ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.
ಸರ್ಕಾರಿ ಕಚೇರಿಯಲ್ಲೇ ನಗರಸಭೆ ಆಯುಕ್ತರ ರೀಲ್ಸ್ ವೈರಲ್: ಸಾರ್ವಜನಿಕರು ಆಕ್ರೋಶ; ಅಧಿಕಾರಿ ಕೊಟ್ಟ ಸ್ಪಷ್ಟನೆ ಏನು?
Nelamangala News: ನೆಲಮಂಗಲ ನಗರಸಭೆ ಆಯುಕ್ತ ಸರ್ಕಾರಿ ಕಚೇರಿಯಲ್ಲಿ ಮಾಡಿದ ಹಳೆಯ ರೀಲ್ಸ್ ಇದೀಗ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು 8 ವರ್ಷಗಳ ಹಿಂದಿನ ವಿಡಿಯೋ. ನನ್ನ ಇಮೇಜ್ ಕೆಡಿಸಲು ಯಾರೋ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
- Manjunatha HV
- Updated on: Aug 23, 2026
- 8:38 pm
ಅಕೌಂಟ್ ನಲ್ಲಿ 1 ಕೋಟಿ ಬ್ಯಾಲೆನ್ಸ್: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿ 7 ದಿನಗಳಾದ್ರೂ ಸಿಗದ ಟೆಕ್ಕಿ ಅದ್ವೈತ್ ಸುಳಿವು
ಅದ್ವೈತ್ ಉಪಾಧ್ಯಾಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ 7 ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಆರು ದಿನಗಳಿಂದ ಬೇರೆ ಬೇರೆ ತಂಡಗಳು ಶಿವಗಂಗೆ ಬೆಟ್ಟವನ್ನು ಇಂಚಿಚೂ ಶೋಧ ಮಾಡಿದರೂ ಸಹ ಟೆಕ್ಕಿ ಅದ್ವೈತ್ ಉಪಾಧ್ಯಾಯನ ಒಂದೇ ಒಂದು ಸುಳಿವು ಸಿಕ್ಕಿಲ್ಲ. ಹೀಗಾಗಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದ್ದು, ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಮೊರೆ ಹೋಗಿದ್ದಾರೆ.
- Manjunatha HV
- Updated on: Aug 14, 2026
- 9:58 pm
ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೋಗುವ ಮಹಿಳೆಯರೇ ಹುಷಾರ್! ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್
ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಚೈನ್ ಸ್ನಾಚಿಂಗ್ ಘಟನೆ ನಡೆದಿದೆ. ಹಾಲಿನ ವ್ಯಾಪಾರ ಮುಗಿಸಿ ವಾಪಸ್ ಆಗುತ್ತಿದ್ದ ಮಹಿಳೆ ಮೇಲೆ ಬೈಕ್ನಲ್ಲಿ ಬಂದ ಕಿರಾತಕರು ಮೃಗೀಯವಾಗಿ ಹಲ್ಲೆ ನಡೆಸಿ, ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
- Manjunatha HV
- Updated on: Aug 14, 2026
- 7:23 am
ಶಿವಗಂಗೆಯಲ್ಲಿ ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್: ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಶಿವಗಂಗೆಯಲ್ಲಿ ನಾಪತ್ತೆಯಾಗಿರುವ ಅದ್ವೈತ್ ಉಪಾಧ್ಯಾಯ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೋಲೀಸರ ತನಿಖೆಯಲ್ಲಿ ಆತ ಹೈಲಿ ಟ್ಯಾಲೆಂಟೆಡ್ ಹ್ಯಾಕರ್ ಎಂಬುದು ಬಹಿರಂಗವಾಗಿದೆ. ನಿಶ್ಚಿತಾರ್ಥವಾಗಿದ್ದರೂ ಹಲವು ಯುವತಿಯರೊಂದಿಗೆ ಸಂಪರ್ಕದಲ್ಲಿದ್ದ ಅದ್ವೈತ್, ಶಿವಗಂಗೆಗೆ ಬರುವ ಮುನ್ನ ಶಾಂತಲಾ ಡ್ರಾಪ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಂಬುದು ತಿಳಿದುಬಂದಿದೆ.
