AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಕೆಬಿ

ಮಂಜುನಾಥ ಕೆಬಿ

Author - TV9 Kannada

manjunatha.byraiah@tv9.com
ಕೋವಿಡ್ ಸಮಯದಲ್ಲಿ ಬೇಕಿದ್ವಿ, ಈಗ ಬೇಡವಾದ್ವಾ?; ಹಾಸನದಲ್ಲಿ ಗ್ರೂಪ್ ಡಿ ನೌಕರರ ಕಣ್ಣೀರು: 20 ಸ್ವಚ್ಛತಾ ಸಿಬ್ಬಂದಿ ಏಕಾಏಕಿ ವಜಾ

ಕೋವಿಡ್ ಸಮಯದಲ್ಲಿ ಬೇಕಿದ್ವಿ, ಈಗ ಬೇಡವಾದ್ವಾ?; ಹಾಸನದಲ್ಲಿ ಗ್ರೂಪ್ ಡಿ ನೌಕರರ ಕಣ್ಣೀರು: 20 ಸ್ವಚ್ಛತಾ ಸಿಬ್ಬಂದಿ ಏಕಾಏಕಿ ವಜಾ

ಹಾಸನದ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ 20 ಸ್ವಚ್ಛತಾ ಗುತ್ತಿಗೆ ಸಿಬ್ಬಂದಿಯನ್ನು ಏಕಾಏಕಿ ವಜಾ ಮಾಡಿದ್ದನ್ನು ವಿರೋಧಿಸಿ ಉಳಿದ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುರಕ್ಷಾ ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಬ್ಬಂದಿ, ತಮಗೆ ಕೆಲಸಕ್ಕೆ ಬರಬೇಡಿ ಎಂದು ಬೆದರಿಕೆ ಹಾಕಲಾಗಿದೆ ಎಂದಿದ್ದಾರೆ. ಕೆಲಸ ಕಳೆದುಕೊಂಡವರು ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಬಂಧನ!

ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಬಂಧನ!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್ ಉದ್ಯಮಿಯೊಬ್ಬರಿಗೆ 2.66 ಕೋಟಿ ರೂಪಾಯಿ ವಂಚಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಉದ್ಯಮಿ ಸುಬ್ರಮಣಿ ಅವರಿಗೆ 30 ಕೋಟಿಯ ಬಿಸಿನೆಸ್ ಕಾಂಟ್ರಾಕ್ಟ್ ಕೊಡಿಸುವುದಾಗಿ ನಂಬಿಸಿ ನಕಲಿ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದ ಮ್ಯಾನೇಜರ್ ಹಾಗೂ ಆತನ ಇಬ್ಬರು ಸಹಚರರನ್ನು ಬಾಗಲಗುಂಟೆ ಪೊಲೀಸರು ಕೇವಲ ಎರಡೇ ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ

ಕರ್ನಾಟಕದ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಮೃತಪಟ್ಟ ಫಲಾನುಭವಿಗಳಿಗೆ ಸಂದಾಯವಾದ ಹಣವನ್ನು ಮರುಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಯಾವುದೇ ಫಲಾನುಭವಿಗೆ ಹಣ ನಿಲ್ಲುವುದಿಲ್ಲ. ನ್ಯೂನತೆಗಳನ್ನು ಸರಿಪಡಿಸಲು ಪರಿಷ್ಕರಣೆ ಅಗತ್ಯವಿದ್ದು, ಯೋಜನೆಯ ಸ್ಥಗಿತದ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ

ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಬಗರ್ ಹುಕುಂ ಭೂಮಿ ಮಂಜೂರಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು: ಡ್ಯಾಂನಲ್ಲಿ ಲಭ್ಯವಿರೋದು ಕೇವಲ 14 ಟಿಎಂಸಿ ನೀರು!

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು: ಡ್ಯಾಂನಲ್ಲಿ ಲಭ್ಯವಿರೋದು ಕೇವಲ 14 ಟಿಎಂಸಿ ನೀರು!

ಮುಂಗಾರು ಮಳೆ ಕೊರತೆಯಿಂದಾಗಿ ಹಾಸನದ ಹೇಮಾವತಿ ಜಲಾಶಯ ಬರಿದಾಗುತ್ತಿದ್ದು, 37 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 14 ಟಿಎಂಸಿ ನೀರು ಉಳಿದಿದೆ. ಇದರಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಆತಂಕ ಎದುರಾಗಿದೆ. ಒಂದೆಡೆ ಮಳೆ ಕೈಕೊಟ್ಟಿದ್ದರೆ ಇತ್ತ ಡ್ಯಾಂ ಕೂಡ ಬರಿದಾಗುತ್ತಿರುವ ಕಾರಣ ರೈತರು ಕಂಗಾಲಾಗಿದ್ದಾರೆ. ಕಳೆದ ವರ್ಷ ಅತಿಯಾದ ಮಳೆ ಸುರಿದು ಬೆಳೆ ನೀರುಪಾಲಾಗಿದ್ದರೆ, ಈ ವರ್ಷ ಮಳೆಯೇ ಇಲ್ಲದಿರೋದು ಸಾಲಶೂಲ ಮಾಡಿ ಬಿತ್ತನೆ ಮಾಡಿದ್ದ ಅನ್ನದಾತರ ನಿದ್ದೆ ಕಸಿದಿದೆ.

