ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು
ರಾಜ್ಯದಲ್ಲಿ ಭೀಕರ ಬರಗಾಲ ಎಂಬ ವಿಚಾರ ಸುಳ್ಳು ಎಂದು ಕೃಷಿ ಹವಾಮಾನ ತಜ್ಞರು ಮತ್ತು ಹವಾಮಾನ ಇಲಾಖೆ ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಎಲ್ ನಿನೋ ಪರಿಣಾಮದಿಂದ ಕೇವಲ 8-10% ಮಳೆ ಕೊರತೆ ಉಂಟಾಗಬಹುದು. ಆದರೆ ಇದು ಕೃಷಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದ ಹಾನಿ ಉಂಟುಮಾಡುವುದಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
- Kiran Surya
- Updated on: Jun 18, 2026
- 10:31 pm
ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನಡೆದ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಪರೀಕ್ಷೆಯನ್ನು ರೈಲ್ವೆ ಇಲಾಖೆ ದಿಢೀರ್ ರದ್ದುಗೊಳಿಸಿ ಆದೇಶಿಸಿತ್ತು. ಆದ್ರೆ, ಇದೀಗ ಮತ್ತೆ ಪ್ರಮೋಷನ್ ಎಕ್ಸಾಂಗೆ ರೈಲ್ವೆ ಇಲಾಖೆ ಮರುದಿನಾಂಕ ನಿಗದಿ ಮಾಡಿದ್ದು, ಈ ಬಾರಿಯೂ ಸಹ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಹೀಗಾಗಿ ರೈಲ್ವೆ ಇಲಾಖೆ ಮತ್ತೆ ಕನ್ನಡ ಸಂಘಟೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಎಕ್ಸಾಂ ದಿನದಂದು ನಡೆಯುವ ಅನಾಹುತಗಳಿಗೆ ನಾವು ಹೊಣೆ ಅಲ್ಲ ಎಂದು ಎಚ್ಚರಿಕೆ ನೀಡಿವೆ.
- Kiran Surya
- Updated on: Jun 16, 2026
- 9:09 pm
ಸುರ್ಜೇವಾಲ ಸಂಧಾನ ಸಕ್ಸಸ್: 13 ದಿನಗಳ ನಂತರ ಖಾತೆ ವಹಿಸಿಕೊಂಡ ಕೃಷ್ಣ ಭೈರೇಗೌಡ
13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿದ್ದಾರೆ. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಐದು ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್ಗಳೊಂದಿಗೆ ನಗರದ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿದ್ದಾರೆ.
- Kiran Surya
- Updated on: Jun 16, 2026
- 12:01 pm
ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ: 30 ದಿನದಲ್ಲಿ ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ?
ಕಳೆದ ಮೇ-ಜೂನ್ ತಿಂಗಳಲ್ಲಿ ಕರ್ನಾಟಕದಲ್ಲಿ ಮದ್ಯ ಮಾರಾಟವು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಕೇವಲ 30 ದಿನಗಳಲ್ಲಿ ರಾಜ್ಯ ಅಬಕಾರಿ ಇಲಾಖೆಗೆ ಕೋಟಿ ಕೋಟಿ ರೂ ಆದಾಯ ಹರಿದುಬಂದಿದೆ. ಹೊಸ ಅಬಕಾರಿ ನೀತಿ ಮತ್ತು ತೆರಿಗೆ ಏರಿಕೆಯಿಂದ ಈ ದಾಖಲೆಯ ಮಾರಾಟವಾಗಿದೆ ಎನ್ನಲಾಗುತ್ತಿದೆ.
- Kiran Surya
- Updated on: Jun 15, 2026
- 10:39 pm
ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್
ಇತ್ತೀಚೆಗಷ್ಟೇ ಪ್ರಧಾನಿ ಮೋದಿ (PM Modi), ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್ಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಆದ್ರೆ, ಇದೀಗ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಕಾಮಗಾರಿ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಗುವ ಮುನ್ಸೂಚನೆ ಸಿಕ್ಕಿದೆ. ಅಷ್ಟಕ್ಕೂ ಕಾಮಗಾರಿ ನಿಂತುಕೊಂಡಿದ್ಯಾಕೆ? ಈ ಮಾರ್ಗ ಎಲ್ಲಿಂದು ಎಲ್ಲಿಗೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Kiran Surya
- Updated on: Jun 14, 2026
- 10:06 pm
ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..!
