AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಎಚ್​. ವಿ.

ಮಂಜುನಾಥ ಎಚ್​. ವಿ.

ಜಿಲ್ಲಾ ವರದಿಗಾರ - TV9 Kannada

manjunatha.venkatesh@tv9.com

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು! ಬೈಕ್​ಗಳು ಮುಳುಗಡೆ

ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು! ಬೈಕ್​ಗಳು ಮುಳುಗಡೆ

ಬೆಂಗಳೂರಿನ ಬಾಗಲಗುಂಟೆ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಕಾಮಗಾರಿಯ ನಿರ್ಲಕ್ಷ್ಯದಿಂದಾಗಿ ಭೈರವೇಶ್ವರ ಬಡಾವಣೆಯ ನಿವಾಸಿಗಳು ಜಾಗರಣೆ ಮಾಡುವಂತಾಗಿದೆ. ಮನೆಗಳ ನೆಲಮಾಳಿಗೆಯಲ್ಲಿ ನೀರು ತುಂಬಿದ ಕಾರಣ ಬೈಕ್‌ಗಳು ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿವೆ.

ಬೆಂಗಳೂರಿನ 917 ಕಡೆಗಳಲ್ಲಿ ಪೊಲೀಸರ ದಿಢೀರ್ ದಾಳಿ: 71ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

ಬೆಂಗಳೂರಿನ 917 ಕಡೆಗಳಲ್ಲಿ ಪೊಲೀಸರ ದಿಢೀರ್ ದಾಳಿ: 71ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

ಬೆಂಗಳೂರು ಪಶ್ಚಿಮ ಹಾಗೂ ನೆಲಮಂಗಲದಲ್ಲಿ ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿ 71ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ. ವಿವಿಧ ಅಂಗಡಿಗಳು, ಗ್ಯಾರೇಜ್‌ಗಳು ಮತ್ತು ಸಣ್ಣ ಕೈಗಾರಿಕೆಗಳ ಮೇಲೆ ದಾಳಿ ನಡೆಸಿ ಮಕ್ಕಳನ್ನು ಶೋಷಣೆಯಿಂದ ಪಾರು ಮಾಡಲಾಗಿದೆ. ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ. ರಕ್ಷಿಸಿದ ಮಕ್ಕಳನ್ನು ಮಕ್ಕಳ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ: ರಜೆ ಹಿನ್ನೆಲೆ 4 ಕಿಮೀಗೂ ಹೆಚ್ಚು ಟ್ರಾಫಿಕ್ ಜಾಮ್, ಆಂಬುಲೆನ್ಸ್ ಸಿಲುಕಿ ಪರದಾಟ

ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ: ರಜೆ ಹಿನ್ನೆಲೆ 4 ಕಿಮೀಗೂ ಹೆಚ್ಚು ಟ್ರಾಫಿಕ್ ಜಾಮ್, ಆಂಬುಲೆನ್ಸ್ ಸಿಲುಕಿ ಪರದಾಟ

ಗಣೇಶ ಚತುರ್ಥಿ ಹಾಗೂ ವೀಕೆಂಡ್ ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲದ ಕುಣಿಗಲ್ ಸರ್ಕಲ್ ಬಳಿ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ಉದ್ದಕ್ಕೆ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಆಂಬ್ಯುಲೆನ್ಸ್ ವಾಹನಗಳು ಸಿಲುಕಿ ಪರದಾಡುತ್ತಿರುವುದು ಕಂಡುಬಂದಿದೆ.

80ರ ಟ್ರೆಂಡಿಂಗ್ ಫೋಟೋ: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಮುನ್ನೆಚ್ಚರಿಕೆ ಸಂದೇಶ

80ರ ಟ್ರೆಂಡಿಂಗ್ ಫೋಟೋ: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಮುನ್ನೆಚ್ಚರಿಕೆ ಸಂದೇಶ

80ರ ದಶಕದ ಟ್ರೆಂಡಿಂಗ್ ಫೋಟೋಗಳ ಬಗ್ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತ ಆಪ್‌ಗಳು ಮತ್ತು ಲಿಂಕ್‌ಗಳ ಮೂಲಕ ಫೋಟೋ ಎಡಿಟ್ ಮಾಡುವಾಗ ವೈಯಕ್ತಿಕ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುತ್ತದೆ. ಸೈಬರ್ ವಂಚಕರು ಈ ಅವಕಾಶವನ್ನು ಬಳಸಿಕೊಂಡು ಮೋಸ ಮಾಡಬಹುದು. ಹೀಗಾಗಿ, ಸಾರ್ವಜನಿಕರು ಹುಷಾರಾಗಿರುವಂತೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ.

