ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ಗೆ ಚಳಿ ಬಿಡಿಸಿದ ಗ್ರಾಹಕ
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ, ಕೆನರಾ ಬ್ಯಾಂಕ್ 9.34 ರೂಪಾಯಿ ಬಾಕಿ ಸಾಲಕ್ಕಾಗಿ ಹಿರಿಯ ಗ್ರಾಹಕರನ್ನು ಸಂಪರ್ಕಿಸಿದೆ. 10 ರೂಪಾಯಿ ಪಾವತಿಸಿದ ಗ್ರಾಹಕರು, ಬ್ಯಾಂಕ್ 64 ಪೈಸೆ ಚಿಲ್ಲರೆ ಹಿಂದಿರುಗಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡ ಸಾಲಗಾರರನ್ನು ಬಿಟ್ಟು ಬಡ ರೈತನಿಗೆ ಕಿರುಕುಳ ನೀಡುತ್ತಿರುವುದಕ್ಕೆ ಪ್ರಶ್ನಿಸಿ, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
- Manjunath KB
- Updated on: Feb 26, 2026
- 9:33 pm
ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ
bonded labour Hassan, worker rescue Karnataka, forced labour India, ginger farm exploitation, Nagaraj absconding, human trafficking Hassan, ಜೀತ ಪದ್ಧತಿ, ಹಾಸನ,ಕಾರ್ಮಿಕರ ರಕ್ಷಣೆ, ದಿನಗೂಲಿ ಇಲ್ಲ, ಶುಂಠಿ ಕೆಲಸ, Crime, Kannada News, Karnataka, Latest News
- Manjunath KB
- Updated on: Feb 26, 2026
- 12:42 pm
ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್: ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ
ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ನಡೆದ ಹಾಸನ ಕೆಡಿಪಿ ಸಭೆಯಲ್ಲೂ ಚರ್ಚೆಯಾಗಿದೆ.
- Manjunath KB
- Updated on: Feb 25, 2026
- 4:08 pm
ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್: ಕಾರಣ ಇಲ್ಲಿದೆ
ಹಾಸನ ಮಹಾನಗರ ಪಾಲಿಕೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ಅಧಿಕಾರಿಗಳ ನಡುವೆ ಕಲಹ ನಡೆದಿದೆ. ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ತಮ್ಮ ಕಚೇರಿಯಿಂದ ತೆರವುಗೊಳಿಸಿದ್ದಾರೆ. ತಮ್ಮ ಅನುಮತಿ ಇಲ್ಲದೆ ಕ್ಯಾಮರಾ ಹಾಕಿದ್ದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿರೋದು, ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.
- Manjunath KB
- Updated on: Feb 25, 2026
- 11:36 am
ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಬಡ ಮಹಿಳೆಯರು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಹೋದರೆ ಅನಾಹುತಗಳೇ ಆಗುತ್ತಿವೆ. ಒಂದು ಬಾಣಂತಿ ಸಾವು, ಇಲ್ಲ ನವಜಾತ ಶಿಶು ಸಾವಾಗಿರುತ್ತೆ. ವೈದ್ಯರ ನಿರ್ಲಕ್ಷ್ಯವೋ ಏನೋ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಲ್ಲ ಒಂದು ಅನಾಹುತಗಳು ಆಗುತ್ತಲೇ ಇವೆ. ಅದರಂತೆ ಹಾಸನದ ಹಿಮ್ಸ್ನಲ್ಲಿ ಬಾಣಂತಿ ಸಾವನ್ನಪ್ಪಿದ್ದಾಳೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಯಾವ ಗ್ಯಾರಂಟಿ ಮೇಲೆ ಹೋಗಬೇಕು ಎನ್ನುವುದೇ ಪ್ರಶ್ನೆಯಾಗಿದೆ.
- Manjunath KB
- Updated on: Feb 24, 2026
- 10:41 pm
ಹಾಸನ: ಅವೈಜ್ಞಾನಿಕ ಹಂಪ್ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ
ಹಾಸನದಲ್ಲಿ ಅವೈಜ್ಞಾನಿಕ ಸ್ಪೀಡ್ ಬ್ರೇಕರ್ಗೆ ವಿದ್ಯಾರ್ಥಿನಿ ಬಲಿಯಾಗಿದ್ದು, ಮತ್ತೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ಸೂಚನಾ ಫಲಕಗಳಿಲ್ಲದ ಮತ್ತು ಬಣ್ಣ ಮಾಸಿದ ಹಂಪ್ನಿಂದ ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಸುರಕ್ಷತೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ತಕ್ಷಣ ಹಂಪ್ಗಳಿಗೆ ಸೂಚನಾ ಫಲಕ ಅಳವಡಿಸಲು ಆಗ್ರಹಿಸಿದ್ದಾರೆ.
