ಕೆಪಿಎಸ್ಸಿ ಕರ್ಮಕಾಂಡ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್ಗೆ ಟ್ವಿಸ್ಟ್
ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED), ಸದ್ಯ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಭಾನುವಾರ ದಾಳಿ ನಡೆಸಿದೆ. ಈ ಹಿಂದೆ ಕೆಪಿಎಸ್ ಸಿ ಮೇಲೂ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು ನಿನ್ನೆ (ಆಗಸ್ಟ್ 24) ಜಯಮಹಲ್ ರಸ್ತೆಯಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ಮನೆಯ ಬಾಗಿಲು ಒಡೆದು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು, ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ಇಡಿ ದಾಳಿ ಮಾಡುವ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
- Kiran HV
- Updated on: Aug 25, 2026
- 5:13 pm
ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆ, ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ ಎಂದವರು ಆಗ್ರಹಿಸಿದ್ದಾರೆ.
- Kiran HV
- Updated on: Aug 24, 2026
- 1:01 pm
ನಕಲಿ ಔಷಧ ದಂಧೆ ಪ್ರಕರಣ: ಪೊಲೀಸರ ಜೊತೆಗೇ ಕಿಂಗ್ಪಿನ್ ಕಣ್ಣಾಮುಚ್ಚಾಲೆ?, ಲುಕ್ಔಟ್ ನೋಟಿಸ್ ಜಾರಿ
ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡೇರಿ ಫಾರ್ಮ್ಹೌಸ್ನಲ್ಲಿ ಪತ್ತೆಯಾದ ನಕಲಿ ಔಷಧ ದಂಧೆ ಪ್ರಕರಣ ಸಂಬಂಧ ಕಿಂಗ್ಪಿನ್ ಪ್ರಶಾಂತ್ಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದು, ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಆತ ವಿದೇಶದಲ್ಲಿರುವ ಬಗ್ಗೆ ಕುಟುಂಬ ಮಾಹಿತಿ ನೀಡಿದ್ದರೂ, ಆರೋಪಿ ಭಾರತದಲ್ಲಿಯೇ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಪ್ರಕರಣದ ಸಮಗ್ರ ತನಿಖೆಗೆ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದ ಎಸ್ಐಟಿ ಕಣಕ್ಕಿಳಿದಿದೆ.
- Kiran HV
- Updated on: Aug 21, 2026
- 7:47 pm
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ಟಿವಿ9 ವರದಿ ಬಳಿಕ ನಾಲ್ವರು ಅಧಿಕಾರಿಗಳ ಅಮಾನತು
ಟಿವಿ9 ವರದಿಯ ಪರಿಣಾಮವಾಗಿ ಕೆಎಂಎಫ್ ಪಶು ಆಹಾರ ಕಲಬೆರಕೆ ಪ್ರಕರಣದಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕಳಪೆ ಗುಣಮಟ್ಟದ ಮೊಲಾಸಿಸ್ ಬಳಸಿ, ಹಸುಗಳ ಆರೋಗ್ಯ ಹಾಗೂ ಹಾಲು ಉತ್ಪಾದನೆಗೆ ಧಕ್ಕೆ ತಂದ ಈ ಅವ್ಯವಹಾರವು, ಸಾವಿರಾರು ಹಸುಗಳ ಸಾವಿಗೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆ ಬೆನ್ನಲ್ಲೇ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
- Kiran HV
- Updated on: Aug 20, 2026
- 11:40 am
ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಅಚ್ಚರಿಯ ಮಾಹಿತಿ ಬಹಿರಂಗ
ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಬಲಿಯಾದ ಪ್ರಕರಣ ಸಂಬಂಧ ತನಿಖೆ ವೇಳೆ ಹಲವು ಪ್ರಮುಖ ವಿಚಾರಗಳು ಬಯಲಾಗಿವೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕಳ್ಳಬೇಟೆ ತಡೆ ಶಿಬಿರದಲ್ಲಿ ಸಿಬ್ಬಂದಿ ಇರಲ್ಲ ಎಂದು ಭಾವಿಸಿ ಬೇಟೆಗಾಗಿ ನಾಲ್ವರು ಬಂದಿದ್ದರು. ಈ ವೇಳೆ ಕ್ಯಾಂಪ್ನಲ್ಲಿದ್ದ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ಫೈರಿಂಗ್ ನಡೆದು 3 ಜೀವ ಹೋಗಿದೆ ಎನ್ನಲಾಗಿದೆ. ಅಲ್ಲದೆ, ಮೃತರ ಪೈಕಿ ಓರ್ವನ ಮೇಲೆ ಕೆಲ ಪ್ರಕರಣಗಳು ಇರುವುದು ಕೂಡ ಬಹಿರಂಗಗೊಂಡಿದೆ.
