ನಮ್ಮ ಮೆಟ್ರೋ ಗ್ರೀನ್ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಗಸ್ಟ್ನಿಂದ ಸಂಚಾರ ಆರಂಭಿಸಲಿವೆ 3 ಹೊಸ ರೈಲುಗಳು
ಬೆಂಗಳೂರಿನ ‘ನಮ್ಮ ಮೆಟ್ರೋ’ ಗ್ರೀನ್ ಲೈನ್ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಿರಂತರ ರಶ್ ಹಾಗೂ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಆಗಸ್ಟ್ ತಿಂಗಳಿನಿಂದ ಗ್ರೀನ್ ಲೈನ್ ಮಾರ್ಗದಲ್ಲಿ 3 ಹೊಸ ಮೆಟ್ರೋ ರೈಲುಗಳು ಸಂಚಾರ ಆರಂಭಿಸಲಿವೆ. ಇದರೊಂದಿಗೆ, ಸಂಚಾರ ಮತ್ತಷ್ಟು ಸುಗಮವಾಗಲಿದೆ.
- Kiran Surya
- Updated on: Jul 8, 2026
- 7:04 am
ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಡುವು ನೀಡಿದ ಲಾರಿ ಮಾಲೀಕರ ಸಂಘ
South India Lorry Strike: ವಾಣಿಜ್ಯ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ವಿರೋಧಿಸಿ ಹಾಗೂ ಗಡಿ ಚೆಕ್ಪೋಸ್ಟ್ಗಳ ತೆರವುಗೊಳಿಸುವಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ ನಿರ್ಧರಿಸಿದೆ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಗಡಿ ಚೆಕ್ಪೋಸ್ಟ್ಗಳ ತೆರವಿಗೆ ಸಂಘ ಆಗ್ರಹಿಸಿದೆ.
- Kiran Surya
- Updated on: Jul 7, 2026
- 1:57 pm
ಬೆಂಗಳೂರಲ್ಲಿ ರ್ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ, ಆಗಿದ್ದೇನು?
ಬೆಂಗಳೂರಲ್ಲಿ ರ್ಯಾಪಿಡೋ ಚಾಲಕನ ಅತಿ ವೇಗದ ಚಾಲನೆಯಿಂದ ಯುವತಿ ಆಸ್ಪತ್ರೆ ಸೇರುವಂತಾಗಿದೆ. ಹೌದು...ಜೂನ್ 17ರಂದು ಬೆಳಗ್ಗೆ ಸಾನಿಕೃಷ್ಣ (32) ಎನ್ನುವ ಯುವತಿ , ರ್ಯಾಪಿಡೋ ಬುಕ್ ಮಾಡಿಕೊಂಡು ಬೆಂಗಳೂರಿನ ಬೈರಸಂದ್ರದ ದೊಮ್ಮಲೂರಿಗೆ ಹೊರಟ್ಟಿದ್ದಳು. ಆದ್ರೆ, ಮಾರ್ಗ ಮಧ್ಯೆ ಅಪಘಾತವಾಗಿದೆ. ಟ್ರಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.
- Kiran Surya
- Updated on: Jul 6, 2026
- 7:02 pm
ಯಮ ಸ್ವರೂಪಿಯಾದ ಬಿಎಂಟಿಸಿ ಬಸ್ಗಳು: ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ
Bengaluru News: ಬೆಂಗಳೂರಿನಲ್ಲಿ BMTC ಬಸ್ಗಳ ಅಪಘಾತಗಳ ಸರಣಿ ಮುಂದುವರೆದಿದೆ. ನಿನ್ನೆ(ಜುಲೈ 04) ಕೆ.ಆರ್ ಸರ್ಕಲ್ ಬಳಿ ಎಡು ಬಿಎಂಟಿಸಿ (BMTC)ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನೇ ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ. ಲಗ್ಗೆರೆ ಸೇತುವೆ ಸಮೀಪ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಡಿಕ್ಕಿಯಾಗಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
- Kiran Surya
- Updated on: Jul 5, 2026
- 7:08 pm
ಬಿಎಂಟಿಸಿಯಲ್ಲ ಸಾಕ್ಷಾತ್ ಯಮ!: 17 ವರ್ಷಗಳಲ್ಲಿ 1,142 ಜನರ ಬಲಿ ಪಡೆದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳು!
