ಬೆಂಗಳೂರು ಕಾಲ್ತುಳಿತ: ದುರಂತಕ್ಕೆ ಕಾರಣವೇನು? ಮತ್ತಷ್ಟು ಸ್ಫೋಟಕ ಅಂಶಗಳು ಬಯಲಿಗೆ
ಬೆಂಗಳೂರಿನ ಇತಿಹಾಸದಲ್ಲೇ ಕರಾಳ ಅಧ್ಯಾಯ. ಆರ್ಸಿಬಿ ಸಂಭ್ರಮಾಚರಣೆಯಿಂದಾಗಿ ಕಪ್ಪು ಚುಕ್ಕೆ. ಚಿನ್ನಸ್ವಾಮಿ ಸ್ಟೇಡಿಯಿಂ ಬಳಿ ಕಾಲ್ತುಳಿತಕ್ಕೆ 11ಮಂದಿ ಸಾವಿಗೆ ಕಾರಣವೇನು? ಹೊಣೆ ಯಾರು? ವೈಫಲ್ಯ ಯಾರದು ಹೀಗೆ ಹಲವು ಪ್ರಶ್ನೆಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ.ಪೊಲೀಸರ ಮುನ್ನೆಚ್ಚರಿಕೆ ಧಿಕ್ಕರಿಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಇಷ್ಟೆಲ್ಲಾ ಅವಾಂತರ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಇದೀಗ ಪ್ರಾಥಮಿಕ ತನಿಖೆಯಲ್ಲಿ ಕಾಲ್ತುಳಿತದ ಘೋರ ಘಟನೆಗೆ ಕಾರಣ ಏನೆಂದು ಮತ್ತಷ್ಟು ಸ್ಫೋಟಕ ಅಂಶಗಳು ಬಯಲಾಗಿವೆ. ಇದ್ರ ಎಕ್ಸ್ಕ್ಲೂಸಿವ್ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.
- Kiran HV
- Updated on: Jun 10, 2025
- 5:17 pm
ಬೆಂಗಳೂರು ಕಾಲ್ತುಳಿತ: ದುರಂತಕ್ಕೆ ಕಾರಣವಾಯ್ತಾ ವಿಧಾನಸೌಧದ ಬಳಿ ಮಾಡಿದ ಆ ಘೋಷಣೆ?
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಉಸಿರುಚೆಲ್ಲಿದರೆ, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಇದೀಗ ವಿಧಾನಸೌಧದ ಬಳಿಯ ಲೋಪಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Kiran HV
- Updated on: Jun 10, 2025
- 1:21 pm
ಕಾಲ್ತುಳಿತ: ಐವರು ಪೊಲೀಸ್ ಅಧಿಕಾರಿಗಳ ಅಮಾನತು, ಸಿಎಂಗೆ ಭಾರತೀಯ ಪೊಲೀಸ್ ಒಕ್ಕೂಟ ಖಡಕ್ ಪತ್ರ
Bengaluru RCB Victory Celebrations Stampede: ಬುಧವಾರ (ಜೂ.03) ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರನ್ನು ಅವರನ್ನು ಅಮಾನತು ಮಾಡಿದೆ. ಈ ಅಮಾನತು ಹಿಂಪಡೆಯುವಂತೆ ಭಾರತೀಯ ಪೊಲೀಸ್ ಒಕ್ಕೂಟ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದೆ.
- Kiran HV
- Updated on: Jun 9, 2025
- 9:07 pm
ಕಾಲ್ತುಳಿತ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ
Bengaluru RCB Victory Celebrations Stampede: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಬೆನ್ನಲ್ಲೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ ಶ್ರೇಣಿಯ ಕೆಲ ಅಧಿಕಾರಿಗಳನ್ನು ವರ್ಗಾಣೆಗೊಳಿಸಿದ್ದರೇ, ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು ವರ್ಗಾವಣೆಯಿಂದ ಖಾಲಿಯಾಗಿದ್ದ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಗೂ ನೇಮಕ ಮಾಡಲಾಗಿದೆ.
- Kiran HV
- Updated on: Jun 6, 2025
- 9:25 pm
ಬೆಂಗಳೂರು ಕಾಲ್ತುಳಿತ: ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರ ಬಂಧನ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಮ್ಯಾನೇಜ್ಮೆಂಟ್ನ ಮೂವರು ಆಯೋಜಕರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಗುರುವಾರ ಕೆಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಸರ್ಕಾರದ ಈ ನಡೆಗೆ ವಿರೋಧ ಕೂಡ ವ್ಯಕ್ತವಾಗುತ್ತಿದೆ.
- Kiran HV
- Updated on: Jun 6, 2025
- 9:46 am
ಮಾಕ್ ಡ್ರಿಲ್: ಬೆಂಗಳೂರಿನಲ್ಲಿ ನಾಳೆ (ಬುಧವಾರ) ಸಂಜೆ ವಿದ್ಯುತ್ ಸ್ಥಗಿತ
ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತದಲ್ಲಿ ಭದ್ರತೆ ಹೆಚ್ಚಾಗಿದೆ. ಮೇ 7 ರಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಯಲಿದೆ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಅಭ್ಯಾಸ ನಡೆಯಲಿದೆ. ಬೆಂಗಳೂರಿನಲ್ಲಿ ಸಂಜೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ವಿವಿಧ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಈ ಅಭ್ಯಾಸ ಸಹಾಯ ಮಾಡುತ್ತದೆ.
