ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…
ಬಿಜೆಪಿ ಪ್ರತ್ಯೇಕ ಬಣಕ್ಕೆ ದೆಹಲೀಲಿ ಅಮಿತ್ ಶಾ ಹೇಳಿದ್ದೇನು? ಕುಮಾರ್ ಬಂಗಾರಪ್ಪ ಏನಂದ್ರು ನೋಡಿ
ಬಿಜೆಪಿ ಪ್ರತ್ಯೇಕ ಬಣ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಆ ಬಗ್ಗೆ ಕುಮಾರ್ ಬಂಗಾರಪ್ಪ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಬಿಜೆಪಿಗೆ ಅಮಿತ್ ಶಾ ಅವರ ಸೂಚನೆ ಏನಿತ್ತು ಎಂಬುದನ್ನು ತಿಳಿಸಿದ್ದಾರೆ. ಈ ಮಧ್ಯೆ, ರಾಜ್ಯಾಧ್ಯಕ್ಷರ ಬದಲಾವಣೆಗೂ ಭಿನ್ನರ ಬಣ ಹೈಕಮಾಂಡ್ಗೆ ದೂರು ನೀಡಿದೆ ಎಂದು ಮೂಲಗಳು ತಿಳಿಸಿವೆ.
- Mahesha E
- Updated on: Dec 4, 2025
- 11:48 am
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್, ಚರ್ಚೆ ಆಗಿದ್ದೇನು?
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದಾಗ್ಯೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ರಾಜಕೀಯ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದು, ಗೊಂದಲಕ್ಕೆ ತೆರೆ ಎಳೆಯಲು ಮನವಿ ಮಾಡಿದ್ದಾರೆ.
- Mahesha E
- Updated on: Dec 1, 2025
- 7:40 am
ಬ್ರೇಕ್ಫಾಸ್ಟ್ ಸಭೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕಾರಣ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಹತ್ವದ ಸಭೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಗೆ ಸದ್ಯ ಬ್ರೇಕ್ಫಾಸ್ಟ್ ಮೂಲಕ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಾಗಿ ಉಪಾಹಾರ ಸೇವಿಸಿ ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಅತ್ತ ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಸಭೆ ಮಾಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.
- Mahesha E
- Updated on: Nov 29, 2025
- 7:27 pm
ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ
ಕರ್ನಾಕ ಕಾಂಗ್ರೆಸ್ ಆಂತರಿಕ ಬೆಳವಣಿಗೆಗಳ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ಮತ್ತೆ ನಾಳೆಯೂ ಸಭೆ ನಡೆಯುವ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಸುರ್ಜೆವಾಲ ಗೈರಾಗಿದ್ದು, ನಾಳಿನ ಸಭೆಗೆ ಹಾಜರಾಗುವ ನಿರೀಕ್ಷೆ ಇದೆ.
- Mahesha E
- Updated on: Nov 29, 2025
- 2:09 pm
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಸಂಧಾನಕ್ಕೆ ಮುಹೂರ್ತ ಫಿಕ್ಸ್! ಸಿಎಂ, ಡಿಸಿಎಂಗೆ ದೆಹಲಿಗೆ ಬುಲಾವ್ ಸಾಧ್ಯತೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಿಂದ ದೆಹಲಿಗೆ ವಾಪಸ್ ಆಗಿದ್ದಾರೆ. ರಾಜ್ಯದಲ್ಲಿ ಅನೇಕ ನಾಯಕರ ಅಭಿಪ್ರಾಯ ಸಂಗ್ರಹಿಸಿರುವ ಖರ್ಗೆ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಸಂಧಾನಕ್ಕೆ ಹೈಕಮಾಂಡ್ ಮುಹೂರ್ತ ನಿಗದಿ ಮಾಡಿದೆ ಎಂಬ ಎಕ್ಸ್ಕ್ಲೂಸಿವ್ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ.
