ಅಕ್ಷರ ಬರೆಯಬೇಕಿದ್ದ ಕೈಯಲ್ಲಿ ಮಲ-ಮೂತ್ರ ಗುಂಡಿ ಕ್ಲೀನ್ ಮಾಡಿಸಿದ ಶಿಕ್ಷಕರು..!
ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಕಟ್ಟಿಕೊಂಡರೇ ಕ್ಲೀನ್ ಮಾಡುವವರನ್ನ ಕರೆಯಿಸಿ ಕ್ಲೀನ್ ಮಾಡಿಸುತ್ತಾರೆ. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ ಸರ್ಕಾರಿ ಶಾಲೆವೊಂದರಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಶಿಕ್ಷಕರೇ ಮಕ್ಕಳ ಕೈಲ್ಲಿ ಮಲಮೂತ್ರ ಗುಂಡಿಯನ್ನು ಕ್ಲೀನ್ ಮಾಡಿಸಿದ್ದಾರೆ. ಸಣ್ಣ ಮಕ್ಕಳ ಕೈಯಲ್ಲಿ ಕ್ಲೀನ್ ಮಾಡಿಸಿರುವ ಎಕ್ಸ್ಕೂಸಿವ್ ವಿಡಿಯೋ, ಪೋಟೋಗಳು ಟಿವಿ9ಗೆ ಲಭ್ಯವಾಗಿದೆ.
- Kiran Surya
- Updated on: Mar 21, 2025
- 11:00 pm
ಕರ್ನಾಟಕ ಬಂದ್: ಸಾರಿಗೆ ಸಂಘಟನೆಗಳಿಗೆ ಪೊಲೀಸ್ ನೋಟಿಸ್, ಕಾನೂನು ಕ್ರಮದ ಎಚ್ಚರಿಕೆ
ಮಾರ್ಚ್ 22ಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಎಂಇಎಸ್ನ ಪುಂಡಾಟ, ಕಳಸಾ-ಬಂಡೂರಿ ಯೋಜನೆ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮುಂತಾದ ವಿಷಯಗಳನ್ನು ಒತ್ತಾಯಿಸಿ ಈ ಬಂದ್ಗೆ ಕರೆ ನೀಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನೈತಿಕ ಬೆಂಬಲ ಸೂಚಿಸಿದ್ದು, ನಾಳೆ ಎಂದಿನಂತೆ ಬಸ್ ಸಂಚಾರವಿರಲಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
- Kiran Surya
- Updated on: Mar 21, 2025
- 3:24 pm
ಬೆಂಗಳೂರು: ಹೊರ ರಾಜ್ಯದ 250ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸೀಜ್, 5 ಕೋಟಿ ರೂ. ದಂಡ ವಸೂಲಿ
ಸಾರಿಗೆ ಇಲಾಖೆಯ ನಿಯಮಗಳ ಪ್ರಕಾರ ಬೇರೆ ರಾಜ್ಯಗಳಲ್ಲಿ ಕಾರು ಖರೀದಿ ಮಾಡಿ ಇಲ್ಲಿ ಅದನ್ನು ಬಳಕೆ ಮಾಡುವಂತಿಲ್ಲ. ಆದರೆ, ಕೆಲ ಕಿಲಾಡಿ ಕಾರು ಮಾಲೀಕರು ತೆರಿಗೆ ಉಳಿಸಲು ಬೇರೆ ರಾಜ್ಯದಲ್ಲಿ ಕಾರು ಖರೀದಿ ಮಾಡಿ, ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳಲ್ಲಿ ಪೋಸ್ ಕೊಡುತ್ತಿದ್ದರು. ಅಂತಹವರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಿದೆ.
- Kiran Surya
- Updated on: Mar 20, 2025
- 10:02 am
ಹೋರಾಟಕ್ಕೆ ಮಣಿದ ನಮ್ಮ ಮೆಟ್ರೋ: ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್
ಕನ್ನಡ ಪ್ರಾಧಿಕಾರ ಮತ್ತು ಹೋರಾಟಗಾರ ಪ್ರತಿಭಟನೆಗೆ ಮಣಿದ ಬೆಂಗಳೂರು ಮೆಟ್ರೋ ರೈಲು ನಿಗಮ 50 ರೈಲು ನಿರ್ವಾಹಕರ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದಿದೆ. ಕನ್ನಡೇತರರಿಗೆ ಮಾತ್ರ ಅವಕಾಶ ನೀಡುವ ನಿಯಮ ಕನ್ನಡಪರ ಸಂಘಟನೆಗಳ ಆಕ್ರೋಶ ಹಾಗೂ ಪ್ರತಿಭಟನೆಕ್ಕೆ ಕಾರಣವಾಗಿತ್ತು. ಸದ್ಯ ಎಚ್ಚೆತ್ತಿರುವ BMRCL ನಿರ್ಧಾರ ಕೈಬಿಟ್ಟಿದೆ.
