ಮಾಜಿ ಆಪ್ತರಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ರಿವೀಲ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಾಜಿ ಆಪ್ತರಾದ ನವೀನ್ ಗೌಡ, ಕಾರ್ತಿಕ್, ಚೇತನ್ ಮತ್ತು ಹರೀಶ್ ಅವರೇ ವಿಡಿಯೋ ವೈರಲ್ ಹಿಂದಿನ ಪ್ರಮುಖ ರೂವಾರಿಗಳು. ಪ್ರಜ್ವಲ್ ಮೊಬೈಲ್ನಿಂದ ವಿಡಿಯೋ ಕದ್ದಿದ್ದ ಕಾರ್ತಿಕ್, ಇತರರೊಂದಿಗೆ ಸೇರಿ ಪೆನ್ಡ್ರೈವ್ಗಳನ್ನು ವಿತರಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರ ಮಾಜಿ ಆಪ್ತರೇ ಖೆಡ್ಡಾ ತೋಡಿದ್ದು ಸ್ಪಷ್ಟವಾಗಿದೆ.
- Manjunath KB
- Updated on: Mar 18, 2026
- 3:34 pm
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪ್ರೀತಂ ಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಆಪ್ತರಾದ ಶರತ್, ಕಿರಣ್, ಪುಟ್ಟರಾಜು ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೆನ್ ಡ್ರೈವ್ ಹಂಚಿಕೆ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಎಸ್ಐಟಿ ಇವರ ಹೆಸರುಗಳನ್ನು ಚಾರ್ಜ್ ಶೀಟ್ನಿಂದ ಕೈಬಿಟ್ಟಿದೆ. ಹಾಸನದ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.
- Manjunath KB
- Updated on: Mar 18, 2026
- 1:15 pm
ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್ಶೀಟ್ನಿಂದ ಮಿಸ್ಸಿಂಗ್?
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆಯಾದರೂ, ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪ್ರಮುಖ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸದೆ, ತನಿಖಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ಷೇಪ ತೆಗೆದಿದ್ದಾರೆ.
- Manjunath KB
- Updated on: Mar 18, 2026
- 1:01 pm
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ, ಸ್ಫೋಟಕ ಅಂಶ ಬಯಲು
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ! ಚಾರ್ಜ್ಶೀಟ್ನಲ್ಲಿ ಹಲವು ಅಚ್ಚರಿಯ ಸಂಗತಿಗಳು ಬಯಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.
- Manjunath KB
- Updated on: Mar 18, 2026
- 9:44 am
ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬ್ಯಾಂಕೊಂದು ಗ್ರಾಹಕನ ಬಳಿ 9 ರೂ 34 ಪೈಸೆ ಸಾಲ ಕಟ್ಟಿಸಿಕೊಂಡ ಘಟನೆ ನಡೆದಿದ್ದು, ಇದಕ್ಕೆ ಗ್ರಾಹಕ 10 ರೂ. ಪಾವತಿ ಮಾಡಿ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದು ಬ್ಯಾಂಕ್ ಸಿಬ್ಬಂದಿಗೆ ಛಳಿಬಿಡಿಸಿದ್ದ. ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದೀಗ ಬ್ಯಾಂಕ್ ರೈತನಿಗೆ 66 ಪೈಸೆ ಪಾವತಿಸಿದೆ.
- Manjunath KB
- Updated on: Mar 14, 2026
- 2:04 pm
ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಹಾಸನದಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಪಾಠ ಕಲಿಸಿದ್ದಾರೆ. ಅಜಾಗರೂಕ ಚಾಲನೆಯಿಂದ ಮೂರು ಬೈಕ್ಗಳು ಜಖಂಗೊಂಡು ನಾಲ್ವರಿಗೆ ಗಾಯವಾಗಿದೆ. ಮಾದಕ ದ್ರವ್ಯ ಸೇವನೆ ಶಂಕೆ ವ್ಯಕ್ತವಾಗಿದ್ದು, ಆಟೋ ಚಾಲಕರನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಆಟೋ ಜಪ್ತಿ ಮಾಡಲಾಗಿದ್ದು, ವೈದ್ಯಕೀಯ ತಪಾಸಣೆ ನಡೆಯುತ್ತಿದೆ.
