ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ
ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹಮದ್ ಖಾನ್ ಅವರಿಗೆ ಅವರಿಗೆ ಮೊದಲ ಹಂತದ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದೆ. ಹೀಗಾಗಿ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ಹಂತದಲ್ಲಿ ಜಮೀರ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಪಟ್ಟು ಹಿಡಿದ್ದಾರೆ. ಇದರ ಮಧ್ಯೆ ಇದೀಗ ಕೋಡಿಶ್ರೀಗಳು ಸಹ ಜಮೀರ್ ಅಹಮ್ಮದ್ ಖಾನ್ ಪರ ಬ್ಯಾಟಿಂಗ್ ಮಾಡಿದ್ದಾರೆ.
- Manjunath KB
- Updated on: Jun 7, 2026
- 7:51 pm
ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
- Manjunath KB
- Updated on: May 26, 2026
- 5:44 pm
‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು
ಇರಾನ್-ಇಸ್ರೇಲ್ ಯುದ್ಧ, ಚಿನ್ನದ ಬೆಲೆ ಏರಿಕೆ ಮತ್ತು ಆಮದು ಸುಂಕ ಹೆಚ್ಚಳದಿಂದ ರಾಜ್ಯದ ಅದರಲ್ಲೂ ಹಾಸನ ಜಿಲ್ಲೆಯ ಸಾವಿರಾರು ಅಕ್ಕಸಾಲಿಗರು ತೀವ್ರ ಸಂಕಷ್ಟದಲ್ಲಿದ್ದಾರೆ. ಆಭರಣ ಖರೀದಿ ಕುಸಿದಿದ್ದು, ಕೆಲಸವಿಲ್ಲದೆ ಕಾರ್ಮಿಕರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಕಾರ್ಪೊರೇಟ್ ಸ್ಪರ್ಧೆಯ ನಡುವೆ ಸಣ್ಣ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದು, ಸರ್ಕಾರದಿಂದ ತುರ್ತು ನೆರವು ಕೋರಿದ್ದಾರೆ.
- Manjunath KB
- Updated on: May 18, 2026
- 5:07 pm
ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್ಡೇಟ್
ಬೆಂಗಳೂರು-ಮಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದ ಕಾಮಗಾರಿ ದಶಕಗಳ ನಂತರ ಕಡೆಗೂ ಬಹುತೇಕ ಪೂರ್ಣಗೊಂಡಿದೆ. ಇದರಿಂದ ಮಳೆಗಾಲದಲ್ಲಿ ಸಂಚಾರ ಸ್ಥಗಿತಗೊಳ್ಳುವ ಆತಂಕ ದೂರವಾಗಿದ್ದು, ಪ್ರಯಾಣದ ಸಮಯ ಕೂಡ ಗಣನೀಯವಾಗಿ ಇಳಿಕೆಯಾಗಲಿದೆ. ಪ್ರತಿ ವರ್ಷ ಈ ಭಾಗದಲ್ಲಿ ರಸ್ತೆ ಕಾಮಗಾರಿಯ ಕಿರಿಕಿರಿಯಿಂದ ಸಂಚಾರ ದುಸ್ತರವಾಗುತ್ತಿತ್ತು.
- Manjunath KB
- Updated on: May 19, 2026
- 1:57 pm
ಹಾಸನ: ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ? ನಿರ್ವಾಹಕ ಹೇಳಿದ್ದೇನು ನೋಡಿ
ಹಾಸನದ ಶಾಂತಿಗ್ರಾಮ ಬಳಿ ಟೈರ್ ಸ್ಫೋಟಗೊಂಡು ಖಾಸಗಿ ಸ್ಲೀಪರ್ ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಉಡುಪಿಯ ಮಣಿಪಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿದ್ದ 36 ಪ್ರಯಾಣಿಕರನ್ನು ಚಾಲಕ ಸಮಯಪ್ರಜ್ಞೆಯಿಂದ ಕ್ಷಣಾರ್ಧದಲ್ಲಿ ರಕ್ಷಿಸಿದ್ದಾರೆ. ಭಾರೀ ಆಸ್ತಿ ನಷ್ಟವಾಗಿದ್ದರೂ, ಯಾವುದೇ ಜೀವಹಾನಿ ಸಂಭವಿಸಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಘಟನೆಯ ತನಿಖೆ ನಡೆಸುತ್ತಿದ್ದಾರೆ.
- Manjunath KB
- Updated on: May 16, 2026
- 12:55 pm
ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಯುವ ಜೋಡಿ!