BMTC Bus Accidents: ಬೆಂಗಳೂರಿನಲ್ಲಿ ಕಳೆದ 17 ವರ್ಷಗಳಲ್ಲಿ ಸಂಭವಿಸಿದ 5,864 ಬಿಎಂಟಿಸಿ ಬಸ್ ಅಪಘಾತಗಳಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, ಸಿಬ್ಬಂದಿಗಳ ಮೇಲಿನ ಒತ್ತಡವೇ ಇದಕ್ಕೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ 1 ವರ್ಷದಲ್ಲಿಯೇ ಬಿಎಂಟಿಸಿ ಬಸ್ಗಳ ಅಪಘಾತಗಳಿಂದ 31 ಜನ ಪ್ರಾಣ ಕಳೆದುಕೊಂಡಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚಿನ ರೂಟ್ಳನ್ನು ಕ್ಲಿಯರ್ ಮಾಡಲು ಸಿಬ್ಬಂದಿಗೆ ಟಾರ್ಗೆಟ್ ನೀಡಲಾಗುತ್ತಿರೋದೇ ಅವಘಡಗಳ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.
- Kiran Surya
- Updated on: Jul 5, 2026
- 1:33 pm
ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಯುವತಿ: ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ, 10 ನಿಮಿಷ ರೈಲು ಸಂಚಾರ ವಿಳಂಬ
ಬೆಂಗಳೂರು ರಾಜಾಜಿನಗರ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಯುವತಿಯೊಬ್ಬಳು ಹಳಿಗೆ ಹಾರಿದ ಘಟನೆ ನಡೆದಿದೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು. ಇದರಿಂದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಸುಮಾರು ಹತ್ತು ನಿಮಿಷಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ನಂತರ ಎಂದಿನಂತೆ ಪುನರಾರಂಭಗೊಂಡಿತು. ಘಟನೆಗೆ ಕಾರಣವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
- Kiran Surya
- Updated on: Jul 4, 2026
- 3:52 pm
ಬಿಎಂಟಿಸಿ ಹೊಸ ಪ್ಲ್ಯಾನ್: ಬಸ್ಸಿನೊಳಗೆ ಸ್ಪೀಕರ್ ಮೂಲಕ ಜಾಹೀರಾತು ನೀಡಲು ಮುಂದು, ಪ್ರಯಾಣಿಕರು ಗರಂ!
ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಸಂಸ್ಥೆಯು ಆದಾಯ ಹೆಚ್ಚಿಸಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಬಸ್ಸುಗಳ ಒಳಗಡೆ ಸ್ಪೀಕರ್ ಮೂಲಕ ಜಾಹೀರಾತು ನೀಡಲು ಸಿದ್ಧತೆ ನಡೆಸಿದೆ. ಆದರೆ, ಈ ನಿರ್ಧಾರದಿಂದ ನಿತ್ಯ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಲಿದ್ದು, ಮುಂದಿನ ಸ್ಟಾಪ್ಗಳ ಮಾಹಿತಿ ಸಿಗದೆ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Kiran Surya
- Updated on: Jul 4, 2026
- 11:21 am
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕಾರು, ಬೈಕ್ಗಳ ಸಂಖ್ಯೆ ಹೆಚ್ಚಳ: ಟ್ರಾಫಿಕ್ ತಜ್ಞರು ಹೇಳುವುದೇನು?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಪ್ರತಿದಿನ 3000 ಹೊಸ ವಾಹನಗಳು ರಸ್ತೆಗೆ ಇಳಿಯುತ್ತಿದ್ದು, ಇದರಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ಪಾಲು ಸಿಂಹಪಾಲಾಗಿದೆ. ಜೂನ್ನಲ್ಲಿ ದಾಖಲೆಯ ಕಾರು ಮಾರಾಟವಾಗಿದ್ದು, ಇದರ ಪರಿಣಾಮವಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದೆ.
