ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಗಳಿಗೆ ತೆರಳುವ ಲಕ್ಷಾಂತರ ಜನರಿಗಾಗಿ ಸಾರಿಗೆ ಇಲಾಖೆಯು 2,155 ಹೆಚ್ಚುವರಿ ಬಸ್ಗಳನ್ನು ಘೋಷಿಸಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ನಿಗಮಗಳು ಜಂಟಿಯಾಗಿ ಈ ವ್ಯವಸ್ಥೆ ಮಾಡಿವೆ. ಪ್ರಯಾಣಿಕರು ಸುಲಭವಾಗಿ ಪ್ರಯಾಣಿಸಲು ಕೆಎಸ್ಆರ್ಟಿಸಿ ವೆಬ್ಸೈಟ್ ಅಥವಾ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಮನವಿ ಮಾಡಲಾಗಿದೆ. ಹಬ್ಬದ ನಂತರ ವಾಪಸಾಗುವವರಿಗೂ ಇದೇ ರೀತಿ ಬಸ್ ವ್ಯವಸ್ಥೆ ಇರಲಿದೆ.
- Kiran Surya
- Updated on: Feb 13, 2026
- 7:15 pm
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್ನಲ್ಲಿ ಉಚಿತ ಪ್ರಯಾಣ
ಕೆಎಸ್ಆರ್ಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು. ಪ್ರವೇಶ ಪತ್ರವನ್ನು ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಇದು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಮತ್ತು ಆರ್ಥಿಕ ಹೊರೆ ಕಡಿಮೆ ಮಾಡಲು ನೆರವಾಗಲಿದೆ.
- Kiran Surya
- Updated on: Feb 13, 2026
- 6:00 pm
ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್ಟಿಒ ಗೋಲ್ಮಾಲ್ ಬಹಿರಂಗ
ಬೆಂಗಳೂರಿನ ಕೋರಮಂಗಲ ಆರ್ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ಕುರಿತು ವಕೀಲ ನಟರಾಜ್ ಶರ್ಮಾ ದೂರು ನೀಡಿದ್ದಾರೆ. ಮಹಾರಾಷ್ಟ್ರ, ಕೇರಳ, ಗುಜರಾತ್ ಸೇರಿದಂತೆ ಹೊರ ರಾಜ್ಯದ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ತಪಾಸಣೆ ಮಾಡದೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್ಸಿ) ನೀಡಲಾಗಿದೆ. ಈ ಅಕ್ರಮದಲ್ಲಿ ನಾಲ್ವರು ಮೋಟಾರು ವಾಹನ ನಿರೀಕ್ಷಕರು ಭಾಗಿಯಾಗಿದ್ದು, ಸಾರಿಗೆ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
- Kiran Surya
- Updated on: Feb 13, 2026
- 2:19 pm
ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ, 11 ರೂಲ್ಸ್ ಪಾಲನೆಗೆ ಡೆಡ್ಲೈನ್ ಫಿಕ್ಸ್
ಚಿತ್ರದುರ್ಗ ದುರಂತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್ಗಳಿಗೆ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಫೆಬ್ರವರಿ 28ರೊಳಗೆ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರ, ಅಗ್ನಿಶಾಮಕ ಸಾಧನ, ಹ್ಯಾಮರ್ ಸೇರಿದಂತೆ 11 ಕಡ್ಡಾಯ ಕ್ರಮಗಳನ್ನು ಅಳವಡಿಸಲು ಸೂಚಿಸಲಾಗಿದೆ.
- Kiran Surya
- Updated on: Feb 13, 2026
- 8:49 am
ನಮ್ಮ ಮೆಟ್ರೋ ರೆಡ್ ಲೈನ್ ಡಿಪಿಆರ್ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ
ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
- Kiran Surya
- Updated on: Feb 12, 2026
- 11:48 am
ಶಕ್ತಿ ಯೋಜನೆಯಿಂದ ಪರದಾಡುತ್ತಿದ್ದ ಬೆಂಗಳೂರಿಗರಿಗೆ ಗುಡ್ ನ್ಯೂಸ್
ಕೇಂದ್ರದ PM-E-DRIVE ಯೋಜನೆಯಡಿ ಬಿಎಂಟಿಸಿಗೆ 1750 ಹೊಸ ಎಲೆಕ್ಟ್ರಿಕ್ ಬಸ್ಗಳು ಬರಲಿವೆ. ಆ ಮೂಲಕ ಶಕ್ತಿ ಯೋಜನೆಯಿಂದ ಬಿಎಂಟಿಸಿ ಬಸ್ಗಳಲ್ಲಿ ಹೆಚ್ಚಿದ ದಟ್ಟಣೆಗೆ ಕೊನೆಗೂ ಪರಿಹಾರ ಸಿಕ್ಕಂತ್ತಾಗಿದೆ. ಒಪ್ಪಂದ ಆಧಾರದಲ್ಲಿ ಕಾರ್ಯನಿರ್ವಹಿಸುವ ಈ ಬಸ್ಗಳು ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಹೊಸ ಚೈತನ್ಯ ನೀಡಲಿವೆ. ಪ್ರಯಾಣಿಕರು ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
