ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಅಂತೂ ಇಂತೂ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಹೋಯಿತು ಎಂಬ ಹೊತ್ತಿನಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಮತ್ತೆ ಕೇಳಿಬಂದಿದೆ. ಹಾಸನದಲ್ಲಿ ಡಿಕೆಶಿ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಜೈ’’ ಎಂದು ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.
- Manjunath KB
- Updated on: Jul 26, 2025
- 6:13 pm
ಶಿವಲಿಂಗೇಗೌಡರನ್ನು ಮಂತ್ರಿ ಮಾಡಿ ಎಂದು ಕೂಗಿದ ಬೆಂಬಲಿಗರು, ಸಿಟ್ಟಾದ ಸಿದ್ದರಾಮಯ್ಯ: ಡಿಕೆಶಿ ಏನಂದ್ರು ನೋಡಿ!
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವಂತೆ ಬೆಂಬಲಿಗರು ಕೂಗಿದರು. ಬೆಂಬಲಿಗರ ಕೂಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಆದರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದರು.
- Manjunath KB
- Updated on: Jul 26, 2025
- 6:06 pm
ದೆಹಲಿಗೆ ಇಂದು ಸಿಎಂ, ಡಿಸಿಎಂ: ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆ ಶಿವಕುಮಾರ್ ಪೂಜೆ!
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಲಿದ್ದಾರೆ. ಕಳೆದ ಬಾರಿ ದೆಹಲಿಯಿಂದಲೇ, ‘ನಾನೇ 5 ವರ್ಷ ಸಿಎಂ’ ಎಂದು ಸಿದ್ದರಾಮಯ್ಯ ಹೇಳಿದ ದಿನ ರಾಹುಲ್ ಗಾಂಧಿ ಭೇಟಿ ಇಬ್ಬರಿಗೂ ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ದೆಹಲಿಗೆ ತೆರಳಲಿರುವ ಇಬ್ಬರು ನಾಯಕರಿಗೆ ರಾಹುಲ್ ಗಾಂಧಿ ಜೊತೆಗೆ ಭೇಟಿ ಭಾಗ್ಯ ಸಿಗುತ್ತದೆಯಾ ಎಂಬ ಪ್ರಶ್ನೆ ಮೂಡಿದೆ. ಇದರ ಮಧ್ಯೆ, ಅನಾರೋಗ್ಯದಿಂದ ವಿಶ್ರಾಂತಿಯಲ್ಲಿದ್ದಾಗಲೇ ಡಿಕೆ ಶಿವಕುಮಾರ್ ಗುಟ್ಟಾಗಿ ಸಲ್ಲಿಸಿರುವ ಪೂಜೆ ಕುತೂಹಲಕ್ಕೆ ಕಾರಣವಾಗಿದೆ.
- Manjunath KB
- Updated on: Jul 24, 2025
- 7:21 am
ಹಾಸನ: ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕತಿರುಪತಿ ದೇಗುಲದಲ್ಲಿ ಜಾತ್ರೆ ವೇಳೆ ಭಾನುವಾರ ರಾತ್ರಿ ಆಹಾರ ಸೇವಿಸಿದ್ದ 50 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಅದೃಷ್ಟವಶಾತ್ 20 ಮಂದಿ ಚೇತರಿಸಿದ್ದು, 30ಕ್ಕೂ ಹೆಚ್ಚು ಮಂದಿ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
- Manjunath KB
- Updated on: Jul 15, 2025
- 9:36 am
ಹಾಸನದಲ್ಲಿ ಹೃದಯಾಘಾತ: ಶಾಲೆಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆಗೆ ಸಚಿವ ರಾಜಣ್ಣ ಸೂಚನೆ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣ ಹೆಚ್ಚಳ ಹಿನ್ನೆಲೆ ಇಂದು ಜಿಲ್ಲೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಂದ ಹಿಡಿದು ಪ್ರತಿಯೊಬ್ಬರು ಪ್ರತಿ ವರ್ಷ ಕಡ್ಡಾಯವಾಗಿ ಹೃದಯ ತಪಾಸಣೆ ಮಾಡಿಸಲು ಸರ್ಕಾರದಲ್ಲಿ ಚಿಂತನೆ ನಡೆದಿದೆ ಎಂದಿದ್ದಾರೆ.
- Manjunath KB
- Updated on: Jul 6, 2025
- 11:41 am
ಗೆಳತಿಯ ಪತಿಯನ್ನು ಕೊಲೆ ಮಾಡಿದ ಶಾಲಾ ವಾಹನ ಚಾಲಕ? ಅನೈತಿಕ ಸಂಬಂಧ ಶಂಕೆ
ಹಾಸನ ಜಿಲ್ಲೆಯ ಮಧು ಕೂಲಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದರು. ಶುಕ್ರವಾರ (ಜು.04) ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋದವರು ರಾತ್ರಿ ಎಷ್ಟೊತ್ತಾದರೂ ಮನೆಗೆ ಬಂದಿರಲಿಲ್ಲ. ಫೋನ್ ಮಾಡಿದರೂ ಕನೆಕ್ಟ್ ಆಗುತ್ತಿರಲಿಲ್ಲ. ಶನಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 376ರ ಬದಿಯಲ್ಲಿ ಮಧು ಅವರ ಶವ ಪತ್ತೆಯಾಗಿದೆ. ಈ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹಾಗಿದ್ದರೆ, ಮಧು ಮೃತಪಟ್ಟಿದ್ದು ಹೇಗೆ? ಇಲ್ಲಿದೆ ವಿವರ.