- Manjunath KB
- Updated on: Feb 23, 2026
- 12:48 pm
ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ! ಆಡಿಟ್ ವೇಳೆ ಸಿಬ್ಬಂದಿಯ ಕಳ್ಳಾಟ ಬಯಲು
ಹಾಸನದಲ್ಲಿ ಎಟಿಎಂಗಳಿಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಮೂರು ಕೋಟಿಗೂ ಹೆಚ್ಚು ಹಣ ದುರುಪಯೋಗವಾಗಿದೆ. ಆಡಿಟ್ ವೇಳೆ ಈ ಅವ್ಯವಹಾರ ಬಯಲಾಗಿದ್ದು, ಇಬ್ಬರು ಸಿಬ್ಬಂದಿ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೃತಕ ದಾಖಲೆ ಸೃಷ್ಟಿಸಿ 18 ಎಟಿಎಂಗಳಿಗೆ ಹಣ ಜಮಾ ಮಾಡದೆ ವಂಚಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
- Manjunath KB
- Updated on: Feb 21, 2026
- 10:50 am
ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ
ಹಾಸನಾಂಬೆ ಉತ್ಸವದ ವೇಳೆ ನಡೆದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಲಕ್ಷಾಂತರ ರೂ. ಅಕ್ರಮ ಆರೋಪ ಕೇಳಿಬಂದಿದೆ. RTI ಕಾರ್ಯಕರ್ತ ದೂರಿನನ್ವಯ ಲೋಕಾಯುಕ್ತ ತನಿಖೆ ಆರಂಭಿಸಿದ್ದು, ಹಾಸನದಲ್ಲಿ ದೂರುದಾರರು ಹಾಗೂ ಪಾಲಿಕೆ ಇಂಜಿನಿಯರ್ಗಳನ್ನು ವಿಚಾರಣೆ ನಡೆಸಲಾಗಿದೆ. 15 ಲಕ್ಷಕ್ಕೂ ಅಧಿಕ ಹಣ ದುರುಪಯೋಗ ಆರೋಪ ಕೇಳಿಬಂದಿದೆ.
- Manjunath KB
- Updated on: Feb 20, 2026
- 3:24 pm
Hassan: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯಪಾನ ಮಾಡಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕಾರಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರೆ, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅತಿ ವೇಗ ಮತ್ತು ಮದ್ಯ ಸೇವಿಸಿ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- Manjunath KB
- Updated on: Feb 19, 2026
- 6:26 am
ಬಲವಂತವಾಗಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್: ಹನಿಟ್ರ್ಯಾಪ್ ಮಾಡಿಸಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಬಂಧನ
ಹಾಸನದ ಹೊಳೆನರಸೀಪುರದಲ್ಲಿ ಬಡ ಮಹಿಳೆಯರನ್ನು ಬಳಸಿಕೊಂಡು ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಬೆದರಿಕೆ ಒಡ್ಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಅರೆಕಾಲಿಕ ಉಪನ್ಯಾಸಕಿ ನಾಗಲಕ್ಷ್ಮೀ ಕಿಂಗ್ಪಿನ್ ಆಗಿದ್ದು, ಈ ಹಿಂದೆಯೂ ಇಂಥ ಕೃತ್ಯಗಳನ್ನೆಸಗಿದ್ದಳು ಎನ್ನಲಾಗಿದೆ. ಆಕೆಯ ಪತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
- Manjunath KB
- Updated on: Feb 18, 2026
- 12:03 pm
ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಆರೋಪಿಗಳು!
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಆಸ್ತಿ ಕಲಹಕ್ಕೆ ಕೆಎಸ್ಆರ್ಟಿಸಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಎರಡು ಎಕರೆ ಭೂಮಿ ವಿವಾದದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿ ಬಂದಿದ್ದ ವೀರಪ್ಪನನ್ನು ಕುಟುಂಬಸ್ಥರೇ ಕೊಲೆ ಮಾಡಿ, ದೇಹಕ್ಕೆ ಪೆಟ್ರೋಲ್ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 11 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆಲೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Manjunath KB
- Updated on: Feb 18, 2026
- 11:29 am
ಹಾಸನ ಸೈಟ್ ವಿವಾದ: ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಮೊದಲ ಪ್ರತಿಕ್ರಿಯೆ
ಹಾಸನದ ಎಸ್ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ಪುಷ್ಪಾ ಅರುಣ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿರುವ ವಿಡಿಯೋ ಇಲ್ಲಿದೆ..
- Manjunath KB
- Updated on: Feb 17, 2026
- 9:38 pm