ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…
ಬೆಂಗಳೂರಿನ 2ನೇ ಏರ್ಪೋರ್ಟ್ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ
Bengaluru's 2nd Airport: ‘ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಕುರಿತಾಗಿ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. 3 ಸ್ಥಳಗಳ ಅಧ್ಯಯನ ವರದಿ ನೀಡಿದರೂ ರಾಜ್ಯ ಸರ್ಕಾರ ಉತ್ತರಿಸಿಲ್ಲ’ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ. ಇನ್ನು ದಟ್ಟಣೆ ನಿಭಾಯಿಸಲು ಟರ್ಮಿನಲ್ ವಿಸ್ತರಣೆಗೆ ಕೆಐಎಎಲ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ.
- Mahesha E
- Updated on: Jul 27, 2026
- 6:48 pm
‘ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’; ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು, ವರಿಷ್ಠರು ನೀಟ್ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಶನಿವಾರ ಅಥವಾ ಭಾನುವಾರ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಹೇಳಿದ ಅವರು, ನೀಟ್ ಪ್ರತಿಭಟನೆ ವೇಳೆ ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದ್ದಾರೆ.
- Mahesha E
- Updated on: Jul 22, 2026
- 2:40 pm
ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗಡುವು ನೀಡಿದ್ದರೂ, ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ವಿಳಂಬವನ್ನು ಎದುರಿಸುತ್ತಿದೆ. ಹೊಸ ಮತದಾರರ ಪಟ್ಟಿ ಸಿದ್ಧಗೊಳ್ಳುವವರೆಗೆ ಚುನಾವಣೆ ನಡೆಸುವುದು ಮತದಾರರಿಗೆ ಗೊಂದಲ ಸೃಷ್ಟಿಸಬಹುದು. ಇದೊಂದು ರಾಜಕೀಯ ಉದ್ದೇಶವಿಲ್ಲದ ಕಾನೂನಾತ್ಮಕ ಸಮಸ್ಯೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
- Mahesha E
- Updated on: Jul 17, 2026
- 4:30 pm
ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಜಾ
ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರೊಂದಿಗೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಮಾನ್ಯತೆ ಕುರಿತು ನಡೆದ ಕಾನೂನು ಹೋರಾಟದಲ್ಲಿ ಅವರಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾದಂತಾಗಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
- Mahesha E
- Updated on: Jul 16, 2026
- 12:51 pm
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ನ್ಯೂಸ್: ಶೀಘ್ರದಲ್ಲೇ ಕೈಸೇರಲಿದೆ ಇಂದಿರಾ ಕಿಟ್
ಇಂದಿರಾ ಕಿಟ್ ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಅನುಷ್ಠಾನಗೊಳ್ಳಲಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಈ ಕಿಟ್ ಬೇಳೆ, ಎಣ್ಣೆ, ಸಕ್ಕರೆ, ಉಪ್ಪನ್ನು ಒಳಗೊಂಡಿದ್ದು, ಕುಟುಂಬಗಳಿಗೆ ನೇರ ಪೌಷ್ಟಿಕಾಂಶ ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
- Mahesha E
- Updated on: Jul 8, 2026
- 7:40 pm
ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಮೈತ್ರಿ ನಾಯಕರಿಂದ ದೂರು
Voter List Revision: ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ (SIR) ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ನೇತೃತ್ವದ ಮೈತ್ರಿ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಬಳಿಕ ದೆಹಲಿಯಲ್ಲಿಯೇ ಮೈತ್ರಿ ನಾಯಕರು ಸುದ್ದಿಗೋಷ್ಠಿಯನ್ನೂ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.
- Mahesha E
- Updated on: Jul 7, 2026
- 4:41 pm
‘ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ’: ಮತ್ತೊಮ್ಮೆ ಜಾಮೀನು ಕನಸು ಭಗ್ನ
Darshan Thoogudeepa: ದರ್ಶನ್ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ಸುಪ್ರೀಂಕೋರ್ಟ್, ಜಾಮೀನು ರದ್ದು ಮಾಡಿರುವುದು ಮಾತ್ರವೇ ಅಲ್ಲದೆ, ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆದಿದೆ. ಆದರೆ ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಗಳನ್ನು ನಿಲ್ಲಿಸಿಲ್ಲ, ಆದರೆ ಪ್ರತಿಬಾರಿ ಅವರಿಗೆ ನಿರಾಸೆಯೇ ಎದುರಾಗುತ್ತಿದೆ. ಈ ಬಾರಿ ದರ್ಶನ್ ಜಾಮೀನು ಪಡೆಯುವ ಉದ್ದೇಶದಿಂದ ಪ್ರಾಥಮಿಕ ಅರ್ಜಿಯೊಂದನ್ನು ಸಲ್ಲಸಿದ್ದರು, ಆದರೆ ಆ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ತಿರಸ್ಕೃತಗೊಂಡಿದೆ.
- Mahesha E
- Updated on: Jul 3, 2026
- 3:36 pm
ಅಫ್ಘಾನಿಸ್ತಾನದಲ್ಲಿ ಭೂಕಂಪನ: ದೆಹಲಿ, ಜಮ್ಮು ಸೇರಿ ಇಡೀ ಉತ್ತರ ಭಾರತದಲ್ಲೂ ನಡುಗಿದ ಭೂಮಿ!
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮವಾಗಿ ದೆಹಲಿ, ಎನ್ಸಿಆರ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳು ಸೇರಿದಂತೆ ಪಾಕಿಸ್ತಾನ ಮತ್ತು ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.
- Mahesha E
- Updated on: Jun 27, 2026
- 8:49 pm
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ: ಆರ್. ಅಶೋಕ್ ಸ್ಪಷ್ಟನೆ
TV9 Kannada News: ಕರ್ನಾಟಕ ಎಂಎಲ್ಸಿ ಚುನಾವಣೆ ವೇಳೆ ಅಡ್ಡಮತದಾನ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಮೋಸ ಮಾಡಿದವರನ್ನು ಕ್ಷಮಿಸುವುದಿಲ್ಲ, ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು, ಕಾಂಗ್ರೆಸ್ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
- Mahesha E
- Updated on: Jun 23, 2026
- 2:09 pm
ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಭೇಟಿಯಲ್ಲಿ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
- Mahesha E
- Updated on: Jun 12, 2026
- 1:04 pm
ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ
ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ವಿಸ್ತರಣೆ ಕುರಿತು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರೊಂದಿಗೆ ಮಾತನಾಡಬೇಕೋ ಅವರೊಂದಿಗೆ ಮಾತನಾಡಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತನಾಗಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ
- Mahesha E
- Updated on: Jun 10, 2026
- 10:16 pm
ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ರಾಜ್ಯದ ಪ್ರಮುಖ ನೀರಾವರಿ ಮತ್ತು ಆರ್ಥಿಕ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಸಹ ಪಾಲ್ಗೊಳ್ಳಲಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಇದು ರಾಜ್ಯದ ಅಭಿವೃದ್ಧಿಗೆ ಸಹಕಾರ ಪಡೆಯುವ ಪ್ರಥಮ ಅಧಿಕೃತ ಭೇಟಿಯಾಗಿದೆ.
- Mahesha E
- Updated on: Jun 10, 2026
- 9:13 pm