AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಕೆಬಿ

ಮಂಜುನಾಥ ಕೆಬಿ

Author - TV9 Kannada

manjunatha.byraiah@tv9.com
ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ!

ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ!

ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಇಡೀ ಗ್ರಾಮ ಮತ್ತು ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ ಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ.

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ

ಅರಸೀಕೆರೆಯಲ್ಲಿ ನಡೆದ ಶ್ರೀ ವಾಸವಿ ಜಯಂತಿ ಮೆರವಣಿಗೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಡೋಲು ಬಾರಿಸುತ್ತಾ ಭರ್ಜರಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕರೊಂದಿಗೆ ಬೆರೆತು ಅವರು ಹಾಕಿದ ಸ್ಟೆಪ್‌ಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅವರ ಡ್ಯಾನ್ಸ್​​ಗೆ ಜನ ಶಿಳ್ಳೆ, ಚಪ್ಪಾಳೆ ಹಾಕಿ ಸಂಭ್ರಮಿಸಿದ್ದಾರೆ.

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ

ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್​.

ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ

ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ

ಹಾಸನದ ಬೇಲೂರಿನ ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ 'ಕಿರಣಾಭಿಷೇಕ' ನಡೆಯಿತು. ಹೊಯ್ಸಳ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾದ ಈ ದೇಗುಲದಲ್ಲಿ ಪ್ರತಿ ವರ್ಷ ಏಪ್ರಿಲ್ 21 ಅಥವಾ 22 ರಂದು ಸೂರ್ಯನ ಕಿರಣಗಳು ನೇರವಾಗಿ ಗರ್ಭಗುಡಿಯಲ್ಲಿರುವ ಮೂಲ ವಿಗ್ರಹವನ್ನು ಸ್ಪರ್ಶಿಸುತ್ತವೆ. ಇದು ಹೊಯ್ಸಳ ಶಿಲ್ಪಿಗಳ ಅದ್ಭುತ ಗಣಿತ ಶಾಸ್ತ್ರ ಮತ್ತು ಖಗೋಳ ಜ್ಞಾನಕ್ಕೆ ಕನ್ನಡಿ ಹಿಡಿದಿದೆ, ನೂರಾರು ಭಕ್ತರು ಈ ವಿಸ್ಮಯಕ್ಕೆ ಸಾಕ್ಷಿಯಾದರು.

ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ

ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ

ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು....ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು...ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ಹೋಗಿವೆ.

ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ಹಾಸನದ ಅರಸೀಕೆರೆಯಲ್ಲಿ ಕೆರೆಗೆ ಕಾಲುಜಾರಿ ಬಿದ್ದ ಸೋದರಳಿಯನ ರಕ್ಷಣೆಗೆ ಹೋಗಿ ಮಾವನೂ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇದಲ್ಲದೆ, ಪಿರಿಯಾಪಟ್ಟಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆಯಷ್ಟೇ ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವ ಘಟನೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿತ್ತು ಎನ್ನುವುದಿಲ್ಲಿ ಗಮನಾರ್ಹ.

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಹಾಸನ ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಗೋವಾದಲ್ಲಿ ಕಾರ್ಯಾಚರಣೆ ನಡೆಸಿದ ಹಾಸನ ಪೊಲೀಸರು ಆತನನ್ನು ಬಂಧಿಸಿ ಮತ್ತೆ ಜೈಲಿಗೆ ಅಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಯ ದೊಡ್ಡ ಸಾಧನೆ.

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ

ಹಾಸನದ ಅರಸೀಕೆರೆ ತಾಲ್ಲೂಕಿನ ಜಾವಗಲ್ ದೊಡ್ಡಕೆರೆಯಲ್ಲಿ ಭೀಕರ ದುರಂತ ಒಂದು ಸಂಭವಿಸಿದೆ. ಕುರಿ ತೊಳೆಯಲು ಹೋಗಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ. ಸದ್ಯ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್

ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್

ಹಾಸನದಲ್ಲಿ ರೈತನನ್ನು ಬಲಿತೆಗೆದುಕೊಂಡಿದ್ದ ಒಂಟಿ ಸಲಗವನ್ನು ಸೆರೆಹಿಡಿಯುವ ಕಾರ್ಯಾಚರಣೆ ವಿಫಲವಾಗಿದೆ. ಅರವಳಿಕೆ ಮದ್ದು ನೀಡಿದರೂ, ಆರು ಸಾಕಾನೆಗಳೊಂದಿಗೆ ಭೀಕರ ಕಾಳಗ ನಡೆಸಿ, ಕುತ್ತಿಗೆ ಹಾಗೂ ಕಾಲಿಗೆ ಕಟ್ಟಿದ ಹಗ್ಗಗಳನ್ನು ಕಿತ್ತೊಗೆದು ಕಾಡಾನೆ ಪರಾರಿಯಾಗಿದೆ. ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿದ್ದು ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ ‘ಸುಗ್ರೀವ’!

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ ‘ಸುಗ್ರೀವ’!

ಹಾಸನದ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಭೀಕರ ದುರಂತ ಸಂಭವಿಸಿದೆ. 'ಸುಗ್ರೀವ' ಎಂಬ ಸಾಕಾನೆ ತನ್ನದೇ ಕಾವಾಡಿಗ ರಾಜು ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ರಾಜು ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಡೆ ನರಹಂತಕ ಕಾಡಾನೆ ತಪ್ಪಿಸಿಕೊಂಡಿದ್ದರೆ, ಇನ್ನೊಂದೆಡೆ ಪಳಗಿದ ಆನೆಯಿಂದ ಈ ದಾಳಿ ನಡೆದಿರುವುದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ತೀವ್ರ ಭೀತಿ ಸೃಷ್ಟಿಸಿದೆ.

ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು

ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು

ನೆಲಮಂಗಲದಲ್ಲಿ ನಿಗದಿಯಾಗಿದ್ದ ಬಾಲ್ಯ ವಿವಾಹವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಯಶಸ್ವಿಯಾಗಿ ತಡೆದಿದ್ದಾರೆ. 18 ವರ್ಷ ತುಂಬದ ಬಾಲಕಿಗೆ ಮದುವೆ ಮಾಡಿಸಲು ಮುಂದಾದ ಪೋಷಕರಿಗೆ ಅಧಿಕಾರಿಗಳು ಕಾನೂನಿನ ಮಹತ್ವ ತಿಳಿಸಿ ಹೇಳಿದರು. ವರನು ಬಾಲಕಿ ವಯಸ್ಸಿಗೆ ಬಂದ ನಂತರ ಮದುವೆಯಾಗಲು ಒಪ್ಪಿಕೊಂಡಿದ್ದು, ಬಾಲ್ಯ ವಿವಾಹ ಅಪರಾಧ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ.

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಅವರ ಭಾಷಣಕ್ಕೆ ಡಿಎಸ್‌ಎಸ್ ಮುಖಂಡ ನಟರಾಜ್ ಅಡ್ಡಿಪಡಿಸಿದ್ದಾರೆ. ನೀವು ದಲಿತ ವಿರೋಧಿ, ಹಿಂದೂಪರ ಎಂದು ಆಕ್ರೋಶ ವ್ಯಕ್ತಪಡಿಸಿದ ನಟರಾಜ್ ಅವರನ್ನು ಶಾಸಕರ ಸೂಚನೆ ಮೇರೆಗೆ ಪೊಲೀಸರು ಹೊರಹಾಕಿದರು.