ಸಿಲಿಕಾನ್ ಸಿಟಿ ಬೆಂಗಳೂರು ಬೆಳೆದಂತೆಲ್ಲಾ ಅಪರಾಧ ಚಟುವಟಿಕೆಗಳು ಸಹ ಬೆಳೆಯುತ್ತಲೇ ಇವೆ. ಅದರಲ್ಲೂ ನಗರದಲ್ಲಿ ದಿನೇ ದಿನೇ ಪುಡಿರೌಡಿಗಳ ದಾಂಧಲೆಗಳು ಹೆಚ್ಚಾಗುತ್ತಿವೆ.ಇದಕ್ಕೆ ಪೂರಕವೆಂಬಂತೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರೇ ರೌಡಿಗಳ ಆಟಾಟೋಪಗಳಿಗೆ ಬ್ರೇಕ್ ಹಾಕುವಂತೆ ಸೂಚನೆ ನೀಡಿದ್ದಾರೆ. ಇದರ ಮಧ್ಯೆ ರೌಡಿಗಳ ಕಿರುಕುಳಕ್ಕೆ ವಾಪ್ಯಾರಿಗಳು ಬೇಸತ್ತಿದ್ದು, ಈ ಸಂಬಂಧ ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ ಒಂದು ದಿನ ಬಂದ್ಗೆ ಕರೆ ಕೊಟ್ಟಿದೆ.
- Kiran Surya
- Updated on: Jun 14, 2026
- 8:56 pm
ಬೆಂಗಳೂರಿನ ಗಾಂಧಿ ಬಜಾರ್ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ! ಕಳ್ಳರ ಕಾಟಕ್ಕೆ ಜನ ಕಂಗಾಲು
ಬೆಂಗಳೂರಿನ ಪ್ರಸಿದ್ಧ ಶಾಪಿಂಗ್ ಅಡ್ಡೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆ ಕಳ್ಳರ ಕಾಟದಿಂದಾಗಿ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಕಿಲಾಡಿ ಕಳ್ಳರು ವಿದ್ಯುತ್ ಕಂಬಗಳಲ್ಲಿದ್ದ ಕಾಪರ್ ವೈರ್ ಹಾಗೂ ಕಂಟ್ರೋಲರ್ಗಳನ್ನು ಕದ್ದಿದ್ದರಿಂದ 120ಕ್ಕೂ ಹೆಚ್ಚು ಬೀದಿ ದೀಪಗಳು ಬಂದ್ ಆಗಿವೆ. ರಸ್ತೆಯಲ್ಲಿ ಅಪಾಯಕಾರಿ ಲೈವ್ ವೈರ್ಗಳು ಜೋಲಾಡುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ಸಂಜೆ ವೇಳೆ ಇಲ್ಲಿಗೆ ಬರಲು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
- Kiran Surya
- Updated on: Jun 12, 2026
- 10:11 am
ಲೋಕಾರ್ಪಣೆಗೆ ಸಜ್ಜಾಗ್ತಿದೆ ದೇಶದ ಅತಿ ಎತ್ತರದ ಜಯದೇವ ಮೆಟ್ರೋ ಸ್ಟೇಷನ್: 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಬೆಂಗಳೂರಿನ ಜಯದೇವ ಆಸ್ಪತ್ರೆ ಬಳಿ 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ ಅತಿ ಎತ್ತರದ ಪಂಚಸ್ತರದ (5-Tier) ಇಂಟರ್ಚೇಂಜ್ ಮೆಟ್ರೋ ಸ್ಟೇಷನ್ ಇದೇ ಆಗಸ್ಟ್ನಲ್ಲಿ ಉದ್ಘಾಟನೆಗೊಳ್ಳಲಿದೆ. ಪಿಂಕ್ ಲೈನ್ನ ಕಾಳೇನ ಅಗ್ರಹಾರ-ತಾವರೆಕೆರೆ ಮಾರ್ಗ ಮುಕ್ತವಾಗಲಿದ್ದು, ಪ್ರಯಾಣಿಕರು ಹಳದಿ, ಹಸಿರು ಮತ್ತು ನೇರಳೆ ಮಾರ್ಗಗಳಿಗೆ ಸುಲಭವಾಗಿ ಇಂಟರ್ಚೇಂಜ್ ಮಾಡಿಕೊಳ್ಳಬಹುದಾಗಿದೆ.
