ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏರಿಕೆ ಜಾರಿಯಾಗದಂತೆ ಮತ್ತು ಪ್ರಯಾಣಿಕರಿಗೆ ಶಾಶ್ವತ ಪರಿಹಾರ ಸಿಗುವಂತೆ ಹೊಸ ಫೇರ್ ಫಿಕ್ಸೇಷನ್ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.
- Mahesha E
- Updated on: Feb 5, 2026
- 10:50 pm
ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಹೆಚ್ಡಿ ದೇವೇಗೌಡ ಮಾತಿಗೆ ಇಡೀ ಸದನ ಮೌನವಾಗಿತ್ತು.
- Mahesha E
- Updated on: Feb 4, 2026
- 7:56 pm
ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ
Republic Day 2026: 77ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಿದ್ಧವಾಗಿದೆ. ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಸಮಾರಂಭದ ಅತಿಥಿಗಳಾಗಿ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಭಾಗಿಯಾಗಲಿದ್ದಾರೆ. ನವದೆಹಲಿಯಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಜತೆಗೆ, ಇಡೀ ದೇಶ ಗಣರಾಜ್ಯೋತ್ಸವ ಆಚರಣೆಗೆ ಸನ್ನದ್ಧವಾಗಿದೆ.
- Mahesha E
- Updated on: Jan 26, 2026
- 7:14 am
ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 8 ವರ್ಷದ ಪುತ್ರನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಕೆರೆಯಿಂದ ತಾಯಿ, ಮಗನ ಮೃತದೇಹ ಹೊರತೆಗೆಯಲಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
- Mahesha E
- Updated on: Dec 29, 2025
- 5:02 pm
ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ದೆಹಲಿಯಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ. ಶಿವಕುಮಾರ್ ಪಾತ್ರ ಮಹತ್ವದ್ದು. ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಗೊಂದಲವನ್ನು ಕೂಡಲೇ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ವಾಮೀಜಿಗಳಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದಿದ್ದಾರೆ.
- Mahesha E
- Updated on: Dec 23, 2025
- 5:08 pm
ಡಿಸಿಎಂ ಡಿ.ಕೆ. ಶಿವಕುಮಾರ್- ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ
ಕರ್ನಾಟಕ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕೆ.ಎನ್. ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಸದಸ್ಯರನ್ನು ಭೇಟಿಯಾಗುವುದು ಸಹಜ. ಇದು ಯಾವುದೇ ವೈಯಕ್ತಿಕ ಭವಿಷ್ಯ ರೂಪಿಸುವ ಪ್ರಯತ್ನವಲ್ಲ, ಬದಲಿಗೆ ಪಕ್ಷದ ಒಗ್ಗಟ್ಟಿನ ಭಾಗ ಎಂದು ಹೇಳಿದ್ದಾರೆ.
- Mahesha E
- Updated on: Dec 23, 2025
- 12:10 pm
ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ
ಮತಗಳ್ಳತನ ಬಾಂಬ್ ಕರ್ನಾಟಕದಿಂದಲೇ ಸಿಡಿದಿತ್ತು. ಕಲಬುರಗಿಯ ಆಳಂದ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿನ ವೋಟ್ ಚೋರಿ ಆರೋಪದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ರಾಹುಲ್ ಗಾಂಧಿ, ಈ ವಿಚಾರವನ್ನ ಕೈಗೆತ್ತಿಕೊಂಡು ಸಮರ ಸಾರಿದ್ದರು. ಈಗ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಆ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
- Mahesha E
- Updated on: Dec 14, 2025
- 5:34 pm
ಇಂಡಿಗೋ ಎಫೆಕ್ಟ್: ಏರ್ಲೈನ್ಸ್ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್ ಕಿಡಿ; ಕೇಂದ್ರಕ್ಕೆ ಚಾಟಿ
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ಏರ್ಲೈನ್ಸ್ಗಳು ಪ್ರಯಾಣಿಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡಿವೆ. 40 ಸಾವಿರದವರೆಗೆ ವಿಮಾನ ದರ ಏರಿಕೆ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದೆ.
- Mahesha E
- Updated on: Dec 10, 2025
- 2:01 pm
ಕುರ್ಚಿ ಕದನದ ನಡುವೆ ಸಿದ್ದರಾಮಯ್ಯಗೆ ಬಿಗ್ ಶಾಕ್: ಸುಪ್ರೀಂಕೋರ್ಟ್ನಿಂದ ನೋಟಿಸ್
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 2023ರ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಗೆದ್ದಿದ್ದಾರೆ ಎಂಬ ಕೆ. ಶಂಕರ್ ಅವರ ಆರೋಪದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಕ್ರಮ ಕೈಗೊಂಡಿದೆ. ಚುನಾವಣಾ ಆಯೋಗಕ್ಕೂ ನೋಟಿಸ್ ನೀಡಲಾಗಿದ್ದು, ಈ ಹಿಂದೆ ಶಂಕರ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
- Mahesha E
- Updated on: Dec 8, 2025
- 12:40 pm
ಬಿಜೆಪಿ ಪ್ರತ್ಯೇಕ ಬಣಕ್ಕೆ ದೆಹಲೀಲಿ ಅಮಿತ್ ಶಾ ಹೇಳಿದ್ದೇನು? ಕುಮಾರ್ ಬಂಗಾರಪ್ಪ ಏನಂದ್ರು ನೋಡಿ
ಬಿಜೆಪಿ ಪ್ರತ್ಯೇಕ ಬಣ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಆ ಬಗ್ಗೆ ಕುಮಾರ್ ಬಂಗಾರಪ್ಪ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಬಿಜೆಪಿಗೆ ಅಮಿತ್ ಶಾ ಅವರ ಸೂಚನೆ ಏನಿತ್ತು ಎಂಬುದನ್ನು ತಿಳಿಸಿದ್ದಾರೆ. ಈ ಮಧ್ಯೆ, ರಾಜ್ಯಾಧ್ಯಕ್ಷರ ಬದಲಾವಣೆಗೂ ಭಿನ್ನರ ಬಣ ಹೈಕಮಾಂಡ್ಗೆ ದೂರು ನೀಡಿದೆ ಎಂದು ಮೂಲಗಳು ತಿಳಿಸಿವೆ.
- Mahesha E
- Updated on: Dec 4, 2025
- 11:48 am
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್, ಚರ್ಚೆ ಆಗಿದ್ದೇನು?
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದಾಗ್ಯೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ರಾಜಕೀಯ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದು, ಗೊಂದಲಕ್ಕೆ ತೆರೆ ಎಳೆಯಲು ಮನವಿ ಮಾಡಿದ್ದಾರೆ.
- Mahesha E
- Updated on: Dec 1, 2025
- 7:40 am
ಬ್ರೇಕ್ಫಾಸ್ಟ್ ಸಭೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕಾರಣ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಹತ್ವದ ಸಭೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಗೆ ಸದ್ಯ ಬ್ರೇಕ್ಫಾಸ್ಟ್ ಮೂಲಕ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಾಗಿ ಉಪಾಹಾರ ಸೇವಿಸಿ ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಅತ್ತ ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಸಭೆ ಮಾಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.
- Mahesha E
- Updated on: Nov 29, 2025
- 7:27 pm