ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?
ಹಿಂದೂಗಳ ಪಾಲಿಗೆ ಯುಗಾದಿ ಹಬ್ಬವನ್ನು ಹೊಸ ವರ್ಷವೆಂದು ಪರಿಗಣಿಸಲಾಗುತ್ತದೆ. ಪ್ರತಿವರ್ಷ ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದ ದಿನ ಬೇವು ಮತ್ತು ಬೆಲ್ಲವನ್ನು ಸಮಾನ ಪ್ರಮಾಣದಲ್ಲಿ ಸವಿಯುವ ಸಂಪ್ರದಾಯವೂ ಇದೆ. ಇದು ಕೇವಲ ಸಂಪ್ರದಾಯವಷ್ಟೇ ಅಲ್ಲ, ಇದರ ಹಿಂದೆ ವೈಜ್ಞಾನಿಕ ಮಹತ್ವವೂ ಅಡಗಿದೆ. ಒಟ್ಟಾಗಿ ಬೇವು-ಬೆಲ್ಲ ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Mar 17, 2026
- 5:51 pm
Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?
ಕೆಲ ಪುರುಷರು ಮದುವೆಯಾಗಿ ಹೆಂಡತಿಯಿದ್ದರೂ ಪರಸ್ತ್ರೀಯರನ್ನು ಇಷ್ಟಪಡುತ್ತಾರೆ. ಇಂತಹ ವಿವಹೇತರ ಸಂಬಂಧಗಳ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಹೀಗೆ ಮದುವೆಯಾದ ಪುರುಷರು ಇತರೆ ಮಹಿಳೆಯನ್ನು ಇಷ್ಟಪಡುವುದರ ಹಿಂದೆಯೂ ಒಂದು ಕಾರಣವಿದೆ ಎಂದಿದ್ದಾರೆ ಚಾಣಕ್ಯ. ಹಾಗಿದ್ರೆ ಚಾಣಕ್ಯರ ಪ್ರಕಾರ ವಿವಾಹಿತ ಪುರುಷರು ಪರಸ್ತ್ರೀಯರತ್ತ ಆಕರ್ಷಿತರಾಗುವುದೇಕೆ ಎಂಬುದುನ್ನು ನೋಡೋಣ ಬನ್ನಿ.
- Malashree anchan
- Updated on: Mar 16, 2026
- 8:01 pm
ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ
ಬೆಂಡೆಕಾಯಿಯಲ್ಲಿ ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಇದರ ಸೇವನೆ ನಮ್ಮ ಆರೋಗ್ಯಕ್ಕೆ ವರದಾನವಾಗಿದೆ. ಬೆಂಡೆಕಾಯಿ ಆರೋಗ್ಯಕ್ಕೆ ಪ್ರಯೋಜನಕಾರಿ ನಿಜ, ಆದ್ರೆ ಈ ಕೆಲವೊಂದಿಷ್ಟು ತರಕಾರಿಗಳ ಜೊತೆ ಬೆಂಡೆಕಾಯಿ ಸೇವನೆ ಮಾಡಿದರೆ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚಂತೆ. ಹಾಗಿದ್ರೆ ಬೆಂಡೆಕಾಯಿ ಜೊತೆ ಯಾವೆಲ್ಲಾ ತರಕಾರಿಗಳನ್ನು ಸೇವನೆ ಮಾಡಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Mar 16, 2026
- 5:25 pm
National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ
ಲಸಿಕೆಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ ಕೋವಿಡ್-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಆದ್ದರಿಂದ ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
- Malashree anchan
- Updated on: Mar 16, 2026
- 10:26 am
Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ
ಆರ್ಥಿಕ ಸಂಕಷ್ಟಗಳು ಯಾವಾಗ, ಹೇಗೆ ಬರುತ್ತದೆ ಎಂಬುದನ್ನು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಆರ್ಥಿಕ ಸಂಕಷ್ಟಕ್ಕೆ ಮುಖ್ಯ ಕಾರಣ, ಈ ತಪ್ಪುಗಳನ್ನು ತಿದ್ದಿ ನಡೆದರೆ ಜೀವನದಲ್ಲಿ ಹಣದ ಕೊರತೆ ಎದುರಾಗುವುದಿಲ್ಲ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಾದ್ರೆ ಹಣದ ಕೊರತೆ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Mar 15, 2026