- Mahesha E
- Updated on: Nov 26, 2025
- 7:45 am
ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ
ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗುತ್ತಿದ್ದೇನೆ ರಾಜಕೀಯ ಏನಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ನೋಡಿ.
- Mahesha E
- Updated on: Nov 22, 2025
- 2:52 pm
ಕಾಂಗ್ರೆಸ್ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ: ಶಾಸಕರ ದೆಹಲಿ ದಂಡಯಾತ್ರೆ, ಡಿಕೆ ಶಿವಕುಮಾರ್ ತಂತ್ರಗಾರಿಕೆ ಏನು?
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಡಿಕೆಶಿ ಆಪ್ತ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಲು ಒತ್ತಡ ಹೇರಿದ್ದಾರೆ. ಸಿದ್ದರಾಮಯ್ಯ ಬಣವೂ ಸಕ್ರಿಯವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
- Mahesha E
- Updated on: Nov 21, 2025
- 2:34 pm
ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?
ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳೆ ಹಾನಿ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಮಹದಾಯಿ, ಮೇಕೆದಾಟು ಯೋಜನೆಗಳ ಸಂಬಂಧವೂ ಪ್ರಧಾನಿ ಅವರ ಗಮನ ಸೆಳೆಯಲಾಗಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೂ ಸಿಎಂ ಮನವಿ ಮಾಡಿದ್ದಾರೆ.
- Mahesha E
- Updated on: Nov 17, 2025
- 6:51 pm
ಕ್ರಾಂತಿ ಕಿಚ್ಚಿನ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ಪುನಾರಚನೆ ಕುರಿತ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಎಐಸಿಸಿ ಅಧ್ಯಕ್ಷರ ಭೇಟಿ ಪಕ್ಷದ ಸಾಮಾನ್ಯ ವಿಚಾರಕ್ಕೆ ಸಂಬಂಧಿಸಿದೆ ಎಂದಿದ್ದಾರೆ. ಇತ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ.
- Mahesha E
- Updated on: Nov 17, 2025
- 10:23 am
ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ? ಸಂಕ್ರಾಂತಿ ನಂತರ ಇರುತ್ತಾ ಸರ್ಜರಿ?; ಟಿವಿ9ಗೆ ಎಕ್ಸ್ಕ್ಲೂಸಿವ್ ಮಾಹಿತಿ
Karnataka congress government and internal politics: ನಿನ್ನೆಯಷ್ಟೇ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಅನ್ನೋ ಮಾತು ಕೇಳಿಬಂದಿತ್ತು. ಆದ್ರೀಗ ಅದು ಸಂಕ್ರಾಂತಿ ನಂತರ ಅಂತಾ ಹೇಳಲಾಗ್ತಿದೆ. ಈ ಮಧ್ಯೆ ಸಿಎಂ ದೆಹಲಿಯಿಂದ ವಾಪಸ್ ಆಗಿದ್ರೆ, ದೆಹಲಿಯಲ್ಲೇ ಇರೋ ಡಿಕೆ ಶಿವಕುಮಾರ್ ನಡೆ ಬಗ್ಗೆ ಭಾರೀ ಕುತೂಹಲ ಮೂಡಿದೆ.
- Mahesha E
- Updated on: Nov 16, 2025
- 11:23 pm
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆ ಶಿವಕುಮಾರ್
ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
- Mahesha E
- Updated on: Nov 15, 2025
- 9:41 pm
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ
ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಯೋಜನೆಗೆ 7 ವರ್ಷಗಳಿಂದ ಅಡ್ಡಗಾಲು ಹಾಕುತ್ತಾ ಬರುತ್ತಿದ್ದ ತಮಿಳುನಾಡಿಗೆ ಮುಖಭಂಗವಾಗಿದೆ. ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಯೋಜನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಂತಾಗಿದೆ.
- Mahesha E
- Updated on: Nov 13, 2025
- 1:52 pm