- Kiran HV
- Updated on: May 6, 2025
- 10:34 pm
ಚಿನ್ನ ಕಳ್ಳಸಾಗಾಣಿಕೆ: ಪತಿ ನೀಡಿದ ಸುಳಿವಿನಿಂದ ಡಿಆರ್ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ ರಾವ್?
ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ.ನಟಿ ರನ್ಯಾ ರಾವ್ ಬಂಧನ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಮಧ್ಯೆ ನಟಿ ರನ್ಯಾ ರಾವ್ ಡಿಆರ್ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಹೇಗೆ? ಎಂಬ ಪ್ರಶ್ನೆ ಉದ್ಭವಾಗಿದೆ. ರಾನ್ಯಾ ರಾವ್ ಪದೇ ಪದೇ ವಿದೇಶ ಪ್ರಯಾಣ ಮಾಡುತ್ತಿದ್ದರು, ಇದು ಡಿಆರ್ಐ ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು. ಅಲ್ಲದೇ, ರನ್ಯಾ ರಾವ್ ಪತಿಯೇ ಈ ಬಗ್ಗೆ ಡಿಆರ್ಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ಅನುಮಾನವೂ ಇದೆ. ರನ್ಯಾ ರಾವ್ ಒಂದೇ ವರ್ಷದಲ್ಲಿ 28 ಬಾರಿ ವಿದೇಶ ಪ್ರಯಾಣ ಮಾಡಿದ್ದಾರೆ.
- Kiran HV
- Updated on: Mar 11, 2025
- 10:06 am
ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ
ರನ್ಯಾ ರಾವ್ ಅವರನ್ನು 14.2 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಡಿಆರ್ಐ ಅಧಿಕಾರಿಗಳು 17.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಸಿಬಿಐ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಗಳೂರು ಮತ್ತು ಮುಂಬೈನಲ್ಲಿ ತನಿಖೆ ನಡೆಯುತ್ತಿದೆ. ರನ್ಯಾ ರಾವ್ ಆಗಾಗ್ಗೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದರು ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.
- Kiran HV
- Updated on: Mar 8, 2025
- 1:47 pm
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ 14.8 ಕೆಜಿ ಚಿನ್ನ
ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ದುಬೈನಿಂದ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ತಂದು ಸಾಗಿಸುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಇದರ ಬೆಲೆ 12 ಕೋಟಿ ರೂಪಾಯಿಗಳಷ್ಟು ಆಗಿದೆ. ಐಪಿಎಸ್ ಅಧಿಕಾರಿಯ ಮಗಳಾದ ರನ್ಯಾ ತಂದೆಯ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ.
- Kiran HV
- Updated on: Mar 4, 2025
- 2:20 pm
ಲೈಂಗಿಕ ದೌರ್ಜನ್ಯ ಆರೋಪ: ‘ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ
ಸೀರಿಯಲ್ ನಟ ಚರಿತ್ ಬಾಳಪ್ಪ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಅವರನ್ನು ಆರ್.ಆರ್. ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಮುಂತಾದ ಆರೋಪಗಳು ಎದುರಾಗಿವೆ. ದೈಹಿಕ ಸಂಪರ್ಕಕ್ಕೆ ಚರಿತ್ ಬಾಳಪ್ಪ ಒತ್ತಾಯಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Kiran HV
- Updated on: Feb 16, 2025
- 9:18 am
ಮುಡಾ ಹಗರಣ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹತ್ವದ ಅಂಶ ಉಲ್ಲೇಖ
ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆಯ ಅಂತಿಮ ವರದಿ ಸಲ್ಲಿಕೆಯಾಗಿದ್ದು, ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಲೋಕಾಯುಕ್ತ ವರದಿಯನ್ನು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಐಜಿಯವರಿಗೆ ಸಲ್ಲಿಕೆ ಮಾಡಲಾಗಿದೆ. ಅಂತಿಮ ವರದಿಯಲ್ಲೇನಿದೆ? ಅದರಲ್ಲಿ ಉಲ್ಲೇಖವಾಗಿರುವ ಮಹತ್ವದ ಅಂಶಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.
- Kiran HV
- Updated on: Feb 13, 2025
- 6:45 pm
545 ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: ವಿಚಾರಣೆಗೆ ಹಾಜರಾದ ಅಶ್ವತ್ ನಾರಾಯಣ ಹೇಳಿದ್ದಿಷ್ಟು
ಕರ್ನಾಟಕದ 545 ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ. ಅಶ್ವತ್ಥ್ ನಾರಾಯಣರನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ಮಾಗಡಿ ಮೂಲದ ಅಭ್ಯರ್ಥಿಗಳ ಹೆಚ್ಚಿನ ಆಯ್ಕೆ ಮತ್ತು ಸಂಬಂಧಿಕರ ಆಯ್ಕೆಯ ಆರೋಪಗಳಿವೆ. ಅಶ್ವತ್ಥ್ ನಾರಾಯಣ ರಾಜಕೀಯ ಪ್ರೇರಿತ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.
- Kiran HV
- Updated on: Feb 3, 2025
- 12:48 pm