ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…
ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಭೇಟಿಯಲ್ಲಿ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
- Mahesha E
- Updated on: Jun 12, 2026
- 1:04 pm
ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ
ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ವಿಸ್ತರಣೆ ಕುರಿತು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರೊಂದಿಗೆ ಮಾತನಾಡಬೇಕೋ ಅವರೊಂದಿಗೆ ಮಾತನಾಡಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತನಾಗಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ
- Mahesha E
- Updated on: Jun 10, 2026
- 10:16 pm
ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ರಾಜ್ಯದ ಪ್ರಮುಖ ನೀರಾವರಿ ಮತ್ತು ಆರ್ಥಿಕ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಸಹ ಪಾಲ್ಗೊಳ್ಳಲಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಇದು ರಾಜ್ಯದ ಅಭಿವೃದ್ಧಿಗೆ ಸಹಕಾರ ಪಡೆಯುವ ಪ್ರಥಮ ಅಧಿಕೃತ ಭೇಟಿಯಾಗಿದೆ.
- Mahesha E
- Updated on: Jun 10, 2026
- 9:13 pm
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದರು. ದೆಹಲಿಯ 10 ಜನಪಥ್ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದರು. ಸಿಎಂ ಶಿವಕುಮಾರ್ಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.
- Mahesha E
- Updated on: Jun 10, 2026
- 6:08 pm
ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು
ಕರ್ನಾಟಕ ಸಚಿವ ಸಂಪುಟ ಪುನರಚನೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ದೆಹಲಿಗೆ ದೌಡಾಯಿಸಿದ್ದಾರೆ. ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ಹೈಕಮಾಂಡ್ ಭೇಟಿಯಾಗಿ, ತಮ್ಮನ್ನು ಸಂಪುಟದಲ್ಲಿ ಉಳಿಸಿಕೊಳ್ಳಲು ಅಥವಾ ಪರಿಗಣಿಸಲು ಮನವಿ ಮಾಡಲಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
- Mahesha E
- Updated on: May 22, 2026
- 12:50 pm
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ
ಅಣ್ಣಾ ಡಿಎಂಕೆ ಪಕ್ಷದಲ್ಲಿ ಸ್ಪಷ್ಟವಾದ ಒಡಕು ಕಾಣಿಸಿಕೊಂಡಿದೆ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ಡಿಎಂಕೆ ಮೈತ್ರಿ ಪ್ರಸ್ತಾಪದ ಕಾರಣಕ್ಕೆ ಈ ಬಂಡಾಯ ಎದ್ದಿದೆ. ಇದು ವಿಜಯ್ ಸರ್ಕಾರದ ಬಲವನ್ನು ಹೆಚ್ಚಿಸಿದ್ದು, ಅಣ್ಣಾ ಡಿಎಂಕೆ ಭವಿಷ್ಯದ ಬಗ್ಗೆ ಪ್ರಶ್ನೆ ಮೂಡಿಸಿದೆ.
- Mahesha E
- Updated on: May 12, 2026
- 11:58 am
ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್ನ ರಾಜೇಗೌಡ ಫುಲ್ ಖುಷ್
ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 'ಯಥಾಸ್ಥಿತಿ' ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.
- Mahesha E
- Updated on: May 11, 2026
- 6:29 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ನ ರಾಜೇಗೌಡ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಅವರಿಗೆ ಸೋಲಾಗಿದೆ. 2023 ರಲ್ಲಿ ಸೋಲು ಕಂಡಿದ್ದ ಬಿಜೆಪಿಯ ಜೀವರಾಜ್ ಅವರು ಎರಡುವರೆ ವರ್ಷಗಳ ಕಾಲ ಕಾನೂನು ಹೋರಾಟದ ಬಳಿಕ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ನ ರಾಜೇಗೌಡ ಸಹ ಕಾನೂನು ಹೋರಾಟಕ್ಕಿಳಿದಿದ್ದಾರೆ.
- Mahesha E
- Updated on: May 8, 2026
- 8:41 pm
ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದಿದ್ದಾರೆ.
- Mahesha E
- Updated on: Apr 24, 2026
- 11:42 am
ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬ ಇರುವವರೆಗೆ ಬಿಜೆಪಿ ಸೇರಲ್ಲ ಎಂದಿರುವ ಅವರು, ತಮ್ಮದೇ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದ್ದು, ತಾವೇ ಮುಖ್ಯಮಂತ್ರಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಪಕ್ಷ ಹೆಸರಿನಲ್ಲಿ ಹೊಸ ರಾಜಕೀಯ ಶಕ್ತಿ ಉದಯಿಸುವ ಸುಳಿವು ನೀಡಿದ್ದಾರೆ.
- Mahesha E
- Updated on: Mar 9, 2026
- 11:53 am
ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಜಾಮೀನು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ತೀರ್ಪು ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದೆ.
- Mahesha E
- Updated on: Feb 27, 2026
- 12:49 pm
ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಜಾರಕಿಹೊಳಿ ಮನವಿ ಮಾಡಿದರು. ಖರ್ಗೆಯವರು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಯಾವುದೇ ವಿಳಂಬವಿಲ್ಲದೆ ಸಮಸ್ಯೆಗಳನ್ನು ಬಗೆಹರಿಸಬೇಕೆಂಬುದು ಇಡೀ ಪಕ್ಷದ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.
- Mahesha E
- Updated on: Feb 21, 2026
- 2:40 pm