ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ
Dr Rajkumar: 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ ನಟನೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಿದ್ದರು. ಕೊನೆಯ ಸಿನಿಮಾನಲ್ಲಿ ನಟಿಸುವ ಹಲವು ವರ್ಷಗಳ ಹಿಂದೆಯೇ ಅವರು ನಿವೃತ್ತಿ ಪಡೆಯುವ ಆಸೆಯಾಗಿತ್ತು. ಆದರೆ ಅದು ಅವರ ಆಪ್ತರ ಕಾರಣದಿಂದಾಗಿ ಸಾಧ್ಯವಾಗಲಿಲ್ಲ.
- Manjunatha C
- Updated on: Feb 26, 2026
- 3:08 pm
ಸುಂದರ ದ್ವೀಪದಲ್ಲಿ ವಿಜಯ್-ರಶ್ಮಿಕಾ ಹನಿಮೂನ್: ಎಲ್ಲಿ ಗೊತ್ತೆ?
Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ಅವರ ಆರತಕ್ಷತೆ ಮಾರ್ಚ್ 04 ರಂದು ಹೈದರಾಬಾದ್ನ ತಾಜ್ ಕೃಷ್ಣನಲ್ಲಿ ಅದ್ಧೂರಿ ನಡೆಯಲಿದೆ. ಆರತಕ್ಷತೆಗೆ ಟಾಲಿವುಡ್, ಸ್ಯಾಂಡಲ್ವುಡ್ ಮತ್ತು ಬಾಲಿವುಡ್ನ ಸಿನಿಮಾ ಸೆಲೆಬ್ರಿಟಿಗಳು ಹಾಗೂ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ರಾಜಕಾರಣಿಗಳು ಭಾಗಿ ಆಗಲಿದ್ದಾರೆ. ಆರತಕ್ಷತೆ ಮುಗಿದ ಎರಡೇ ದಿನಕ್ಕೆ ಈ ಜೋಡಿ ಹನಿಮೂನ್ಗೆ ರವಾನೆ ಆಗಲಿದೆ. ಎಲ್ಲಿಗೆ ಗೊತ್ತೆ?
- Manjunatha C
- Updated on: Feb 26, 2026
- 2:39 pm
ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ
Tollywood news: ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
- Manjunatha C
- Updated on: Feb 26, 2026
- 1:54 pm
ತೆಲುಗು ಸಂಪ್ರದಾಯದಂತೆ ಮದುವೆಯಾದ ರಶ್ಮಿಕಾ-ವಿಜಯ್ ದೇವರಕೊಂಡ
Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್ನಲ್ಲಿ ಈ ಜೋಡಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ಸತಿ-ಪತಿಗಳಾಗಿದ್ದಾರೆ.
- Manjunatha C
- Updated on: Feb 26, 2026
- 12:32 pm
‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು
Veerendra Heggade movie: ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ಧರ್ಮಾಧಿಕಾರಿಗಳು ನನ್ನ ಸಿನಿಮಾನಲ್ಲಿ ನಟಿಸಿದ್ದಕ್ಕೆ ಕೆಲವರು ನನಗೆ ಬೆದರಿಕೆ ಹಾಕಿದ್ದರು ಎಂದಿದ್ದಾರೆ. ವಿಡಿಯೋ ನೋಡಿ...
- Manjunatha C
- Updated on: Feb 26, 2026
- 2:49 pm
‘ಟಾಕ್ಸಿಕ್’ ಕನ್ನಡದ ಸಿನಿಮಾ ಅಲ್ಲವೆಂದ ಹಿರಿಯ ನಿರ್ದೇಶಕ: ಕೊಟ್ಟ ಕಾರಣವೇನು?
Toxic movie: ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಸಿನಿಮಾಕ್ಕಾಗಿ ದೇಶದಾದ್ಯಂತ ಮಾತ್ರವಲ್ಲದೆ ವಿದೇಶಿ ಸಿನಿಮಾ ಪ್ರೇಮಿಗಳು ಸಹ ಎದುರು ನೋಡುತ್ತಿದ್ದಾರೆ. ಇನ್ನು ಕನ್ನಡದ ಸಿನಿಮಾ ಕರ್ಮಿಗಳು ಸಹ ವೈಷಮ್ಯಗಳನ್ನು ಮರೆತು ತಮ್ಮ ಚಿತ್ರರಂಗದ ಸಿನಿಮಾ ಎಂಬ ಕಾರಣಕ್ಕೆ ಭರಪೂರ ಬೆಂಬಲ ನೀಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಹ ಇದಕ್ಕೆ ಹೊರತಲ್ಲ. ‘ಟಾಕ್ಸಿಕ್’ ಸಿನಿಮಾವನ್ನು ಅದರ ಮೇಕಿಂಗ್ ಅನ್ನು ಅವರು ಕೊಂಡಾಡಿದ್ದಾರೆ.
