ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?
ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಆಂಟಿ ಆಕ್ಸಿಡೆಂಟ್, ಫೈಟೊಕೆಎಮಿಕಲ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಇತರೆ ಪೋಷಕಾಂಶಗಳು ಸಮೃದ್ಧವಾಗಿದ್ದು, ಪ್ರತಿದಿನ ಒಂದು ನೆಲ್ಲಿಕಾಯಿ ಸೇವನೆ ಮಾಡುವ ಮೂಲಕ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದ್ರೆ ನೆಲ್ಲಿಕಾಯಿಯ ಹಿತಮಿತ ಸೇವನೆಯಿಂದ ಯಾವೆಲ್ಲಾ ಪ್ರಯೋಜನಗಳು ದೇಹಕ್ಕೆ ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jan 11, 2026
- 5:03 pm
Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ
ಹಬ್ಬಗಳು ಸಮೀಪಿಸುತ್ತಿದ್ದಂತೆ, ಹೆಂಗಳೆಯರಿಗೆ ಮನೆಯಲ್ಲಿ ಹಬ್ಬದ ತಯಾರಿಯ ಜೊತೆಜೊತೆಗೆ ಯಾವ ಉಡುಗೆಯನ್ನು ತೊಡೋದು, ಹಬ್ಬದ ದಿನ ಸುಂದರವಾಗಿ ಕಾಣಲು ಏನು ಮಾಡಬೇಕು ಅನ್ನೋ ಟೆನ್ಷನ್ ಕೂಡ ಇದ್ದೇ ಇರುತ್ತದೆ. ನಿಮಗೂ ಸಂಕ್ರಾಂತಿ, ಲೋಹ್ರಿ ಹಬ್ಬದಂದು ಸುಂದರವಾಗಿ ಕಾಣಿಸಬೇಕೆಂಬ ಬಯಕೆ ಇದ್ಯಾ? ಹಾಗಿದ್ರೆ ಹಬ್ಬದ ದಿನ ಮಿಂಚಲು ಈ ಟ್ರೆಡಿಷನಲ್ ಉಡುಗೆಗಳನ್ನು ಆಯ್ಕೆ ಮಾಡಿ.
- Malashree anchan
- Updated on: Jan 11, 2026
- 4:12 pm
National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ
ಮಾನವ ಕಳ್ಳಸಾಗಣೆ ಒಂದು ಕ್ರಿಮಿನಲ್ ಕೃತ್ಯವಾಗಿದ್ದು, ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದಾರೆ. ಅಂತಹವರ ರಕ್ಷಣೆಗಾಗಿ ಮತ್ತು ಸಮಾಜದಲ್ಲಿ ಮಾನವ ಕಳ್ಳಸಾಗಣಿಕೆಯನ್ನು ತಡೆಗಟ್ಟುವ ಸಲುವಾಗಿ ಅದರ ಬಗ್ಗೆ ಜಾಗೃತಿಯನ್ನು ಮೂಡಿಸಲು ಪ್ರತಿವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
- Malashree anchan
- Updated on: Jan 11, 2026
- 10:00 am
ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ
ಪ್ರತಿಯೊಬ್ಬರೂ ದೀರ್ಘಾಯುಷ್ಯವನ್ನು ಹೊಂದಲು, ಯಂಗ್ ಮತ್ತು ಆರೋಗ್ಯವಾಗಿರಲು ಬಯಸುತ್ತಾರೆ. ಆದರೆ ಇಂದಿನ ದಿನಗಳಲ್ಲಿ ಜಡ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿಯ ಕಾರಣ ಆದರ್ಶ ಜೀವಿತಾವಧಿ ಕಡಿಮೆಯಾಗುತ್ತಿದೆ. ಹೀಗಿರುವಾಗ ಪ್ರತಿನಿತ್ಯ ಈ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಬಹುದು. ಆ ಅಭ್ಯಾಸಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
- Malashree anchan
- Updated on: Jan 10, 2026
- 4:54 pm
ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ
ಚಳಿಗಾಲವೇ ಇರಲಿ ಅಥವಾ ಮಳೆಗಾಲವೇ ಇರಲಿ ಪ್ರತಿ ಋತುವಿನಲ್ಲೂ ಸೊಳ್ಳೆಗಳ ಕಾಟ ಇದ್ದೇ ಇರುತ್ತದೆ. ಇವುಗಳ ಕಾಟದಿಂದ ಮುಕ್ತಿ ಪಡೆಯಲು ಬಹುತೇಕರು ಸೊಳ್ಳೆ ಕಾಯಿಲೆ, ರಾಸಾಯನಿಕ ಯುಕ್ತ ಸ್ಪ್ರೇಗಳನ್ನೆಲ್ಲಾ ಬಳಕೆ ಮಾಡುತ್ತಾರೆ. ಆದ್ರೆ ಇದ್ಯಾವುದರ ಬಳಕೆ ಮಾಡದೆ ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಬೆರೆಸಿ ಮನೆಯನ್ನು ಸಂಪೂರ್ಣವಾಗಿ ಕ್ಲೀನ್ ಮಾಡುವ ಮೂಲಕ ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಈ ನೈಸರ್ಗಿಕ ಸೊಳ್ಳೆ ನಿವಾರಕರದ ಸಂಪೂರ್ಣ ಮಾಹಿತಿ ಇಲ್ಲಿದೆ.
