ವಲಸಿಗ ಕಾರ್ಮಿಕರ ಮಾಹಿತಿ ಕೇಳಿದ ರಾಜ್ಯ ಗೃಹ ಇಲಾಖೆ: ಅಚ್ಚರಿಯ ಅಂಶ ಬಯಲು
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅಪಹರಣ ಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ವಲಸಿಗ ಕಾರ್ಮಿಕರ ಸಂಖ್ಯೆ ಮತ್ತು ನೋಂದಣಿ ಕುರಿತು ಆತಂಕ ಹೆಚ್ಚಾಗಿದೆ. ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವಲಸಿಗರ ಕಾರ್ಮಿಕರ ಲೆಕ್ಕಪರಿಶೀಲನೆ ನಡೆಸಿದ ವೇಳೆ ಅಚ್ಚರಿಯ ಅಂಶ ಬಯಲಾಗಿದೆ. ಈ ಕುರಿತು ವಿವರ ಇಲ್ಲಿದೆ.
- Kiran Surya
- Updated on: Apr 18, 2025
- 9:23 pm
ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್: ಲಾರಿ ಮಾಲೀಕರ ಮುಷ್ಕರ ವಾಪಸ್
ಕರ್ನಾಟಕ ರಾಜ್ಯದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರವು ಸಾರಿಗೆ ಸಚಿವರೊಂದಿಗಿನ ಯಶಸ್ವಿ ಮಾತುಕತೆಯ ನಂತರ ಅಂತ್ಯಗೊಂಡಿದೆ. ಸರ್ಕಾರವು ಲಾರಿ ಮಾಲೀಕರ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದು, ಇದರಿಂದ 4500 ಕೋಟಿ ರೂಪಾಯಿಗಳಷ್ಟು ಅಂದಾಜು ನಷ್ಟವನ್ನು ತಪ್ಪಿಸಲಾಗಿದೆ. ಲಾರಿ ಮಾಲೀಕರ ಸಂಘದ ಅಧ್ಯಕ್ಷರು ಮುಷ್ಕರ ಹಿಂಪಡೆದ ಬಗ್ಗೆ ಘೋಷಿಸಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ಅವರು ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.
- Kiran Surya
- Updated on: Apr 17, 2025
- 5:32 pm
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮತ್ತು ರಾತ್ರಿ ಮಳೆಯಾಗುತ್ತಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಬೆಂಗಳೂರಿನ ಶಾಂತಿನಗರ, ಜಯನಗರ, ಕೆ.ಆರ್. ಮಾರ್ಕೆಟ್ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ರಸ್ತೆ ಮೇಲೆ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.
- Kiran Surya
- Updated on: Apr 16, 2025
- 6:48 pm
Karnataka Lorry Strike: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ನಾಳೆಯಿಂದ ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ
ಕರ್ನಾಟಕ ಲಾರಿ ಮುಷ್ಕರ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಕಂಗಲಾಗಿದ್ದಾರೆ. ಬೆಲೆ ಏರಿಕೆ ವಿರುದ್ಧ ವಿಪಕ್ಷಗಳು ಬೀದಿಗಿಳಿವೆ. ಈ ಮಧ್ಯೆ ಡಿಸೇಲ್ ದರ ಏರಿಕೆ ಲಾರಿ ಮಾಲೀಕರನ್ನು ಕಂಗಲಾಗಿಸಿದೆ. ಹೀಗಾಗಿ ಡೀಸೆಲ್ ದರ ಇಳಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರು ಕರೆ ನೀಡಿದ್ದಾರೆ.
