AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ, ಭೂಮನಹಳ್ಳಿ

Author - TV9 Kannada

mahesha.eranna@tv9.com

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…

Read More
ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ

ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬ ಇರುವವರೆಗೆ ಬಿಜೆಪಿ ಸೇರಲ್ಲ ಎಂದಿರುವ ಅವರು, ತಮ್ಮದೇ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದ್ದು, ತಾವೇ ಮುಖ್ಯಮಂತ್ರಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಪಕ್ಷ ಹೆಸರಿನಲ್ಲಿ ಹೊಸ ರಾಜಕೀಯ ಶಕ್ತಿ ಉದಯಿಸುವ ಸುಳಿವು ನೀಡಿದ್ದಾರೆ.

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ತೀರ್ಪು ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದೆ.

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಜಾರಕಿಹೊಳಿ ಮನವಿ ಮಾಡಿದರು. ಖರ್ಗೆಯವರು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಯಾವುದೇ ವಿಳಂಬವಿಲ್ಲದೆ ಸಮಸ್ಯೆಗಳನ್ನು ಬಗೆಹರಿಸಬೇಕೆಂಬುದು ಇಡೀ ಪಕ್ಷದ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವುದು ಇದರ ಉದ್ದೇಶ. ಕಂದಾಯ, ಆರ್‌ಡಿಪಿಆರ್ ಮತ್ತು ನಿಗಮಗಳಿಂದ ಖಾತೆ, ದಾಖಲೆಗಳು ಮತ್ತು ಹಕ್ಕುಪತ್ರಗಳನ್ನು ಇದೇ 14ರಂದು ವಿತರಿಸಲು ಯೋಜಿಸಲಾಗಿದೆ.

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದಾರೆ. ಅಸ್ಸಾಂ ಚುನಾವಣೆ ಬಗ್ಗೆ ಮಾತನಾಡಿದ್ದಾಗಿ ಹೇಳಿದರೂ, ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಕುರಿತು ಪ್ರಮುಖ ಮಾತುಕತೆ ನಡೆದಿದೆ ಎನ್ನಲಾಗಿದೆ. ಆ ಕುರಿತು ಡಿಕೆಶಿ ಹೇಳಿದ್ದೇನು ಎಂಬ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್​ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಬಳಿಕ ಮಹತ್ವದ ರಾಜಕೀಯ ಬೆಳವಣಿಗೆಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರು ಈಗ 'ಮೆಟ್ರೋ ನಗರ' ಪಟ್ಟಿಗೆ ಸೇರ್ಪಡೆಗೊಂಡಿದೆ, ಇದರಿಂದ HRA ವಿನಾಯಿತಿ ಶೇ. 40 ರಿಂದ ಶೇ. 50 ಕ್ಕೆ ಹೆಚ್ಚಲಿದೆ. ಸಂಸದ ತೇಜಸ್ವಿ ಸೂರ್ಯರ ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲಕ್ಷಾಂತರ ವೇತನದಾರರಿಗೆ ತೆರಿಗೆ ಹೊರೆ ಕಡಿಮೆಯಾಗಿ ಕೈಗೆ ಸಿಗುವ ಆದಾಯ ಹೆಚ್ಚಲಿದೆ. ಇದು 2026-27 ಆರ್ಥಿಕ ವರ್ಷದಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏರಿಕೆ ಜಾರಿಯಾಗದಂತೆ ಮತ್ತು ಪ್ರಯಾಣಿಕರಿಗೆ ಶಾಶ್ವತ ಪರಿಹಾರ ಸಿಗುವಂತೆ ಹೊಸ ಫೇರ್ ಫಿಕ್ಸೇಷನ್ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಹೆಚ್​​ಡಿ ದೇವೇಗೌಡ ಮಾತಿಗೆ ಇಡೀ ಸದನ ಮೌನವಾಗಿತ್ತು.

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ

Republic Day 2026: 77ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಿದ್ಧವಾಗಿದೆ. ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಸಮಾರಂಭದ ಅತಿಥಿಗಳಾಗಿ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್‌ ಭಾಗಿಯಾಗಲಿದ್ದಾರೆ. ನವದೆಹಲಿಯಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಜತೆಗೆ, ಇಡೀ ದೇಶ ಗಣರಾಜ್ಯೋತ್ಸವ ಆಚರಣೆಗೆ ಸನ್ನದ್ಧವಾಗಿದೆ.

ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 8 ವರ್ಷದ ಪುತ್ರನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಕೆರೆಯಿಂದ ತಾಯಿ, ಮಗನ ಮೃತದೇಹ ಹೊರತೆಗೆಯಲಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ದೆಹಲಿಯಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್​ ಪರ ಬ್ಯಾಟ್​ ಬೀಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ. ಶಿವಕುಮಾರ್ ಪಾತ್ರ ಮಹತ್ವದ್ದು. ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಗೊಂದಲವನ್ನು ಕೂಡಲೇ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ವಾಮೀಜಿಗಳಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದಿದ್ದಾರೆ.