- Malashree anchan
- Updated on: Jan 10, 2026
- 3:28 pm
World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?
ಸಪ್ಟೆಂಬರ್ 14 ರಂದು ರಾಷ್ಟ್ರೀಯ ಹಿಂದಿ ದಿವಸವನ್ನು ಆಚರಿಸುವಂತೆ ಜನವರಿ 10 ರಂದು ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಿಂದಿ ಪ್ರಪಂಚದಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದ್ದು, ಹಿಂದಿ ಭಾಷೆಯನ್ನು ವಿಶ್ವ ಬಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ಹಾಗೂ ಹಿಂದಿ ಭಾಷೆಯ ಜನಪ್ರಿಯತೆಯನ್ನು ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.
- Malashree anchan
- Updated on: Jan 10, 2026
- 10:17 am
Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ!
ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನ, ವೈಯಕ್ತಿಕ ಜೀವನ, ವೃತ್ತಿ ಸೇರಿದಂತೆ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಸಮಾಜದಲ್ಲಿ ಗೌರವಯುತವಾಗಿ ಬಾಳಲು ಹೇಗಿರಬೇಕು, ಯಾವ ತಪ್ಪುಗಳನ್ನು ಮಾಡಿದರೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂಬುದರ ಬಗ್ಗೆಯೂ ತಿಳಿಸಿದ್ದಾರೆ. ಹಾಗಿದ್ದರೆ ನಿಮ್ಮನ್ನು ನೋಡಿ ನಾಲ್ಕು ಜನ ನಗಬಾರದೆಂದರೆ ಈ ತಪ್ಪುಗಳನ್ನು ಮಾಡಬೇಡಿ.
- Malashree anchan
- Updated on: Jan 8, 2026
- 6:42 pm
ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್ ಸ್ಟೌವ್ ಕ್ಲೀನ್ ಮಾಡಬಹುದು
ದಿನನಿತ್ಯ ಅಡುಗೆ ಮಾಡುವ ಕಾರಣ ಎಷ್ಟೇ ಕ್ಲೀನ್ ಆಗಿ ಇಟ್ಟರೂ ಸಹ ಗ್ಯಾಸ್ ಒಲೆಯಲ್ಲಿ ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಇದನ್ನು ಕ್ಲೀನ್ ಮಾಡಲು ರಾಸಾಯನಿಕಯುಕ್ತ ಕ್ಲೀನರ್ಗಳನ್ನು ಉಪಯೋಗಿಸುವ ಬದಲು ಮನೆಯಲ್ಲಿಯೇ ಲಭ್ಯವಿರುವ ಈ ಕೆಲವೊಂದು ವಸ್ತುಗಳನ್ನು ಬಳಸಿ ಯಾವುದೇ ಹೆಣಗಾಟವಿಲ್ಲದೆ ಈಸಿಯಾಗಿ ಕ್ಲೀನ್ ಮಾಡಬಹುದು.
- Malashree anchan
- Updated on: Jan 8, 2026
- 4:54 pm
ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ
ಬಹುತೇಕ ಎಲ್ಲರ ಮನೆಗಳಲ್ಲೂ ಪ್ರತಿನಿತ್ಯ ಚಹಾ ಮಾಡುತ್ತಾರೆ. ಚಹಾ ಮಾಡಿದ ಬಳಿಕ ಉಳಿಯುವ ಚಹಾ ಪುಡಿಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ನೀವು ಸಹ ಬಳಸಿದ ಚಹಾ ವೇಸ್ಟ್ ಎಂದು ಎಸೆಯುತ್ತೀರಾ? ಆದ್ರೆ ಏನ್ ಗೊತ್ತಾ ಇದನ್ನು ಕೂಡ ಮರು ಬಳಕೆ ಮಾಡಬಹುದು. ಬಳಸಿದ ಚಹಾ ಪುಡಿಯನ್ನು ಯಾವ ರೀರಿ ಬಳಕೆ ಮಾಡಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.