- Kiran Surya
- Updated on: Mar 17, 2025
- 10:35 pm
ಬಿಎಂಟಿಸಿ ಮಹಿಳಾ ಕಂಡಕ್ಟರ್ ಚಾಣಕ್ಷತನದಿಂದ ಸಿಕ್ಕಿಬಿದ್ದ ಕಿಲಾಡಿ ಕಳ್ಳಿಯರು
ಬೆಂಗಳೂರಿನ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ ನಾಲ್ವರು ಮಹಿಳೆಯರ ಗ್ಯಾಂಗ್ ಅನ್ನು ಚಾಣಾಕ್ಷ ಮಹಿಳಾ ಕಂಡಕ್ಟರ್ ಹಾಗೂ ಚಾಲಕರ ಜಾಗರೂಕತೆಯಿಂದ ಬಂಧಿಸಲಾಗಿದೆ. ಕಳ್ಳತನ ನಡೆಯುತ್ತಿರುವುದನ್ನು ಗಮನಿಸಿದ ಕಂಡಕ್ಟರ್, ಚಾಲಕರಿಗೆ ಮಾಹಿತಿ ನೀಡಿದ್ದು, ಬಸ್ಸಿನ ಬಾಗಿಲು ಹಾಕಿಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕಳ್ಳತನ ಮಾಡಿದ ವಸ್ತುಗಳನ್ನು ಕಳ್ಳರು ಬಸ್ಸಿನಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Kiran Surya
- Updated on: Mar 14, 2025
- 1:44 pm
ನಮ್ಮ ಮೆಟ್ರೋಗೆ ಆದಾಯ ಕೊರತೆ: ಜಾಹೀರಾತು ಮೊರೆ ಹೋದ ಬಿಎಂಆರ್ಸಿಎಲ್
ಬೆಂಗಳೂರಿನ ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಕುಸಿದಿದೆ. ಇದರಿಂದ ಆದಾಯದಲ್ಲಿ ನಷ್ಟ ಉಂಟಾಗುತ್ತಿದೆ. ನಷ್ಟವನ್ನು ಸರಿದೂಗಿಸಲು, ಬಿಎಂಆರ್ಸಿಎಲ್ ಮೆಟ್ರೋ ರೈಲುಗಳ ಒಳ ಮತ್ತು ಹೊರಭಾಗದಲ್ಲಿ ಜಾಹೀರಾತು ಅಳವಡಿಸಲು ಯೋಜಿಸಿದೆ. ಇದರಿಂದ ವಾರ್ಷಿಕವಾಗಿ 27 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ. ಆದರೆ, ಈ ನಿರ್ಧಾರಕ್ಕೆ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ.
- Kiran Surya
- Updated on: Mar 14, 2025
- 7:30 am
Auto Fare Hike: ಬೆಂಗಳೂರಿನಲ್ಲಿ ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್, ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ವಿವರ
ಬೆಂಗಳೂರು ಆಟೋ ದರ ಏರಿಕೆ: ಕೊನೆಗೂ ಬೆಂಗಳೂರು ನಗರದಲ್ಲಿ ಆಟೋ ರಿಕ್ಷಾ ಬಾಡಿಗೆ ದರ ಹೆಚ್ಚಳವಾಗುವುದು ನಿಶ್ಚಿತವಾಗಿದೆ. ದರ ಏರಿಕೆ ಸಂಬಂಧ ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿ ನಡೆದ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗಿದ್ದು, ಮುಂದಿನ ಒಂದು ವಾರದ ಒಳಗಾಗಿ ದರ ಏರಿಕೆ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ. ದರ ಏರಿಕೆ ಸಂಬಂಧ ನಡೆದ ಸಭೆಯಲ್ಲಿ ಏನೇನಾಯ್ತು ಎಂಬ ವಿವರ ಇಲ್ಲಿದೆ.
- Kiran Surya
- Updated on: Mar 12, 2025
- 1:08 pm
ಟಿಕೆಟ್ ದರ ಏರಿಕೆಯಿಂದ ನಮ್ಮ ಮೆಟ್ರೋಗೆ ಮರಳದ ಪ್ರಯಾಣಿಕರು: ಬೆಂಗಳೂರು ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ
ಮೆಟ್ರೋ ಟಿಕೆಟ್ ದರ ದುಪ್ಪಟ್ಟು ಏರಿಕೆ ಆಗಿದ್ದೇ ಆಗಿದ್ದು, ಮೆಟ್ರೋ ರೈಲಿನಿಂದ ಪ್ರಯಾಣಿಕರು ದೂರವಾಗುತ್ತಿದ್ದಾರೆ. ಇದರ ಎಫೆಕ್ಟ್ ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಮೇಲೆ ತಟ್ಟಿದ್ದು, ನಗರದ ಯಾವ ಜಂಕ್ಷನ್ ನೋಡಿದರೂ ವಾಹನಗಳ ದಟ್ಟಣೆ ಹೆಚ್ಚಾಗಿರುವುದು ಕಾಣಿಸುತ್ತಿದೆ. ಬಿಎಂಆರ್ಸಿಎಲ್ ವಿರುದ್ಧ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- Kiran Surya
- Updated on: Mar 12, 2025
- 7:35 am
ಮತ್ತೆ ಹೆಚ್ಚಾಗಲಿದೆ ಮದ್ಯದ ದರ: ಎಣ್ಣೆ ಪ್ರಿಯಕರಿಗೆ 3ನೇ ಬಾರಿಗೆ ಅಬಕಾರಿ ಇಲಾಖೆ ಶಾಕ್..!
