ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಗಾಯಕಿ ವಾಣಿ ಹರಿಕೃಷ್ಣ
ಮೈಸೂರಿನಲ್ಲಿ ಎಸ್. ಜಾನಕಿ ಅವರ ಅಂತಿಮ ದರ್ಶನ ಪಡೆದ ಬಳಿಕ ವಾಣಿ ಹರಿಕೃಷ್ಣ ಭಾವುಕರಾದರು. ಹಳೆಯ ದಿನಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದರು. ಎಸ್. ಜಾನಕಿ ಅವರ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡು ಬಿಕ್ಕಿ ಬಿಕ್ಕಿ ಅತ್ತರು. ಈ ವೇಳೆ ನಟಿ ತಾರಾ ಸಂತೈಸಿದರು.
- Malatesh Jaggin
- Updated on: Jul 12, 2026
- 1:56 pm
ತಮ್ಮ ಕುರಿತ ಅಪಪ್ರಚಾರದ ಬಗ್ಗೆ ನೊಂದಿದ್ದ ಜಾನಕಮ್ಮ: ಕಾಡಿಗೆ ಹೋಗಿಬಿಡ್ತೀನಿ ಎಂದಿದ್ದರಂತೆ ಗಾನಕೋಗಿಲೆ!
S Janaki Passes Away: ತಮ್ಮ ಕುರಿತಾದ ಅಪಪ್ರಚಾರದಿಂದ ಜಾನಕಮ್ಮ ನೊಂದಿದ್ದರು. ಜನಗಳ ಮಧ್ಯೆ ಇರಲು ಇಷ್ಟವಿಲ್ಲ ಎಂದು ಹೇಳಿದ್ದರು ಎಂಬ ವಿಚಾರವನ್ನು ಅವರ ಕೇರ್ ಟೇಕರ್ ಆಗಿದ್ದ ನವೀನ್ ಬಹಿರಂಗಪಡಿಸಿದ್ದಾರೆ. ಗದ್ದಿಗೆ ಮುಖ್ಯ ರಸ್ತೆಗೆ ಜಾನಕಿ ಅವರ ಹೆಸರಿಡುವಂತೆಯೂ ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ. ಇನ್ನು ಜಾನಕಿ ಅವರ ಇಷ್ಟದ ಕಣಿಯನಹುಂಡಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ತೋಟ ಅವರಿಗೆ ಬಹಳ ನೆಚ್ಚಿನ ಪ್ರದೇಶವಾಗಿತ್ತು ಎನ್ನಲಾಗಿದೆ.
- Malatesh Jaggin
- Updated on: Jul 12, 2026
- 11:41 am
‘ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು’; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು
ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಟ್ರೇಲರ್ ಲಾಂಚ್ ಈವೆಂಟ್ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್ನಲ್ಲಿ ನಡೆದ ಸಾಕಷ್ಟು ಚರ್ಚೆಯನ್ನು ತಂದಿದೆ. ಈ ಬಗ್ಗೆ ಪ್ರಜ್ವಲ್ ಫ್ಯಾನ್ಸ್ ಮಾತನಾಡಿದ್ದು, ನಾವು ರೌಡಿಗಳಲ್ಲ ಎಂದಿದ್ದಾರೆ.
- Malatesh Jaggin
- Updated on: Jul 8, 2026
- 9:35 am
‘ಕರಾವಳಿ’ ಸಿನಿಮಾ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ತೆರೆಕಾಣಲು ಸಜ್ಜಾಗಿರುವ ‘ಕರಾವಳಿ’ ಚಿತ್ರತಂಡದ ಕಿರಿಕ್ ಈಗ ಬೀದಿಗೆ ಬಂದಿದೆ. ಈ ಚಿತ್ರದ ಡೈರೆಕ್ಟರ್ ಗುರುದತ್ ಗಾಣಿಗ ಹಾಗೂ ಹೀರೋ ಪ್ರಜ್ವಲ್ ದೇವರಾಜ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗಿದೆ. ಈ ವಿವಾದಕ್ಕೆ ಕಾರಣವೇನು ಎಂಬುದನ್ನು ಗುರುದತ್ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Malatesh Jaggin
- Updated on: Jul 7, 2026
- 5:39 pm
‘ಕರಾವಳಿ’ ಟ್ರೇಲರ್ ಲಾಂಚ್ಗೆ ನಟ ಪ್ರಜ್ವಲ್ಗೇ ಇಲ್ಲ ಆಹ್ವಾನ; ಸಿಡಿದೆದ್ದ ಫ್ಯಾನ್ಸ್
ಗುರುದತ್ ಗಾಣಿಗ ನಿರ್ದೇಶನದ 'ಕರಾವಳಿ' ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಗದ್ದಲ ಸೃಷ್ಟಿಸಿದರು. ಪ್ರಜ್ವಲ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ, ಡಬ್ಬಿಂಗ್ ಸಮಸ್ಯೆ, ಹಾಗೂ ಹಣಕಾಸಿನ ವಿವಾದಗಳು ಆಕ್ರೋಶಕ್ಕೆ ಕಾರಣವಾದವು. ಪ್ರವೀಣ್ ಶೆಟ್ಟಿ ಮತ್ತು ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ ಬಿ. ಶೆಟ್ಟಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಮಾನವೀಯತೆ ಮತ್ತು ಚಿತ್ರೋದ್ಯಮದ ಒಳಿತಿನ ಬಗ್ಗೆ ಮಾತನಾಡಿದರು.
