ಮಂಜುನಾಥ ಕೆಬಿ
ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.
ಹಾಸನದಲ್ಲಿ ಮತ್ತೆ ಹೆಚ್.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ
ಹಾಸನದ ಗ್ರಾಮ ಪಂಚಾಯತಿ ಚುನಾವಣೆ ಮೀಸಲಾತಿ ನಿಗದಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಶಾಸಕರ ನಡೆಗೆ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯತಿ ಚುನಾವಣೆಗೆ ಅವೈಜ್ಞಾನಿಕವಾಗಿ ಮೀಸಲಾತಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ.
- Manjunath KB
- Updated on: Aug 24, 2026
- 5:05 pm
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ: ತಿರುಗೇಟು ನೀಡಿದ ಡಿಸಿ ಲತಾ ಕುಮಾರಿ!
ಗ್ರಾಮ ಪಂಚಾಯತಿ ಚುನಾವಣೆಗೆ ಮೀಸಲಾತಿ ನಿಗದಿಪಡಿಸುವ ಸಂಬಂಧ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಾರ್ಯವೈಖರಿ ಕುರಿತು ತೀವ್ರ ಟೀಕೆ ಮಾಡಿದ ರೇವಣ್ಣ ಅವರ ಹೇಳಿಕೆ ಬಳಿಕ, "ನಿಮ್ಮನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ದ್ವೇಷಿಸುತ್ತಾರೆ" ಎಂದು ಡಿಸಿ ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.
- Manjunath KB
- Updated on: Aug 25, 2026
- 6:30 am
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ದಾರುಣ ಅಂತ್ಯಕಂಡ ಯುವಕ
Tragedy Near Nelamangala: ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ. ಹೆದ್ದಾರಿಯಲ್ಲಿ ಬೆಳ್ಳಂ ಬೆಳಿಗ್ಗೆ 4:30ರ ಸಮಯದಲ್ಲಿ ಲಾರಿ ನಿಂತಿರೋದು ಕಾಣಿಸದೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ನಿರ್ಲಕ್ಷ್ಯದ ಹಿನ್ನೆಲೆ ಲಾರಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Manjunath KB
- Updated on: Aug 20, 2026
- 7:35 pm
10 ಜನರ ಬಲಿಪಡೆದಿದ್ದ ಹಾಸನ ಗಣೇಶೋತ್ಸವ ದುರಂತಕ್ಕೆ ಒಂದು ವರ್ಷ: ಅನುಮೋದನೆ ಸಿಕ್ಕರೂ ಶುರುವಾಗದ ಮೇಲ್ಸೇತುವೆ ಕಾಮಗಾರಿ!
Hassan Ganeshotsava tragedy: ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹತ್ತು ಜನರು ಸಾವನ್ನಪ್ಪಿದ್ದರು. ಈ ದುರಂತ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಸೆಪ್ಟೆಂಬರ್ 12ಕ್ಕೆ ಈ ದುರ್ಘಟನೆ ಸಂಭವಿಸಿ ಒಂದು ವರ್ಷವಾಗುತ್ತದೆ. ಹೀಗಿರುವಾಗ ಫ್ಲೈ ಓವರ್ ನಿರ್ಮಾಣದ ಬೇಡಿಕೆ ಇನ್ನೂ ಈಡೇರಿಲ್ಲ, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
- Manjunath KB
- Updated on: Aug 19, 2026
- 7:31 pm
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಬಳಿ ಸುಮಾರು 10 ಕಾಡಾನೆಗಳ ಹಿಂಡು ರಸ್ತೆ ದಾಟಲು ಪರದಾಡಿದ ಘಟನೆ ನಡೆದಿದೆ. ವಾಹನ ಸವಾರರು ಸೈಲೆಂಟ್ ಆಗಿ ವಾಹನಗಳನ್ನು ನಿಲ್ಲಿಸಿ ಆನೆಗಳು ಸುಲಭವಾಗಿ ರಸ್ತೆ ದಾಟಲು ನೆರವಾದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಇದೀಗ ವೀಡಿಯೋ ವೈರಲ್ ಆಗುತ್ತಿದೆ.
- Manjunath KB
- Updated on: Aug 19, 2026
- 12:47 pm
ರಾತ್ರಿ ಮಲಗಿದ್ದಾಗ ಗಂಡ, ಮಗುವಿನ ಕೊಲೆ: ಪತ್ನಿ ಸೇರಿದಂತೆ ಪ್ರಿಯಕರ ಅರೆಸ್ಟ್
Chikkabanavara Crime News: ಪ್ರಿಯಕರನೊಂದಿಗೆ ಸೇರಿ ಪತ್ನಿ ಗಂಡ ಮತ್ತು 5 ವರ್ಷದ ಪುಟ್ಟ ಮಗುವನ್ನು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಗುಟ್ಟೆ ಬಸವೇಶ್ವರ ಲೇಔಟ್ನಲ್ಲಿ ನಡೆದಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Manjunath KB
- Updated on: Aug 18, 2026
- 7:52 pm
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧಿಸಿದ ಹಾಸನ ಪೊಲೀಸರು!