- 9:02 pm
ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು
ಬೇಸಿಗೆಯಲ್ಲಿ ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸುಸ್ತು, ಆಯಾಸ ಕಾಡುತ್ತದೆ. ಅಷ್ಟೇ ಅಲ್ಲದೆ ಈ ಸಮಯದಲ್ಲಿ ದೇಹದಲ್ಲಿನ ನೀರಿನಾಂಶ ಹೆಚ್ಚು ಹೆಚ್ಚು ಬೆವರಿನ ಮೂಲಕ ಹೊರ ಹೋಗುವ ಕಾರಣ ನಿರ್ಜಲೀಕರಣ ಸಮಸ್ಯೆ ಬಹಳ ಬೇಗನೆ ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ನಿರ್ಜಲೀಕರಣವನ್ನು ತಡೆಯಲು ಬರೀ ನೀರು ಕುಡಿದರೆ ಸಾಕಾಗುವುದಿಲ್ಲ. ಈ ಕೆಲವೊಂದು ಆಹಾರಗಳನ್ನು ಸೇವನೆ ಮಾಡುವುದು ಕೂಡ ತುಂಬಾನೇ ಮುಖ್ಯವಾಗಿರುತ್ತದೆ.
- Malashree anchan
- Updated on: Mar 15, 2026
- 3:55 pm
World Consumer Rights Day 2026: ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಉದ್ದೇಶವನ್ನು ತಿಳಿಯಿರಿ
ಕಲಬೆರಕೆ, ಅನಿಯಂತ್ರಿತ ಬೆಲೆ ನಿಗದಿ, ಕಳಪೆ ಗುಣಮಟ್ಟದ ಸರಕುಗಳ ಮಾರಾಟ ಸೇರಿದಂತೆ ಒಂದಷ್ಟು ವಿಷಯಗಳಲ್ಲಿ ಗ್ರಾಹಕರಿಕೆ ಮೋಸಗಳಾಗುತ್ತವೆ. ಈ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ. ಈ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು, ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.
- Malashree anchan
- Updated on: Mar 15, 2026
- 10:20 am
Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ
ಜೀವನದಲ್ಲಿ ಸಂತೋಷವಾಗಿರಬೇಕು, ನೆಮ್ಮದಿಯಿಂದ ಜೀವನ ನಡೆಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದ್ರೆ ಹೆಚ್ಚಿನವರು ಇಂದು ತಮ್ಮ ಜೀವನದಲ್ಲಿ ಸಂತೋಷವಾಗಿಲ್ಲ, ಯಾವಾಗಲೂ ಒಂದಲ್ಲಾ ಒಂದು ಚಿಂತೆಯಲ್ಲೇ ಮುಳುಗಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಂತೋಷವನ್ನು ಬಯಸಿದರೆ ಚಾಣಕ್ಯರು ಹೇಳಿಕೊಟ್ಟಿರುವ ಈ ಮಾರ್ಗಗಳನ್ನು ಅನುಸರಿಸಿ.
- Malashree anchan
- Updated on: Mar 14, 2026
- 8:06 pm
ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ
ಸಾಮಾನ್ಯವಾಗಿ ಪ್ರತಿ ಅಡುಗೆಯಲ್ಲೂ ಸಹ ಕೊತ್ತಂಬರಿ ಸೊಪನ್ನು ಬಳಸಲಾಗುತ್ತದೆ. ಅದರಲ್ಲೂ ನಾನ್ವೆಜ್ ಅಡುಗೆಗೆ ಕೊತ್ತಂಬರಿ ಸೊಪ್ಪು ಇರ್ಲೇಬೇಕು. ಇದು ಅಡುಗೆಯ ರುಚಿ ಮತ್ತು ಘಮವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಹಾರದ ರುಚಿ ಹೆಚ್ಚಿಸುವುದಷ್ಟೇ ಅಲ್ಲ, ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ.
