ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಬೆಂಗಳೂರು ವರದಿಗಾರ - TV9 Kannada
lakshminarasimhaswamy.lakshmipathi@tv9.comಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..
ಲಾಲ್ಬಾಗ್ ಫ್ಲವರ್ ಶೋಗೆ ಮನಸೋತ ಸಿಟಿ ಮಂದಿ: 9.5 ಲಕ್ಷ ಜನ ಭೇಟಿ; ನಾಳೆ ಕೊನೆ ದಿನ
Lalbagh Flower Show: ಬೆಂಗಳೂರಿನ ಲಾಲ್ ಬಾಗ್ನಲ್ಲಿ ನಡೆಯುತ್ತಿರುವ 220ನೇ ಫಲ ಪುಷ್ಪ ಪ್ರದರ್ಶನವು ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದೆ. 11 ದಿನದಲ್ಲಿ 9.5 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದು, 3 ಕೋಟಿ ರೂ ಆದಾಯ ಗಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದು, ಗಂಗಾ ಸಾಮ್ರಾಜ್ಯದ ಇತಿಹಾಸವನ್ನು ಹೂವಿನ ಚಿತ್ತಾರಗಳಲ್ಲಿ ಕಣ್ತುಂಬಿಕೊಂಡರು.
- Lakshmi Narasimha Swamy L
- Updated on: Aug 16, 2026
- 8:54 pm
ಬೆಂಗಳೂರಿನಲ್ಲಿ ಟೊಮ್ಯಾಟೋ ಎರಚಿಕೊಂಡು ತುಳಿದು ಕೆಚಪ್ ಮಾಡುವ ಕಾರ್ಯಕ್ರಮ: ಬಿಜೆಪಿ ವಿರೋಧ
Bengaluru Tomato Festival: ಸೆಪ್ಟೆಂಬರ್ 6ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ಟೊಮ್ಯಾಟೋ ಫೆಸ್ಟಿವಲ್’ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ಆಹಾರ ಪೋಲು ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಖಂಡಿಸಿವೆ. ಇಂತಹ ಕಾರ್ಯಕ್ರಮಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂದು ಆಗ್ರಹಿಸಿವೆ.
- Lakshmi Narasimha Swamy L
- Updated on: Aug 14, 2026
- 6:06 pm
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಿನ ಹಲವೆಡೆ ಧಾರಾಕಾರ ಮಾನ್ಸೂನ್ ಮಳೆಯಿಂದಾಗಿ ರಸ್ತೆಗಳು ಕೆರೆಗಳಂತಾಗಿವೆ. ಮೆಜೆಸ್ಟಿಕ್, ರಾಜಾಜಿನಗರ, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ನೀರು ನಿಂತು ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಭಾರೀ ಮಳೆಯು ನಗರದ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಸಾರ್ವಜನಿಕರು ಮಳೆ ನೀರು ನಿಂತ ರಸ್ತೆಗಳಲ್ಲಿ ಪ್ರಯಾಣಿಸಲು ಹರಸಾಹಸ ಪಡುವಂತಾಯಿತು.
- Lakshmi Narasimha Swamy L
- Updated on: Aug 10, 2026
- 5:12 pm
ಜ್ಞಾನಭಾರತಿ ವಿವಿ ಆವರಣದಲ್ಲಿ ಹೆಚ್ಚಿದ ಅಪಘಾತ; ಗಾಂಧಿಭವನ ರಸ್ತೆ ಶೀಘ್ರ ಬಂದ್?
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿವಿ ಆಡಳಿತ ಮುಂದಾಗಿದೆ. ವಾಹನಗಳ ವೇಗ 20 ಕಿ.ಮೀ.ಗೆ ಮಿತಿ, ಟ್ರಾಫಿಕ್ ಪೊಲೀಸರ ನಿಯೋಜನೆ ಹೆಚ್ಚಳ ಹಾಗೂ ನಾಗರಬಾವಿಗೆ ಸಂಪರ್ಕಿಸುವ ಗಾಂಧಿಭವನ ರಸ್ತೆ ಬಂದ್ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ.
