ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಬೆಂಗಳೂರು ವರದಿಗಾರ - TV9 Kannada
lakshminarasimhaswamy.lakshmipathi@tv9.comಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..
ಬೆಂಗಳೂರಿನ ಮೀನು ಪ್ರಿಯರಿಗೆ ಆಘಾತ: ಪೂರೈಕೆಯಲ್ಲಿ ಶೇ.70ರಷ್ಟು ಇಳಿಕೆ, ಬೆಲೆ ಏರಿಕೆ!
Seafood Crunch: ಮೀನು ಸಂತಾನೋತ್ಪತ್ತಿ ಸಮಯದ ಕಾರಣ ಕರಾವಳಿಯಲ್ಲಿ ಸಮುದ್ರ ಮೀನುಗಾರಿಕೆ ನಿಷೇಧಿಸಿರುವುದರಿಂದ ಬೆಂಗಳೂರಿಗೆ ಮೀನು ಪೂರೈಕೆ ಶೇ.70 ರಷ್ಟು ಕುಸಿದಿದ್ದು, ಮಾರುಕಟ್ಟೆಯಲ್ಲಿ ಬೆಲೆ ಶೇ.50ರಷ್ಟು ದುಬಾರಿಯಾಗಿದೆ. ಮೀನು ಮಾರಾಟಗಾರರು ಮಾತ್ರವಲ್ಲದೆ, ಮೀನು ಪ್ರಿಯರು ಹಾಗೂ ಹೋಟಲ್ ಮತ್ತು ರೆಸ್ಟೋರೆಂಟ್ಗಳಿಗೂ ಇದರಿಂದ ಸಮಸ್ಯೆಯಾಗಿದೆ.
- Lakshmi Narasimha Swamy L
- Updated on: Jul 29, 2026
- 7:13 pm
ಚಿಕನ್, ಮಟನ್ ತ್ಯಾಜ್ಯ ವಿಲೇವಾರಿಗೆ ಹೊಸ ರೂಲ್ಸ್, ಶುಲ್ಕವೂ ನಿಗದಿ
ಬೆಂಗಳೂರಿನಲ್ಲಿ ಚಿಕನ್ ಮತ್ತು ಮಟನ್ ಅಂಗಡಿಗಳಿಗೆ ಹೊಸ ನಿಯಮವೊಂದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸದ ತ್ಯಾಜ್ಯ ವಿಲೇವಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆ (BSWML) ಪ್ರತಿ ಕಿಲೋ ತ್ಯಾಜ್ಯಕ್ಕೆ 5 ರೂಪಾಯಿ ಶುಲ್ಕ ವಿಧಿಸಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಾರಿಗಳು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
- Lakshmi Narasimha Swamy L
- Updated on: Jul 23, 2026
- 10:01 pm
ಸಾರ್ವಜನಿಕರಿಗೆ ಮತ್ತೊಂದು ದರ ಏರಿಕೆಯ ಬಿಸಿ: KMF ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ
KMF Nandini prices hiked: ಜಿಎಸ್ಟಿ ಇಳಿಕೆಯ ಹಿನ್ನಲೆಯಲ್ಲಿ ಕೆಲ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್) ತುಪ್ಪ, ಬೆಣ್ಣೆ ದರವನ್ನು ಇಳಿಕೆ ಮಾಡಿತ್ತು. ಆದ್ರೆ, ಇದೀಗ ಮತ್ತೆ ದಿಢೀರನೇ ಏರಿಕೆ ಮಾಡಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಹಾಗಾದ್ರೆ, ತುಪ್ಪ, ಬೆಣ್ಣೆ ಕೆಜಿಗೆ ಎಷ್ಟು ಏರಿಕೆಯಾಗಿದೆ? ಹೊಸ ದರ ಯಾವಾಗಿನಿಂದ ಜಾರಿಗೆ ಎನ್ನುವ ವಿವರ ಇಲ್ಲಿದೆ.
- Lakshmi Narasimha Swamy L
- Updated on: Jul 23, 2026
- 7:44 pm
ಬೆಂಗಳೂರು ಇತಿಹಾಸದಲ್ಲೇ ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ: ಏಕೆ, ಏನಿದು?