- Manjunatha C
- Updated on: Feb 26, 2026
- 10:47 am
‘ಟಾಕ್ಸಿಕ್’ ರನ್ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್?
Toxic movie: ‘ಟಾಕ್ಸಿಕ್’ ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ ಸಹ ಸಖತ್ ವೈರಲ್ ಆಗುತ್ತಿದೆ.
- Manjunatha C
- Updated on: Feb 26, 2026
- 9:01 am
ರಶ್ಮಿಕಾ-ವಿಜಯ್ ದೇವರಕೊಂಡ ಅರಿಶಿಣ ಶಾಸ್ತ್ರದ ಸುಂದರ ಚಿತ್ರಗಳು ಇಲ್ಲಿವೆ
Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ. ಹಳದಿ ಶಾಸ್ತ್ರದಲ್ಲಿ ಭಾಗವಹಿಸಿದ ಅತಿಥಿಗಳು ಹಂಚಿಕೊಂಡಿರುವ ಸುಂದರ ಚಿತ್ರಗಳು ಇಲ್ಲಿವೆ ನೋಡಿ...
- Manjunatha C
- Updated on: Feb 26, 2026
- 7:47 am
ರಶ್ಮಿಕಾಗೆ ಅತ್ಯಂತ ಅಮೂಲ್ಯ ಉಡುಗೊರೆ ಕೊಟ್ಟ ವಿಜಯ್ ತಾಯಿ, ಭಾವುಕರಾದ ನಟಿ
Vijay Deverakonda and Rashmika Mandanna: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದ ಅದ್ಧೂರಿ ಅರಮನೆಯಂಥಹ ರೆಸಾರ್ಟ್ನಲ್ಲಿ ಆಗುತ್ತಿದೆ. ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗವಹಿಸಿದ್ದಾರೆ. ಎರಡೂ ಕುಟುಂಬದವರು ಪರಸ್ಪರ ಗೇಮ್ಗಳನ್ನು ಆಡಿದ್ದಾರೆ. ಮೆಹಂದಿ, ಹಳದಿ, ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ಈ ಎಂಜಾಯ್ಮೆಂಟ್ಗಳ ಮಧ್ಯೆ ರಶ್ಮಿಕಾಗೆ ವಿಜಯ್ ತಾಯಿ ಅತ್ಯಂತ ಅಮೂಲ್ಯವಾದ ಉಡುಗೊರೆಯೊಂದನ್ನು ನೀಡಿದ್ದಾರೆ. ಉಡುಗೊರೆ ಪಡೆದ ರಶ್ಮಿಕಾ ಭಾವುಕರಾಗಿದ್ದಾರೆ.
- Manjunatha C
- Updated on: Feb 26, 2026
- 7:21 am
ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ?
Rashmika Mandanna-Vijay Deverakonda: ಕೊಡಗಿನವರು, ಕನ್ನಡ ಚಿತ್ರರಂಗದಿಂದ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳು, ಹಿತೈಷಿಗಳು ಇದ್ದಾರೆ ಆದರೆ ರಶ್ಮಿಕಾ ಅವರ ಮದುವೆ ಸಂಭ್ರಮ ಹೈದರಾಬಾದ್ನಲ್ಲಿ ಮಾತ್ರವೇ ಆಯೋಜಿಸಲಾಗಿರುವುದು ಅವರ ಕರ್ನಾಟಕದ ಹಿತೈಷಿಗಳಿಗೆ ತುಸು ಅಸಮಾಧಾನ ಮೂಡಿಸಿದೆ. ಆದರೆ ಇದೀಗ ಹೊರಬಿದ್ದಿರುವ ಸುದ್ದಿಯ ಪ್ರಕಾರ, ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಆರತಕ್ಷತೆ ಕರ್ನಾಟಕದಲ್ಲಿಯೂ ನಡೆಯಲಿದೆ.
- Manjunatha C
- Updated on: Feb 25, 2026
- 3:31 pm
ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ
Rashmika Mandanna: ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
- Manjunatha C
- Updated on: Feb 25, 2026
- 2:03 pm
ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?
Rashmika Mandanna-Vijay Deverakonda Wedding: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ವಿವಾಹ ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ ನಟಿ ಆಶಿಕಾ ರಂಗನಾಥ್ ಅವರು ಸಹ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅವರ ಹೊರತಾಗಿ ಕನ್ನಡ ಚಿತ್ರರಂಗದ ಇನ್ಯಾರಿಗೂ ಆಹ್ವಾನ ಇಲ್ಲವೇ ಎಂಬ ಪ್ರಶ್ನೆ ಎದ್ದಿತ್ತು. ಅದಕ್ಕೀಗ ಉತ್ತರ ದೊರಕಿದೆ.
- Manjunatha C
- Updated on: Feb 25, 2026
- 1:40 pm