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ

ಹಾಸನದ ಗೊರೂರು ಬಳಿಯ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಮೂವರು ಬೆಂಗಳೂರು ಮೂಲದ ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಸದ್ಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಹೊರತೆಗೆಯಲು ಅಗ್ನಿಶಾಮಕ ದಳ ಮತ್ತು ಪೊಲೀಸರು ಶೋಧ ನಡೆಸಿದ್ದಾರೆ.

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸನದ ಕೃಷಿ ವಿಜ್ಞಾನ ಕಾಲೇಜು ಹಾಸ್ಟೆಲ್‌ನಲ್ಲಿ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಆರು ಮಂದಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ, ಶುಚಿತ್ವವಿಲ್ಲದೆ ಹೊರಗೆ ಅಡುಗೆ ಮಾಡುವಾಗ ಈ ಘಟನೆ ಸಂಭವಿಸಿದೆ. ಕಾಲೇಜು ಆಡಳಿತ ಹಾಗೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ

ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಲಹಳ್ಳಿ ಗ್ರಾಮದಲ್ಲಿ ಕಾಡಾನೆ ಮರಿಯೊಂದು ರಸ್ತೆಯಲ್ಲಿ ಕರುಗಳನ್ನು ಅಟ್ಟಾಡಿಸಿದ ವಿಡಿಯೋ ವೈರಲ್ ಆಗಿದೆ. ತಾಯಿ ಆನೆಯಿಂದ ಬೇರ್ಪಟ್ಟಿದ್ದ ಮರಿಯಾನೆ, ಕಾಫಿ ತೋಟದ ಬಳಿ ಕರುಗಳನ್ನು ಕಂಡೊಡನೆ ಅವುಗಳನ್ನು ಅಟ್ಟಾಡಿಸಿದೆ. ಈ ದೃಶ್ಯ ಸ್ಥಳೀಯರಲ್ಲಿ ಆತಂಕದ ಜೊತೆ ಕುತೂಹಲ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹಮದ್ ಖಾನ್ ಅವರಿಗೆ ಅವರಿಗೆ ಮೊದಲ ಹಂತದ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದೆ. ಹೀಗಾಗಿ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ಹಂತದಲ್ಲಿ ಜಮೀರ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಪಟ್ಟು ಹಿಡಿದ್ದಾರೆ. ಇದರ ಮಧ್ಯೆ ಇದೀಗ ಕೋಡಿಶ್ರೀಗಳು ಸಹ ಜಮೀರ್ ಅಹಮ್ಮದ್ ಖಾನ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು

ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು

ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು

‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು

ಇರಾನ್-ಇಸ್ರೇಲ್ ಯುದ್ಧ, ಚಿನ್ನದ ಬೆಲೆ ಏರಿಕೆ ಮತ್ತು ಆಮದು ಸುಂಕ ಹೆಚ್ಚಳದಿಂದ ರಾಜ್ಯದ ಅದರಲ್ಲೂ ಹಾಸನ ಜಿಲ್ಲೆಯ ಸಾವಿರಾರು ಅಕ್ಕಸಾಲಿಗರು ತೀವ್ರ ಸಂಕಷ್ಟದಲ್ಲಿದ್ದಾರೆ. ಆಭರಣ ಖರೀದಿ ಕುಸಿದಿದ್ದು, ಕೆಲಸವಿಲ್ಲದೆ ಕಾರ್ಮಿಕರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಕಾರ್ಪೊರೇಟ್ ಸ್ಪರ್ಧೆಯ ನಡುವೆ ಸಣ್ಣ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದು, ಸರ್ಕಾರದಿಂದ ತುರ್ತು ನೆರವು ಕೋರಿದ್ದಾರೆ.

ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್

ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದ ಕಾಮಗಾರಿ ದಶಕಗಳ ನಂತರ ಕಡೆಗೂ ಬಹುತೇಕ ಪೂರ್ಣಗೊಂಡಿದೆ. ಇದರಿಂದ ಮಳೆಗಾಲದಲ್ಲಿ ಸಂಚಾರ ಸ್ಥಗಿತಗೊಳ್ಳುವ ಆತಂಕ ದೂರವಾಗಿದ್ದು, ಪ್ರಯಾಣದ ಸಮಯ ಕೂಡ ಗಣನೀಯವಾಗಿ ಇಳಿಕೆಯಾಗಲಿದೆ. ಪ್ರತಿ ವರ್ಷ ಈ ಭಾಗದಲ್ಲಿ ರಸ್ತೆ ಕಾಮಗಾರಿಯ ಕಿರಿಕಿರಿಯಿಂದ ಸಂಚಾರ ದುಸ್ತರವಾಗುತ್ತಿತ್ತು.