- Manjunatha HV
- Updated on: Aug 11, 2026
- 12:10 pm
ಶಿವಗಂಗೆ ಬೆಟ್ಟದ ತುತ್ತ ತುದಿಯಲ್ಲಿ ಟೆಕ್ಕಿ ಫೋಟೋ ಸೆರೆ: ಆದ್ರೂ ಸಿಗ್ತಿಲ್ಲ ಅದ್ವೈತ್
Missing Trekker Advait Upadhyaya: ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ನಾಲ್ಕು ದಿನಗಳಾಗಿವೆ. ಎನ್ಡಿಆರ್ಎಫ್ ಮತ್ತು ಸ್ಥಳೀಯ ತಂಡಗಳು ಡ್ರೋನ್ ಮೂಲಕ ವ್ಯಾಪಕ ಶೋಧ ನಡೆಸಿವೆ. ಹೀಗಿರುವಾಗಿ ಚಾರಣಿಗರು ಕ್ಲಿಕ್ಕಿಸಿದ ಅದೊಂದು ಫೋಟೋದಲ್ಲಿ ಅದ್ವೈತ್ ಇರುವುದು ತಿಳಿದುಬಂದಿದೆ. ಆದರೆ ಇನ್ನೂ ಪತ್ತೆ ಆಗಿಲ್ಲ.
- Manjunatha HV
- Updated on: Aug 10, 2026
- 7:49 pm
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆತ್ಮಹತ್ಯೆಯ ಯೋಚನೆ ಮಾಡಿದ್ದರಾ ಅದ್ವೈತ್ ಉಪಾಧ್ಯಾಯ?
ಶಿವಗಂಗೆಯಲ್ಲಿ ನಾಪತ್ತೆಯಾದ ಹಣಕಾಸು ಕಂಪನಿ ಉದ್ಯೋಗಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹೊಸ ತಿರುವು ಲಭಿಸಿದೆ. ಅವರ ಲ್ಯಾಪ್ಟಾಪ್ ಪರಿಶೀಲಿಸಿದಾಗ, ಅದ್ವೈತ್ ಆತ್ಮಹತ್ಯೆ ಮತ್ತು ಶಾಂತಲಾ ಡ್ರಾಪ್ ಬಗ್ಗೆ ಹುಡುಕಾಟ ನಡೆಸಿದ್ದ ಸಂಗತಿ ಬಹಿರಂಗವಾಗಿದೆ. ಪೊಲೀಸರು, ಅರಣ್ಯ ಸಿಬ್ಬಂದಿ ಮತ್ತು ಎನ್ಡಿಆರ್ಎಫ್ನ 60ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಕಾರ್ಯ ತೀವ್ರಗೊಂಡಿದೆ.
- Manjunatha HV
- Updated on: Aug 10, 2026
- 12:47 pm
ನೆಲಮಂಗಲ: ಹೀಗೆ ಹೋಗಿ ಹಾಗೆ ಬರುವಷ್ಟರಲ್ಲಿ ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಮಾಯ!
Gold Theft: ಬೆಂಗಳೂರು ಉತ್ತರ ತಾಲೂಕಿನ ದಾಸನಪುರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ ಮಾಡಿರುವಂತಹ ಘಟನೆ ನಡೆದಿದೆ. 8 ಲಕ್ಷ ರೂ ಬೆಲೆಬಾಳುವ 100 ಗ್ರಾಂ ಚಿನ್ನಾಭರಣವನ್ನು ದೋಚಿ ಖದೀಮ ಪರಾರಿ ಆಗಿದ್ದಾನೆ. ಕೇವಲ ಒಂದೇ ಗಂಟೆಯಲ್ಲಿ ಖದೀಮ ತನ್ನ ಕೈಚಳಕ ತೋರಿದ್ದಾನೆ.