- Kiran Surya
- Updated on: Feb 11, 2026
- 9:27 pm
ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇತ್ತೀಚೆಗೆ ಬ್ಯಾಂಕ್ ಸರ್ವರ್ ದೋಷದಿಂದಾಗಿ ಟಿಕೆಟ್ ಪಡೆಯಲು ತೀವ್ರ ತೊಂದರೆಯಾಗಿದೆ. ಯುಪಿಐ/ಕಾರ್ಡ್ ಪಾವತಿ ವೈಫಲ್ಯದಿಂದ ಸಾವಿರಾರು ಜನರು ಪರದಾಡಿದರು, ಕ್ಯೂಆರ್ ಕೋಡ್ ಉತ್ಪತ್ತಿಯಾಗಲಿಲ್ಲ. ಹಣ ಕಟ್ ಆದರೂ ಟಿಕೆಟ್ ಸಿಗದೆ ಆಕ್ರೋಶ ವ್ಯಕ್ತವಾಯಿತು. ಇಂತಹ ಸಂದರ್ಭಗಳಲ್ಲಿ ನಗದು ಅಥವಾ ಸ್ಮಾರ್ಟ್ ಕಾರ್ಡ್ ಬಳಸಲು ಮತ್ತು ಪದೇ ಪದೇ ಪಾವತಿ ಮಾಡದಿರಲು ಸಲಹೆ ನೀಡಲಾಗಿದೆ.
- Kiran Surya
- Updated on: Feb 10, 2026
- 9:22 pm
ಯಲಹಂಕ ರೈಲು ನಿಲ್ದಾಣದಲ್ಲಿ ಸಿಕ್ತು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ: ಪ್ರಾಮಾಣಿಕತೆ ಮೆರೆದ RPF
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ ಅನ್ನು ಮಾಲೀಕರಿಗೆ ಆರ್ಪಿಎಫ್ ಸಿಬ್ಬಂದಿ ಹಿಂದಿರುಗಿಸಿದ್ದಾರೆ. ಫೆ.8ರಂದು ಪ್ರಯಾಣಿಕ ಬ್ಯಾಗ್ ಕಳೆದುಕೊಂಡಿದ್ದರು. ಸದ್ಯ RPF ಸಿಬ್ಬಂದಿಯ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
- Kiran Surya
- Updated on: Feb 9, 2026
- 4:00 pm
ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ?
ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಹಿನ್ನೆಲೆಯಲ್ಲಿ BMRCL ಇಂದು ಮಹತ್ವದ ಸಭೆ ನಡೆಸಲಿದೆ. ಸಾರ್ವಜನಿಕ ಆಕ್ಷೇಪ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪಡಿ ಮಾಡಬೇಕೇ ಅಥವಾ ಸಂಪೂರ್ಣ ಹಿಂಪಡೆಯಬೇಕೇ ಎಂಬ ಚರ್ಚೆ ಈ ಸಭೆಯಲ್ಲಿ ನಡೆಯಲಿದ್ದು, ಲಕ್ಷಾಂತರ ಪ್ರಯಾಣಿಕರು ಅಂತಿಮ ನಿರ್ಧಾರಕ್ಕಾಗಿ ಕಾದು ನೋಡುತ್ತಿದ್ದಾರೆ.
- Kiran Surya
- Updated on: Feb 9, 2026
- 10:53 am
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ!
ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಶಾಸಕ ರಾಮಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಂತರ ಪೊಲೀಸರು ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ ಅವರನ್ನು ವಶಕ್ಕೆ ಪಡೆದ್ದಾರೆ.
- Kiran Surya
- Updated on: Feb 9, 2026
- 10:00 am
ಗುಡ್ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL
ನಾಳೆಯಿಂದ (ಫೆ.09) ಬರೆ ಬೀಳುತ್ತಾ ಅಂತಾ ಗೊಂದಲದಲ್ಲಿದ್ದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯ ರಿಲೀಫ್ ಸಿಕ್ಕಿದೆ. ಏಕೆಂದರೆ ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ. ಕೇಂದ್ರ ಸರ್ಕಾರದ ಒಂದೇ ಒಂದು ಸೂಚನೆ ಬೆನ್ನಲ್ಲೇ ದರ ಏರಿಕೆ ನಿರ್ಧಾರವನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ.
- Kiran Surya
- Updated on: Feb 8, 2026
- 8:24 pm
ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು
ನಕಲಿ ದಾಖಲೆಗಳನ್ನು ಸೃಷ್ಟಿಸಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿ ನೋಂದಣಿ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಸಹಕಾರ ನಗರದ ಎಚ್1 ಕಾರ್ ಕೇರ್ ಮೇಲೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕಾರನ್ನು ಸೀಜ್ ಮಾಡಲಾಗಿದ್ದು, ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Kiran Surya
- Updated on: Feb 8, 2026
- 6:56 pm