ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬಯಲಾಗಿದೆ. ಐಷಾರಾಮಿ ಜೀವನಶೈಲಿಯಿಂದ ‘ಎರಡನೇ ವಿಜಯ್ ಮಲ್ಯ’ ಎಂದೇ ಗುರುತಿಸಿಕೊಂಡಿದ್ದ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಬ್ಯಾಂಕ್ ಸಾಲವಿಲ್ಲದೆ ಹಣ ಎಲ್ಲಿಂದ ಬಂತು ಎಂಬ ತನಿಖಾ ಸಂಸ್ಥೆಗಳ ಪ್ರಶ್ನೆ, ರಾಜಕಾರಣಿಗಳಿಂದ ಹಣ ವಾಪಸಾತಿಗೆ ಒತ್ತಡ ಇತ್ಯಾದಿ ಅಂಶಗಳೇ ರಾಯ್ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವಾಯ್ತು ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
- Kiran HV
- Updated on: Feb 3, 2026
- 12:00 pm
ಸಿಜೆ ರಾಯ್ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ!
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಹಲವು ಮಾಹಿತಿಗಳು ಬಯಲಾಗುತ್ತಿದ್ದು, ಪೊಲೀಸ್ ತನಿಖೆ ವೇಳೆ ಅವರ ಪರ್ಸನಲ್ ಡೈರಿ ಸಿಕ್ಕಿದೆ ಎನ್ನಲಾಗಿದೆ. ಅದರಲ್ಲಿ ಅವರು ಬೆಂಗಳೂರಿನ ಪ್ರಭಾವಿ ಶಾಸಕರೊಬ್ಬರು, ಚಿತ್ರರಂಗದ ಅನೇಕರ ಜತೆ ಒಡನಾಟ ಇರುವುದನ್ನು ಉಲ್ಲೇಖಿಸಿದ್ದಾರೆ ಎಂಬುದು ತಿಳಿದುಬಂದಿದೆ. ಮತ್ತೊಂದೆಡೆ, ಖ್ಯಾತ ನಟಿಯೊಬ್ಬರ ಜತೆ ಸಿಜೆ ರಾಯ್ ಇದ್ದರೆಂಬ ಬಗ್ಗೆಯೂ ಇದೀಗ ಮತ್ತೆ ಚರ್ಚೆ ಶುರುವಾಗಿದೆ.
- Kiran HV
- Updated on: Jan 31, 2026
- 8:03 am
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್: ಪೊಲೀಸ್ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ
ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದು ಬಹಿರಂಗವಾಗಿದ್ದು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿಯೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ಅಧಿಕಾರ ದುರ್ಬಳಕೆ ಆರೋಪದಡಿ ಅಧಿಕಾರಿಯನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.
- Kiran HV
- Updated on: Jan 19, 2026
- 4:40 pm
ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು?
ಬಳ್ಳಾರಿ ಹಿಂಸಾಚಾರ ಪ್ರಕರಣದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಈ ಮಾಹಿತಿ ಅಧಿಕೃತವಾಗಿ ದೃಢಪಟ್ಟಿಲ್ಲ. ಬಳ್ಳಾರಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಅಮಾನತುಗೊಳಿಸಲಾಗಿತ್ತು.
- Kiran HV
- Updated on: Jan 3, 2026
- 2:56 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ ಸುಧಾರಣೆ, ಪಾರ್ಕಿಂಗ್ ವ್ಯವಸ್ಥೆ, ಪ್ರೇಕ್ಷಕರ ಸಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬದಲಾವಣೆಗಳನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ ವೇಳೆಗೆ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್ ನಡೆಯೋದು ಪಕ್ಕಾ ಆಗಿದೆ.
- Kiran HV
- Updated on: Dec 19, 2025
- 11:27 am
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ: ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್
ಎಡಿಜಿಪಿ ಅಲೋಕ್ ಕುಮಾರ್ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಮತ್ತು ಭದ್ರತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸುವ ಯೋಜನೆಯನ್ನು ಹಂಚಿಕೊಂಡಿದ್ದಾರೆ. ನಿಷೇಧಿತ ವಸ್ತುಗಳ ಪತ್ತೆ, ಸಿಬ್ಬಂದಿಯ ಮೇಲಿನ ಅವಲಂಬನೆ ಕಡಿಮೆ ಮಾಡುವುದು ಮತ್ತು ಜೈಲುಗಳಲ್ಲಿನ ಅಕ್ರಮ ಜಾಲಗಳನ್ನು ಭೇದಿಸುವುದು ಈ ಉಪಕ್ರಮದ ಮುಖ್ಯ ಗುರಿಗಳಾಗಿವೆ.