- Lakshmi Narasimha Swamy L
- Updated on: Aug 8, 2026
- 2:57 pm
ವಾಹನ ಸವಾರರೇ ಗಮನಿಸಿ: ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆ ಕಡೆ ಹೋಗುವ ಲೂಪ್ ರಸ್ತೆ ಬಂದ್
ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಫ್ಲೈ ಓವರ್ನಿಂದ ಚಾಮರಾಜಪೇಟೆಗೆ ತೆರಳುವ ಲೂಪ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿಗಾಗಿ ಮೂರು ತಿಂಗಳ ಕಾಲ ಬಂದ್ ಮಾಡಲಾಗಿದೆ. ಈ ಅವಧಿಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಿದ್ದು, ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
- Lakshmi Narasimha Swamy L
- Updated on: Aug 7, 2026
- 1:31 pm
ಕೃಷಿ ಅಧಿಕಾರಿಗಳ ನೇಮಕಾತಿ ಅಕ್ರಮ ಆರೋಪ: GKVK ವಿವಿಗೆ ಬೀಗ ಜಡಿದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ!
ಕೃಷಿ ಇಲಾಖೆಯ ಅಧಿಕಾರಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಖಂಡಿಸಿ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ಯ ಪದವೀಧರರಿಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಡೀನ್ ಕಚೇರಿಗೆ ಬೀಗ ಜಡಿಯಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
- Lakshmi Narasimha Swamy L
- Updated on: Aug 4, 2026
- 7:38 am
SIR ಎಫೆಕ್ಟ್: ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ ಕಡಿತ; ಪಾಲಿಕೆಗಳ ಸಂಖ್ಯೆ ಇಳಿಕೆಗೆ ಹೆಚ್ಚಿದ ಒತ್ತಡ
Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ಬಂದು ವರ್ಷವೇ ಕಳೆದಿದೆ. ಇದರ ಅಡಿಯಲ್ಲಿ ನಗರದ ಆಡಳಿತಕ್ಕಾಗಿ 5 ಪ್ರತ್ಯೇಕ ನಗರ ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯು ಈ ಪಾಲಿಕೆಗಳ ಅಸ್ತಿತ್ವಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
- Lakshmi Narasimha Swamy L
- Updated on: Aug 2, 2026
- 10:30 pm
ಎಲ್ಲಾ ಹೋಟೆಲ್ಗಳಲ್ಲಿ ಕುಡಿಯಲು ಬಿಸಿ ನೀರು ಕಡ್ಡಾಯ: ಏನಿದರ ಹಿಂದಿನ ಉದ್ದೇಶ?
ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಯುಟಿ ಖಾದರ್ ಮತ್ತೊಂದು ಮಹತ್ವದ ತಿರ್ಮಾನ ಕೈಗೊಂಡಿದ್ದಾರೆ. ಕಲುಷಿತ ನೀರಿನ ಸೇವನೆಯಿಂದಾಗಿ ನಾನಾ ರೀತಿಯ ಖಾಯಿಲೆಗಳಿಗೆ ಜನಸಾಮಾನ್ಯು ತುತ್ತಾಗುತ್ತಿದ್ದಾರೆ. ಹೀಗಾಗಿ ಇದಕ್ಕೆಲ್ಲಾ ಕಡಿವಾಣ ಹಾಕಲು ನಿರ್ಧರಿಸಿರುವ ಆರೋಗ್ಯ ಎಲ್ಲಾ ರೀತಿಯ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ ಕೊಡುವುದು ಕಡ್ಡಾಯ ಮಾಡುತ್ತಿದೆ.
- Lakshmi Narasimha Swamy L
- Updated on: Aug 2, 2026
- 10:19 pm
ಬೆಂಗಳೂರಿನ ಖಾಲಿ ಸೈಟ್ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು, ಇಲ್ಲಾಂದ್ರೆ ಡಬ್ಬಲ್ ಆಸ್ತಿ ತೆರಿಗೆ: ಸಿಎಂ ಖಡಕ್ ಸೂಚನೆ
ಬೆಂಗಳೂರಿನಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದನ್ನು ತಡೆಯಲು ಮಹತ್ವದ ಆದೇಶ ಹೊರಡಿಸಿದ್ದಾರೆ. ಐದು ವರ್ಷದೊಳಗೆ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸದಿದ್ದರೆ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನವನ್ನು ವಾಪಸ್ ಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದು ತ್ಯಾಜ್ಯ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ.
