ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದ ತಮಿಳುನಾಡು, ಕರ್ನಾಟಕದ ಕೌಂಟರ್ ಹೇಗಿತ್ತು? ಇಲ್ಲಿದೆ ವಾದ ಪ್ರತಿವಾದ
Cauvery water Row: ಕರ್ನಾಟಕದಲ್ಲಿ (Karnataka) ಮುಂಗಾರು ಮಳೆ (Rain) ಕೊರತೆ ಎದುರಾಗಿದ್ದು, ಬೆಳೆಗೆ ಮಾತ್ರವಲ್ಲ ಕೆಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇದರ ನಡುವೆಯೂ ತಮಿಳುನಾಡು ಕಾವೇರಿ ನೀರಿನ ವಿಚಾರವಾಗಿ ಮತ್ತೆ ಕ್ಯಾತೆ ತೆಗೆದಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜೂನ್ ತಿಂಗಳ ನೀರಿನ ಜೊತೆಗೆ ಜುಲೈ ತಿಂಗಳ ಪಾಲು ನೀಡಬೇಕೆಂದು ಪಟ್ಟು ಹಿಡಿದಿದೆ. ಇನ್ನು ಕರ್ನಾಟಕದ ವಾದ ಹೇಗಿತ್ತು? ಇದಕ್ಕೆ ಪ್ರಾಧಿಕಾರ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
- Mahantesh Kurbet
- Updated on: Jun 23, 2026
- 6:45 pm
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್, ವಿಜಯೇಂದ್ರ
Karnataka Politics News: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Poll) ನಡೆದ ಅಡ್ಡಮತದಾನ (cross Voting) ರಾಜ್ಯ ಬಿಜೆಪಿಯಲ್ಲಿ ಸಂಚಲನ ಮುಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲಕ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮಾತುಕತೆ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದು, ಸೂಕ್ತ ಕ್ರಮದ ಬಗ್ಗೆಯೂ ಖಡಕ್ ಆಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
- Mahantesh Kurbet
- Updated on: Jun 23, 2026
- 4:29 pm
RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ಆರ್ಎಸ್ಎಸ್ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸುರ್ಯ ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್ಎಸ್ಎಸ್ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್ಎಸ್ಎಸ್ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ ಭಾಗದ ನಾಲ್ವರು ಯುವಕರು ಸೇರಿ ಸಂಘ ಕಟ್ಟಬಹುದು. ಸಂವಿಧಾನ ಇಲ್ಲದಾಗಲೂ, ಬ್ರಿಟಿಷರ ಕಾಲದಲ್ಲೂ ಕೆಲಸ ಮಾಡಿದೆ. ಸಂಘದ ಆಸ್ತಿ, ವಹಿವಾಟುಗಳು ನಿಯಮಗಳ ಅಡಿಯಲ್ಲಿ ನಡೆಯುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಇದೇ ಮೊದಲ ಅಲ್ಲ ಆಡಿಟ್ ಕೇಳ್ತಿರೋದು. ಐಟಿ-ಬಿಟಿ ಇಲಾಖೆಯಲ್ಲಿ ರಿಸರ್ಚ್ ಇನೋವೇಷನ್ ಮಾಡಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ರಿಸರ್ಚ್ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
- Mahantesh Kurbet
- Updated on: Jun 15, 2026
- 6:00 pm
ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ
ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಈಗ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರು ಫೈಟ್ ಶುರುವಾಗಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕೆರಳಿರುವ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹಾಗಾದರೆ ಸತೀಶ್ ಜಾರಕಿಹೊಳಿ ಹೇಳಿದ್ದೇನು? ಸವದಿ ಬೆಂಬಲಿಗರು ಸಿಟ್ಟಾಗಿದ್ದೇಕೆ? ಇಲ್ಲಿದೆ ವಿವರ.
- Mahantesh Kurbet
- Updated on: Jun 8, 2024
- 2:40 pm
ಚಿಕ್ಕೋಡಿ: ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್ ಸುತ್ತ ಪೊಲೀಸರ ನಿಯೋಜನೆ
ಇಷ್ಟು ದಿನಗಳ ಕಾಲ ಗಡಿ ವಿಚಾರವಾಗಿ ತಗಾದೆ ತಗೆಯುತ್ತಿದ್ದ ಮಹಾರಾಷ್ಟ್ರ ಸರ್ಕಾರ, ಇದೀಗ ನದಿ ನೀರು ಹರಿವು ವಿಚಾರವಾಗಿ ಕ್ಯಾತೆ ತಗೆದಿದೆ. ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ.
- Mahantesh Kurbet
- Updated on: May 26, 2024
- 2:28 pm
ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್ಪೋರ್ಟ್ ಮಾಡುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
- Mahantesh Kurbet
- Updated on: May 21, 2024
- 7:46 pm
ಚಿಕ್ಕೋಡಿ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
ತೀರ್ಥಯಾತ್ರೆಗೆಂದು ತೆರಳುತ್ತಿದ್ದವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ತಂಗಿದ್ದರು. ಬೆಳಿಗ್ಗೆ ಬಟ್ಟೆ ತೊಳೆಯಲು ವೇದಗಂಗಾ ನದಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.
- Mahantesh Kurbet
- Updated on: May 18, 2024
- 11:04 am
ಶಿವಮೊಗ್ಗದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸ್ ಬಂದೂಕು ಸದ್ದು, ಕೊಲೆ ಆರೋಪಿಗೆ ಗುಂಡೇಟು
ರಾಜ್ಯದಲ್ಲಿ ಎರಡನೇ ಹಂತದ ಮತದಾನವಾದ ಮರುದಿನ ಮೇ 8 ರಂದು ಶಿವಮೊಗ್ಗದಲ್ಲಿ ನಗರದಲ್ಲಿ ರೌಡಿಶೀಟರ್ಗಳ ಎರಡು ಗ್ಯಾಂಗ್ ನಡುವೆ ಗಲಾಟೆ ನಡೆದು ಜೋಡಿ ಕೊಲೆಗಳಾಗಿದ್ದವು. ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲು ಪೊಲೀಸರು ಇಂದು (ಮೇ 13) ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದನು. ಮುಂದೇನಾಯ್ತು ಈ ಸ್ಟೋರಿ ಓದಿ..
- Mahantesh Kurbet
- Updated on: May 13, 2024
- 10:09 am
ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು
ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.
- Mahantesh Kurbet
- Updated on: May 12, 2024
- 12:23 pm