ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?
Dhurandhar 2 collection: ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ ಮಾಡಿದೆ.
- Manjunatha C
- Updated on: Mar 19, 2026
- 3:01 pm
3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ
Koragajja Kannada movie: ‘ಕೊರಗಜ್ಜ’ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಙಾನದೊಂದಿಗೆ ಬಿಡುಗಡೆ ಆಗಲಿದೆ.
- Manjunatha C
- Updated on: Mar 18, 2026
- 10:49 pm
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
Ramya and Puneeth Rajkumar: ಪುನೀತ್ ರಾಜ್ಕುಮಾರ್ ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್ನ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ..
- Manjunatha C
- Updated on: Mar 18, 2026
- 9:59 pm
ಹೊಸ ‘ಸ್ಪೈಡರ್ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ
Spiderman: Brand New Day: ‘ಸ್ಪೈಡರ್ಮ್ಯಾನ್’ ಸಿನಿಮಾ ಹಲವು ಭಾಗಗಳು ಹಾಲಿವುಡ್ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.
- Manjunatha C
- Updated on: Mar 18, 2026
- 9:23 pm
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
Vinod Raj: ನಟ ವಿನೋದ್ ರಾಜ್ ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ.
- Manjunatha C
- Updated on: Mar 18, 2026
- 8:31 pm
‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್
Prem about song: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ ಮೂಲಕ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Manjunatha C
- Updated on: Mar 18, 2026
- 7:03 pm
ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ
Mani Ratnam: 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಈ ಇಬ್ಬರೂ ಸೇರಿ ಅದ್ಭುತವಾದ ಸಿನಿಮಾ ಮತ್ತು ಹಾಡುಗಳನ್ನು ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ ಹೊಸ ಸಿನಿಮಾಕ್ಕೆ ಹೊಸ ಸಂಗೀತ ನಿರ್ದೇಶಕನ ಆಯ್ಕೆ ಮಾಡಿದ್ದಾರೆ.
- Manjunatha C
- Updated on: Mar 18, 2026
- 6:07 pm
21 ವರ್ಷ ಹಳೆಯ ಕ್ಯೂಟ್ ವಿಡಿಯೋ ಹಂಚಿಕೊಂಡ ನಟಿ ರಮ್ಯಾ
Actress Ramya: ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ಇದೀಗ ನಟಿ ರಮ್ಯಾ, ‘ಆಕಾಶ್’ ಸಿನಿಮಾ ಚಿತ್ರೀಕರಣ ಸಂದರ್ಭದ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
- Manjunatha C
- Updated on: Mar 18, 2026
- 5:06 pm
‘ಧುರಂಧರ್ 2’ ಪ್ರೀಮಿಯರ್ ರದ್ದು, ‘ಉಸ್ತಾದ್ ಭಗತ್ ಸಿಂಗ್’ಗೆ ಭರ್ಜರಿ ಲಾಭ
Dhurandhar 2 premier: ಕೊನೆಯ ಕ್ಷಣದಲ್ಲಿ ಸೆನ್ಸಾರ್ನಿಂದ ಸಮಸ್ಯೆ ಎದುರಾದ ಕಾರಣ ಇದೀಗ ಭಾರತದಲ್ಲಿ ಹಿಂದಿ ಪ್ರೀಮಿಯರ್ ಶೋ ಹೊರತಾಗಿ ಇತರೆ ಭಾಷೆಯ ಎಲ್ಲ ಪ್ರೀಮಿಯರ್ ಶೋ ಪ್ರದರ್ಶನವನ್ನು ರದ್ದು ಮಾಡಲಾಗಿದೆ. ಆದರೆ ಅಮೆರಿಕದಲ್ಲಿ ಸಿನಿಮಾದ ಎಲ್ಲ ಪೇಯ್ಡ್ ಪ್ರೀಮಿಯರ್ ಶೋ ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ. ಇದು ಪವನ್ ಕಲ್ಯಾಣ್ರ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಭರ್ಜರಿ ಲಾಭ ಮಾಡಿಕೊಡಲಿದೆ.
- Manjunatha C
- Updated on: Mar 18, 2026
- 4:34 pm
ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳಿರುವಾಗ ‘ಧುರಂಧರ್’ ನಿರ್ದೇಶಕ ಹೇಳಿದ್ದೇನು?
Dhurandhar 2 movie: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಂಜೆ ಐದು ಗಂಟೆಯಿಂದ ‘ಧುರಂಧರ್ 2’ ಸಿನಿಮಾದ ಶೋಗಳ ಪ್ರದರ್ಶನ ಆರಂಭವಾಗಲಿದೆ. ಸಿನಿಮಾದ ಮೊದಲ ಶೋ ಪ್ರಾರಂಭಕ್ಕೆ ಕೆಲವೇ ಗಂಟೆಗಳಿರುವಾಗ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಪ್ರೇಕ್ಷಕರಿಗೆ ಸಂದೇಶವೊಂದನ್ನು ನೀಡಿದ್ದಾರೆ. ಪ್ರೇಕ್ಷಕರಲ್ಲಿ ವಿಶೇಷ ಮನವಿಯೊಂದನ್ನು ಸಹ ಅವರು ಮಾಡಿದ್ದಾರೆ.
- Manjunatha C
- Updated on: Mar 18, 2026
- 3:23 pm
ಬಾಲಿವುಡ್ ನಟಿ ಸಾರಾಗೆ ಕೇದಾರನಾಥ, ಬದ್ರಿನಾಥ್ ದೇವಾಲಯಕ್ಕೆ ಪ್ರವೇಶವಿಲ್ಲ
Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಪದೇ ಪದೇ ಭೇಟಿ ನೀಡುತ್ತಲೇ ಇರುತ್ತಾರೆ. ಈ ಎರಡೂ ಕ್ಷೇತ್ರಗಳ ಪರಮ ಭಕ್ತೆ ಅವರು. ದೇವಾಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಸಂಪ್ರದಾಯದಂತೆ ಹಣೆಯ ತುಂಬ ಅರಿಶಿಣ ಮೆತ್ತಿ ಅದರ ಮೇಲೆ ವಿಭೂತಿ ಧರಿಸಿ, ಕೊರಳಿಗೆ ಹಾರ ಧರಿಸಿ ದೇವರ ದರ್ಶನ ಮಾಡುತ್ತಾರೆ. ಆದರೆ ಇನ್ನು ಮುಂದೆ ಅವರು ಈ ದೇವಾಲಯಗಳಿಗೆ ಭೇಟಿ ನೀಡುವಂತಿಲ್ಲ.
- Manjunatha C
- Updated on: Mar 17, 2026
- 6:34 pm
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
Puneeth Rajkumar: ಪುನೀತ್ ರಾಜ್ಕುಮಾರ್ ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ ಪ್ರೀತಂ ಸಹ ಇದ್ದರು.
- Manjunatha C
- Updated on: Mar 17, 2026
- 5:21 pm