AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಕೆಬಿ

ಮಂಜುನಾಥ ಕೆಬಿ

ಜಿಲ್ಲಾ ವರದಿಗಾರ - TV9 Kannada

manjunatha.byraiah@tv9.com

ಮಂಜುನಾಥ ಕೆಬಿ
ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ ಹಾಸನದಲ್ಲಿ ರಾರಾಜಿಸಿದ ಫ್ಲೆಕ್ಸ್​​ಗಳು

ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ ಹಾಸನದಲ್ಲಿ ರಾರಾಜಿಸಿದ ಫ್ಲೆಕ್ಸ್​​ಗಳು

ಹಾಸನದಲ್ಲಿ ಎರಡು ವರ್ಷಗಳ ಬಳಿಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಪ್ರತ್ಯಕ್ಷವಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್​ಗೆ ಹುಟ್ಟು ಹಬ್ಬದ ಶುಭಕೋರಿ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ಫ್ಲೆಕ್ಸ್ ಅಳವಡಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ಪ್ರಜ್ವಲ್​​ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ನಡುವೆಯೂ ಹಾಕಿರುವ ಫ್ಲೆಕ್ಸ್​​ಗಳು ಚರ್ಚೆಗೆ ಗ್ರಾಸವಾಗಿದೆ.

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್

ಸಕಲೇಶಪುರದ ಎಡಕುಮೇರಿ ಬಳಿ ರೈಲ್ವೆ ಹಳಿಗೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಇಂದು ಕೂಡ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ. ಶನಿವಾರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ನಿರಂತರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ!

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ!

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕುಮಾರಿ-ಶಿರವಾಗಿಲು ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರೈಲ್ವೆ ಇಲಾಖೆ ಹಿಟಾಚಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದೆ. ಮಳೆ ಮುಂದುವರಿದರೆ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಹಾಸನದಲ್ಲಿ ಒಎಂಆರ್ ಶೀಟ್ ಅದಲು ಬದಲು! ಡಿಸಿ ಹೇಳಿದ್ದೇನು?

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಹಾಸನದಲ್ಲಿ ಒಎಂಆರ್ ಶೀಟ್ ಅದಲು ಬದಲು! ಡಿಸಿ ಹೇಳಿದ್ದೇನು?

ಹಾಸನ ನಗರದ ಗಂಧದ ಕೋಠಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ನಡೆದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆಯಲ್ಲಿ OMR ಶೀಟ್ ಹಾಗೂ ಪ್ರಶ್ನೆಪತ್ರಿಕೆ ಸಂಖ್ಯೆ ಅದಲು-ಬದಲಾಗಿದೆ ಎಂಬ ವದಂತಿಯಿಂದ ಅಭ್ಯರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಲತಾಕುಮಾರಿ, KEA ಅಧಿಕಾರಿಗಳ ಜೊತೆ ಮಾತನಾಡಿ ತಾಂತ್ರಿಕವಾಗಿ ಯಾವುದೇ ಸಮಸ್ಯೆಯಾಗುವುದಿಲ್ಲ, ಅಭ್ಯರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭೂಕುಸಿತದಿಂದ ರೈಲು ಸಂಚಾರ ಸ್ಥಗಿತ: ತೀವ್ರ ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು

ಭೂಕುಸಿತದಿಂದ ರೈಲು ಸಂಚಾರ ಸ್ಥಗಿತ: ತೀವ್ರ ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು

ಹಾಸನ ಮತ್ತು ಮಂಗಳೂರು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆಯಾಗಿದೆ. ಭಾರೀ ಮಳೆಯಿಂದಾಗಿ ಯೆಡಕುಮಾರಿ ಬಳಿ ಗುಡ್ಡ ಕುಸಿದಿದ್ದು, ಹಲವು ರೈಲುಗಳು ಸ್ಥಗಿತಗೊಂಡಿವೆ. ಇದರಿಂದ ನೂರಾರು ಪ್ರಯಾಣಿಕರು, ಅದರಲ್ಲೂ ಬೆಂಗಳೂರಿಗೆ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಗೆ ಹೊರಟಿದ್ದ ಆಕಾಂಕ್ಷಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ರೈಲ್ವೆ ಇಲಾಖೆ ತೆರವು ಕಾರ್ಯ ಆರಂಭಿಸಿದೆ.

ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್‌ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್‌ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

Cauvery Water Dispute: ಕಾವೇರಿ ನೀರು ಹಂಚಿಕೆ ಕುರಿತು CWMA ಆದೇಶವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಜಲಾಶಯಗಳ ನೀರಿನ ಪ್ರಮಾಣ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ

ಹಾಸನ: ಭವಾನಿ ರೇವಣ್ಣ ಅವರು ಅತ್ತೆ ಚನ್ನಮ್ಮರ ಬಗ್ಗೆ ಭಾವುಕ ನೆನಪುಗಳನ್ನು ಹಂಚಿಕೊಂಡರು. ಚನ್ನಮ್ಮ ಅವರು ಅತಿಯಾದ ದೇವರ ಭಕ್ತಿ ಹೊಂದಿದ್ದರು, ಪ್ರತಿದಿನವೂ ದೀರ್ಘಕಾಲ ಪೂಜೆ ಸಲ್ಲಿಸುತ್ತಿದ್ದರು. ರೇವಣ್ಣ ಅವರಿಗೆ ತಂದೆ-ತಾಯಿ ದೇವರ ಸಮಾನವಾಗಿದ್ದರು. ಅಮ್ಮ ಹಾಸನಕ್ಕೆ ಬಂದಾಗ ತನ್ನೊಂದಿಗೇ ಇರುತ್ತಿದ್ದರು. ಚನ್ನಮ್ಮ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ರಾಜಕಾರಣಿಯೇ ಅಲ್ಲದಿದ್ದರೂ, ಅವರು ಗಳಿಸಿದ್ದ ಪ್ರೀತಿ ಅಪಾರ ಎಂದು ಭವಾನಿ ಹೇಳಿದರು.

ಚೆನ್ನಮ್ಮನವರ 11ನೇ ದಿನದ ಕಾರ್ಯ: ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು

ಚೆನ್ನಮ್ಮನವರ 11ನೇ ದಿನದ ಕಾರ್ಯ: ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ದಿವಂಗತ ಪತ್ನಿ ಚೆನ್ನಮ್ಮನವರ ಪುಣ್ಯ ಸ್ಮರಣೆಯ ಅಂಗವಾಗಿ ಮಾವಿನಕೆರೆ ಸಮಾಧಿ ಬಳಿ ಮೊದಲ ಪೂಜೆ ಸಲ್ಲಿಸಿದರು. ಹೂವಿನ ಹಾರ ಮತ್ತು ಮಲ್ಲಿಗೆ ಹೂಗಳನ್ನು ಅರ್ಪಿಸಿ ಪತ್ನಿಯ ನೆನಪಲ್ಲಿ ಭಾವುಕರಾಗಿ ಮೌನವಾಗಿ ಕುಳಿತರು. ಕುಟುಂಬ ಸದಸ್ಯರು ಹಾಗೂ ಬಂಧುಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು

ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಪತ್ನಿ ಚೆನ್ನಮ್ಮ ಅಗಲಿಕೆಯ ನೋವಿನಿಂದ ಹೊರಬರಲಾಗದೆ ಕಣ್ಣೀರಿಡುತ್ತಿದ್ದಾರೆ. ಚೆನ್ನಮ್ಮ ಅವರ 11ನೇ ದಿನದ ಕಾರ್ಯಕ್ಕಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಕಲ ಸಿದ್ಧತೆ ನಡೆದಿದೆ. ಲಕ್ಷಾಂತರ ಭಕ್ತರು, ಕುಟುಂಬಸ್ಥರು ಭಾಗವಹಿಸುವ ನಿರೀಕ್ಷೆಯಿದ್ದು, ಅವರ ಪುತ್ರ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್​ಡಿ ಕುಮಾರಸ್ವಾಮಿ ಭಾವುಕ ಮಾತು

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್​ಡಿ ಕುಮಾರಸ್ವಾಮಿ ಭಾವುಕ ಮಾತು

ತಾಯಿ ಚೆನ್ನಮ್ಮನವರ ಅಗಲಿಕೆಯ ನಂತರ, ಹೆಚ್.ಡಿ. ಕುಮಾರಸ್ವಾಮಿ ಅವರು ಅವರ ನೆನಪಿನಲ್ಲಿ ಸಮಾಜ ಸೇವೆಯ ವಿನೂತನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ವೃದ್ಧರು, ಅನಾಥರು, ರೈತರು ಮತ್ತು ಸಂಸ್ಕೃತ ಪಾಠಶಾಲೆಗಳಿಗಾಗಿ ಈ ಸ್ಥಳವನ್ನು ಸಮರ್ಪಿಸಲಾಗುವುದು. ತಮ್ಮ ಗಳಿಕೆಯನ್ನು ನಾಡಿನ ಜನತೆಗೆ ಅರ್ಪಿಸುವ ಹಾಗೂ ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ: ಹಾಸನ, ಮಂಡ್ಯ, ತುಮಕೂರು ರೈತರಲ್ಲಿ ಆತಂಕ

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ: ಹಾಸನ, ಮಂಡ್ಯ, ತುಮಕೂರು ರೈತರಲ್ಲಿ ಆತಂಕ

ಹಾಸನದ ಹೇಮಾವತಿ ಜಲಾಶಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ನೀರಿನ ಸಂಗ್ರಹ ಮಟ್ಟ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಜಲಾಶಯದಲ್ಲಿ ಅತ್ಯಲ್ಪ ನೀರಿದ್ದು, ಲಕ್ಷಾಂತರ ರೈತರು ಕೃಷಿಗಾಗಿ ನೀರು ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ಆತಂಕ ಎದುರಾಗಿರುವಾಗ, ತಮಿಳುನಾಡಿಗೆ ನೀರು ಬಿಡುವ ಕುರಿತು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