ಮಂಗಳ ರಾಜಗೋಪಾಲ್
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?
‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು ‘ರುಕ್ಮಿಣಿ ರಾಧಾ ಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ.
- Mangala RR
- Updated on: Jul 15, 2026
- 9:03 pm
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್, ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ವಿವರಿಸಿದ್ದಾರೆ.
- Mangala RR
- Updated on: Jul 14, 2026
- 8:46 pm
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್ಫ್ರೆಂಡ್ ನೆನಪು?
ನಟಿ ಸೋನು ಶ್ರೀನಿವಾಸ್ ಗೌಡ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ, ಅದರಲ್ಲೂ ಮಾಜಿ ಬಾಯ್ಫ್ರೆಂಡ್ ಕುರಿತು ಎಮೋಷನಲ್ ಆಗಿ ಮಾತನಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿನ ತಪ್ಪು ಕಲ್ಪನೆಗಳನ್ನು ಸ್ಪಷ್ಟಪಡಿಸಿ, ಪ್ರೀತಿ ಮತ್ತು ಸಂಬಂಧಗಳ ಕುರಿತು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಭವಿಷ್ಯದಲ್ಲಿ ಉತ್ತಮ ಸಿನಿಮಾ ಆಫರ್ಗಳು ಬಂದರೆ ಸ್ವೀಕರಿಸಲು ತಾವು ಸಿದ್ಧ ಎಂದು ಅವರು ಹೇಳಿದ್ದಾರೆ.
- Mangala RR
- Updated on: Jul 2, 2026
- 12:54 pm
ಲಕ್ಷುರಿ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್; ಇದರ ಬೆಲೆ ಎಷ್ಟು ಕೋಟಿ ಗೊತ್ತಾ?
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ಗಾಗಿ ₹6.5 ಕೋಟಿ ಮೌಲ್ಯದ ಅತ್ಯಾಧುನಿಕ ಐಷಾರಾಮಿ ಕ್ಯಾರವ್ಯಾನ್ ಸಿದ್ಧವಾಗಿದೆ. ಖ್ಯಾತ ಡಿಸೈನರ್ DC2 ವಿನ್ಯಾಸಗೊಳಿಸಿದ ಈ ಕ್ಯಾರವ್ಯಾನ್, ಸ್ಯಾಂಡಲ್ವುಡ್ನಲ್ಲೇ ಅತ್ಯಂತ ದುಬಾರಿ ಎನ್ನಲಾಗಿದೆ. ಸುದೀಪ್ರ ಇಷ್ಟದಂತೆ ಕಸ್ಟಮೈಸ್ ಮಾಡಲಾಗಿದ್ದು, 'K' ಸಿಂಬಲ್ ಹೊಂದಿದೆ. 'ಬಿಲ್ಲ ರಂಗ ಬಾಷಾ' ಚಿತ್ರದ ಚಿತ್ರೀಕರಣಕ್ಕೆ ಭರ್ಜರಿ ಎಂಟ್ರಿ ಕೊಟ್ಟಿರುವ ಈ ವಾಹನ, ಎಲ್ಲಾ ಸೌಲಭ್ಯಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ.
- Mangala RR
- Updated on: Jun 27, 2026
- 12:05 pm
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಆಗಿದ್ದೇನು?
ನಿವೇದಿತಾ ಗೌಡ ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Mangala RR
- Updated on: Jun 23, 2026
- 8:14 pm
ನವಿಲು ಗರಿ ಉಡುಪು ಧರಿಸಿದ ಕಿಶನ್ ಹಾಗೂ ನಿವೇದಿತಾ ಗೌಡಗೆ ಸಂಕಷ್ಟ;ದೂರು ದಾಖಲು
ನಟ ಕಿಶನ್ ಹಾಗೂ ನಿವೇದಿತಾ ಗೌಡ ಅವರು ನಾಲ್ಕೈದು ದಿನಗಳ ಹಿಂದೆ ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿದ್ದರು. ಇದನ್ನು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದರು. ನೈಜ ನವಿಲು ಗರಿಗಳನ್ನು ಬಳಸಿ ಉಡುಪು ತಯಾರಿಸಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
- Mangala RR
- Updated on: Jun 23, 2026
- 3:13 pm
‘ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ’; ದರ್ಶನ್ಗೆ ಬಾಸ್ ನಿರ್ದೇಶಕನ ಮನವಿ
‘ಬಾಸ್’ ಸಿನಿಮಾ ರಿಲೀಸ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾ ರಿಲೀಸ್ ಆಗಬಾರದು ಎಂಬುದು ವಿಜಯಲಕ್ಷ್ಮೀ ದರ್ಶನ್ ಅವರ ಕೋರಿಕೆ. ಅವರು ಈಗಾಗಲೇ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. ಹೀಗಿರುವಾಗಲೇ ಸಿನಿಮಾದ ನಿರ್ದೇಶಕ ಲವ ಅವರು ಮಾತನಾಡಿದ್ದಾರೆ. ಅವರು ಒಂದು ಅಚ್ಚರಿಯ ವಿಷಯವನ್ನು ರಿವೀಲ್ ಮಾಡಿದ್ದಾರೆ.