- Kiran HV
- Updated on: Aug 19, 2026
- 4:46 pm
ಹಸುಗಳಿಗೆ ವಿಷವುಣಿಸುತ್ತಿದೆಯಾ KMF? ಆಹಾರ ಘಟಕದಲ್ಲಿ ಗೋಲ್ಮಾಲ್ ಶಂಕೆ: ಆಡಿಯೋದಿಂದ ಬಯಲಾಯ್ತು ಸ್ಫೋಟಕ ವಿಚಾರ
ಕೆಎಂಎಫ್ನ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಮೇವು ಉತ್ಪಾದಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಪಶು ಆಹಾರ ನಿರ್ದೇಶಕ ಜಯಕುಮಾರ್ ಅವರ ಆಡಿಯೋ ಒಂದು ವೈರಲ್ ಆಗಿದ್ದು,ಅವ್ಯವಹಾರದ ಸುಳಿವು ದೊರೆತಿದೆ. ರೈತರು ಹಾಗೂ ಗ್ರಾಹಕರ ನಂಬಿಕೆಗೆ ಧಕ್ಕೆ ಉಂಟಾಗಿದೆ.
- Kiran HV
- Updated on: Aug 19, 2026
- 2:36 pm
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್! ಕಾನೂನು ಪರೀಕ್ಷೆಗಾಗಿ ಅನಾರೋಗ್ಯದ ನಾಟಕ
ವಿಟಿಯು ಸಿಂಡಿಕೇಟ್ ಸದಸ್ಯ ದಿಲೀಪ್ ಕೃಷ್ಣ ಕಾನೂನು ಪರೀಕ್ಷೆ ಬರೆಯಲು ಅನಾರೋಗ್ಯದ ನಾಟಕವಾಡಿದ ಪ್ರಕರಣ ‘ಟಿವಿ9’ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಕುತ್ತಿಗೆ ಮತ್ತು ಕೈಗೆ ಬ್ಯಾಂಡೇಜ್ ಹಾಕಿಕೊಂಡು ಪರೀಕ್ಷೆ ಬರೆದ ಇವರು, ನಂತರದ ದಿನಗಳಲ್ಲಿ ಯಾವುದೇ ಅನಾರೋಗ್ಯವಿಲ್ಲದೆ ಸಭೆಗಳಲ್ಲಿ ಭಾಗವಹಿಸಿದ್ದು ಸಾಬೀತಾಗಿದೆ. ಈ ಘಟನೆ ವ್ಯವಸ್ಥೆಯ ದುರ್ಬಳಕೆಯನ್ನು ಎತ್ತಿ ತೋರಿಸಿದೆ.
- Kiran HV
- Updated on: Aug 18, 2026
- 10:38 am
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಬೆಳ್ಳಂದೂರು ಪೊಲೀಸರು (Bellandur Police) ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ (Gelatin) ಜಪ್ತಿ ಮಾಡಿದ್ದಾರೆ. ಬೆಂಗಳೂರು (Bengaluru) ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತಯ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಈ ವೇಲೆ ಬರೋಬ್ಬರಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.