- Malatesh Jaggin
- Updated on: Jul 7, 2026
- 1:36 pm
‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
Shilpa Ganesh: ‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾಗಿ ಶಿಲ್ಪಾ ಗಣೇಶ್ ಪದಾರ್ಪಣೆ ಮಾಡಿದ್ದಾರೆ. ಗಣೇಶ್ ಅವರ ಪ್ರೋತ್ಸಾಹದಿಂದ ಈ ಹಾಡು ಹಾಡಿದ್ದು, ಈಗ ಬೇರೆ ಚಿತ್ರಗಳಿಂದಲೂ ಗಾಯನಕ್ಕೆ ಆಫರ್ಸ್ ಬರುತ್ತಿವೆ. ಪಿಚ್ಚರ್ ಒಂದು ಪಕ್ಕಾ ಕೌಟುಂಬಿಕ ಮನರಂಜನಾ ಚಿತ್ರವಾಗಿದ್ದು, ಜುಲೈ 24ಕ್ಕೆ ಬಿಡುಗಡೆಯಾಗಲಿದೆ.
- Malatesh Jaggin
- Updated on: Jul 1, 2026
- 7:04 pm
Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ
Jayamma Passed Away: ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡರ ಪತ್ನಿ ಜಯಮ್ಮ ಇಂದು (ಜೂನ್ 16) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಸ್ಯಾಂಡಲ್ವುಡ್ ಕುಟುಂಬದ ಬೆನ್ನೆಲುಬಾಗಿ ನಿಂತು, ತಮ್ಮ ಪತಿ ಹಾಗೂ ಮಕ್ಕಳ ಸಿನಿ ಪಯಣಕ್ಕೆ ಅಪಾರ ಬೆಂಬಲ ನೀಡಿದ ಶಕ್ತಿ ಅವರು. ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- Malatesh Jaggin
- Updated on: Jun 16, 2026
- 9:24 am
‘ನಾನು ಸತ್ತಿಲ್ಲ, ಟಿವಿ9 ನೋಡ್ತಾ ಆರಾಮಾಗಿದ್ದೇನೆ’; ದೊಡ್ಡಣ್ಣ ಸ್ಪಷ್ಟನೆ
ಕನ್ನಡದ ಹಿರಿಯ ನಟ ದೊಡ್ಡಣ್ಣ ನಿಧನರಾಗಿದ್ದಾರೆಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರಿಂದ ಅಭಿಮಾನಿಗಳು ಆತಂಕಗೊಂಡಿದ್ದರು. ಆದರೆ, ದೊಡ್ಡಣ್ಣ ತಾವೇ ಖುದ್ದಾಗಿ ಸ್ಪಷ್ಟನೆ ನೀಡಿ, ತಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ ಎಂದಿದ್ದಾರೆ. ಇಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.
- Malatesh Jaggin
- Updated on: Jun 12, 2026
- 10:15 am
ಉಪೇಂದ್ರ ಚುನಾವಣೆಯಲ್ಲಿ ಏಕೆ ಸ್ಪರ್ಧಿಸಲ್ಲ? ಉತ್ತರಿಸಿದ ನಟ
ನಟ ಉಪೇಂದ್ರ ಅವರು ಪ್ರಜಾಕೀಯ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ಅವರು ಈವರೆಗೆ ಚುನಾವಣೆಗೆ ನಿಂತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಅವರ ಲಾಜಿಕ್ ಅನ್ನು ಅನೇಕರು ಒಪ್ಪಿದ್ದಾರೆ. ಉಪೇಂದ್ರ ಅವರ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂಬುದನ್ನು ವಿವರವಾಗಿ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Malatesh Jaggin
- Updated on: May 9, 2026
- 11:41 am
ಕನ್ನಡದ ಯಾವ ಹೀರೋಗೆ ವಿಜಯ್ ರೀತಿಯ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ದಳಪತಿ ವಿಜಯ್ ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಉಪ್ಪಿ ಮಾತನಾಡಿದ್ದಾರೆ. ಈ ವೇಳೆ ಒಂದು ವಿಷಯವನ್ನು ಅವರು ಹೇಳಿದ್ದಾರೆ. ಕನ್ನಡದ ಯಾವ ಹೀರೋಗೆ ಈ ರೀತಿ ಗೆಲ್ಲುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
- Malatesh Jaggin
- Updated on: May 9, 2026
- 8:37 am
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ತಮಿಳುನಾಡಿನ ರಾಜಕೀಯದಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್ ಉಪೇಂದ್ರ ಅವರು ಕೊಂಡಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜಕಾರಣದ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ತಮ್ಮ ರಾಜಕೀಯ ನಿಲುವು ಬಗ್ಗೆಯೂ ಮಾತನಾಡಿದ್ದು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
- Malatesh Jaggin
- Updated on: May 8, 2026
- 10:34 pm
‘ಸಾರಾ ಗೋವಿಂದ್ ಧಮ್ಕಿ ಹಾಕಿದ್ರು’; ಕಾನೂನು ಹೋರಾಟಕ್ಕೆ ಮುಂದಾದ ಚೇತನ್
ರಾಜ್ ಕುಮಾರ್ ಪುಣ್ಯ ಭೂಮಿ ವಿಷಯವಾಗಿ ನಟ ಚೇತನ್ ಅಹಿಂಸ ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಈಗ ಅವರು ನೀಡಿರುವ ಹೇಳಿಕೆ ಗಮನ ಸೆಳೆದಿದೆ. ಶೆಷಾದ್ರಿಪುರಂ ಪೋಲೀಸ್ ಠಾಣೆಗೆ ಆಗಮಿಸಿಲಿರೋ ನಟ ಚೆತನ್ ಹಾಗೆ ಅವರ ಬೆಂಬಲಿಗರು ದೂರು ನೀಡುತ್ತಾ ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Malatesh Jaggin
- Updated on: May 2, 2026
- 2:37 pm