- Lakshmi Narasimha Swamy L
- Updated on: Aug 1, 2026
- 1:58 pm
ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ: ಉದ್ದೇಶವೇನು?
ಇತ್ತೀಚೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಂಕ್ ಫುಡ್ನತ್ತ ವಾಲುತ್ತಿದ್ದು, ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ. ಹೀಗಾಗಿ ಮಕ್ಕಳ ಆರೋಗ್ಯದ ಮೇಲೆ ಜಂಕ್ ಫುಡ್ ಬೀರುವ ದುಷ್ಪರಿಣಾಮ ಮನಗಂಡ ಆಹಾರ ಸುರಕ್ಷತೆ ಇಲಾಖೆ ಮಹತ್ವದ ಘೋಷಣೆಯನ್ನ ಮಾಡಿದೆ. ಇನ್ನು ರೂಲ್ಸ್ ಉಲ್ಲಂಘನೆ ಮಾಡಿದ್ರೆ ಏನು ಶಿಕ್ಷೆ? ಈ ಬಗ್ಗೆ ಆಹಾರ ಸಚಿವರು ವಿವರಿಸಿದ್ದಾರೆ.
- Lakshmi Narasimha Swamy L
- Updated on: Jul 31, 2026
- 10:46 pm
ಬೆಂಗಳೂರಿನ ಮೀನು ಪ್ರಿಯರಿಗೆ ಆಘಾತ: ಪೂರೈಕೆಯಲ್ಲಿ ಶೇ.70ರಷ್ಟು ಇಳಿಕೆ, ಬೆಲೆ ಏರಿಕೆ!
Seafood Crunch: ಮೀನು ಸಂತಾನೋತ್ಪತ್ತಿ ಸಮಯದ ಕಾರಣ ಕರಾವಳಿಯಲ್ಲಿ ಸಮುದ್ರ ಮೀನುಗಾರಿಕೆ ನಿಷೇಧಿಸಿರುವುದರಿಂದ ಬೆಂಗಳೂರಿಗೆ ಮೀನು ಪೂರೈಕೆ ಶೇ.70 ರಷ್ಟು ಕುಸಿದಿದ್ದು, ಮಾರುಕಟ್ಟೆಯಲ್ಲಿ ಬೆಲೆ ಶೇ.50ರಷ್ಟು ದುಬಾರಿಯಾಗಿದೆ. ಮೀನು ಮಾರಾಟಗಾರರು ಮಾತ್ರವಲ್ಲದೆ, ಮೀನು ಪ್ರಿಯರು ಹಾಗೂ ಹೋಟಲ್ ಮತ್ತು ರೆಸ್ಟೋರೆಂಟ್ಗಳಿಗೂ ಇದರಿಂದ ಸಮಸ್ಯೆಯಾಗಿದೆ.
- Lakshmi Narasimha Swamy L
- Updated on: Jul 29, 2026
- 7:13 pm
ಚಿಕನ್, ಮಟನ್ ತ್ಯಾಜ್ಯ ವಿಲೇವಾರಿಗೆ ಹೊಸ ರೂಲ್ಸ್, ಶುಲ್ಕವೂ ನಿಗದಿ
ಬೆಂಗಳೂರಿನಲ್ಲಿ ಚಿಕನ್ ಮತ್ತು ಮಟನ್ ಅಂಗಡಿಗಳಿಗೆ ಹೊಸ ನಿಯಮವೊಂದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸದ ತ್ಯಾಜ್ಯ ವಿಲೇವಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆ (BSWML) ಪ್ರತಿ ಕಿಲೋ ತ್ಯಾಜ್ಯಕ್ಕೆ 5 ರೂಪಾಯಿ ಶುಲ್ಕ ವಿಧಿಸಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಾರಿಗಳು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
- Lakshmi Narasimha Swamy L
- Updated on: Jul 23, 2026
- 10:01 pm