ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಬೆಂಗಳೂರು ವರದಿಗಾರ - TV9 Kannada
lakshminarasimhaswamy.lakshmipathi@tv9.comಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..
ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಕಾಮಗಾರಿಗಾಗಿ ಜಿಬಿಎ (GBA) ಅರಣ್ಯ ವಿಭಾಗಕ್ಕೆ ಬಿಎಂಆರ್ಸಿಎಲ್ ಪ್ರಸ್ತಾವನೆ ಸಲ್ಲಿಸಿದ್ದು, ನಗರದ ವಿವಿಧೆಡೆ ಬರೋಬ್ಬರಿ 3,627 ಮರಗಳನ್ನು ಕಡಿಯಲು ಸಿದ್ಧತೆ ನಡೆದಿದೆ. ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ.
- Lakshmi Narasimha Swamy L
- Updated on: Jun 19, 2026
- 3:39 pm