ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಬೆಂಗಳೂರು ವರದಿಗಾರ - TV9 Kannada
lakshminarasimhaswamy.lakshmipathi@tv9.comಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..
ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು: ಇವರ ಹಕ್ಕೊತ್ತಾಯಗಳೇನು?
ಜಿಬಿಎ ಅಧಿಕಾರಿಗಳು ಫುಟ್ಪಾತ್ ಅತಿಕ್ರಮಿಸಿದವರನ್ನು ತೆರವು ಮಾಡುವ ಮೂಲಕ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಇದು ಬೀದಿಬದಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸಿದರು. ನಮಗೆ ಮತ್ತೆ ಅದೇ ಸ್ಥಳವನ್ನು ನೀಡಬೇಕು ಎಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.
- Lakshmi Narasimha Swamy L
- Updated on: Jul 8, 2026
- 4:54 pm
ಫುಟ್ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಇಲ್ಲದೆ ತಮ್ಮ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಿಗಳು, ಜಿಬಿಎ ನೀಡಿದ ಗುರುತಿನ ಚೀಟಿ ಮತ್ತು ಸಾಲಗಳ ಹೊರತಾಗಿಯೂ ತೆರವುಗೊಳ್ಳುತ್ತಿರುವುದಕ್ಕೆ ಆಕ್ಷೇಪಿಸಿದ್ದಾರೆ.
- Lakshmi Narasimha Swamy L
- Updated on: Jul 7, 2026
- 1:59 pm
ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ: ಜಂಟಿ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಸಪ್ತ ಪ್ರಶ್ನೆ
Footpath Encroachment Drive: ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ವಿರೋಧಿಸಿ ಜಂಟಿ ಹೋರಾಟ ಸಮಿತಿಯು ಸರ್ಕಾರಕ್ಕೆ ಸಪ್ತ ಪ್ರಶ್ನೆಗಳನ್ನು ಕೇಳಿದ್ದು, ಕ್ರಮವನ್ನು ಖಂಡಿಸಿ ಜುಲೈ 8ರಂದು ನಗರಾದ್ಯಂತ ಬೀದಿ ಬದಿ ವ್ಯಾಪಾರ ಬಂದ್ಗೆ ಕರೆ ನೀಡಿದೆ. ಮೂರು ತಿಂಗಳ ಹಿಂದೆ ನಗರದ ಶಾಸಕರ ಸಭೆ ನಂತರ ನಮ್ಮನ್ನು ಎತ್ತಂಗಡಿ ಮಾಡುತ್ತಾರೆಂದು ಘೋಷಿಸಿದ್ದು ನಿಜ. ಆದರೆ ಇಂತಹ ಮೌಖಿಕ ಆದೇಶವನ್ನೇ, ನೋಟಿಸ್ ಎಂದು ಪರಿಗಣಿಸಬೇಕು ಎಂದು ಹೇಳುತ್ತೀರಲ್ಲ, ಇದು ಸರಿಯೇ? ಎಂದು ಸಮಿತಿ ಪ್ರಶ್ನಿಸಿದೆ.
- Lakshmi Narasimha Swamy L
- Updated on: Jul 6, 2026
- 2:23 pm
ಗೃಹಜ್ಯೋತಿ ಮರು ಪರಿಶೀಲನೆ: ಜಾತಿ ಪ್ರಮಾಣಪತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನಿಡಿದ ಬೆಸ್ಕಾಂ
ಯೋಜನೆಯಿಂದ ಅರ್ನಹರನ್ನ ಕೈಬಿಡಲು, ಆರ್ಥಿಕ ಸೋರಿಕೆ ತಪ್ಪಿಸಲು ಸರ್ಕಾರ ಗೃಹಜ್ಯೋತಿ ಪರಿಷ್ಕರಣೆ ಶುರುಮಾಡಿದೆ. ಮನೆಮನೆಗೆ ಮೀಟರ್ ರೀಡರ್ಗಳು ಭೇಟಿ ನೀಡಿ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಜಾತಿ ಪ್ರಮಾಣ ಪತ್ರದ ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಜಾತಿ ಮಾಹಿತಿ ನೀಡುವ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇದೀಗ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ ತಿಳಿಸಿದೆ.