- Kiran Surya
- Updated on: Apr 14, 2025
- 7:44 am
ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವು: ಇಂದೇ ಆರ್ಡರ್ ಮಾಡಿ, ಇಲ್ಲಿದೆ ವಿವರ
ಭಾರತೀಯ ಅಂಚೆ ಇಲಾಖೆ ಮಾವಿನ ಹಣ್ಣನ್ನು ಮನೆಗೆ ತಲುಪಿಸುವ ಸೇವೆಯನ್ನು ಪ್ರಾರಂಭಿಸಿದೆ. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾವುಗಳನ್ನು ಬುಕ್ ಮಾಡಬಹುದು. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವುಗಳು ತಲುಪುವ ಈ ಯೋಜನೆಯಿಂದ ಮಧ್ಯವರ್ತಿಗಳನ್ನು ತಪ್ಪಿಸಿ ಗುಣಮಟ್ಟದ ಹಣ್ಣುಗಳನ್ನು ಪಡೆಯಲು ಸಾಧ್ಯವಾಗಿದೆ.
- Kiran Surya
- Updated on: Apr 12, 2025
- 10:59 pm
ಬೆಂಗಳೂರು ಕರಗ: ಸರ್ಕಾರದಿಂದ ಹಣ ಬಿಡುಗಡೆ ವಿಚಾರದಲ್ಲಿ ಗೊಂದಲ, ಯಾರು ಏನಂದರು ನೋಡಿ
ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಜರಾಯಿ ಇಲಾಖೆಯಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪ ಇದೀಗ ಕೇಳಿಬಂದಿದ್ದು, ಪರ ಹಾಗೂ ವಿರೋಧ ಹೇಳಿಕೆಗಳಿಗೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ಕರಗ ಅರ್ಚಕ ಜ್ಞಾನೇಂದ್ರ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಯಾರ್ಯಾರು ಏನೇನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.
- Kiran Surya
- Updated on: Apr 12, 2025
- 3:50 pm
ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಭಕ್ತರಿಗೆ ದರ್ಶನ ನೀಡಿದ ದ್ರೌಪದಿ ದೇವಿ
Bengaluru Hasi Karaga: ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಹಸಿ ಕರಗ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಆದಿಶಕ್ತಿ ದೇವಸ್ಥಾನದಿಂದ ಹೊರಟ ಹಸಿ ಕರಗವನ್ನು 15ನೇ ಬಾರಿಗೆ ಅರ್ಚಕ ಎ. ಜ್ಞಾನೇಂದ್ರ ಸ್ವಾಮಿ ಹೊತ್ತರು. ಸಾವಿರಾರು ಭಕ್ತರು ಭಾಗವಹಿಸಿ ದ್ರೌಪದಿ ದೇವಿಯ ದರ್ಶನ ಪಡೆದರು. 50 ಕೆಜಿ ಕರ್ಪೂರವನ್ನು ಅರ್ಪಿಸುವ ಮೂಲಕ ಭಕ್ತಿಯನ್ನು ವ್ಯಕ್ತಪಡಿಸಿದರು.
- Kiran Surya
- Updated on: Apr 11, 2025
- 12:08 pm
ಖಾಸಗಿ, ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ: ನಾಲ್ಕೈದು ದಿನ ರಜೆಗೆಂದು ಬೆಂಗಳೂರಿನಿಂದ ಊರಿಗೆ ಹೊರಟವರಿಗೆ ಶಾಕ್
ಸಾಲು-ಸಾಲು ರಜೆ ಬಂತು ಅಂದರೆ ಖಾಸಗಿ ಬಸ್ಗಳಿಗೆ ಹಬ್ಬವೋ ಹಬ್ಬ. ಎರಡ್ಮೂರು ಪಟ್ಟು ದರ ಏರಿಕೆ ಮಾಡಿ, ಜನರಿಂದ ದುಪ್ಪಟ್ಟು ದರ ವಸೂಲಿ ಶುರು ಮಾಡುತ್ತವೆ. ಈಗ ಮತ್ತದೇ ಚಾಳಿ ಮುಂದುವರಿದಿದೆ. ಈ ಬಾರಿ ಸಾಲಾಗಿ ನಾಲ್ಕೈದು ರಜೆಗಳು ಬಂದಿದ್ದು, ಊರಿಗೆ ಹೋಗೋಣ ಅಂದುಕೊಂಡಿದ್ದವರಿಗೆ ಖಾಸಗಿ ಬಸ್ಗಳು ಶಾಕ್ ನೀಡಲು ಮುಂದಾಗಿದೆ. ಈ ಬಾರಿ ಕೆಎಸ್ಆರ್ಟಿಸಿ ಬಸ್ಗಳೂ ದರ ಹೆಚ್ಚಳ ಮಾಡಿವೆ. ದರ ವಿವರ ಇಲ್ಲಿದೆ.