- Malashree anchan
- Updated on: Mar 14, 2026
- 5:51 pm
ಬಿಳಿ ಬಣ್ಣದ ಬಟ್ಟೆ ದೀರ್ಘಕಾಲದವರೆಗೆ ಹೊಸದರಂತೆ ಕಾಣಬೇಕೆಂದರೆ ಈ ಸಲಹೆ ಪಾಲಿಸಿ
ಪ್ರತಿಯೊಬ್ಬರೂ ಬಿಳಿ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಬೆವರು, ಧೂಳು, ಸರಿಯಾಗಿ ತೊಳೆಯದಿರುವುದು ಮತ್ತು ಕಲೆ ಸಂಗ್ರಹಣೆಯಿಂದಾಗಿ ಈ ಬಟ್ಟೆಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತವೆ. ನೀವು ಕೂಡ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಹಾಗಿದ್ರೆ ಕೆಲವೊಂದು ಟಿಪ್ಸ್ಗಳನ್ನು ಪಾಲಿಸುವ ಮೂಲಕ ಬಿಳಿ ಬಟ್ಟೆಗಳು ವರ್ಷಾನುಗಟ್ಟಲೆ ಹೊಸದರಂತೆ ಕಾಣುವಂತೆ ಮಾಡಬಹುದು.
- Malashree anchan
- Updated on: Mar 14, 2026
- 4:14 pm
World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ
ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ ತುಂಬಾನೇ ಮುಖ್ಯ. ಆದರೆ ಇಂದಿನ ಬ್ಯುಸಿ ಜೀವನಶೈಲಿಯ ಕಾರಣ ಅನೇಕರಿಗೆ ಸರಿಯಾಗಿ ನಿದ್ರೆ ಮಾಡಲು ಸಹ ಸಮಯವಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿದ್ರೆಯ ಮಹತ್ವವನ್ನು ತಿಳಿಸಲು ಮತ್ತು ಉತ್ತಮ ನಿದ್ರೆ ಪಡೆಯುವುದು ಏಕೆ ಮುಖ್ಯ ಎಂಬುದರ ಕುರಿತು ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಮಾರ್ಚ್ ತಿಂಗಳ ಮೂರನೇ ಶುಕ್ರವಾರದಂದು ವಿಶ್ವ ನಿದ್ರಾ ದಿನವನ್ನು ಆಚರಿಸಲಾಗುತ್ತದೆ.
- Malashree anchan
- Updated on: Mar 13, 2026
- 10:22 am
Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ
ಜೀವನದಲ್ಲಿ ಸಿಕ್ಕಾಪಟ್ಟೆ ದುಡ್ಡು ಮಾಡ್ಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಸರಿಯಾದ ರೀತಿಯಲ್ಲಿ ಹಣ ಗಳಿಕೆ ಮಾಡುವುದು ಹೇಗೆ, ಶ್ರೀಮಂತರಾಗುವುದು ಹೇಗೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ನಿಮಗೂ ಸಹ ಶ್ರೀಮಂತಿಕೆ ಗಳಿಸುವ ಬಯಕೆ ಇದ್ಯಾ? ಹಾಗಿದ್ರೆ ಆಚಾರ್ಯ ಚಾಣಕ್ಯರು ಹೇಳಿಕೊಟ್ಟಿರುವ ತತ್ವಗಳನ್ನು ಪಾಲಿಸಿ.
- Malashree anchan
- Updated on: Mar 12, 2026
- 8:50 pm