- Mangala RR
- Updated on: Jun 18, 2026
- 12:29 pm
‘ಬಾಸ್’ ಸಿನಿಮಾ ರಿಲೀಸ್ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ
‘ಬಾಸ್’ ಹೆಸರಿನ ಸಿನಿಮಾ ಸದ್ಯ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್ಗೆ ತಂಡ ಅಪಸ್ವರ ತೆಗೆದಿದೆ. ಈ ಸಿನಿಮಾಗೆ ಭಾರೀ ವಿರೋಧ ವ್ಯಕ್ತವಾಗಿದೆ ಎಂದು ವರದಿ ಆಗಿದೆ. ಈ ಬಗ್ಗೆ ನಿರ್ದೇಶಕರು ಬೇಸರ ಹೊರಹಾಕಿದ್ದಾರೆ. ನಮ್ಮ ಸಿನಿಮಾ ರಿಲೀಸ್ಗೆ ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅವರು ಹೇಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Mangala RR
- Updated on: Jun 18, 2026
- 8:28 am
ಈ ವರ್ಷದ ಬಿಗ್ ಬಾಸ್ ಟಿಆರ್ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
‘ಬಿಗ್ ಬಾಸ್ ಕನ್ನಡ 13’ ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಈ ಬಗ್ಗೆ ಮಾತನಾಡಿದ್ದಾರೆ. ‘ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಸಲ 18ರ ತನಕ ಟಿಆರ್ಪಿ ಬಂದಿತ್ತು. ಈ ಬಾರಿ 30 ಮುಟ್ಟುತ್ತಾ ಅಂತ ನನಗೆ ಭಯ ಆಗುತ್ತಿದೆ’ ಎಂದು ಸಂತು ಹೇಳಿದ್ದಾರೆ.
- Mangala RR
- Updated on: Jun 17, 2026
- 8:21 pm
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಬಿಗ್ ಬಾಸ್ ಮೂಲಕ ಫೇಮಸ್ ಆದ ಹನುಮಂತ ಅವರು ಈಗ ಊರಲ್ಲಿ ಸೆಟಲ್ ಆಗಿದ್ದಾರೆ. ಏನಾದರೂ ಕೆಲಸ ಇದ್ದರೆ ಮಾತ್ರ ಬೆಂಗಳೂರಿಗೆ ಬರುತ್ತಾರೆ. ಅವರಿಗೆ ಇಷ್ಟು ಫೇಮ್ ಸಿಕ್ಕ ಹೊರತಾಗಿಯೂ ಸಿನಿಮಾ ಮಾಡುವ ಆಲೋಚನೆ ಇಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ನಮ್ಮ ಸಿನಿಮಾಗಳನ್ನು ಜನರು ನೋಡುವುದಿಲ್ಲ ಎಂದು ಅವರು ಹೇಳಿದ್ದಾರೆ.
- Mangala RR
- Updated on: Jun 17, 2026
- 11:27 am
ನಿರ್ದೇಶಕ ಪವನ್ ಒಡೆಯರ್ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ
ಖ್ಯಾತ ನಿರ್ದೇಶಕ ಪವನ್ ಒಡೆಯರ್ ತಾಯಿ ಗೀತಾ ಒಡೆಯರ್ (73) ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಲ್ಟಿಪಲ್ ಮೈಲೋಮ ಮತ್ತು ಜಿಬಿ ಸಿಂಡ್ರೋಮ್ನಿಂದ ಬಳಲುತ್ತಿದ್ದ ಅವರ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಪವನ್ ಒಡೆಯರ್ ಕುಟುಂಬಕ್ಕೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಸ್ಯಾಂಡಲ್ವುಡ್ ಮತ್ತೊಂದು ಅಗಲಿಕೆಯ ನೋವಿನಲ್ಲಿ ಮುಳುಗಿದೆ.
- Mangala RR
- Updated on: Jun 17, 2026
- 7:52 am
ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್
ಕನ್ನಡದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ನಾಲ್ಕು ವರ್ಷಗಳ ವೈವಾಹಿಕ ಜೀವನದ ಬಳಿಕ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸುದ್ದಿ ಅಭಿಮಾನಿಗಳಿಗೆ ಆಘಾತ ಮೂಡಿಸಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿ ಏಕಾಏಕಿ ದೂರವಾಗಲು ಮುಂದಾಗಿದ್ದು, ಕಾರಣ ನಿಗೂಢವಾಗಿದೆ. ಸದ್ಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ಬಳಿಕ ತೀರ್ಮಾನ ಹೊರಬೀಳಲಿದೆ.
- Mangala RR
- Updated on: Jun 4, 2026
- 9:57 am