ಮನೆ ಮುಂದೆ ಆಟವಾಡುತ್ತಿದ್ದ ಹೆಣ್ಣುಮಗು ಅನುಮಾನಾಸ್ಪದ ಸಾವು: ಮಲತಾಯಿ ವಿರುದ್ಧವೇ ಗಂಭೀರ ಆರೋಪ

ಮನೆ ಮುಂದೆ ಆಟವಾಡುತ್ತಿದ್ದ ಹೆಣ್ಣುಮಗು ಅನುಮಾನಾಸ್ಪದ ಸಾವು: ಮಲತಾಯಿ ವಿರುದ್ಧವೇ ಗಂಭೀರ ಆರೋಪ

ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮಲತಾಯಿಯೇ ಕೊಲೆ ಮಾಡಿದ್ದಾಳೆಂದು ಮಗುವಿನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವಿಚಾರವಾಗಿ ಮನೆ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ಗಲಾಟೆ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಈ ವೇಳೆ ಮಧ್ಯ ಪ್ರವೇಶಿಸಿರುವ ಪೊಲೀಸರು ಪಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಪ್ರವಾಸಿ ತಾಣ ಹಾಗೂ ಸ್ವಂತ ಊರುಗಳಿಗೆ ಹೊರಟಿರುವ ಜನರಿಂದಾಗಿ ನೆಲಮಂಗಲ ಸಮೀಪ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದು, ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಸಂಚಾರ ಸುಗಮಗೊಳಿಸಲು ಹೆದ್ದಾರಿ ಪೊಲೀಸರು ಶ್ರಮಿಸುತ್ತಿದ್ದಾರೆ.

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್ ಕಡ್ಡಿ ಮತ್ತು 100 ಡಿಟೋನೇಟರ್‌ಗಳನ್ನು ದಾಬಸ್ ಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಲ್ಲುಗಣಿಗಾರಿಕೆಗೆ ಬಳಸುವ ಈ ಸ್ಪೋಟಕಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಶಿವಶಂಕರ್ ಎಂಬಾತನನ್ನು ಬಂಧಿಸಲಾಗಿದ್ದು, ಬಿಎನ್‌ಎಸ್‌ಎಸ್ ಸೆಕ್ಷನ್ 288ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಕಡಿಮೆ ಹಣಕ್ಕೆ ಸ್ಫೋಟಕಗಳ ಮಾರಾಟ: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ

ಕಡಿಮೆ ಹಣಕ್ಕೆ ಸ್ಫೋಟಕಗಳ ಮಾರಾಟ: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ದಾಬಸ್‌ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಕಲ್ಲುಗಣಿಗಾರಿಕೆಗೆ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್​ ಆಟೋ ಶಂಕರ್‌ನನ್ನು ಬಂಧಿಸಿದ್ದಾರೆ. ಆತನಿಂದ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬಂಧಪಟ್ಟ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ.

ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು, ಸಿಸಿಟಿವಿಯಲ್ಲಿ ಖದೀಮರ ಕೈಚಳಕ ಸೆರೆ!

ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು, ಸಿಸಿಟಿವಿಯಲ್ಲಿ ಖದೀಮರ ಕೈಚಳಕ ಸೆರೆ!

ನೆಲಮಂಗಲದ ಕೆ.ಎಸ್.ಆರ್.ಟಿ.ಸಿ ಲೇಔಟ್‌ನ ರಾಯನ್ ನಗರದಲ್ಲಿ ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋ ಒಂದರ ಚಕ್ರಗಳನ್ನು ಮಧ್ಯರಾತ್ರಿ ಖದೀಮರು ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ವಾಹನ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Toll Price Hike: ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ

Toll Price Hike: ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ

ಕರ್ನಾಟಕದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಮತ್ತೆ ಏರಿಕೆಯಾಗಿದೆ. ನೆಲಮಂಗಲದಿಂದ ಹಾಸನ ಮಾರ್ಗದ ದೇವಿಹಳ್ಳಿ ಟೋಲ್‌ನಲ್ಲಿ ಕಾರು, ಲಘು ವಾಣಿಜ್ಯ ವಾಹನ ಹಾಗೂ ಬಸ್‌, ಟ್ರಕ್‌ಗಳಿಗೆ ₹5 ರಿಂದ ₹10 ಗಳಷ್ಟು ಹೆಚ್ಚಳವಾಗಿದೆ. ರೈತರು ಸೇರಿದಂತೆ ವಾಹನ ಸವಾರರು ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಹೆಚ್ಚುವರಿ ಆರ್ಥಿಕ ಹೊರೆಯನ್ನು ಸೃಷ್ಟಿಸಿದೆ ಎಂದಿದ್ದಾರೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.

ನೆಲಮಂಗಲ ಟೋಲ್ ದರ ಏರಿಕೆ: ಇಂದು ಮಧ್ಯರಾತ್ರಿಯಿಂದಲೇ ವಾಹನ ಸವಾರರಿಗೆ ಬೆಲೆ ಏರಿಕೆಯ ಬರೆ

ನೆಲಮಂಗಲ ಟೋಲ್ ದರ ಏರಿಕೆ: ಇಂದು ಮಧ್ಯರಾತ್ರಿಯಿಂದಲೇ ವಾಹನ ಸವಾರರಿಗೆ ಬೆಲೆ ಏರಿಕೆಯ ಬರೆ

ಕರ್ನಾಟಕದಲ್ಲೂ ದಿನದಂದ ದಿನಕ್ಕೆ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರಿತಪ್ಪಿಸುವಂತಾಗಿದೆ. ಇದೇ ರೀತಿಯಲ್ಲಿ ವಾಹನ ಸವಾರರಿಗೆ ಮೇಲಿಂದ ಮೇಲೆ ಬರೆಯಾಗಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರಿಗೆ ದರ ಏರಿಕೆ ಶಾಕ್ ಎದುರಾಗಿದೆ. ನೆಲಮಂಗಲ ಹಾಸನ ನಡುವಿನ ರಾಷ್ಟ್ರೀಯ ಹೆದ್ದಾರಿಯ ಟೋಲ್ ಬೆಲೆ ಏರಿಕೆ ಮಾಡಲಾಗಿದ್ದು, ಸೆ.1ರಿಂದ ಹೊಸ ದರ ಜಾರಿಗೆ ಬರಲಿದೆ. ಹಾಗಾದ್ರೆ ಟೋಲ್ ಯಾವ ವಾಹನಕ್ಕೆ ಎಷ್ಟು ಹೆಚ್ಚಿಸಲಾಗಿದೆ ಎನ್ನುವ ವಿವರ ಇಲ್ಲಿದೆ.

ಸರ್ಕಾರಿ ಕಚೇರಿಯಲ್ಲೇ ನಗರಸಭೆ ಆಯುಕ್ತರ ರೀಲ್ಸ್ ವೈರಲ್: ಸಾರ್ವಜನಿಕರು ಆಕ್ರೋಶ; ಅಧಿಕಾರಿ ಕೊಟ್ಟ ಸ್ಪಷ್ಟನೆ ಏನು?

ಸರ್ಕಾರಿ ಕಚೇರಿಯಲ್ಲೇ ನಗರಸಭೆ ಆಯುಕ್ತರ ರೀಲ್ಸ್ ವೈರಲ್: ಸಾರ್ವಜನಿಕರು ಆಕ್ರೋಶ; ಅಧಿಕಾರಿ ಕೊಟ್ಟ ಸ್ಪಷ್ಟನೆ ಏನು?

Nelamangala News: ನೆಲಮಂಗಲ ನಗರಸಭೆ ಆಯುಕ್ತ ಸರ್ಕಾರಿ ಕಚೇರಿಯಲ್ಲಿ ಮಾಡಿದ ಹಳೆಯ ರೀಲ್ಸ್​​ ಇದೀಗ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು 8 ವರ್ಷಗಳ ಹಿಂದಿನ ವಿಡಿಯೋ. ನನ್ನ ಇಮೇಜ್ ಕೆಡಿಸಲು ಯಾರೋ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