ಪೋಷಕರ ವಿರೋಧದ ನಡುವೆಯೂ ಸಕಲೇಶಪುರದ ಪ್ರೇಮಿಗಳಾದ ಮನೋಜ್ ಮತ್ತು ಪ್ರೀತಿ ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾಗಿದ್ದಾರೆ. ರಕ್ಷಣೆ ಕೋರಿ ನವದಂಪತಿ ಮನವಿ ಮಾಡಿದ್ದಾರೆ. ಅಂಬೇಡ್ಕರ್ ಪ್ರತಿಮೆ ಎದುರಿನ ವಿವಾಹದ ವಿಡಿಯೋ ಈಗ ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
- Manjunath KB
- Updated on: May 16, 2026
- 8:16 am
ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ಹಾಸನದ ಶಾಂತಿಗ್ರಾಮ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ನ ಟೈರ್ ಸ್ಫೋಟಗೊಂಡು ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಲಗೇಜ್ಗಳು ಸುಟ್ಟು ಭಸ್ಮವಾಗಿವೆ. ಬಸ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಕೆಲಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
- Manjunath KB
- Updated on: May 16, 2026
- 9:26 am
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರಲಗದ್ದೆ ಮತ್ತು ನಾರ್ವೆ ರಸ್ತೆ ಮಾರ್ಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ 25ಕ್ಕೂ ಹೆಚ್ಚು ಆನೆಗಳ ಬೃಹತ್ ಹಿಂಡು ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಭೀತಿ ಮೂಡಿಸಿದೆ. ಕಾಫಿ ತೋಟದಿಂದ ಮತ್ತೊಂದು ತೋಟಕ್ಕೆ ಗಜಪಡೆ ಪರೇಡ್ ನಡೆಸುತ್ತಿದ್ದು, ರಸ್ತೆ ದಾಟುವ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ.
- Manjunath KB
- Updated on: May 13, 2026
- 2:27 pm
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್ಡಿ ದೇವೇಗೌಡ
ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಜಕೀಯ ಜೀವನ ಕುರಿತ ಪುಸ್ತಕವನ್ನು ಮೇ 25 ರಂದು ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕವನ್ನು ಕೃಷಿ ಸಚಿವರು ಬರೆದಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರಿಂದ ಪ್ರಮುಖ ಯೋಜನೆಯೊಂದನ್ನು ಉದ್ಘಾಟಿಸಲು ಸಿದ್ಧತೆ ನಡೆಯುತ್ತಿದೆ. ಜೂನ್ ಒಳಗೆ ಕಾಮಗಾರಿ ಪೂರ್ಣಗೊಂಡರೆ, ಪರಿಶೀಲನೆ ಬಳಿಕ ಪ್ರಧಾನಿಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಲಾಗಿದೆ.
- Manjunath KB
- Updated on: May 12, 2026
- 10:39 pm
ದಳಪತಿ ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಟಿವಿಕೆ ವಿಜಯ್ ಘೋಷಿಸಿರುವ ಉಚಿತ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಪ್ರಶ್ನಿಸಿದ್ದಾರೆ. ತಮಿಳುನಾಡಿನ ಬಜೆಟ್ 3.30 ಲಕ್ಷ ಕೋಟಿ ರೂ. ಇದ್ದು, ವಿಜಯ್ ಯೋಜನೆಗಳಿಗೆ 6-7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ಹಣವನ್ನು ಹೇಗೆ ಹೊಂದಿಸುತ್ತಾರೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
- Manjunath KB
- Updated on: May 8, 2026
- 12:52 pm
ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ
ದಸರಾ ಸಂದರ್ಭದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಮೆರೆಸುತ್ತಿದ್ದ ಹೆಮ್ಮೆಯ ಅರ್ಜುನ ಆನೆ ಸಾವನ್ನಪ್ಪಿದ್ದು, ಇದೀಗ ಅದರ ಸ್ಮಾರಕವನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಂದು (ಮೇ 09) ಅರಣ್ಯ ಸಚಿವ ಈಶ್ವರ್ ಖಂಡ್ರೆ ಲೋಕಾರ್ಪಣೆಗೊಳಿಸಿದರು. 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು.
- Manjunath KB
- Updated on: May 6, 2026
- 11:11 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್ನಲ್ಲಿತ್ತು ಅಸಹ್ಯ ಚಿತ್ರಗಳು
ಬೆಂಗಳೂರಿನ ದಾಸರಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಬಿಎಂಟಿಸಿ ಅಧಿಕಾರಿ ಜಗದೀಪ್, ಅಕ್ರಮ ಸಂಬಂಧದಿಂದ ಗರ್ಭಿಣಿ ಪತ್ನಿ ಶ್ವೇತಾರನ್ನು ಮನೆಯಿಂದ ಹೊರಹಾಕಿದ್ದಾರೆ. ಆರು ತಿಂಗಳ ಗರ್ಭಿಣಿಗೆ 'ಮಗು ತೆಗೆಸಿಬಿಡು' ಎಂದು ಕಿರುಕುಳ ನೀಡಿ, ದೈಹಿಕ ಹಲ್ಲೆ ನಡೆಸಿದ್ದಾರೆ. ಮನೆ ಕಳೆದುಕೊಂಡ ಶ್ವೇತಾ, ನ್ಯಾಯಕ್ಕಾಗಿ ಬಾಗಲಗುಂಟೆ ಪೊಲೀಸರನ್ನು ಆಶ್ರಯಿಸಿದ್ದಾರೆ. ಪತಿಯ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.
- Manjunath KB
- Updated on: May 3, 2026
- 1:10 pm