- Manjunatha HV
- Updated on: Aug 9, 2026
- 5:33 pm
ಶಿವಗಂಗೆ ಬೆಟ್ಟದಲ್ಲಿ ಕಾಣೆಯಾದ ಟೆಕ್ಕಿ; ಅದ್ವೈತ್ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟ್ರಕ್ಕಿಂಗ್ಗಾಗಿ ಶಿವಗಂಗೆ ಬೆಟ್ಟಕ್ಕೆ ತೆರಳಿದ್ದ ಬೆಂಗಳೂರಿನ ಕಾಡುಗೋಡಿಯ ಸಾಫ್ಟ್ವೇರ್ ಎಂಜಿನಿಯರ್ ಅದ್ವೈತ್ ಉಪಾಧ್ಯಾಯ (ಮಧ್ಯಪ್ರದೇಶ ಮೂಲದವರು) ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಇವರ ಪತ್ನಿ ಪ್ರಾಪ್ತಿ ಚೌಹಾಣ್ ನೀಡಿದ ದೂರಿನನ್ವಯ ಡಾಬಸ್ಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.ಅದ್ವೈತ್ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದ್ದು, ಅವರು ಬಾಡಿಗೆಗೆ ಪಡೆದಿದ್ದ ಬುಲೆಟ್ ಬೈಕ್ ಪಾರ್ಕಿಂಗ್ನಲ್ಲಿ ಪತ್ತೆಯಾಗಿದೆ.
- Manjunatha HV
- Updated on: Aug 9, 2026
- 11:05 am
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ತೆರಳಿದ್ದ ಉದ್ಯಮಿ ಮಗ ನಾಪತ್ತೆ: ಡ್ರೋನ್ ಮೂಲಕ ಶೋಧ!
Shivagange Trekker Missing: ಟ್ರಕ್ಕಿಂಗ್ಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ನಾಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ನಡೆದಿದೆ. ಸದ್ಯ ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಇತ್ತ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿದೆ.
- Manjunatha HV
- Updated on: Aug 8, 2026
- 5:50 pm
ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ
Nelamangala gold shop firing: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿ ಮಾಲೀಕನ ಮೇಲೆ ದರೋಡೆಕೋರ ಗ್ಯಾಂಗ್ ಫೈರಿಂಗ್ ಮಾಡಿ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ. ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
- Manjunatha HV
- Updated on: Aug 6, 2026
- 4:38 pm
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ತಾಲೂಕಿನ ಪ್ರಸಿದ್ಧ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಗವೊಂದು ಪ್ರವಾಸಿಗರ ಮೊಬೈಲ್ ಕಸಿದುಕೊಂಡು ಸುಮಾರು ಒಂದು ಗಂಟೆ ಕಾಲ ಸತಾಯಿಸಿದ ಕುತೂಹಲಕಾರಿ ಘಟನೆ ನಡೆದಿದೆ. ಶಿವಗಂಗೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಯುವತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಅನ್ನು ಸಡನ್ ಆಗಿ ಕಸಿದುಕೊಂಡ ಮಂಗ, ಸೀದಾ ದೇವಾಲಯದ ಗೋಪುರದ ಶಿಖರ ಏರಿ ಕುಳಿತುಕೊಂಡಿದೆ. ಮೊಬೈಲ್ ವಾಪಸ್ ಪಡೆಯಲು ಜೊತೆಯಲ್ಲಿದ್ದ ಯುವಕರು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ನಂತರ ಕೊನೆಗೂ ಮಂಗ ಮೊಬೈಲ್ ಅನ್ನು ಕೆಳಗೆ ಹಾಕಿದ್ದು, ಫೋನ್ ಕೈಸೇರಿದ ಖುಷಿಯಲ್ಲಿದ್ದ ಯುವತಿಗೆ ಮೊಬೈಲ್ಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದನ್ನು ನೋಡಿ ಕೊಂಚ ಬೇಸರವೂ ಉಂಟಾಗಿದೆ.
- Manjunatha HV
- Updated on: Aug 3, 2026
- 11:15 pm
ನೆಲಮಂಗಲದಲ್ಲಿ ನೈತಿಕ ಪೊಲೀಸ್ ಗಿರಿ! ಹಿಂದೂ ಯುವಕನ ಮೇಲೆ ಹಲ್ಲೆ; ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ
Nelamangala Moral Policing: ಮುಸ್ಲಿಂ ಯುವತಿ ಜೊತೆ ಓಡಾಡಿದ್ದಕ್ಕೆ ಹಿಂದೂ ಯುವಕ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಆ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲಕ್ಕೂರಿನಲ್ಲಿ ಘಟನೆ ನಡೆದಿದೆ. ಸದ್ಯ ಯುವತಿ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
- Manjunatha HV
- Updated on: Aug 3, 2026
- 11:17 pm