- Malashree anchan
- Updated on: Jan 8, 2026
- 3:32 pm
Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್ ಮಾಡುತ್ತೆ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ವ್ಯಕ್ತಿಯ ವ್ಯಕ್ತಿತ್ವದ ರಹಸ್ಯಗಳ ಬಗ್ಗೆಯೂ ಸಾಕಷ್ಟು ತಿಳಿಸುತ್ತವೆ. ಹೌದು ಈ ಚಿತ್ರಗಳ ಮುಖಾಂತರ ನೀವು ಅಂತರ್ಮುಖಿಯೇ, ಬಹಿರ್ಮುಖಿಯೇ ಅಥವಾ ಕೋಪಿಷ್ಟರೆ, ಶಾಂತ ಸ್ವಭಾವದವರೇ ಎಂಬಿತ್ಯಾದಿ ಅಂಶವನ್ನು ತಿಳಿದುಕೊಳ್ಳಬಹುದು. ಇಲ್ಲೊಂದು ಅದೇ ರೀತಿಯ ಚಿತ್ರವೊಂದು ವೈರಲ್ ಆಗಿದ್ದು, ಆಪ್ಟಿಕಲ್ ಇಲ್ಯೂಷನ್ ಚಿತ್ರದ ಮುಖಾಂತರ ನೀವು ಭಾವನಾತ್ಮಕ ವ್ಯಕ್ತಿಯೇ ಎಂಬುದನ್ನು ಪರೀಕ್ಷಿಸಿ.
- Malashree anchan
- Updated on: Jan 7, 2026
- 5:01 pm
ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್ ನೋಡಿ
ಆಹಾರ ಮತ್ತು ನೀರು ಎರಡೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ, ಆದರೆ ಸರಿಯಾದ ಸಮಯದಲ್ಲಿ ಅವುಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ ಹೆಚ್ಚಿನವರು ಊಟವಾದ ತಕ್ಷಣವೇ ನೀರು ಕುಡಿಯುತ್ತಾರೆ. ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಖಂಡಿತವಾಗಿಯೂ ಒಳ್ಳೆಯದಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಹೀಗಿರುವಾಗ ಊಟ ಮಾಡಿದ ತಕ್ಷಣ ನೀರು ಕುಡಿಯುವುದರಿಂದ ಆಗುವ ತೊಂದರೆಗಳ್ಯಾವುವು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.
- Malashree anchan
- Updated on: Jan 7, 2026
- 3:16 pm
ಸೂರ್ಯನ ಬೆಳಕಿನಿಂದ ವಿಟಮಿನ್ ಡಿ ಪಡೆಯುವ ಸರಿಯಾದ ಮಾರ್ಗ ಯಾವುದು? 90% ಜನರಿಗೆ ಇದು ಗೊತ್ತೇ ಇಲ್ಲ
ನಮ್ಮ ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದು ಮೂಳೆಗಳನ್ನು ಬಲಪಡಿಸುತ್ತದೆ, ಆರೋಗ್ಯಕರ ಸ್ನಾಯುಗಳನ್ನು ಕಾಪಾಡಿಕೊಳ್ಳುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೂರ್ಯನ ಬೆಳಕು ವಿಟಮಿನ್ ಡಿ ಯ ಉತ್ತಮ ಮೂಲವಾಗಿದ್ದು, ಹೆಚ್ಚಿನವರು ಈ ವಿಟಮಿನ್ ಪಡೆಯಲು ಸೂರ್ಯನಡಿ ನಿಲ್ಲುತ್ತಾರೆ. ಆದರೆ ಬಹುತೇಕರಿಗೆ ಸೂರ್ಯನ ಬೆಳಕಿನಿಂದ ವಿಟಮಿನ್ ಡಿ ಪಡೆಯುವ ಸರಿಯಾದ ಮಾರ್ಗದ ಬಗ್ಗೆ ಗೊತ್ತೇ ಇಲ್ಲ.
- Malashree anchan
- Updated on: Jan 7, 2026
- 11:13 am