- Kiran Surya
- Updated on: Apr 10, 2025
- 8:44 am
ವಾಹನ ಪಾರ್ಕ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಸಿಗಲಿದೆ ಡಿಸ್ಕೌಂಟ್
Namma Metro Parking: ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಲಿದೆ. ಅದರಂತೆ, ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಪಾರ್ಕ್ ಮಾಡಿ ತೆರಳುವವರಿಗೆ ಡಿಸ್ಕೌಂಟ್ ಸಿಗಲಿದೆ.
- Kiran Surya
- Updated on: Apr 10, 2025
- 8:05 am
Bengaluru Mysuru Train: ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ
ಮೈಸೂರು ಬೆಂಗಳೂರು ಮೆಮು ರೈಲು: ಅದು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಅರಮನೆ ನಗರಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮೆಮು ಪ್ಯಾಸೆಂಜರ್ ರೈಲು. ಈ ರೈಲು ಬಡವರ ಪಾಲಿನ ಐರಾವತ ಎಂದೇ ಹೇಳಬಹುದು. ಅಷ್ಟೊಂದು ದುಬಾರಿ ಏನಿಲ್ಲ, ಕೈಗೆಟುಕುವ ದರದಲ್ಲಿ ಸುರಕ್ಷಿತವಾಗಿ ಪ್ರಯಾಣ ಮಾಡಬಹುದು. ಆದರೆ ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪ್ರತಿದಿನ ಉಸಿರುಕಟ್ಟಿಕೊಂಡು ಪ್ರಯಾಣ ಮಾಡುವ ಹಾಗಾಗಿದೆ.
- Kiran Surya
- Updated on: Apr 9, 2025
- 6:37 am
Lorry Strike: ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್, ಡೀಸೆಲ್ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ
ಕರ್ನಾಟಕ ಲಾರಿ ಮುಷ್ಕರ: ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
- Kiran Surya
- Updated on: Apr 4, 2025
- 1:08 pm
Cab Price Hike: ಕರ್ನಾಟಕದ ಜನರಿಗೆ ಶಾಕ್ ಮೇಲೆ ಶಾಕ್: ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳ, ಇಲ್ಲಿದೆ ವಿವರ
ಬೆಂಗಳೂರು ಕ್ಯಾಬ್ ದರ ಏರಿಕೆ: ಕೇಂದ್ರ ಸರ್ಕಾರದ ಟೋಲ್ ದರ, ಕಾರು ತಯಾರಿಕಾ ಕಂಪನಿಗಳ ದರ ಏರಿಕೆ ಮತ್ತು ರಾಜ್ಯ ಸರ್ಕಾರದ ಡಿಸೇಲ್ ಮೇಲಿನ ತೆರಿಗೆ ಹೆಚ್ಚಳದಿಂದಾಗಿ ಟೂರ್ಸ್ ಮತ್ತು ಟ್ರಾವೆಲ್ಸ್ ಹಾಗೂ ಕ್ಯಾಬ್ ಸೇವೆಗಳ ದರ ಕೂಡ ಏರಿಕೆ ಆಗಿದ್ದು, ಪ್ರತಿ ಕಿ.ಮೀ 2 ರಿಂದ 5 ರೂ. ಹೆಚ್ಚಳ ಮಾಡಲಾಗಿದೆ. ಇದು ಜನರಿಗೆ ಮತ್ತೊಂದು ಶಾಕ್ ಉಂಟುಮಾಡಿದೆ.
- Kiran Surya
- Updated on: Apr 4, 2025
- 8:17 am