- Kiran HV
- Updated on: Dec 17, 2025
- 11:52 am
ದರ್ಶನ್ ವಿಷಯದಲ್ಲಿ ಗೊತ್ತಿದ್ದೂ ಕಣ್ಮುಚ್ಚಿ ಕೂತಿದ್ದಾರಾ ಪೊಲೀಸರು? ನಡೆದಿದೆ ದೊಡ್ಡ ಎಡವಟ್ಟು
ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಅವರ ಪಿಸ್ತೂಲ್ ಲೈಸೆನ್ಸ್ ರದ್ದುಗೊಂಡಿದೆ. ಆದರೆ, .22 ಎಂಎಂ ರೈಫಲ್ ಹಾಗೂ ಬುಲೆಟ್ಗಳು ಇನ್ನೂ ವಶಕ್ಕೆ ಪಡೆದಿಲ್ಲ. ಕೊಲೆ ಆರೋಪಿ ಬಳಿ ಶಸ್ತ್ರಾಸ್ತ್ರ ಇರುವುದು ಕಾನೂನು ಉಲ್ಲಂಘನೆ. ಮೈಸೂರು ಗ್ರಾಮಾಂತರ ಪೊಲೀಸರ ಈ ನಿರ್ಲಕ್ಷ್ಯ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Kiran HV
- Updated on: Dec 12, 2025
- 9:31 am
ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್ನಲ್ಲೇ ನಡೆಯಿತು ದೊಡ್ಡ ಜಗಳ
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ. ಜೈಲಿನಲ್ಲಿ ಹೊಸ, ಕಠಿಣ ನಿಯಮಗಳು ಜಾರಿಯಲ್ಲಿದ್ದು, ದರ್ಶನ್ ತತ್ತರಿಸಿ ಹೋಗಿದ್ದಾರೆ. ಸಹ ಕೈದಿಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದ್ದು, ದೊಡ್ಡ ಜಗಳಗಳು ನಡೆದಿವೆ. ದರ್ಶನ್ ಸೆಲ್ ಮೇಲೆ ವಿಶೇಷ ನಿಗಾ ಇರಿಸಲಾಗಿದೆ.
- Kiran HV
- Updated on: Dec 8, 2025
- 9:38 am
ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಕಾನ್ಸ್ಟೇಬಲ್ ಬಂಧನ, ಪೊಲೀಸಪ್ಪನೇ ಮಾಸ್ಟರ್ಮೈಂಡ್!
ಬೆಂಗಳೂರಿನಲ್ಲಿ ನಡೆದಿರುವ ಎಟಿಎಂ ವಾಹನದ ಹಗಲು ದರೋಡೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಪೊಲೀಸರು ದರೋಡೆ ಗ್ಯಾಂಗ್ಗೆ ಬಲೆ ಬೀಸಿದ್ದು ತಮಿಳುನಾಡು, ಆಂಧ್ರ ಹೀಗೆ ಬೇರೆ ಬೇರೆ ರಾಜ್ಯಗಳಿಗೂ ತನಿಖಾ ತಂಡಗಳು ತೆರಳಿವೆ. ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಜಾಲಾಡಲಾಗಿದೆ. ಆದರೆ ಈಗ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ.
- Kiran HV
- Updated on: Nov 21, 2025
- 7:56 am
ಧರ್ಮಸ್ಥಳ ಬುರುಡೆ ಗ್ಯಾಂಗ್ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧ: ಚಾರ್ಜ್ಶೀಟಿನಲ್ಲೇನಿದೆ?
ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಎಸ್ಐಟಿ ತನಿಖೆಯಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಲು ಈ ಬುರುಡೆ ಗ್ಯಾಂಗ್ ಕಥೆ ಕಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣದ ಚಾರ್ಜ್ಶೀಟ್ ಸಿದ್ಧವಾಗಿದ್ದು, ಚಾರ್ಜ್ಶೀಟ್ನಲ್ಲಿ ಸಿ.ಎನ್.ಚಿನ್ನಯ್ಯತಲೆಬುರುಡೆ ತಂದಿದ್ದು, ಅದನ್ನು ತಂದುಕೊಟ್ಟವರ ಬಗ್ಗೆ ಸಂಪೂರ್ಣ ವಿವರವನ್ನು ಉಲ್ಲೇಖಸಿಲಾಗಿದೆ.
- Kiran HV
- Updated on: Nov 19, 2025
- 9:38 pm
ದೆಹಲಿಯಲ್ಲಿ ಕಾರು ಸ್ಫೋಟ: ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ, ಬಿಗಿ ಭದ್ರತೆಗೆ ಸೂಚನೆ
Delhi Red Fort Car Blast: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.
- Kiran HV
- Updated on: Nov 10, 2025
- 9:04 pm
ಜೈಲಿನಲ್ಲಿರೋ ದರ್ಶನ್ ಎರಡೂವರೆ ತಿಂಗಳಲ್ಲಿ ಕಳೆದುಕೊಂಡ ದೇಹದ ತೂಕ ಎಷ್ಟು?
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಎರಡೂವರೆ ತಿಂಗಳು ಕಳೆದಿದೆ. ಈ ಅವಧಿಯಲ್ಲಿ ದರ್ಶನ್ ಬರೋಬ್ಬರಿ 13 ಕೆಜಿ ತೂಕ ಕಳೆದುಕೊಂಡಿದ್ದಾರೆ. ಅವರ ದಿನಚರಿ, ಜೈಲು ಪರಿಸ್ಥಿತಿ, ಸೆಲ್ನಲ್ಲಿ ಇರುವ ವ್ಯವಸ್ಥೆ, ಸಿಬ್ಬಂದಿಯ ಭದ್ರತಾ ನಿಯಮಗಳು ಹಾಗೂ ಓದುವ ಆಸಕ್ತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Kiran HV
- Updated on: Oct 30, 2025
- 1:33 pm