ಕೈದಿಗಳಿಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕರ್ನಾಟಕದ ಜೈಲುಗಳಲ್ಲಿ ಡಿಜಿಪಿ ಅಲೋಕ್ ಕುಮಾರ್ ಭಾರಿ ಸುಧಾರಣೆಗಳನ್ನು ತಂದಿದ್ದಾರೆ. ಹತ್ತು-ಇಪ್ಪತ್ತು ವರ್ಷಗಳಿಂದ ಒಂದೇ ಬ್ಯಾರಕ್ನಲ್ಲಿದ್ದ ಕೈದಿಗಳಿಗೆ ಆಲ್ಫಾಬೆಟಿಕ್ ಪ್ರಕಾರ ಬ್ಯಾರಕ್ ಬದಲಾವಣೆ ಮಾಡಲಾಗುತ್ತಿದೆ. ಇದು ಭ್ರಷ್ಟಾಚಾರ, ಮೊಬೈಲ್ ಅಕ್ರಮ ಬಳಕೆ ಮತ್ತು ಹಿರಿಯ ಕೈದಿಗಳ ಪ್ರಭಾವವನ್ನು ತಡೆಯುವ ಗುರಿಯನ್ನು ಹೊಂದಿದೆ. ಈ ಹೊಸ ಕ್ರಮಗಳಿಂದ ಖೈದಿಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.
- Kiran HV
- Updated on: May 21, 2026
- 11:08 am
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅಲ್ಲಿ ತಮಗೆ ಕೆಲವು ಸೌಕರ್ಯಗಳು ಸಿಗುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಡಿಜಿಪಿ ಅಲೋಕ್ ಕುಮಾರ್ ಅವರು ಸ್ವತಃ ದರ್ಶನ್ ಅವರ ಸೆಲ್ಗೆ ಭೇಟಿ ನೀಡಿದಾಗ ಅವರು ತೊಂದರೆಗಳ ಬಗ್ಗೆ ಹೆಚ್ಚೇನೂ ಹೇಳಿಕೊಂಡಿಲ್ಲ.
- Kiran HV
- Updated on: May 18, 2026
- 10:38 pm
ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ?
ಮೇ 19ರಂದು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಆ ಕುರಿತು ಡಿಜಿಪಿ ಅಲೋಕ್ ಕುಮಾರ್ ಅವರು ಮಾತನಾಡಿದ್ದಾರೆ.
- Kiran HV
- Updated on: May 18, 2026
- 6:25 pm
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್: ಆರೋಪಿಗಳ ಸಂಚು ಬಯಲು
ಪ್ರಧಾನಿ ಮೋದಿ ಸಂಚಾರ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಸಂಬಂಧ ಆರೋಪಿಗಳ ಸಂಚು ಬಯಲಾಗಿದೆ. ಆರ್ಟ್ ಆಫ್ ಲಿವಿಂಗ್ಗೆ ಮೋದಿ ಬರಬಾರದೆಂದು ಪ್ಲಾನ್ ಮಾಡಿದ್ದು, ಪೊಲೀಸರಿಗೆ ಸುಳಿವು ಸಿಗದಂತೆ ಆರೋಪಿಗಳು ಸಂಚು ರೂಪಿಸಿದ್ದರು ಎಂಬ ವಿಚಾರ ಟಿವಿ9ಗೆ ಪೊಲೀಸ್ ಉನ್ನತ ಮೂಲಗಳಿಂದ ಗೊತ್ತಾಗಿದೆ. ಈ ನಡುವೆ ಆರೋಪಿಗಳಿಗಾಗಿ ಶೋಧ ಮುಂದುವರಿದಿದ್ದು, ಅವರಿಗೆ ಜಿಲೆಟಿನ್ ಸಿಕ್ಕಿದ್ದೆಲ್ಲಿಂದ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
- Kiran HV
- Updated on: May 15, 2026
- 4:05 pm
Bengaluru Rain Tragedy: ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಘನಘೋರ ದುರಂತ; ಕಾಂಪೌಂಡ್ ಕುಸಿದು 7 ಜನ ಸಾವು
ಬೆಂಗಳೂರು ಮಳೆ ಅವಾಂತರ: ಬೆಂಗಳೂರಿನಲ್ಲಿ ಆಲಿಕಲ್ಲು ಸಮೇತ ಧಾರಾಕಾರ ಮಳೆ ಸುರಿದೆ. ಸಿಟಿ ಮಂದಿ ಮಳೆ ಬಂದು ತಂಪೆರೆಯಬಹುದು ಅಂದುಕೊಂಡಿದ್ದರು. ಆದರೆ ವರುಣ ಸಾವಿನ ಸವಾರಿಯೇ ಮಾಡಿದ್ದಾನೆ. ರಣರಕ್ಕಸ ಮಳೆಗೆ ಕಾಂಪೌಂಡ್ ಕುಸಿದು 7 ಜನರು ದುರ್ಮರಣಗೊಂಡಿದ್ದಾರೆ. ಸದ್ಯ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
- Kiran HV
- Updated on: Apr 29, 2026
- 8:04 pm
ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್ಕಾಯಿನ್ ಹಗರಣವು ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು....ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರುವ ಶಂಕೆ ವ್ಯಕ್ತವಾಗಿದೆ.