Bengaluru building demolition: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಕಾರ್ಯಕ್ಕೆ ಕೈ ಹಾಕಿದೆ. 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಿರುವ 18 ಮಹಡಿಗಳಿರುವ ಬೆಂಗಳೂರಿನಲ್ಲಿ ಅತೀ ಎತ್ತರದ ಅಪಾರ್ಟ್ಮೆಂಟ್ ತೆರವಿಗೆ ಮುಂದಾಗಿದೆ. ಅಷ್ಟಕ್ಕೂ ಅತ್ಯಂತ ಎತ್ತರದ ಈ ಅಪಾರ್ಟ್ಮೆಂಟ್ ತೆರವಿಗೆ ಕಾರಣ ಏನು ಎಂಬ ಮಾಹಿತಿ ಇಲ್ಲಿದೆ.
- Lakshmi Narasimha Swamy L
- Updated on: Jul 23, 2026
- 10:17 pm
KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್ ಬಿಕರಿ?
KPSC Recruitment Scam: ಗಂಭೀರ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಅಮಾನತಿನ ಬೆನ್ನಲ್ಲೇ ಕೆಪಿಎಸ್ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೀವ್ರ ಅಕ್ರಮ ನಡೆದಿದೆ ಎಂದು ಆರೋಪಿಸಿ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಒಂದು ಹುದ್ದೆ 80 ಲಕ್ಷ ರೂ.ಗೆ ಬಿಕರಿಯಾಗಿದೆ ಎಂದು ಆರೋಪಿಸಲಾಗಿದೆ.
- Lakshmi Narasimha Swamy L
- Updated on: Jul 23, 2026
- 12:43 pm
ಅಲ್ಪ ಮಳೆಗೇ ಪತರುಗುಟ್ಟಿದ ಬೆಂಗಳೂರು: ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು!, 3 ಕಿಲೋ ಮೀಟರ್ ಟ್ರಾಫಿಕ್ ಜಾಮ್
Bengaluru Rain: ಬೆಂಗಳೂರಿನಲ್ಲಿ ಸುರಿದ ಸಣ್ಣ ಮಳೆಗೆ ಹೆಣ್ಣೂರು ಬಾಗಲೂರು ಮುಖ್ಯರಸ್ತೆ ಜಲಾವೃತಗೊಂಡಿದ್ದು, ಸುಮಾರು 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಇತ್ತ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Lakshmi Narasimha Swamy L
- Updated on: Jul 22, 2026
- 7:03 pm
ಜಿಬಿಎ ಇಂಜಿನಿಯರ್ಗಳ ಮೇಲೆ ಹೆಲ್ಮೆಟ್, ಪೆಪ್ಪರ್ ಸ್ಪ್ರೇ ದಾಳಿ: ಹಲ್ಲೆಗೆ ಹೆದರದೆ ಮತ್ತೆ ಅಖಾಡಕ್ಕಿಳಿದ ಜಿಬಿಎ ಪಡೆ
ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಇಂಜಿನಿಯರ್ಗಳ ಮೇಲೆ ಭೀಕರ ಹಲ್ಲೆ ನಡೆದಿದೆ. ಅಧಿಕಾರಿಗಳಿಗೆ ಹೆಲ್ಮೆಟ್ನಿಂದ ಹೊಡೆದು, ಪೆಪ್ಪರ್ ಸ್ಪ್ರೇ ಎರಚಲಾಗಿದೆ. ಈ ಘಟನೆ ತೀವ್ರ ರಾಜಕೀಯ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸ್ ಬಂದೋಬಸ್ತ್ನಲ್ಲಿ ಮತ್ತೆ ಕಾರ್ಯಾಚರಣೆ ನಡೆಸಿ, ಎಲ್ಲಾ ಅಕ್ರಮ ಒತ್ತುವರಿಗಳನ್ನು ಯಶಸ್ವಿಯಾಗಿ ತೆರವುಗೊಳಿಸಲಾಯಿತು.