- Kiran Surya
- Updated on: Jun 12, 2026
- 7:38 am
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ಗೆ ಈಗಾಗಲೇ ಹಣ ಕಟ್ಟಿದ್ರೆ ವಾಪಸ್ ಸಿಗಲಿದೆ; ಬಾಯ್ಸ್ ನಿಮಗೂ ಉಚಿತ ಪ್ರಯಾಣ
ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಲಭ್ಯ. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರ ಜೊತೆ ಗಂಡು ಮಕ್ಕಳಿಗೂ ಸೌಲಭ್ಯ ವಿಸ್ತರಿಸಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಿಗಲಿದೆ. ಪಾಸ್ ಪಡೆಯಲು 'ಕರ್ನಾಟಕ ಒನ್' ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.
- Kiran Surya
- Updated on: Jun 11, 2026
- 8:50 pm
ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ
ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಪುರುಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ನೀಡಲು ಘೋಷಣೆ ಮಾಡಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಈ ಮೊದಲ ಘೋಷಣೆ ಮಾಡಿದ್ದಾರೆ. ಆದರೆ, ಇತ್ತ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಿಂಗಳ ಅಥವಾ ಇಯರ್ಲಿ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಸಿಎಂಗೆ ಮನವಿ ಮಾಡಿದ್ದಾರೆ.
- Kiran Surya
- Updated on: Jun 9, 2026
- 10:38 pm
ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್
Namma Metro Pink Line Launch Date: ನಮ್ಮ ಮೆಟ್ರೋದ ಪಿಂಕ್ ಲೈನ್ ಮಾರ್ಗದ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎಲಿವೇಟೆಡ್ ಟ್ರ್ಯಾಕ್ನಲ್ಲಿ ಆಗಸ್ಟ್ 15 ರಂದು ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಈಗಾಗಲೇ ಆರ್ಡಿಎಸ್ಒ ಸಂಸ್ಥೆಯಿಂದ 90 ಕಿ.ಮೀ ವೇಗದ ಪ್ರಮಾಣ ಪತ್ರ ದೊರೆತಿದ್ದು, ಬಿಎಂಆರ್ಸಿಎಲ್ ಅಂತಿಮ ಹಂತದ ಸಿದ್ಧತೆಯಲ್ಲಿದೆ.
- Kiran Surya
- Updated on: Jun 9, 2026
- 8:56 am
ನಮ್ಮ ಮೆಟ್ರೋದಿಂದ ಪರಿಸರಸ್ನೇಹಿ ಹೆಜ್ಜೆ: ಬೆಂಗಳೂರಿನಲ್ಲಿ 2 ಲಕ್ಷ ಗಿಡ ನೆಡಲು ಮುಂದಾದ ಬಿಎಂಆರ್ಸಿಎಲ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಬ್ರೇಕ್ ಹಾಕಲು ಬಿಎಂಆರ್ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ. ನಮ್ಮ ಮೆಟ್ರೋ ಹಳದಿ ಮತ್ತು ಹಸಿರು ಮಾರ್ಗಗಳ ಪ್ರಮುಖ ನಿಲ್ದಾಣಗಳ ಸುತ್ತಮುತ್ತ ಪರಿಸರಸ್ನೇಹಿ ಯೋಜನೆ ಅಡಿಯಲ್ಲಿ 2 ಲಕ್ಷ ಗಿಡಗಳನ್ನು ನೆಡಲು ಮುಂದಾಗಿದೆ. ಈ ಕಾರ್ಯಕ್ಕೆ ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Kiran Surya
- Updated on: Jun 6, 2026
- 8:01 am