- Kiran HV
- Updated on: Apr 21, 2026
- 4:28 pm
ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ
ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಇಡಿ ತನಿಖೆ ಮುಂದುವರಿದಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಮತ್ತು ಶ್ರೀಕಿ ನಡುವಿನ 4.65 ಕೋಟಿ ರೂಪಾಯಿಗಳ ಹಣಕಾಸು ವ್ಯವಹಾರ ಇಡಿ ತನಿಖೆಯ ಪ್ರಮುಖ ಅಂಶವಾಗಿದೆ. ಶ್ರೀಕಿಯ ಐಷಾರಾಮಿ ಜೀವನಶೈಲಿಗೆ ನಲಪಾಡ್ ಹಣಕಾಸು ಒದಗಿಸಿದ ಆರೋಪವಿದೆ. ಪೋರ್ಷೆ ಕಾರು ಖರೀದಿ ಸೇರಿದಂತೆ ಹಲವು ವ್ಯವಹಾರಗಳ ಬಗ್ಗೆ ಇಡಿ ತೀವ್ರವಾದ ತನಿಖೆ ನಡೆಸುತ್ತಿದೆ.
- Kiran HV
- Updated on: Apr 21, 2026
- 1:00 pm
ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಬೆಂಗಳೂರಿನ ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ಗುರಿಯಾಗಿಸಿ, ಅಮೃತಹಳ್ಳಿ ವಿಲ್ಲಾದಲ್ಲಿ ಗೋವಾದಿಂದ ತರಿಸಿದ ಡ್ರಗ್ಸ್ ಪಾರ್ಟಿ ಆಯೋಜಿಸಿ ಅತ್ಯಾಚಾರ ಎಸಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಿಂದ ದೃಢಪಟ್ಟಿದೆ.
- Kiran HV
- Updated on: Mar 10, 2026
- 12:18 pm
ಐಪಿಎಸ್ ಅಧಿಕಾರಿಗೆ ಸೇರಿದ ವಿಲ್ಲಾದಲ್ಲೇ ಸಾಮೂಹಿಕ ಅತ್ಯಾಚಾರ: ಕಟ್ಟಡದ ಮಾಲೀಕನ ಮೇಲೆ ಕ್ರಮ ಯಾಕಿಲ್ಲ?
ಅಮೃತಹಳ್ಳಿ ವಿಲ್ಲಾದಲ್ಲಿ ನಡೆದ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಗಳು ಹೊರಬರುತ್ತಿವೆ. ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾದಲ್ಲೇ ಈ ಕೃತ್ಯ ನಡೆದಿದ್ದರೂ ಕಟ್ಟಡದ ಮಾಲೀಕರ ಮೇಲೆ ಯಾವುದೇ ಕ್ರಮವಾಗಿಲ್ಲ. ವಿಲ್ಲಾ ಅನೈತಿಕ ಚಟುವಟಿಕೆಗಳು ಮತ್ತು ಡ್ರಗ್ಸ್ ಪಾರ್ಟಿಗಳ ಹಾಟ್ಸ್ಪಾಟ್ ಆಗಿದ್ದರೂ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಕಾನೂನು ಪಾಲಕರು ಐಪಿಎಸ್ ಅಧಿಕಾರಿಗೆ ವಿನಾಯಿತಿ ನೀಡಿದ ಆರೋಪ ಕೇಳಿಬಂದಿದೆ.
- Kiran HV
- Updated on: Feb 28, 2026
- 10:41 am
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.?
ಉದ್ಯಮ ಲೋಕವನ್ನೇ ತಲ್ಲಣಗೊಳಿಸಿದ್ದ ಕಾನ್ಫಿಡೆಂಟ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತಷ್ಟು ಮೆಗಾ ಟ್ವಿಸ್ಟ್ ಸಿಕ್ಕಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 500 ಕೋಟಿ ರೂ. ಹವಾಲ ವ್ಯವಹಾರ ರಾಯ್ ಗೆ ಮುಳುವಾಗಿರುವುದು ಗೊತ್ತಾಗಿದೆ. ಹಾಗಾದ್ರೆ ಏನಿದು 500 ಕೋಟಿ ರೂ. ವ್ಯವಹಾರದ ಜತೆ ಇನ್ನೊಂದಷ್ಟು ಇಂಟ್ರೆಸ್ಟಿಂಗ್ ಅಪ್ ಡೇಟ್ ಇಲ್ಲಿದೆ
- Kiran HV
- Updated on: Feb 25, 2026
- 8:59 pm
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್ ದುಬೈಗೆ ಪರಾರಿ: ಬಿಜೆಪಿ ಶಾಸಕನಿಗಾಗಿ ಸಿಐಡಿ ತಲಾಶ್
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಬೆನ್ನಲ್ಲೇ ಬಿಜೆಪಿ ಶಾಸಕ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನಂತರ, ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಕೋರಿದ್ದು, ಸಿಐಡಿ ಅವರ ಬಂಧನಕ್ಕೆ ಸಿದ್ಧತೆ ನಡೆಸಿದೆ.
- Kiran HV
- Updated on: Feb 12, 2026
- 7:52 am
ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬಯಲಾಗಿದೆ. ಐಷಾರಾಮಿ ಜೀವನಶೈಲಿಯಿಂದ ‘ಎರಡನೇ ವಿಜಯ್ ಮಲ್ಯ’ ಎಂದೇ ಗುರುತಿಸಿಕೊಂಡಿದ್ದ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಬ್ಯಾಂಕ್ ಸಾಲವಿಲ್ಲದೆ ಹಣ ಎಲ್ಲಿಂದ ಬಂತು ಎಂಬ ತನಿಖಾ ಸಂಸ್ಥೆಗಳ ಪ್ರಶ್ನೆ, ರಾಜಕಾರಣಿಗಳಿಂದ ಹಣ ವಾಪಸಾತಿಗೆ ಒತ್ತಡ ಇತ್ಯಾದಿ ಅಂಶಗಳೇ ರಾಯ್ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವಾಯ್ತು ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
- Kiran HV
- Updated on: Feb 3, 2026
- 12:00 pm