AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಕೆಬಿ

ಮಂಜುನಾಥ ಕೆಬಿ

Author - TV9 Kannada

manjunatha.byraiah@tv9.com
ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರ್ನಾಟಕದ ಕಾಫಿ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕಾಫಿ ಬೆಲೆ ಶೇ 20ರಷ್ಟು ಕುಸಿದಿದ್ದು, ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ, 2 ವಾರಗಳ ಮಟ್ಟಿಗೆ ಕದನ ವಿರಾಮ ಘೋಷಣೆಯಾಗಿದ್ದು, ಕಾಫಿ ಬೆಳೆಗಾರರ ಸಂಕಷ್ಟ ಬಗೆಹರಿಯುತ್ತದೆಯಾ ಕಾದುನೋಡಬೇಕಿದೆ.

ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ

ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ

ಹಾಸನ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ದಾರಿ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಸದ್ಯ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದ್ದು, ಆರು ಜನರನ್ನು ಬಂಧಿಸಲಾಗಿದೆ. 8 ವರ್ಷದಿಂದ ಬಹಿಷ್ಕಾರ, ಜೀವ ಬೆದರಿಕೆ ಎದುರಿಸುತ್ತಿರುವ ಸಂತ್ರಸ್ತ ಕುಟುಂಬ ನ್ಯಾಯ ಮತ್ತು ರಕ್ಷಣೆಗೆ ಆಗ್ರಹಿಸಿದೆ.

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಸಕಲೇಶಪುರದ ಮತ್ತೂರು ಗ್ರಾಮದಲ್ಲಿ ಕಾಡಾನೆಗಳ ಮೇಲೆ ನಿಗಾ ಇರಿಸಿದ್ದ ಇಟಿಎಫ್ ಸಿಬ್ಬಂದಿ ಮೇಲೆ ಆನೆ ದಾಳಿ ನಡೆಸಿದೆ. ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು ಬೈಕ್ ಬಿಟ್ಟು ಪರಾರಿಯಾಗಿದ್ದು, ಆನೆ ಬೈಕ್‌ಗಳನ್ನು ಜಖಂಗೊಳಿಸಿದೆ. ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ಸಿಲಿಂಡರ್ ಬದಲಾಯಿಸುವಾಗ ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆ, ಆಕೆಯ ಪುತ್ರ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಗೊಳಗಾಗಿದ್ದು, ಗಾಯಾಳುಗಳಿಗೆ ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ದೈತ್ಯ ಒಂಟಿಸಲಗ ‘ಪೆನ್ಸಿಲ್ ಕೋರೆ’ ಅಟ್ಟಹಾಸ ಮೆರೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಜಖಂಗೊಳಿಸಿರುವ ಕಾಡಾನೆ, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಟಾಕಿ ಸಿಡಿಸಿದ್ದಕ್ಕೆ ರೊಚ್ಚಿಗೆದ್ದ ಆನೆ ದಾಳಿ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಇಲ್ಲಿದೆ.

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಹಾಸನದ ಅರಳೆಪೇಟೆಯ ಎಂ.ಹೆಚ್. ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ವಧು-ವರನ ಸಂಬಂಧಿಕರ ನಡುವೆ ತೀವ್ರ ಮಾರಾಮಾರಿ ನಡೆದಿದೆ. ನಡುರಸ್ತೆಯಲ್ಲೇ ನಡೆದ ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಭಾರಿ ಗುಡುಗು ಸಹಿತ ಮಳೆ ಸಂದರ್ಭದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ರೂಪಾ, ಲಕ್ಷ್ಮಿ, ಸುಮಿತ್ರಾ, ಜಯಮ್ಮ ಸೇರಿದಂತೆ ಐವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸಕಲೇಶಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹಾಸನದ ಸಕಲೇಶಪುರದ ಬೆಟ್ಟ ಭೈರವೇಶ್ವರ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗೆ ಸ್ಥಳೀಯರು ವಿರೋಧಿಸಿ ಹಲ್ಲೆ ನಡೆಸಿದ್ದಾರೆ. ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಆರೋಪಿಸಿ ನಡೆದ ಈ ಘಟನೆಯಲ್ಲಿ ಕ್ಯಾಮೆರಾ, ಮೊಬೈಲ್‌ಗಳು ಜಖಂಗೊಂಡಿವೆ. ಪೊಲೀಸರ ಸಮ್ಮುಖದಲ್ಲೂ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ದೇಗುಲಗಳಲ್ಲಿ ಫೋಟೋಶೂಟ್‌ಗೆ ಅನುಮತಿ ಮತ್ತು ನಿಯಮ ಪಾಲನೆ ಅಗತ್ಯ ಎಂದು ಘಟನೆ ಒತ್ತಿಹೇಳುತ್ತದೆ.

ಅಪಹರಿಸಿ ಸ್ನೇಹಿತನ ಕೊಲೆ ಕೇಸ್: ನಾಪತ್ತೆಯಾಗಿದ್ದ ಡೆಲಿವರಿ ಬಾಯ್​​ ಮಿಸ್ಟ್ರಿ ಬಯಲು; ಐವರು ಅರೆಸ್ಟ್​​​

ಅಪಹರಿಸಿ ಸ್ನೇಹಿತನ ಕೊಲೆ ಕೇಸ್: ನಾಪತ್ತೆಯಾಗಿದ್ದ ಡೆಲಿವರಿ ಬಾಯ್​​ ಮಿಸ್ಟ್ರಿ ಬಯಲು; ಐವರು ಅರೆಸ್ಟ್​​​

ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್​ನಿಂದಲೇ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸದ್ಯ ಐವರನ್ನು ಬಂಧಿಸಿರುವ ಪೊಲೀಸರು ಪ್ರಮುಖ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಕೊಟ್ಟ ಹಣ ವಾಪಸ್​ ಕೊಟ್ಟಿಲ್ಲ ಎನ್ನುವ ಒಂದೇ ಕಾರಣಕ್ಕೆ ಗೆಳೆಯನನ್ನೇ ಕೊಲೆಗೈದು ಸುಟ್ಟು ಹಾಕಿದ್ದಾರೆ.

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್​ನಿಂದಲೇ ಹತ್ಯೆಗೈದಿರುವಂತಹ ಭಯಾನಕ ಘಟನೆಯೊಂದು ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ದುಷ್ಟರು ಕೊಲೆ ಮಾಡಿದಲ್ಲದೇ ಶವವನ್ನು ಸುಟ್ಟು ಪರಾರಿಯಾಗಿದ್ದರು. ಸದ್ಯ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ಶಾಸಕನ​​ ಆಕ್ರೋಶ

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ಶಾಸಕನ​​ ಆಕ್ರೋಶ

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲು ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳ ಹೆಸರುಗಳನ್ನು ಕೈಬಿಟ್ಟಿರುವುದನ್ನು ಅವರು ಪ್ರಶ್ನಿಸಿದ್ದಾರೆ. ನ್ಯಾಯಸಮ್ಮತ ತನಿಖೆ ಹಾಗೂ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ‌ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.