- Kiran Surya
- Updated on: Jul 3, 2026
- 8:46 pm
ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣ ವಿವಾದ: ಪ್ರಸ್ತಾವನೆಯನ್ನೇ ಹಿಂಪಡೆದ ಟಾಟಾ ಕಂಪನಿ
ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಎಸ್ಕಾಂ ನೌಕರರು ಹಾಗೂ ರೈತರಿಂದ ವ್ಯಕ್ತವಾದ ತೀವ್ರ ವಿರೋಧದ ಬೆನ್ನಲ್ಲೇ, ಟಾಟಾ ಪವರ್ ಕಂಪನಿಯು ಕೆಇಆರ್ಸಿಗೆ ಸಲ್ಲಿಸಿದ್ದ ತನ್ನ ಪ್ರಸ್ತಾವನೆಯನ್ನು ಅಧಿಕೃತವಾಗಿ ಹಿಂಪಡೆದಿದೆ. ಆ ಬೆನ್ನಲ್ಲೇ ಅರ್ಜಿಯನ್ನು ಕಂಪನಿ ನಿರ್ಧಾರವನ್ನುಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಸ್ವಾಗತಿಸಿದೆ. ಸಂಘಟಿತ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ತಿಳಿಸಿದೆ.
- Kiran Surya
- Updated on: Jul 3, 2026
- 3:38 pm
ನೈಸ್ ರೋಡ್ ಟೋಲ್ ದರ ಹೆಚ್ಚಳ ಬೆನ್ನಲ್ಲೇ ಬಿಎಂಟಿಸಿ ಬಸ್ ಟಿಕೆಟ್ ದರವೂ ಏರಿಕೆ ಸಾಧ್ಯತೆ
ಬಿಎಂಟಿಸಿ ಈಗಾಗಲೇ ಡೀಸೆಲ್ ದರ ಏರಿಕೆ ಮತ್ತು ಆರ್ಥಿಕ ಸಂಕಷ್ಟದಿಂದ ಶೇ.44ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈಗ ನೈಸ್ ರಸ್ತೆ ಮತ್ತು ನವಯುಗ ಟೋಲ್ ದರ ಹೆಚ್ಚಳವಾಗಿರುವುದರಿಂದ, ಟೋಲ್ ಮೂಲಕ ಸಂಚರಿಸುವ ಬಿಎಂಟಿಸಿ ಬಸ್ಗಳ ಟಿಕೆಟ್ ದರವೂ ಏರಿಕೆಯಾಗುವ ಸಾಧ್ಯತೆಯಿದೆ.
- Kiran Surya
- Updated on: Jul 2, 2026
- 10:25 pm
ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?
ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಸಕಾಲದಲ್ಲಿವೇತನ ಪರಿಷ್ಕರಣೆಯಾಗುತ್ತಲೇ ಇಲ್ಲ. ಅಲ್ಲದೆ, 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ, ಎಷ್ಟು ಹೆಚ್ಚಳವಾಗಿದೆ? ಯಾವಾಗಿನಿಂದ ಅನ್ವಯ ಎನ್ನುವ ಡಿಟೇಲ್ಸ್ ಇಲ್ಲಿದೆ.
- Kiran Surya
- Updated on: Jul 2, 2026
- 5:50 pm
ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಮತ್ತಷ್ಟು ದುಬಾರಿಯಾಗಲಿದೆ ಅಕ್ಕಿ, ಎಷ್ಟು ಗೊತ್ತಾ?
ರಾಜ್ಯದಲ್ಲಿ ಮಳೆ ಕೊರತೆ ಮತ್ತು ಕಚ್ಚಾ ವಸ್ತುಗಳ ಅಭಾವದಿಂದ ಅಕ್ಕಿ ದರ ಮತ್ತೊಮ್ಮೆ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ಜುಲೈ ಎರಡನೇ ವಾರದಲ್ಲಿ ಮತ್ತೊಮ್ಮೆ ದರ ಏರಿಕೆ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಕ್ಕಿ ಕೊರತೆ ಮತ್ತು ರಫ್ತು ಇದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಗ್ರಾಹಕರು ಈ ಬೆಲೆ ಏರಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
- Kiran Surya
- Updated on: Jul 1, 2026
- 9:59 pm