- Lakshmi Narasimha Swamy L
- Updated on: Jul 3, 2026
- 4:33 pm
ಬೆಂಗಳೂರಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ವಿರೋಧ
ಬೆಂಗಳೂರಿನಲ್ಲಿ ನಾಳೆಯಿಂದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದ್ದು, ಫುಟ್ಪಾತ್ನಲ್ಲಿರುವ ಮಳಿಗೆಗಳನ್ನು ನೀವಾಗಿಯೇ ಸ್ವಯಂ ಪ್ರೇರಿತರಾಗಿ ತೆರವು ಮಾಡಿ. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಸಚಿವ ಕೃಷ್ಣಭೈರೇಗೌಡ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆದರೆ ಪರ್ಯಾಯ ಜಾಗ ನೀಡದೆ ಒಕ್ಕಲೆಬ್ಬಿಸುವ ಈ ನಿರ್ಧಾರಕ್ಕೆ, ಬೀದಿ ಬದಿ ವ್ಯಾಪಾರಿಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.
- Lakshmi Narasimha Swamy L
- Updated on: Jun 30, 2026
- 6:27 pm
ಒಂದು ಗಿಡಕ್ಕೆ 3,300 ರೂ., ಗುಂಡಿ ತೋಡಲು 300 ರೂ.!: ನೀವು ಹಣ ದುರ್ಬಳಕೆ ಮಾಡ್ತಿದ್ದೀರಾ? ಬಿಬಿಎಂಪಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಭೈರೇಗೌಡ
ಒಂದು ಗಿಡ ನೆಡಲು 3,300 ವೆಚ್ಚ ಎಂದು ಬಿಬಿಎಂಪಿ ಅಂದಾಜು ಮಾಡಿರುವುದನ್ನು ಸಚಿವ ಕೃಷ್ಣಭೈರೇಗೌಡರು ಪ್ರಶ್ನಿಸಿದ್ದಾರೆ. ಗುಂಡಿ ತೋಡಲು 300 ಮೀಸಲಿಟ್ಟರೂ, ಕ್ಷೇತ್ರದಲ್ಲಿ ಒಂದೂ ಗಿಡಕ್ಕೆ ಗುಂಡಿ ತೋಡಿಲ್ಲ ಎಂದು ಆರೋಪಿಸಿ, ಈ ಹಣವನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ನೇರವಾಗಿ ಚಾಲೆಂಜ್ ಮಾಡಿದ್ದಾರೆ. ಮರಗಣತಿ ಹಾಗೂ ಗಿಡ ನೆಡುವಿಕೆಯ ನಡುವಿನ ಅಸಮರ್ಪಕ ಲೆಕ್ಕಾಚಾರಗಳ ಬಗ್ಗೆಯೂ ಸಚಿವರು ಸ್ಪಷ್ಟನೆ ಕೇಳಿದ್ದಾರೆ.
- Lakshmi Narasimha Swamy L
- Updated on: Jun 30, 2026
- 3:52 pm
ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
GBA Meeting: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಹಾಗೂ ಗಿಡ ನೆಡುವ ಯೋಜನೆ ಸಂಬಂಧ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಕಿ-ಅಂಶಗಳಿಲ್ಲದೆ ಬಂದ ಅಧಿಕಾರಿಗಳ ವಿರುದ್ಧ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ? ಎಂದು ಆಫೀಸರ್ಗಳ ಅಸಂಬದ್ಧ ಉತ್ತರಕ್ಕೆ ಕಿಡಿ ಕಾರಿರುವ ಪ್ರಸಂಗ ನಡೆದಿದೆ.
- Lakshmi Narasimha Swamy L
- Updated on: Jun 30, 2026
- 2:33 pm
ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು!
ಬೆಂಗಳೂರಿನ ಹೆಬ್ಬಾಳದ ಸರ್ಕಾರಿ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಅಪರಿಚಿತರ ಹಾವಳಿ ಹಾಗೂ ಅನೈತಿಕ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ವಾಯು ವಿಹಾರಕ್ಕೆ ಬರುವ ಸ್ಥಳೀಯರು 100 ರೂ. ಶುಲ್ಕ ಪಾವತಿಸಿ ಕಡ್ಡಾಯವಾಗಿ ಪಾಸ್ ಪಡೆಯಬೇಕು. ನಿಗದಿತ ಸಮಯದಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
- Lakshmi Narasimha Swamy L
- Updated on: Jun 30, 2026
- 8:24 am
ಜಿಬಿಎ ವ್ಯಾಪ್ತಿಯಲ್ಲಿ ಶೇ 76.32ರಷ್ಟು ಮ್ಯಾಪಿಂಗ್: ಬೆಂಗಳೂರಿನಲ್ಲಿ SIR ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಆಯುಕ್ತರು
ರಾಜ್ಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 1.03 ಕೋಟಿ ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದ್ದು, 76.32% ಪೂರ್ಣಗೊಂಡಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.