- Lakshmi Narasimha Swamy L
- Updated on: Jul 21, 2026
- 3:43 pm
ಶಿವಾಜಿನಗರದಲ್ಲಿ ಫುಟ್ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
Footpath Encroachment Drive: ಶಿವಾಜಿನಗರದಲ್ಲಿ ನಡೆದ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ವ್ಯಾಪಾರದ ವಸ್ತುಗಳು ಹಾಳಾಗಿವೆ. ದಶಕಗಳಿಂದ ವ್ಯಾಪಾರ ನಡೆಸುತ್ತಿದ್ದವರಿಗೆ ನ್ಯಾಯ ಸಿಗದೇ, ಜೀವನೋಪಾಯಕ್ಕೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
- Lakshmi Narasimha Swamy L
- Updated on: Jul 21, 2026
- 3:35 pm
ಶಿವಾಜಿನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ
ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪಾಲಿಕೆ ಸಿಬ್ಬಂದಿ ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
- Lakshmi Narasimha Swamy L
- Updated on: Jul 21, 2026
- 2:02 pm
ಫುಟ್ಪಾತ್, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್ ಕೊಡಲು ಮುಂದಾದ ಜಿಬಿಎ
Bengaluru News: ಫುಟ್ಪಾತ್ ಮತ್ತು ಬಿಡಾಡಿ ವಾಹನಗಳ ತೆರವಿನ ಬೆನ್ನಲ್ಲೇ, ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬಾಕಿ ಉಳಿದಿರುವ 260 ಕಿ.ಮೀ. ರಾಜಕಾಲುವೆ ಅಭಿವೃದ್ಧಿಪಡಿಸಲು ಹಾಗೂ ಒತ್ತುವರಿ ತೆರವುಗೊಳಿಸಲು ನಿರ್ಧರಿಸಿರೋದಾಗಿ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಹೀಗಾಗಿ ರಾಜಕಾಲುವೆ ಒತ್ತುವರಿದಾರರಿಗೆ ಜಿಬಿಎಯಿಂದ ಬಿಗ್ ಶಾಕ್ ಸಗೋದು ಕನ್ಫರ್ಮ್ ಆಗಿದೆ.
- Lakshmi Narasimha Swamy L
- Updated on: Jul 21, 2026
- 12:45 pm
ಕಲುಷಿತ ಕಾವೇರಿ ನೀರಿನ ಪೂರೈಕೆ: ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
Bengaluru: ಬೆಂಗಳೂರಿನ ಕತ್ರಿಗುಪ್ಪೆ ವಾರ್ಡ್ನಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕಾವೇರಿ ನೀರು ಕಲುಷಿತಗೊಂಡು ಪೂರೈಕೆಯಾಗುತ್ತಿದೆ. ನೂರಕ್ಕೂ ಹೆಚ್ಚು ಮನೆಗಳು ದುರ್ನಾತ ಬೀರುವ ಕಪ್ಪು ಬಣ್ಣದ ನೀರನ್ನು ಪಡೆಯುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕದಲ್ಲಿದ್ದಾರೆ. ಜಲಮಂಡಳಿಗೆ ದೂರು ನೀಡಿದರೂ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ದೊರೆತಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Lakshmi Narasimha Swamy L
- Updated on: Jul 21, 2026
- 11:41 am
ದೇಸಿ ಶ್ವಾನ ದತ್ತು ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಅನಾಥ ನಾಯಿಗಳನ್ನು ಎತ್ತಿ ಮುದ್ದಾಡಿದ ಸಾರ್ವಜನಿಕರು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪೂರ್ವ ನಗರ ಪಾಲಿಕೆ ವತಿಯಿಂದ ವೈಟ್ಫೀಲ್ಡ್ನ ನೆಕ್ಸಸ್ ಶಾಂತಿನಿಕೇತನ ಮಾಲ್ನಲ್ಲಿ "ಅಡಾಪ್ಟ್ ಮೀ ಸೆಕೆಂಡ್ ಇನ್ನಿಂಗ್ಸ್" ದೇಸಿ ಶ್ವಾನ ದತ್ತು ಅಭಿಯಾನ ಆಯೋಜಿಸಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರು ಕೂಡ ದೇಸಿ ಶ್ವಾನಗಳನ್ನು ತಮ್ಮ ಕುಟುಂಬದ ಸದಸ್ಯರನ್ನಾಗಿ ದತ್ತು ಪಡೆಯುವ ಅವಕಾಶವನ್ನು ಬಳಸಿಕೊಂಡರು.
- Lakshmi Narasimha Swamy L
- Updated on: Jul 19, 2026
- 2:46 pm