Liquor Price Hike: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಐಎಂಎಲ್ ಗಳ ಮೇಲಿನ ದರವನ್ನು ಹೆಚ್ಚಳ ಮಾಡಿತ್ತು. ಇದೀಗ ಮೂರನೇ ಬಾರಿ ದರ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಪ್ಲಾನ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮದ್ಯಪ್ರಿಯರು ಹಾಗೂ ಬಾರ್ ಮಾಲೀಕರು ಆಕ್ರೋಶಗೊಂಡಿದ್ದಾರೆ. ಹಾಗಾದ್ರೆ, ಈ ಬಾರಿ ಎಣ್ಣೆ ರೇಟ್ ಎಷ್ಟು ಹೆಚ್ಚಳವಾಗಲಿದೆ ಎನ್ನುವ ವಿವರ ಇಲ್ಲಿದೆ.
- Kiran Surya
- Updated on: Mar 11, 2025
- 10:02 pm
ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಮುಷ್ಕರ ಬಹುತೇಕ ಫಿಕ್ಸ್: ಸರ್ಕಾರಕ್ಕೆ ಮಾರ್ಚ್ 22ರ ಗಡುವು
ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬುಧವಾರವಷ್ಟೇ ಸಭೆ ನಡೆಸಿ, ಮಾರ್ಚ್ 22 ರೊಳಗೆ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ ಮುಷ್ಕರ ಮಾಡುವ ಎಚ್ಚರಿಕೆ ನೀಡಿತ್ತು. ಇದೀಗ ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ಕೂಡ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಡಬಲ್ ಡಬಲ್ ಶಾಕ್ ಎದುರಾಗಿದೆ.
- Kiran Surya
- Updated on: Mar 7, 2025
- 7:45 am
ಸಿದ್ದರಾಮಯ್ಯ ಸರ್ಕಾರಕ್ಕೆ ಡೆಡ್ಲೈನ್: ರಾಜ್ಯಾದ್ಯಂತ ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರಕ್ಕೆ ಸಿದ್ದತೆ
ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟವು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 22ರ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಖಾಸಗಿ ವಾಹನಗಳ ಸಾರಿಗೆ ಮುಷ್ಕರ ನಡೆಸುವುದಾಗಿ ಎಚ್ಚರಿಸಿದೆ. ಸೆಪ್ಟೆಂಬರ್ನಲ್ಲಿ ನಡೆದ ಬೆಂಗಳೂರು ಬಂದ್ ನಂತರ ಇದು ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಮುಷ್ಕರಕ್ಕೆ ಮುಂದಾಗುವುದಾಗಿ ಒಕ್ಕೂಟ ಹೇಳಿದೆ.
- Kiran Surya
- Updated on: Mar 6, 2025
- 6:24 pm
ಬಜೆಟ್ನಲ್ಲಿ ಬೇಡಿಕೆ ಈಡೇರಿಸುವಂತೆ 4 ಸಾರಿಗೆ ನಿಗಮಗಳು ಒತ್ತಾಯ: ಸರ್ಕಾರಕ್ಕೆ ಮಾರ್ಚ್ 22ರ ಡೆಡ್ಲೈನ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಮಾರ್ಚ್ 22ರೊಳಗೆ ಬೇಡಿಕೆ ಈಡೇರದಿದ್ದರೆ ಮಾರ್ಚ್ 25ರಿಂದ ಬಸ್ ಸಂಚಾರ ಬಂದ್ ಮಾಡುವುದಾಗಿ ಎಚ್ಚರಿಸಿದೆ. ಮುಖ್ಯ ಬೇಡಿಕೆಗಳಲ್ಲಿ 7ನೇ ವೇತನ ಆಯೋಗದ ಅನುಷ್ಠಾನ, ಹಿಂಬಾಕಿ ವೇತನ ಪಾವತಿ, ಮತ್ತು ವಜಾ ಮಾಡಿದ ನೌಕರರ ಪುನರ್ ನೇಮಕ ಸೇರಿವೆ.
- Kiran Surya
- Updated on: Mar 6, 2025
- 5:58 pm