ಜಿಲ್ಲೆಯಲ್ಲಿ ಮನೆಯಲ್ಲಿ ಜನರು ಇರುವಾಗಲೇ ಅವರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಹಾಸನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನದ ಎಸ್.ಪಿ. ಶುಭಾನ್ವಿತ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ. ಜೂನ್ 2ರಂದು ಆಲೂರು ತಾಲೂಕಿನ ಮಣಿಪುರ ಗ್ರಾಮದ ನಿವೃತ್ತ ನೌಕರ ಚಂದ್ರಶೇಖರಯ್ಯ ಅವರ ಮನೆಯಲ್ಲಿ ಮತ್ತು ಜುಲೈ 22ರಂದು ಈಶ್ವರಹಳ್ಳಿ ಕೂಡುಗೆ ಗ್ರಾಮದ ಮಂಜೆಗೌಡರ ಮನೆಯಲ್ಲಿ ಒಟ್ಟು ಎರಡು ದರೋಡೆ ಪ್ರಕರಣಗಳು ನಡೆದಿತ್ತು.
- Manjunath KB
- Updated on: Aug 17, 2026
- 10:05 am
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ ಗರಂ: ಅಧಿಕಾರಿಗಳಿಗೆ ಖಡಕ್ ಸೂಚನೆ
ಬೆಳೆ ವಿಮೆ ಪಾವತಿ ವಿಳಂಬದಿಂದ ರೈತರು ಸಂಕಷ್ಟದಲ್ಲಿರುವ ಬಗ್ಗೆ ಸಚಿವ ಶಿವಲಿಂಗೇಗೌಡರು ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಮಾ ಕಂಪನಿಗಳ ಬದಲು ಜಿಲ್ಲಾ ಕೃಷಿ ಅಧಿಕಾರಿಗಳೇ ರೈತರ ಖಾತೆಗೆ ಪರಿಹಾರ ತಲುಪಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಸಚಿವರು ತಾಕೀತು ಮಾಡಿದ್ದಾರೆ. ತಪ್ಪು ವರದಿಗಳಿಂದ ರೈತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
- Manjunath KB
- Updated on: Aug 16, 2026
- 10:47 am
ಹಾಸನದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪಿಎಸ್ಐ ಮಂಜುನಾಥ್ ರೆಡ್ಹ್ಯಾಂಡ್ ಅರೆಸ್ಟ್
ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಅವರು ಎನ್ಸಿಆರ್ ಇತ್ಯರ್ಥಪಡಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ ₹20,000 ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಶಿಲ್ಪಾ ಮತ್ತು ಗವಿರಾಜು ನೇತೃತ್ವದಲ್ಲಿ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆಯಲಾಗಿದೆ.
- Manjunath KB
- Updated on: Aug 14, 2026
- 1:45 pm
ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್ಪ್ರೆಸ್: ಶಿರಾಡಿಘಾಟ್ ಮಾರ್ಗದಲ್ಲಿ ಯಶಸ್ವಿ ಪ್ರಾಯೋಗಿಕ ಸಂಚಾರ
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ನಡುವಿನ ಶಿರಾಡಿಘಾಟ್ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. 20 ಬೋಗಿಗಳ ಈ ಅತ್ಯಾಧುನಿಕ ರೈಲು ಶೀಘ್ರದಲ್ಲೇ ಬೆಂಗಳೂರು-ಮಂಗಳೂರು ನಡುವೆ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದ್ದು, ಪ್ರಯಾಣಿಕರಿಗೆ ವೇಗದ ಹಾಗೂ ಐಷಾರಾಮಿ ಪ್ರಯಾಣದ ಅನುಭವ ನೀಡಲಿದೆ.
- Manjunath KB
- Updated on: Aug 12, 2026
- 1:14 pm
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣದ ಸನ್ನಿವೇಶ ಹೇಳಿ ಗದ್ಗದಿತರಾದ ದೇವೇಗೌಡ್ರು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಪತ್ನಿ ಸಾವಿನ ನೋವಿನಿಂದ ಆಚೆ ಬಂದಂತಿಲ್ಲ. ಇಂದು (ಆಗಸ್ಟ್ 10) ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಪತ್ನಿ ಸಮಾಧಿಗೆ ಪೂಜೆ ನೆರವೇರಿಸಿದರು. ಹೂ, ಅರಿಸಿಣ ಕುಂಕುಮ ಸಮರ್ಪಣೆ ಮಾಡಿ ಭಾವುಕರಾದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು, ನನ್ನ ಜೀವನದ ಬೆನ್ನೆಲುಬು ಈಕೆ. ಈಗ ಭೂದೇವಿಯ ಗರ್ಭದಲ್ಲಿ ಚಿರನಿದ್ರೆಯಲ್ಲಿ ಇದ್ದಾಳೆ.
- Manjunath KB
- Updated on: Aug 10, 2026
- 8:33 pm
ಕಾಂಗ್ರೆಸ್ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ? ಚರ್ಚೆಗೆ ಗ್ರಾಸವಾಯ್ತು ಪಿಸು ಮಾತು
ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕದಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ. ಹೀಗಾಗಿ ಅವರು ಸ್ಥಳೀಯವಾಗಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇಂದು (ಆಗಸ್ಟ್ 09) ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಜೊತೆ ಪಿಸು ಪಿಸು ಮಾತನಾಡಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ
- Manjunath KB
- Updated on: Aug 9, 2026
- 8:23 pm