಾತ್ರೆ ನಡೆಯುತ್ತಿದೆ.
- Kiran Haniyadka
- Updated on: Sep 8, 2026
- 11:16 am
ದಿನಕ್ಕೊಂದು ವಿಚಾರಗಳಿಂದ ಗಮನ ಸೆಳೆಯುತ್ತಿರುವ ಬಳ್ಳಾರಿ ಚಲೋ: 8ನೇ ದಿನಕ್ಕೆ ಪ್ರವೇಶಿಸಿದ ಬಿಜೆಪಿಯ ಪಾದಯಾತ್ರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ದರೋಜಿಯಲ್ಲಿ ಸೋಮವಾರ ಕೊನೆಗೊಂಡಿದ್ದ ಯಾತ್ರೆ ಇಂದು ಕುಡಿತಿನಿವರೆಗೆ ಸಾಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ.
- Kiran Haniyadka
- Updated on: Sep 8, 2026
- 7:08 am
‘ನಾನು ಪ್ರಜಾಸೇವಕ ಎಂದು ಸಿಎಂ ಹೇಳಿರುವುದೇ ತಪ್ಪು’: ಬಸವರಾಜ್ ಹೊರಟ್ಟಿ ಗರಂ
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಜಾಸೇವಕ ಹೇಳಿಕೆ ಕೃತಿಗೆ ಬರಬೇಕು ಎಂದು ಒತ್ತಿ ಹೇಳಿದ ಹೊರಟ್ಟಿ, ಶಿಕ್ಷಕರಿಗೆ ಟಿ.ಆರ್ ಬಿರುದು ನೀಡಿರುವುದನ್ನೂ ತಪ್ಪು ಎಂದಿದ್ದಾರೆ.
- Kiran Haniyadka
- Updated on: Sep 6, 2026
- 5:47 pm
ಕೆಪಿಎಸ್ಸಿ ಹಗರಣ: ಆರೋಪಿ ಬಸವರಾಜ ಕನ್ನಾಳೆ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಈಶ್ವರ್ ಖಂಡ್ರೆ ವಿರುದ್ಧದ ಸ್ಪರ್ಧೆಗೆ ಮುಂದಾಗಿದ್ರಾ?
ಕೆಪಿಎಸ್ಸಿ ಪಶು ವೈದ್ಯರ ನೇಮಕಾತಿಯಲ್ಲಿ ಹಗರಣ ಪ್ರಕರಣದ ಆರೋಪಿ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು. ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧೆಗೆ ಬಸವರಾಜ ಕನ್ನಾಳೆ ಸಿದ್ಧತೆ ನಡೆಸಿದ್ದ. ಬಿಜೆಪಿಯವರ ಶಿಫಾರಸಿನಿಂದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದಿದ್ದ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಆತನನ್ನು ನೇಮಿಸಿದರು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಸವರಾಜ ಕನ್ನಾಳೆ ನನ್ನ ಕಚೇರಿಗೆ ಬಂದು ಆಶೀರ್ವಾದ ಕೇಳಿದ್ದರು ಎಂದು ಆತನ ಜೊತೆಗಿನ ಫೋಟೋ ವೈರಲ್ ಬಗ್ಗೆ ಸ್ಪಷ್ಟಪಡಿಸಿದರು.
- Kiran Haniyadka
- Updated on: Sep 4, 2026
- 5:32 pm
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್; ಸಿಂಧನೂರಿನಲ್ಲಿ ಗೋ ಪೂಜೆ ನೆರವೇರಿಸಿ ವಿಜಯೇಂದ್ರ ಚಾಲನೆ
ರಾಯಚೂರಿನ ಸಿಂಧನೂರಿನಲ್ಲಿ ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಯ ನಾಲ್ಕನೇ ದಿನದ ಯಾತ್ರೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಚಾಲನೆ ನೀಡಿದರು. ಇದೇ ವೇಳೆ, ಮುಸ್ಲಿಂ ಮೋರ್ಚಾದ ಮುಖಂಡರು, ಸದಸ್ಯರೂ ಸಾಥ್ ನೀಡಿದರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಗೋಪೂಜೆ ನೆರವೇರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು.
- Kiran Haniyadka
- Updated on: Sep 4, 2026
- 12:17 pm
ನೇಗಿಲು ಹೊತ್ತು ‘ಬಳ್ಳಾರಿ ಚಲೋ’ 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಬಿವೈ ವಿಜಯೇಂದ್ರ
ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರಿನಲ್ಲಿ ಬಿ.ವೈ. ವಿಜಯೇಂದ್ರ ನೇಗಿಲು ಹೊತ್ತು ಪಾದಯಾತ್ರೆಗೆ ಚಾಲನೆ ನೀಡಿದ್ದು, ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಸೆಪ್ಟೆಂಬರ್ 10ರವರೆಗೆ ಬಿಜೆಪಿ ಪಾದಯಾತ್ರೆ ನಡೆಯಲಿದೆ.
- Kiran Haniyadka
- Updated on: Sep 3, 2026
- 12:39 pm
ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ: 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ, ಇಂದು ಸಿಂಧನೂರಿನತ್ತ ಪಯಣ
BJP Padayatra: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೂಡ ಕೌಂಟರ್ ಪ್ಲ್ಯಾನ್ ರೂಪಿಸುತ್ತಿದೆ.