- Manjunath KB
- Updated on: Jul 5, 2025
- 7:27 pm
ಹಠಾತ್ ಸಾವು: ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಂಪೂರ್ಣ ಅರೋಗ್ಯವಾಗಿದ್ದವರೂ ಸಹ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಜೂನ್ 13 ರಂದು ಕಾರಿನಲ್ಲಿ ಬಲಿಯಾಗಿದ್ದ ದೇವರಾಜ್(43) ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕರಾಳ ಸತ್ಯ ಬಯಲಾಗಿದೆ. ಅರೋಗ್ಯ ಚೆಕ್ ಮಾಡಿಸಿಕೊಂಡಿದ್ದಾಗ ಸಂಪೂರ್ಣ ಸುರಕ್ಷಿತವಾಗಿದ್ದ ದೇವರಾಜ್ ಹಠಾತ್ ಸಾವನ್ನಪ್ಪಿದ್ದು, ಎಲ್ಲರಿಗೂ ಅಚ್ಚರಿಯಾಗಿತ್ತು.
- Manjunath KB
- Updated on: Jul 3, 2025
- 5:21 pm
ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ
ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ 21 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಜ್ಞರ ಸಮಿತಿ ರಚಿಸಿ, ಸರಣಿ ಸಾವುಗಳ ಕಾರಣಗಳನ್ನು ಪತ್ತೆಹಚ್ಚಲು ಆದೇಶಿಸಿದ್ದಾರೆ. ಸಮಿತಿಯು ಒಂದು ವಾರದೊಳಗೆ ವರದಿ ಸಲ್ಲಿಸಲಿದೆ. ಚಿಕ್ಕ ವಯಸ್ಸಿನವರ ಮರಣಕ್ಕೆ ಕಾರಣಗಳನ್ನು ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆಗಳು ಮತ್ತು ವಿಸ್ತೃತ ತನಿಖೆ ನಡೆಯಲಿದೆ. ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ತಾಲೂಕು ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ.
- Manjunath KB
- Updated on: Jun 30, 2025
- 10:15 pm
ಹಾಸನ: ಹೃದಯಾಘಾತಕ್ಕೆ ಒಂದೇ ದಿನ 3 ಬಲಿ, 40 ದಿನಗಳಲ್ಲಿ 22 ಸಾವು
ಹಾಸನ ಜಿಲ್ಲೆಯನ್ನೇ ಬೆಚ್ಚಿಬೀಳಿಸಿರುವ ಹೃದಯಾಘಾತದ ಭೂತ ಮತ್ತೆ ಮೂವರನ್ನು ಬಲಿ ತೆಗೆದುಕೊಂಡಿದೆ. ಇಂದು ಒಂದೇ ದಿನ ಹೃದಯಾಘಾತದಿಂದ ಮೂವರು ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದಂತಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಏನಾಗ್ತಿದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.
- Manjunath KB
- Updated on: Jun 30, 2025
- 5:26 pm
ಡಾ. ಮಂಜುನಾಥ್ ದಿಟ್ಟ ಹೆಜ್ಜೆ: ಕರ್ನಾಟಕದಲ್ಲಿನ ಹೃದಯಾಘಾತ ಕೇಸ್ ಪ್ರಧಾನಿ ಮೋದಿ ಅಂಗಳಕ್ಕೆ
ಇತ್ತೀಚೆಗೆ ಹೆಚ್ಚಿನ ಯುವಕರು ಹೃದಯಾಘಾತ ಸಾವಿಗೀಡಾಗುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ 39 ದಿನಗಳಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಸಮಸ್ಯೆಯ ಬಗ್ಗೆ ಸಂಸದ ಡಾ. ಸಿಎನ್ ಮಂಜುನಾಥ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ. ಹಾಸನ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆಗೆ ಡಿಹೆಚ್ಒ ಮನವಿ ಮಾಡಿದ್ದಾರೆ.
- Manjunath KB
- Updated on: Jun 29, 2025
- 3:20 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರೆದಿದೆ. ಇಂದು ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿಯ ಸಾವು ಸಂಭವಿಸಿದೆ. 37 ವರ್ಷದ ಆಟೋ ಚಾಲಕನಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಇದೇ ರೀತಿಯ 16 ಸಾವುಗಳು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
- Manjunath KB
- Updated on: Jun 28, 2025
- 11:24 am
ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ
ಹಾಸನ ಜಿಲ್ಲೆ ಸಕಲೇಶಪುರದ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಾತ್ರಿ ಶಿರಾಡಿ ಮಾರ್ಗವಾಗಿ ತೆರಳುತ್ತಿದ್ದ ನೂರಾರು ವಾಹನಗಳು ಅಲ್ಲಲ್ಲೇ ಬಾಕಿ ಆಗಿವೆ. ಬಸ್, ಕಾರುಗಳಲ್ಲಿದ್ದ ಪ್ರಯಾಣಿಕರು ಆಹಾರ, ನೀರು ಇಲ್ಲದೆ ಒದ್ದಾಡಿದ್ದಾರೆ. ವಿಡಿಯೋ ಇಲ್ಲಿದೆ.
- Manjunath KB
- Updated on: Jun 26, 2025
- 9:19 am