- Kiran HV
- Updated on: Aug 17, 2026
- 6:47 pm
ಅಲೋಕ್ ಕುಮಾರ್ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಲ್ಲೋಲ ಕಲ್ಲೋಲ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಜೈಲಿನಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಜೈಲಾಧಿಕಾರಿಗಳು ಹೈಪ್ರೊಫೈಲ್ ಕೈದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇನ್ನು ಪ್ರಜ್ವಲ್ ಮೊಬೈಲ್ ಬಿಸಿ ದರ್ಶನ್ ಹಾಗೂ ಪವಿತ್ರಾಗೌಡಗೂ ತಟ್ಟಿದೆ. ಹಾಗಾದ್ರೆ, ಜೈಲಿನಲ್ಲಿ ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Kiran HV
- Updated on: Aug 15, 2026
- 6:39 pm
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಎಚ್ಚರಿಕೆ ನೀಡಿ ಎಸಿಪಿ, ಇನ್ಸ್ಪೆಕ್ಟರ್ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಿರುದ್ಧ ಜಂಟಿ ಇಲಾಖಾ ವಿಚಾರಣೆ ಪೂರ್ಣಗೊಂಡಿದ್ದು, ಎಚ್ಚರಿಕೆ ನೀಡಿ ಜಂಟಿ ಇಲಾಖೆ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಎಸಿಪಿ ಬಾಲಕೃಷ್ಣ, ಇನ್ಸ್ಪೆಕ್ಟರ್ ಗಿರೀಶ್ ವಿರುದ್ಧದ ಇಲಾಖೆ ವಿಚಾರಣೆ ಅಂತ್ಯವಾಗಿದ್ದು, ಇಬ್ಬರು ಪೊಲೀಸರ ಲಿಖಿತ ಸಮಜಾಯಿಷಿಗೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸಮಜಾಯಿಷಿ ಒಪ್ಪಿ ಎಚ್ಚರಿಕೆ ನೀಡಿ ವಿಚಾರಣೆ ಮುಕ್ತಾಯಗೊಳಿಸಲಾಗಿದೆ.
- Kiran HV
- Updated on: Aug 14, 2026
- 10:20 pm
ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ನಡೆದಿರುವ ಬಗ್ಗೆ ತನಿಖೆಗಾಗಿ ಬಿಜೆಪಿ ಸಿ.ಟಿ.ರವಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿ ರಚಿಸಿದೆ. ಮತ್ತೊಂದೆಡೆ ಕ್ರಾಸ್ ವೋಟಿಂಗ್ ಸಂಬಂಧ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಶಿಸ್ತು ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ಅಧ್ಯಕ್ಷೆಇಗೆ ಪತ್ರ ಬರೆದಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.
- Kiran HV
- Updated on: Jun 19, 2026
- 2:06 pm
ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರಾಕರಣೆಯಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಅವರು ಪುಸ್ತಕಗಳನ್ನು ಓದುತ್ತಾ ಕಾಲ ಕಳೆಯುತ್ತಿದ್ದರೆ, ಸಹ ಆರೋಪಿ ಪವಿತ್ರಾ ಗೌಡ ತಮ್ಮ ಆತ್ಮಚರಿತ್ರೆ ಬರೆಯುವುದರಲ್ಲಿ ನಿರತರಾಗಿದ್ದಾರೆ. ಇಬ್ಬರ ಜೈಲು ದಿನಚರಿ ಸಂಪೂರ್ಣ ವಿಭಿನ್ನವಾಗಿದ್ದು, ದರ್ಶನ್ ನಿರಾಶೆಯಿಂದ ಯಾರೊಂದಿಗೂ ಮಾತನಾಡುತ್ತಿಲ್ಲ ಎನ್ನಲಾಗಿದೆ.
- Kiran HV
- Updated on: Jun 11, 2026
- 9:34 am