- Kiran Haniyadka
- Updated on: Sep 3, 2026
- 8:39 am
ನಾಗೇಂದ್ರ ಆಯ್ತು, ಕೆಪಿಎಸ್ಸಿ ಹಗರಣದಲ್ಲಿ ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್ಸಿ ಹಗರಣ, ಬರಗಾಲ ನಿರ್ವಹಣೆ, ಗೃಹಲಕ್ಷ್ಮಿ ಯೋಜನೆಯಲ್ಲಿನ ವಿಳಂಬ ಮತ್ತು ನಾಗೇಂದ್ರ ರಾಜೀನಾಮೆ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಮುಖ್ಯಮಂತ್ರಿಗಳ ಗದಗ ಭೇಟಿಯನ್ನು ನಾಟಕ ಎಂದು ಅಶೋಕ್ ಟೀಕಿಸಿದ್ದಾರೆ.
- Kiran Haniyadka
- Updated on: Sep 1, 2026
- 12:49 pm
BJP Padayatra: ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಹಣ ವಾಪಸ್ ಆಗ್ರಹಿಸಿ ಬಿಜೆಪಿ ಇಂದಿನಿಂದ ಬಳ್ಳಾರಿ ಚಲೋ ಪಾದಯಾತ್ರೆ ಆರಂಭಿಸಿದೆ. ರಾಯಚೂರಿನ ಲಿಂಗಸುಗೂರಿನಿಂದ ಆರಂಭವಾಗಿ 10 ದಿನಗಳಲ್ಲಿ 170 ಕಿ.ಮೀ. ಸಾಗುವ ಈ ಯಾತ್ರೆಗೆ ಬಿ.ವೈ. ವಿಜಯೇಂದ್ರ ಮುಂದಾಳತ್ವ ವಹಿಸಿದ್ದಾರೆ. ಇದಕ್ಕೆ ಪ್ರತಿತಂತ್ರ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಯಾಣ ಕರ್ನಾಟಕದ ಶಾಸಕರ ಸಭೆ ಕರೆದಿದ್ದಾರೆ.
- Kiran Haniyadka
- Updated on: Sep 1, 2026
- 8:27 am
ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾಗಿದೆ: ಸಚಿವ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಅಶೋಕ್ ಪೋಸ್ಟ್
ಸಚಿವ ಬಿ. ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶಕ್ಕೆ ಮಂಡಿಯೂರಿ ಶರಣಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದು, ಇದನ್ನು ದಲಿತರ ಜಯ ಎಂದು ಬಣ್ಣಿಸಿದ್ದಾರೆ. ಮಾತುಮಾತಿಗೂ ಬಾಬಾಸಾಹೇಬ್ ಅಂಬೇಡ್ಕರ್ರ ಹೆಸರು ಹೇಳಿಕೊಂಡು ದಲಿತರನ್ನು ತುಳಿದ ಕಾಂಗ್ರೆಸ್ಗೆ ದಲಿತರ ಆಕ್ರೋಶದ ಬಿಸಿ ತಟ್ಟಿದೆ ಎಂದವರು ತಿಳಿಸಿದ್ದಾರೆ.
- Kiran Haniyadka
- Updated on: Aug 28, 2026
- 7:50 pm
RSS ನೋಂದಣಿ ವಿವಾದ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆರ್. ಅಶೋಕ್ ಕೌಂಟರ್
ಸಚಿವ ಪ್ರಿಯಾಂಕ್ ಖರ್ಗೆ ಅವರ ಆರ್ಎಸ್ಎಸ್ ನೋಂದಣಿ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಂವಿಧಾನದಲ್ಲಿ ನೋಂದಣಿ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಅಂಬೇಡ್ಕರ್ ಅವರ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವಂತೆ ಪ್ರಿಯಾಂಕ್ ಖರ್ಗೆಗೆ ಸವಾಲೆಸೆದ ಅಶೋಕ್, ಬ್ರಿಟಿಷರ ಆಳ್ವಿಕೆಯಲ್ಲೇ ಆರ್ಎಸ್ಎಸ್ ಸ್ಥಾಪನೆಯಾಗಿದೆ, ಅದನ್ನು ಯಾರೂ ಪ್ರಶ್ನಿಸಿರಲಿಲ್ಲ ಎಂದಿದ್ದಾರೆ.
- Kiran Haniyadka
- Updated on: Aug 27, 2026
- 4:24 pm
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ? ವಿಜಯೇಂದ್ರ ಹೇಳಿದ್ದೇನು?
ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಇದೇ ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸ್ಗೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಯಲಿದೆ. ಇದರ ಮಧ್ಯೆ ಇತ್ತ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ನಾಗೇಂದ್ರ ರಾಜೀನಾಮೆ ನೀಡಿದರೆ ಬಿಜೆಪಿ ಪಾದಾಯತ್ರೆ ಕಥೆ ಏನು ಎನ್ನುವ ಪ್ರಶ್ನೆ ಎದುರಾಗಿದ್ದು, ಇದೀಗ ಇದಕ್ಕೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತರಿಸಿದ್ದಾರೆ.
- Kiran Haniyadka
- Updated on: Aug 26, 2026
- 2:57 pm