- Manjunath KB
- Updated on: Mar 14, 2026
- 8:34 am
ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ
ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಾಗ ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. ಈ ಘಟನೆಯಲ್ಲಿ ಡಿವೈಎಸ್ಪಿ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ.
- Manjunath KB
- Updated on: Mar 6, 2026
- 10:47 pm
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್!
ಹಾಸನ ಮಹಾನಗರಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಳಗ್ಗೆ 5:30ಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಗೆ ಬಾಗಿಲು ತೆರೆಯಲು ಸತ್ಯನಾರಾಯಣ್ 4 ಗಂಟೆಗಳ ಕಾಲ ವಿಳಂಬ ಮಾಡಿದ್ದಾರೆ. ಪೊಲೀಸರ ನೆರವಿನೊಂದಿಗೆ ಅಧಿಕಾರಿಗಳು ಅಂತಿಮವಾಗಿ ಮನೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದ್ದಾರೆ.
- Manjunath KB
- Updated on: Mar 5, 2026
- 11:42 am
ಹಾಸನ: ಲೋಕಾಯುಕ್ತರು ದಾಳಿ ನಡೆಸಿದ್ರೂ ಬಾಗಿಲು ತೆರೆಯದೇ ಅಧಿಕಾರಿ ಹೈಡ್ರಾಮಾ!
ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ರವೀಂದ್ರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯಲು ನಿರಾಕರಿಸಲಾಗಿದೆ. ಡಿವೈಎಸ್ಪಿ ಸುರೇಶ್ ಕುಮಾರ್ ನೇತೃತ್ವದ ತಂಡ ಬಾಗಿಲು ತೆರೆಸಲು ಹರಸಾಹಸ ಪಟ್ಟರೂ ಬಾಗಿಲು ತೆರೆದಿಲ್ಲ.
- Manjunath KB
- Updated on: Mar 5, 2026
- 9:07 am
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹಾಸನದ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಮಂಗಳವಾರ ವೈಭವದಿಂದ ನೆರವೇರಿತು. ಕೇತುಗ್ರಸ್ತ ಚಂದ್ರ ಗ್ರಹಣ ಇದ್ದರೂ ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರಿ ರಥ ಎಳೆದು ಪುನೀತರಾದರು. ಶಾಸಕ ಎಚ್ಡಿ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಸೇರಿ ಅನೇಕ ರಾಜಕೀಯ ಮುಖಂಡರೂ ರಥೋತ್ಸವಕ್ಕೆ ಸಾಕ್ಷಿಯಾದರು.
- Manjunath KB
- Updated on: Mar 3, 2026
- 12:23 pm
ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ
ವಿಶ್ವ ಪಾರಂಪರಿಕ ತಾಣ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373ರ ಕಾಮಗಾರಿ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 630 ಕೋಟಿ ರೂ.ಗಳ ಈ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆಯ ತೊಡಕಿನಿಂದಾಗಿ ಕುಂಠಿತಗೊಂಡಿದೆ. ಶೀಘ್ರ ಸೂಕ್ತ ಪರಿಹಾರಕ್ಕೆ ಒತ್ತಾಯ ಕೇಳಿಬಂದಿದೆ.
- Manjunath KB
- Updated on: Mar 2, 2026
- 8:12 pm
ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಭಾರತೀಯರಿಗೂ ತಟ್ಟಿದೆ. ವಿಮಾನಗಳ ಹಾರಾಟ ರದ್ದು ಹಿನ್ನೆಲೆ ವಿದೇಶಗಳಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸದ್ಯ ಸಹಾಯಕ್ಕಾಗಿ ಅಂಗಲಾಚುತ್ತಿರುವ ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ದುಬೈ ಒಕ್ಕಲಿಗರ ಸಂಘವು ಸಂತ್ರಸ್ತರಿಗೆ ತುರ್ತು ನೆರವು ನೀಡಲು ಮುಂದಾಗಿದೆ. ಸಂಘದ ಅಧ್ಯಕ್ಷ ತಮ್ಮನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
- Manjunath KB
- Updated on: Mar 1, 2026
- 5:27 pm