- Lakshmi Narasimha Swamy L
- Updated on: Jun 29, 2026
- 3:22 pm
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ನಡೆದ ಬೃಹತ್ ಕಾರ್ಯಕ್ರಮ ಹೇಗಾಯ್ತು? ಏನೆಲ್ಲಾ ವಿಶೇಷ?
ಬೆಂಗಳೂರಿನ ಪಾಲಿಗೆ ಇಂದು ಮರೆಯಲಾಗದ ದಿನ ಅಂತಲೇ ಹೇಳಬಹುದು. ನಾಡಪ್ರಭು ಕೆಂಪೇಗೌಡರ ಜಯಂತಿ ಒಂದೆಡೆಯಾದರೆ, ಈ ದಿನ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳೂ ವಿಶೇಷ ಹಾಗೂ ಅವಿಸ್ಮರಣೀಯ ಆಗಿತ್ತು. ಮತ್ತೊಂದು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದ ಬೃಹತ್ ಕಾರ್ಯಕ್ರಮ ಇದಾಗಿದೆ ಎನ್ನಬಹುದು. ಹಾಗಾದ್ರೆ, ಕಾರ್ಯಕ್ರಮ ಹೇಗಿತ್ತು? ಏನೆಲ್ಲಾ ವಿಶೇಷ ಎನ್ನುವ ವಿವರ ಇಲ್ಲಿದೆ.
- Lakshmi Narasimha Swamy L
- Updated on: Jun 27, 2026
- 10:11 pm
ಆ್ಯಪ್ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ?
Waste Collection Vehicle Tracking: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದ್ದು, ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ‘ಮಾತ್ರ’ (MATRA) ಆ್ಯಪ್ ಮೂಲಕ ಕಸ ಸಂಗ್ರಹಣೆ ವಾಹನಗಳ ಲೈವ್ ಟ್ರ್ಯಾಕಿಂಗ್ ಆರಂಭಿಸಿದೆ. ಕಸದ ವಾಹನಗಳ ಚಾಲಕರು ನಿಗದಿತ ಮಾರ್ಗ ತಪ್ಪಿಸಿದರೆ ಈ ಆ್ಯಪ್ ಮೂಲಕ ಅಧಿಕಾರಿಗಳು ತಿಳಿದುಕೊಳ್ಳಬಹುದಾಗಿದ್ದು, ಇನ್ನುಮುಂದೆ ಮನೆ ಮನೆಗಳಿಂದ ಕಸ ಸಂಗ್ರಹ ಸರಿಯಾಗಿ ನಡೆಯಬಹುದೆಂಬ ಹೊಸ ಆಶಾಭಾವನೆ ಮೂಡಿದೆ.
- Lakshmi Narasimha Swamy L
- Updated on: Jun 26, 2026
- 7:20 pm
25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ವೈಟ್ ಟ್ಯಾಪಿಂಗ್ ರಸ್ತೆಯಲ್ಲೇ 350 ಕೋಟಿ ರೂ.ನಲ್ಲಿ ಫ್ಲೈಓವರ್
ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಜಿಬಿಎ ₹350 ಕೋಟಿ ವೆಚ್ಚದಲ್ಲಿ 2.5 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಮುಂದಾಗಿದೆ. ಆದರೆ, ಇದೇ ರಸ್ತೆಯನ್ನು ಇತ್ತೀಚೆಗೆ 25 ಕೋಟಿ ರೂ. ನಲ್ಲಿ ವೈಟ್ ಟ್ಯಾಪಿಂಗ್ ಮಾಡಲಾಗಿತ್ತು. ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಈ ರಸ್ತೆಯನ್ನು ಅಗೆಯಬೇಕಾಗುವುದರಿಂದ ಸಾರ್ವಜನಿಕರ ಹಣ ಪೋಲಾಗುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜಿಬಿಎ ಸಮಜಾಯಿಷಿ ನೀಡಿದರೂ, ದೂರದೃಷ್ಟಿ ಕೊರತೆ ಎದ್ದು ಕಾಣುತ್ತಿದೆ.
- Lakshmi Narasimha Swamy L
- Updated on: Jun 25, 2026
- 12:49 pm